AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bad Cooking Oils: ಸ್ಲೋ ಪಾಯ್ಸನ್​​ ಆಗಿ ಕೆಲಸ ಮಾಡುವ ಈ ನಾಲ್ಕಾರು ಅಡುಗೆ ಎಣ್ಣೆಗಳ ಬಗ್ಗೆ ನಿಮಗೆ ತಿಳಿದಿದೆಯೇ?

ಅನಾರೋಗ್ಯಕರ ಅಡುಗೆ ಎಣ್ಣೆಯನ್ನು ಸೇವಿಸುವುದರಿಂದ ದೇಹದ ತೂಕ ಹೆಚ್ಚಾಗುವ ಅಪಾಯವೂ ಇದೆ. ಕೆಟ್ಟ ಎಣ್ಣೆಯು ಮಧುಮೇಹ, ರಕ್ತದೊತ್ತಡ ಮತ್ತು ಇತರ ಅನೇಕ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ

Bad Cooking Oils:  ಸ್ಲೋ ಪಾಯ್ಸನ್​​ ಆಗಿ ಕೆಲಸ ಮಾಡುವ ಈ ನಾಲ್ಕಾರು ಅಡುಗೆ ಎಣ್ಣೆಗಳ ಬಗ್ಗೆ ನಿಮಗೆ ತಿಳಿದಿದೆಯೇ?
ಈ ನಾಲ್ಕಾರು ಅಡುಗೆ ಎಣ್ಣೆಗಳ ಬಗ್ಗೆ ನಿಮಗೆ ತಿಳಿದಿದೆಯೇ?
Follow us
ಸಾಧು ಶ್ರೀನಾಥ್​
|

Updated on: Nov 02, 2023 | 2:49 PM

ಪೂರಿ, ಸಬ್ಜಿ, ಸಮೋಸ ಮತ್ತು ಇತರ ಭಕ್ಷ್ಯಗಳನ್ನು ತಯಾರಿಸಲು ಬಳಸುವ ಅಡುಗೆ ಎಣ್ಣೆಯು ನಿಮ್ಮ ದೇಹದ ಮೇಲೆ ನಿಧಾನ ವಿಷದಂತೆ (Slow Poison) ಪರಿಣಾಮ ಬೀರುತ್ತದೆ ಎಂದು ನಿಮಗೆ ತಿಳಿದಿದೆಯೇ? ಖಾದ್ಯ ತೈಲವು ನಮ್ಮ ಆಹಾರದಲ್ಲಿ ಬಳಸಲಾಗುವ ವಿಶೇಷ ಆಹಾರ ಪದಾರ್ಥವಾಗಿದೆ. ಇದು ಆಹಾರವನ್ನು ರುಚಿಕರವಾಗಿಸುತ್ತದೆ. ಜೊತೆಗೆ ಆಹಾರಕ್ಕೆ ರುಚಿಯನ್ನು ಸೇರಿಸುತ್ತದೆ. ನಿಮ್ಮ ದೇಹವನ್ನು ಆರೋಗ್ಯಕರವಾಗಿಡಲು ಮತ್ತು ನಿಮ್ಮ ಆಹಾರವನ್ನು ಟೇಸ್ಟಿ ಮತ್ತು ಆರೋಗ್ಯಕರವಾಗಿಸಲು, ನೀವು ಖಾದ್ಯ ಎಣ್ಣೆಯನ್ನು ಬಹಳ ಆಲೋಚಿಸಿ ಆರಿಸಬೇಕು.

ನೀವು ಆಯ್ಕೆ ಮಾಡುವ ಅಡುಗೆ ಎಣ್ಣೆಯು ನಿಮ್ಮ ಆರೋಗ್ಯದ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು. ಕೆಟ್ಟ ಎಣ್ಣೆಯ ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಹೃದ್ರೋಗದ ಅಪಾಯವೂ ದ್ವಿಗುಣಗೊಳ್ಳುತ್ತದೆ. ಅನಾರೋಗ್ಯಕರ ಅಡುಗೆ ಎಣ್ಣೆಯನ್ನು ಸೇವಿಸುವುದರಿಂದ ದೇಹದ ತೂಕ ಹೆಚ್ಚಾಗುವ ಅಪಾಯವೂ ಇದೆ. ಕೆಟ್ಟ ಎಣ್ಣೆಯು ಮಧುಮೇಹ, ರಕ್ತದೊತ್ತಡ ಮತ್ತು ಇತರ ಅನೇಕ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ.

ಸಂಸ್ಕರಿಸಿದ ತೈಲಗಳು ಸೇರಿದಂತೆ ಅನೇಕ ತೈಲಗಳು ನಿಧಾನ ವಿಷದಂತೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ತೈಲಗಳನ್ನು ಫಿಲ್ಟರ್ ಮಾಡುವಾಗ ವಿವಿಧ ರಾಸಾಯನಿಕಗಳು ಮತ್ತು ಸುಗಂಧ ದ್ರವ್ಯಗಳನ್ನು ಸೇರಿಸುತ್ತಾರೆ. ಇಂತಹ ತೈಲಗಳು ನಮ್ಮ ಆರೋಗ್ಯಕ್ಕೆ ಹಾನಿಕಾರಕ. ನಮ್ಮ ಆರೋಗ್ಯಕ್ಕೆ ವಿಷಕಾರಿಯಾದ 4 ಅಡುಗೆ ಎಣ್ಣೆಗಳ ಬಗ್ಗೆ ಇಲ್ಲಿ ತಿಳಿಯೋಣ.

ತಾಳೆ ಎಣ್ಣೆಯಿಂದ..

ಪಾಮ್ ಆಯಿಲ್ ಸ್ಯಾಚುರೇಟೆಡ್ ಕೊಬ್ಬಿನಲ್ಲಿ ಸಮೃದ್ಧವಾಗಿದೆ. ಇದನ್ನು ಅತಿಯಾಗಿ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಈ ಎಣ್ಣೆಯನ್ನು ದೊಡ್ಡ ಪ್ರಮಾಣದಲ್ಲಿ ಸೇವಿಸುವುದರಿಂದ ತ್ವರಿತವಾಗಿ ದೇಹ ತೂಕ ಹೆಚ್ಚಾಗುತ್ತದೆ. ಸ್ಥೂಲಕಾಯತೆ ಅತಿಯಾದಾಗ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಹೆಚ್ಚಳದಂತಹ ದೀರ್ಘಕಾಲದ ಕಾಯಿಲೆಗಳಿಗೆ ಗುರಿಯಾಗುತ್ತಾರೆ.

ಜೋಳದ ಎಣ್ಣೆ..

ಸಸ್ಯಜನ್ಯ ಎಣ್ಣೆಯಂತೆ, ಜೋಳದ ಎಣ್ಣೆಯು ಹೆಚ್ಚಿನ ಮಟ್ಟದ ಒಮೆಗಾ -6 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಒಮೆಗಾ -6 ಕೊಬ್ಬಿನಾಮ್ಲಗಳು ದೇಹದಲ್ಲಿ ಉರಿಯೂತವನ್ನು ಉಂಟುಮಾಡುತ್ತವೆ. ಒಮೆಗಾ -6 ಸೇವನೆಯನ್ನು ಸಮತೋಲನಗೊಳಿಸಲು, ನಿಮ್ಮ ಆಹಾರದಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇರಿಸಿ. ಕಾರ್ನ್ ಎಣ್ಣೆಯ ಬಳಕೆಯನ್ನು ಮಿತಿಗೊಳಿಸಿ. ಇಲ್ಲದಿದ್ದರೆ ಬೊಜ್ಜು, ಕ್ಯಾನ್ಸರ್, ವಿಷ ಸೇವನೆ ಮೊದಲಾದ ಸಮಸ್ಯೆಗಳು ಹೆಚ್ಚಾಗುತ್ತವೆ.

ಇದನ್ನೂ ಓದಿ: Success Story: ನಷ್ಟದಲ್ಲಿದ್ದ ರೈತ ‘ಕೈ ಕೆಸರಾದರೆ ಬಾಯಿ ಮೊಸರು’ ಅನ್ನೋ ಮಾತನ್ನು ಅಕ್ಷರಶಃ ಸತ್ಯ ಮಾಡಿದ್ದಾರೆ! ಏನು ಆತನ ಸಾಧನೆ? ನುಗ್ಗೆ ಬೀಜಕ್ಕೆ ಬಂತು ಭಾರೀ ಡಿಮ್ಯಾಂಡ್

ಸೋಯಾಬೀನ್ ಎಣ್ಣೆಯನ್ನು ತಪ್ಪಿಸಿ

ಸೋಯಾಬೀನ್ ಎಣ್ಣೆಯನ್ನು ಸಾಮಾನ್ಯವಾಗಿ ಸಂಸ್ಕರಿಸಿದ ಆಹಾರಗಳಲ್ಲಿ ಬಳಸಲಾಗುತ್ತದೆ. ಈ ಎಣ್ಣೆಯು ಒಮೆಗಾ -6 ಕೊಬ್ಬಿನಾಮ್ಲಗಳ ಮೂಲವಾಗಿದೆ. ಸೋಯಾಬೀನ್ ಎಣ್ಣೆಯನ್ನು ಸೇವಿಸುವುದರಿಂದ ಬೊಜ್ಜು, ಮಧುಮೇಹ, ಆಟಿಸಂ, ಆಲ್ಝೈಮರ್ಸ್, ಖಿನ್ನತೆ ಮುಂತಾದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅನೇಕ ಅಧ್ಯಯನಗಳು ತೋರಿಸಿವೆ. ಈ ಎಣ್ಣೆಯಲ್ಲಿರುವ ಸ್ಯಾಚುರೇಟೆಡ್ ಕೊಬ್ಬು ದೇಹಕ್ಕೆ ಹಾನಿಕಾರಕವಾಗಿದೆ.

ಗಮನಿಸಿ, ಆಲಿವ್ ಎಣ್ಣೆ ಆರೋಗ್ಯಕರ ಆದರೆ…

ಆಲಿವ್ ಎಣ್ಣೆಯನ್ನು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಸಲಾಡ್ ಮತ್ತು ಕೆಲವು ಭಕ್ಷ್ಯಗಳ ಮೇಲೆ ಈ ಎಣ್ಣೆಯನ್ನು ಚಿಮುಕಿಸುವುದರಿಂದ, ಇದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಹೆಚ್ಚಿನ ಶಾಖದಲ್ಲಿ ಅಡುಗೆ ಮಾಡಲು ಈ ಎಣ್ಣೆ ಸೂಕ್ತವಲ್ಲ. ಇದು ಕಡಿಮೆ ತಾಪಮಾನದಲ್ಲಿ ಅಡುಗೆಗೆ ಸೂಕ್ತವಾಗಿದೆ. ಅಂದರೆ ಇದನ್ನು ಬಿಸಿ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಎಚ್ಚರಿಕೆ, ಈ ಎಣ್ಣೆಯೂ ಸಹ ಮೊಡವೆಗಳು, ಚರ್ಮದ ದದ್ದುಗಳು ಅಥವಾ ದದ್ದುಗಳನ್ನು ಉಂಟುಮಾಡುತ್ತದೆ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

(ಗಮನಿಸಿ: ಇದು ತಜ್ಞರಿಂದ ಸಂಗ್ರಹಿಸಿದ ಮಾಹಿತಿಯಾಗಿದೆ. ಆದಾಗ್ಯೂ ಈ ಸಲಹೆಗಳನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಉತ್ತಮ)

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು