AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯಿ ದುರ್ವಾಸನೆ ನಿವಾರಣೆಗೆ ಕೆಲವು ಮನೆಮದ್ದುಗಳು

ಪುದೀನ, ಲವಂಗ, ಕೊತ್ತಂಬರಿ ಸೊಪ್ಪು ಮುಂತಾದ ಗೃಹೋಪಯೋಗಿ ಪದಾರ್ಥಗಳು ಬಾಯಿಯ ದುರ್ವಾಸನೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ. ಹೆಚ್ಚು ನೀರು ಕುಡಿಯುವುದು ಮತ್ತು ಮೊಸರು ಸೇವನೆಯು ಕೂಡ ಪ್ರಯೋಜನಕಾರಿ. ಈ ಲೇಖನವು ಬಾಯಿ ದುರ್ವಾಸನೆಯನ್ನು ತೊಡೆದುಹಾಕಲು ಸುಲಭ ಮತ್ತು ಪರಿಣಾಮಕಾರಿ ಮಾರ್ಗಗಳನ್ನು ವಿವರಿಸುತ್ತದೆ.

ಬಾಯಿ ದುರ್ವಾಸನೆ ನಿವಾರಣೆಗೆ ಕೆಲವು ಮನೆಮದ್ದುಗಳು
Bad Breath
ಅಕ್ಷತಾ ವರ್ಕಾಡಿ
|

Updated on: Dec 11, 2024 | 8:04 PM

Share

ಬಾಯಿ ದುರ್ವಾಸನೆಯಿಂದ ಬಳಲುತ್ತಿರುವವರು ಯಾರೊಂದಿಗೂ ಮಾತನಾಡಲು ಕಷ್ಟಪಡುತ್ತಾರೆ. ಆತ್ಮವಿಶ್ವಾಸವೂ ಕಡಿಮೆಯಾಗುತ್ತದೆ. ಇದಕ್ಕೆ ಮುಖ್ಯ ಕಾರಣ ತಪ್ಪು ಆಹಾರ ಪದ್ಧತಿ ಎಂದು ಹೇಳಬಹುದು. ಅಲ್ಲದೆ, ದಿನಕ್ಕೆರಡು ಬಾರಿ ಹಲ್ಲುಜ್ಜದಿರುವುದು, ನಾಲಿಗೆಯನ್ನು ಸ್ವಚ್ಛಗೊಳಿಸದಿರುವುದು, ರಾತ್ರಿ ಹಲ್ಲುಜ್ಜದೆ ಮಲಗುವುದು ಮುಂತಾದ ಕೆಟ್ಟ ಅಭ್ಯಾಸಗಳು ಬಾಯಿ ದುರ್ವಾಸನೆಗೆ ಕಾರಣವಾಗುತ್ತವೆ. ಆದರೆ ಉಸಿರನ್ನು ತಾಜಾವಾಗಿಡಲು ಮಾರುಕಟ್ಟೆಯಲ್ಲಿ ಹಲವು ಬಗೆಯ ಮೌತ್ ಫ್ರೆಶ್ನರ್ ಗಳು ಲಭ್ಯವಿವೆ. ಆದರೆ ನೀವು ಕೆಲವು ಗೃಹೋಪಯೋಗಿ ಉತ್ಪನ್ನಗಳೊಂದಿಗೆ ಇದನ್ನು ಸರಿಪಡಿಸಬಹುದು.

ಪುದೀನ ಎಲೆಗಳು:

ಬಾಯಿಯ ದುರ್ವಾಸನೆಗೆ ಪುದೀನಾ ಉತ್ತಮ. ಸೋಂಪು, ಏಲಕ್ಕಿ ಮತ್ತು ಪುದೀನಾ ಸಹ ನೈಸರ್ಗಿಕ ಮೌತ್ ಫ್ರೆಶ್ನರ್ ಆಗಿ ಕಾರ್ಯನಿರ್ವಹಿಸುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಪುದೀನಾ ಎಲೆಗಳನ್ನು ಊಟದ ನಂತರ ಅಗಿಯಬೇಕು. ಇದು ಬಾಯಿಯಿಂದ ದುರ್ವಾಸನೆ ಹೋಗಲಾಡಿಸುತ್ತದೆ.

ಲವಂಗ:

ಲವಂಗವು ಬಾಯಿಯ ದುರ್ವಾಸನೆ ಹೋಗಲಾಡಿಸಲು ತುಂಬಾ ಪರಿಣಾಮಕಾರಿ. ಲವಂಗ ತಿನ್ನುವುದರಿಂದ ಬಾಯಿಯ ದುರ್ವಾಸನೆ ದೂರವಾಗುತ್ತದೆ. ಲವಂಗವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇವು ಬಾಯಿಯಲ್ಲಿರುವ ಕೆಟ್ಟ ಬ್ಯಾಕ್ಟೀರಿಯಾವನ್ನು ಹೋಗಲಾಡಿಸಲು ಸಹಾಯ ಮಾಡುತ್ತವೆ.

ಕೊತ್ತಂಬರಿ ಸೊಪ್ಪು:

ಕೊತ್ತಂಬರಿಯು ಅತ್ಯುತ್ತಮವಾದ ನಂಜುನಿರೋಧಕವಾಗಿದೆ. ಹೆಚ್ಚಿನ ಸಲ್ಫರ್ ಅಂಶದಿಂದಾಗಿ, ಇದು ಬಾಯಿಯ ದುರ್ವಾಸನೆಯನ್ನು ಸುಲಭವಾಗಿ ನಿವಾರಿಸುತ್ತದೆ. ತಿಂದ ನಂತರ ಎರಡು ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ಜಗಿಯಿದರೆ ಬಾಯಿಯ ದುರ್ವಾಸನೆ ದೂರವಾಗುತ್ತದೆ.

ಇದನ್ನೂ ಓದಿ: ನಿತ್ಯ ನೀವು ಕುಡಿಯುವ 3 ಲೋಟ ಕಾಫಿ, ನಿಮ್ಮ ಆಯುಷ್ಯವನ್ನು ಇಷ್ಟು ವರ್ಷ ವೃದ್ಧಿಸುತ್ತಂತೆ!

ನೀರು:

ಬಾಯಿ ಒಣಗಿದಾಗ ಸೂಕ್ಷ್ಮಜೀವಿಗಳು ಸುಲಭವಾಗಿ ಪ್ರವೇಶಿಸುತ್ತವೆ. ಆದ್ದರಿಂದ ಬಾಯಿಯ ದುರ್ವಾಸನೆ ಉಂಟಾಗುತ್ತದೆ. ಆದ್ದರಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು. ಕೆಟ್ಟ ಉಸಿರನ್ನು ತಪ್ಪಿಸಲು ಸಾಕಷ್ಟು ನೀರು ಕುಡಿಯಿರಿ. ಇದಲ್ಲದೇ ದೈನಂದಿನ ಆಹಾರದಲ್ಲಿ ಮೊಸರು ಸೇರಿಸಬೇಕು. ಸಂಶೋಧನೆಯ ಫಲಿತಾಂಶಗಳ ಪ್ರಕಾರ, ನೀವು ಪ್ರತಿದಿನ ಮೊಸರು ತಿಂದರೆ 80 ಪ್ರತಿಶತದಷ್ಟು ದುರ್ವಾಸನೆ ದೂರವಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!