AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Banana Benefits: ನಿತ್ಯ ಬೆಳಗ್ಗೆ ಬಾಳೆಹಣ್ಣು ತಿನ್ನುವುದರಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಬಾಳೆಹಣ್ಣು ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಎನ್ನುವುದಿಲ್ಲದರೆ ಎಲ್ಲಾ ಕಾಲದಲ್ಲೂ ತಿನ್ನುವ ಹಣ್ಣು. ಈ ಹಣ್ಣನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.

Banana Benefits: ನಿತ್ಯ ಬೆಳಗ್ಗೆ ಬಾಳೆಹಣ್ಣು ತಿನ್ನುವುದರಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ
Banana
TV9 Web
| Edited By: |

Updated on: Nov 24, 2022 | 7:00 AM

Share

ಬಾಳೆಹಣ್ಣು ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಎನ್ನುವುದಿಲ್ಲದರೆ ಎಲ್ಲಾ ಕಾಲದಲ್ಲೂ ತಿನ್ನುವ ಹಣ್ಣು. ಈ ಹಣ್ಣನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಆದರೆ ಚಳಿಗಾಲದಲ್ಲಿ ಹೆಚ್ಚಿನ ಜನರು ಬಾಳೆಹಣ್ಣು ತಿನ್ನಬೇಡಿ, ಇಲ್ಲದಿದ್ದರೆ ನೀವು ಅನಾರೋಗ್ಯಕ್ಕೆ ಒಳಗಾಗುತ್ತೀರಿ ಅಥವಾ ಶೀತಕ್ಕೆ ಒಳಗಾಗುತ್ತೀರಿ ಎಂದು ಹೇಳುತ್ತಾರೆ.

ನೀವು ಚಳಿಗಾಲದಲ್ಲಿ ಬಾಳೆಹಣ್ಣು ತಿನ್ನುತ್ತೀರಾ? ಬಾಳೆಹಣ್ಣಿನಲ್ಲಿ ಬಹಳಷ್ಟು ಪೊಟ್ಯಾಸಿಯಮ್ ಕಂಡುಬರುತ್ತದೆ. ಮತ್ತೊಂದೆಡೆ, ನೀವು ಚಳಿಗಾಲದಲ್ಲಿ ಕಡಿಮೆ ನೀರನ್ನು ಸೇವಿಸಿದರೆ, ಈ ಹಣ್ಣು ನಿಮ್ಮ ದೇಹದಲ್ಲಿನ ನೀರಿನ ಕೊರತೆಯನ್ನು ಸಹ ಪೂರೈಸುತ್ತದೆ. ಈ ಹಣ್ಣಿನಲ್ಲಿರುವ 100 ಕ್ಯಾಲೋರಿಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

ಚಳಿಗಾಲದಲ್ಲಿ ಬಾಳೆಹಣ್ಣು ತಿನ್ನುವುದು ಸರಿಯೋ ಅಥವಾ ತಪ್ಪೋ ಚಳಿಗಾಲದಲ್ಲಿ ನೀವು ಬಾಳೆಹಣ್ಣು ತಿನ್ನಬಹುದು. ಬಾಳೆಹಣ್ಣನ್ನು ತಿನ್ನುವುದರಿಂದ, ನಿಮ್ಮ ದೇಹದಲ್ಲಿ ಇರುವ ಪೊಟ್ಯಾಸಿಯಮ್ ದೇಹದಲ್ಲಿ ರಕ್ತದ ಹರಿವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ, ನಿಮ್ಮ ಚರ್ಮದ ಎಲ್ಲಾ ಜೀವಕೋಶಗಳು ಸಾಕಷ್ಟು ಆಮ್ಲಜನಕ ಮತ್ತು ಪೋಷಣೆಯನ್ನು ಪಡೆಯುತ್ತವೆ. ಇದರೊಂದಿಗೆ ಚರ್ಮದ ಮೇಲೆ ಕಾಂತಿಯುತ ಹೊಳಪು ಬರುತ್ತದೆ.

ನಿಮ್ಮ ಚರ್ಮದ ಎಲ್ಲಾ ಜೀವಕೋಶಗಳು ಸಾಕಷ್ಟು ಆಮ್ಲಜನಕವನ್ನು ಪಡೆಯುತ್ತವೆ

ಪಾರ್ಲರ್​ನಲ್ಲಿ ಫೇಶಿಯಲ್ ಮಾಡಿಸಿಕೊಳ್ಳಲು ಮಹಿಳೆಯರು ಸಾವಿರಾರು ರೂಪಾಯಿ ಖರ್ಚು ಮಾಡುತ್ತಾರೆ. ಆದರೆ ದಿನನಿತ್ಯ ಬಾಳೆಹಣ್ಣು ತಿಂದರೆ ಹೊರಗೆ ಪಾರ್ಲರ್‌ಗೆ ಹೋಗುವ ಅಗತ್ಯವಿಲ್ಲ. ನಿಮ್ಮ ಚರ್ಮವು ಒಳಗಿನಿಂದ ಹೊಳೆಯುತ್ತದೆ. ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ಚರ್ಮದಲ್ಲಿ ಕಾಲಜನ್ ಮಟ್ಟವನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಚರ್ಮವು ನೈಸರ್ಗಿಕ ರೀತಿಯಲ್ಲಿ ಮೃದುವಾಗುತ್ತದೆ. ಪೊಟ್ಯಾಸಿಯಮ್ ಜೊತೆಗೆ ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ವಿಟಮಿನ್-ಸಿ ಬಾಳೆಹಣ್ಣಿನಲ್ಲಿದೆ. ಮಾಹಿತಿಗಾಗಿ, ಚರ್ಮದ ಕೋಶಗಳನ್ನು ಸರಿಪಡಿಸಲು ವಿಟಮಿನ್-ಸಿ ಸಹಾಯ ಮಾಡುತ್ತದೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು