AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bamboo Shoots Benefits: ಹಾವು, ಚೇಳು ಕಚ್ಚಿದಾಗ ಕಳಲೆಯ ರಸವೇ ಉತ್ತಮ ಮದ್ದು, ಇದರಲ್ಲಿದೆ ಹಲವು ಆರೋಗ್ಯ ಭಾಗ್ಯ

ಕಳಲೆಯ ಹೆಸರು ಕೇಳಿದಾಗಲೇ ಮೂಗು ಮುರಿಯುತ್ತಾರೆ. ಆದರೆ ಇವುಗಳಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ಫೈಬರ್ ಮತ್ತು ಖನಿಜಗಳು ಸಮೃದ್ಧವಾಗಿದೆ. ಅದೂ ಅಲ್ಲದೆ ಇವುಗಳಲ್ಲಿ ತುಂಬಾ ಕಡಿಮೆ ಪ್ರಮಾಣದಲ್ಲಿ ಕೊಬ್ಬುಗಳಿದೆ, ಜೊತೆಗೆ ಇದು ಮಧುಮೇಹಿಗಳಿಗೂ ಕೂಡ ಸೂಕ್ತವಾದ ಆಹಾರವಾಗಿದೆ. ಇವುಗಳು ನಮ್ಮ ದೇಶದಲ್ಲಿ ಹೆಚ್ಚಾಗಿ ಕರ್ನಾಟಕ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಜಾರ್ಖಂಡ್, ಒಡಿಶಾದಂತಹ ರಾಜ್ಯಗಳಲ್ಲಿ ಅದರಲ್ಲಿಯೂ ಮಳೆಗಾಲದಲ್ಲಿ ಹೆಚ್ಚು ಬಳಕೆ ಮಾಡಲಾಗುತ್ತದೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

Bamboo Shoots Benefits: ಹಾವು, ಚೇಳು ಕಚ್ಚಿದಾಗ ಕಳಲೆಯ ರಸವೇ ಉತ್ತಮ ಮದ್ದು, ಇದರಲ್ಲಿದೆ ಹಲವು ಆರೋಗ್ಯ ಭಾಗ್ಯ
ಕಳಲೆ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jul 05, 2024 | 2:27 PM

Share

ಬಿದಿರಿನ ಚಿಗುರು ಅಥವಾ ಕಳಲೆ ಎಂಬ ಹೆಸರನ್ನು ಕೇಳಿರಬಹುದು. ಕೆಲವರು ಇದರ ಹೆಸರು ಕೇಳಿದಾಗಲೇ ಮೂಗು ಮುರಿಯುತ್ತಾರೆ. ಆದರೆ ಇವುಗಳಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ಫೈಬರ್ ಮತ್ತು ಖನಿಜಗಳು ಸಮೃದ್ಧವಾಗಿದೆ. ಅದೂ ಅಲ್ಲದೆ ಇವುಗಳಲ್ಲಿ ತುಂಬಾ ಕಡಿಮೆ ಪ್ರಮಾಣದಲ್ಲಿ ಕೊಬ್ಬುಗಳಿದೆ, ಜೊತೆಗೆ ಇದು ಮಧುಮೇಹಿಗಳಿಗೂ ಕೂಡ ಸೂಕ್ತವಾದ ಆಹಾರವಾಗಿದೆ. ಇವುಗಳು ನಮ್ಮ ದೇಶದಲ್ಲಿ ಹೆಚ್ಚಾಗಿ ಕರ್ನಾಟಕ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಜಾರ್ಖಂಡ್, ಒಡಿಶಾದಂತಹ ರಾಜ್ಯಗಳಲ್ಲಿ ಅದರಲ್ಲಿಯೂ ಮಳೆಗಾಲದಲ್ಲಿ ಹೆಚ್ಚು ಬಳಕೆ ಮಾಡಲಾಗುತ್ತದೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

ಕಳಲೆಯನ್ನು ಸಾಂಪ್ರದಾಯಿಕ ಔಷಧಗಳಲ್ಲಿ ಬಳಕೆ ಮಾಡಲಾಗುತ್ತದೆ. ಇದರ ಚಿಕಿತ್ಸಕ ಗುಣಗಳಿಂದಾಗಿ ಇದನ್ನು ಬೇರೆ ಬೇರೆ ದೇಶಗಳಲ್ಲಿಯೂ ಉಪಯೋಗಿಸಲಾಗುತ್ತದೆ. ಇದರಲ್ಲಿ ನ್ಯೂಟ್ರಾಸ್ಯುಟಿಕಲ್ಸ್ ಎಂದು ಕರೆಯಲ್ಪಡುವ ಫೈಬರ್ ಇದ್ದು, ಕರುಳಿನ ಸಮಸ್ಯೆಗಳನ್ನು ನಿಭಾಯಿಸಲು ಸಹಾಯ ಮಾಡುತ್ತದೆ. ಕಳಲೆಗೆ ಸಂಬಂಧ ಪಟ್ಟಂತೆ ಹಲವಾರು ಅಧ್ಯಯನಗಳು ನಡೆದಿದ್ದು ಇದರಲ್ಲಿ ಕ್ಯಾನ್ಸರ್ ವಿರೋಧಿ ಗುಣಗಳಿವೆ, ಅಲ್ಲದೆ ವೈರಾಣು ವಿರೋಧಿ ಗುಣಗಳನ್ನು ಹೊಂದಿದೆ ಎಂದು ಸಾಬೀತಾಗಿದೆ. ವಿಟಮಿನ್ ಎ, ವಿಟಮಿನ್ ಇ, ವಿಟಮಿನ್ ಬಿ 6, ಥಯಾಮಿನ್, ರಿಬೋಫ್ಲಾವಿನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಫಾಸ್ಫರಸ್, ತಾಮ್ರ, ಸತು, ಮ್ಯಾಂಗನೀಸ್ ಮತ್ತು ಇತರ ಪ್ರಮುಖ ಖನಿಜಗಳ ಲಾಭಗಳನ್ನು ಪಡೆಯಲು ಕಳಲೆ ಸೇವನೆ ಮಾಡಬಹುದಾಗಿದೆ.

ಹೃದಯ ಸಂಬಂಧಿ ಕಾಯಿಲೆಗಳಿಂದ ರಕ್ಷಣೆ ನೀಡುತ್ತದೆ

ಹೃದ್ರೋಗ ತಜ್ಞರ ಪ್ರಕಾರ ಪ್ರತಿದಿನ ಕಳಲೆ ಸೆವನೆ ಮಾಡುವುದು ಉತ್ತಮ. ಏಕೆಂದರೆ ಇದು ವಿವಿಧ ರೀತಿಯ ಹೃದಯ ಸಂಬಂಧಿ ಕಾಯಿಲೆಗಳು ಬರದಂತೆ ರಕ್ಷಿಸುತ್ತದೆ. ಮಳೆಗಾಲದಲ್ಲಿ ಮತ್ತು ಚಳಿಗಾಲದದಲ್ಲಿ ಇದರ ಸೇವನೆ ಮಾಡುವುದರಿಂದ ವೈರಲ್ ಮತ್ತು ಬ್ಯಾಕ್ಟೀರಿಯಾದ ಸೋಂಕಿನಿಂದ ದೂರವಿರಬಹುದು.

ಇದನ್ನೂ ಓದಿ: ಮಕ್ಕಳಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ಯೂ, ಪೋಷಕರೇ ಎಚ್ಚರ ವಹಿಸಿ ಎಂದ ಡಾ.ಸುಧೀರ್

ವಿಷ ಜೀವಿಗಳು ಕಚ್ಚಿದರೆ ಇದರ ರಸವೇ ಮದ್ದು

ಈ ಕಳಲೆಯಿಂದ ಹೊರತೆಗೆಯಲಾದ ರಸವು ದೇಹದಿಂದ ವಿಷವನ್ನು ಕೂಡ ತೆಗೆಯುತ್ತದೆ, ವಿಶೇಷವಾಗಿ ಹಾವು, ಚೇಳು ಮತ್ತು ಇತರ ವಿಷ ಜೀವಿಗಳು ಕಚ್ಚಿದಾಗ ಈ ರಸವನ್ನು ಸೇವನೆ ಮಾಡಿದರೆ ಅಥವಾ ಕಚ್ಚಿರುವ ಜಾಗಕ್ಕೆ ಹಚ್ಚಿದರೆ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಹೆರಿಗೆಗೆ ಒಳ್ಳೆಯದು

ಕಳಲೆಯನ್ನು ಸಾಂಪ್ರದಾಯಿಕ ಚೈನೀಸ್ ಔಷಧಿಗಳಲ್ಲಿ ಬಳಕೆ ಮಾಡಲಾಗುತ್ತದೆ, ಅದರಲ್ಲಿಯೂ ಗರ್ಭಿಣಿಯರಿಗೆ ಒಂಬತ್ತನೇ ತಿಂಗಳುಗಳಲ್ಲಿ ಬಿದಿರಿನ ಖಾದ್ಯಗಳನ್ನು ಮಿತವಾಗಿ ಸೇವನೆ ಮಾಡಲು ಸಲಹೆ ನೀಡಲಾಗುತ್ತದೆ ಏಕೆಂದರೆ ಇದು ಹೆರಿಗೆಗೆ ಅನುಕೂಲವಾಗುವಂತೆ ಮಾಡುತ್ತದೆ ಎನ್ನಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:58 pm, Thu, 4 July 24

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ