AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bay Leaves Benefits: ಅಡುಗೆಗೆ ಬಳಸುವ ಬೇ ಎಲೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? ಇಲ್ಲಿದೆ ಮಾಹಿತಿ

ಬಿರಿಯಾನಿ ಎಲೆಗಳಲ್ಲಿ ಪೊಟ್ಯಾಸಿಯಮ್, ತಾಮ್ರ, ಮೆಗ್ನೀಸಿಯಮ್, ಸತು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪ್ರಮುಖ ಪೋಷಕಾಂಶಗಳು ದೇಹಕ್ಕೆ ಒಳ್ಳೆಯದು. ಹಾಗಾದರೆ ಈ ಬಿರಿಯಾನಿ ಎಲೆಯ ಪ್ರಯೋಜನಗಳು ಏನು ಎಂದು ತಿಳಿಯೋಣ. 

Bay Leaves Benefits: ಅಡುಗೆಗೆ ಬಳಸುವ ಬೇ ಎಲೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? ಇಲ್ಲಿದೆ ಮಾಹಿತಿ
ಬಿರಿಯಾನಿ ಎಲೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 31, 2022 | 8:00 AM

Share

ಬಿರಿಯಾನಿ ಆಹಾರ ಪ್ರಿಯರ ಬಾಯಲ್ಲಿ ನೀರೂರಿಸುವ ಖಾದ್ಯ. ಬಿರಿಯಾನಿ ಎಂದರೆ ಅದರಲ್ಲಿ ಬೇ ಎಲೆ (Bay Leaves) ಗಳನ್ನು ಸೇರಿಸಲೇಬೇಕು. ಸಸ್ಯಹಾರ ಮಾತ್ರವಲ್ಲದೆ ಮಾಂಸಾಹಾರಕ್ಕೂ ಇದು ಒಳ್ಳೆ ರುಚಿ ಕೊಡುತ್ತವೆ. ಈ ಬಿರಿಯಾನಿ ಎಲೆಯು ಆಹಾರಕ್ಕೆ ಸುವಾಸನೆ ನೀಡುವುದರ ಜೊತೆಗೆ ದೇಹಕ್ಕೆ ಉತ್ತಮ ಪೋಷಕಾಂಶಗಳನ್ನು ನೀಡುತ್ತದೆ. ಇದರಲ್ಲಿ ಹಲವು ಔಷಧೀಯ ಗುಣಗಳಿವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು. ಈ ಎಲೆಯು ಅನೇಕ ರೋಗಗಳನ್ನು ಗುಣಪಡಿಸುವ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಎಂದು ಹೇಳಲಾಗುತ್ತದೆ. ಬಿರಿಯಾನಿ ಎಲೆಗಳಲ್ಲಿ ಪೊಟ್ಯಾಸಿಯಮ್, ತಾಮ್ರ, ಮೆಗ್ನೀಸಿಯಮ್, ಸತು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪ್ರಮುಖ ಪೋಷಕಾಂಶಗಳು ದೇಹಕ್ಕೆ ಒಳ್ಳೆಯದು. ಹಾಗಾದರೆ ಈ ಬಿರಿಯಾನಿ ಎಲೆಯ ಪ್ರಯೋಜನಗಳು ಏನು ಎಂದು ತಿಳಿಯೋಣ.

ತಜ್ಞರು ಹೇಳುವ ಪ್ರಕಾರ ಒತ್ತಡದಿಂದ ಮುಕ್ತಿ ಹೊಂದಲು ಮಲಗುವ ಮುನ್ನ 2 ಎಲೆಗಳನ್ನು ತೆಗೆದುಕೊಂಡು ಅದನ್ನು ಕೋಣೆಯಲ್ಲಿ ಸುಟ್ಟು ಇಟ್ಟುಕೊಳ್ಳುವುದರಿಂದ ಅದರಿಂದ ಬರುವ ಹೊಗೆ ಒತ್ತಡವನ್ನು ಕಡಿಮೆ ಮಾಡುತ್ತದೆ. ಉಸಿರಾಟಕ್ಕೆ ತೊಂದರೆ ಉಂಟಾದರೆ ಈ ಬಿರಿಯಾನಿ ಎಲೆಗಳನ್ನು ತಿನ್ನುವುದು ಉತ್ತಮ ಎಂದು ಹೇಳಲಾಗುತ್ತದೆ. ಈ ಎಲೆಗಳನ್ನು ನೀರಿನಲ್ಲಿ ಕುದಿಸಿ ಎದೆಗೆ ಕರವಸ್ತ್ರದಂತಹ ಬಟ್ಟೆಯನ್ನು ಹಾಕಿದರೆ ಉಸಿರಾಟದ ಸಮಸ್ಯೆ ದೂರವಾಗುತ್ತದೆ.

ಇದನ್ನೂ ಓದಿ: Diabetes: ಮಧುಮೇಹಿಗಳು ಯಾವ ಹಣ್ಣುಗಳನ್ನು ತಿನ್ನಬಹುದು, ಯಾವ ಹಣ್ಣುಗಳನ್ನು ಸೇವಿಸಬಾರದು?

ಬಿರಿಯಾನಿ ಎಲೆಗಳನ್ನು ಬಳಸಿ ಅರೋಮಾಥೆರಪಿ ದೇಹಕ್ಕೆ ತುಂಬಾ ವಿಶ್ರಾಂತಿ ನೀಡುತ್ತದೆ. ಟೈಪ್-2 ಡಯಾಬಿಟಿಸ್ ರೋಗಿಗಳಿಗೆ ಈ ಬಿರಿಯಾನಿ ಎಲೆ ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಎಲೆಗಳ ಔಷಧೀಯ ಗುಣಗಳು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್, ಗ್ಲೂಕೋಸ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಮಧುಮೇಹಿಗಳಿಗೂ ಒಳ್ಳೆಯದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

(ಗಮನಿಸಿ: ಈ ಮೇಲೆ ನೀಡಲಾದ ವಿಷಯವು ಮಾಹಿತಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ನೀಡಲಾಗಿದೆ. ಟಿವಿ9 ಕನ್ನಡ ಡಿಜಿಟಲ್​ಗೆ ಯಾವುದೇ ಸಂಬಂಧವಿಲ್ಲ. ನಿಮಗೆ ಯಾವುದೇ ಸಂದೇಹಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸುವುದು ಉತ್ತಮ.)

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ