Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖದ ಸೌಂದರ್ಯಕ್ಕೆ ಹರಳೆಣ್ಣೆ ಬಳಸುವುದು ಹೇಗೆ?

Castor Oil Benefits: ಹರಳು ಬೀಜ ಹೆಚ್ಚಿನ ಮಟ್ಟದ ರಿಸಿನ್ ಅನ್ನು ಹೊಂದಿರುತ್ತದೆ. ಇದು ಒಂದು ರೀತಿಯ ವಿಷಕಾರಿ ಕಿಣ್ವ. ಆದರೆ, ತೈಲವನ್ನು ಸಂಸ್ಕರಿಸಿದಾಗ ರಿಸಿನ್ ಅಂಶವನ್ನು ತೆಗೆದುಹಾಕಲಾಗುತ್ತದೆ. ಹೀಗಾಗಿ, ಸಂಸ್ಕರಿಸಿದ ಕ್ಯಾಸ್ಟರ್ ಆಯಿಲ್ ಮಾತ್ರ ಬಳಕೆಗೆ ಸುರಕ್ಷಿತವಾಗಿದೆ. ಹರಳೆಣ್ಣೆಯಿಂದ ಆರೋಗ್ಯಕ್ಕೆ ಹಾಗೂ ಸೌಂದರ್ಯಕ್ಕೆ ಏನೆಲ್ಲ ಪ್ರಯೋಜನಗಳಿವೆ ಎಂಬ ಮಾಹಿತಿ ಇಲ್ಲಿದೆ.

ಮುಖದ ಸೌಂದರ್ಯಕ್ಕೆ ಹರಳೆಣ್ಣೆ ಬಳಸುವುದು ಹೇಗೆ?
ಹರಳೆಣ್ಣೆImage Credit source: iStock
Follow us
ಸುಷ್ಮಾ ಚಕ್ರೆ
|

Updated on:Sep 30, 2023 | 3:09 PM

ಹರಳೆಣ್ಣೆಯನ್ನು ನಮ್ಮ ಅಜ್ಜಿಯರ ಮುತ್ತಜ್ಜಿಯರ ಕಾಲದಿಂದಲೂ ಮುಖ, ಕೂದಲಿನ ಆರೋಗ್ಯ ಮತ್ತು ಸೌಂದರ್ಯದಲ್ಲಿ ಬಳಸಲಾಗುತ್ತಿದೆ. ಕೂದಲು ಸೊಂಪಾಗಿ ಬೆಳೆಯಲು, ನೆತ್ತಿ ತಂಪಾಗಿರಲು, ಒಡೆದ ಚರ್ಮ ಸುಧಾರಿಸಲು ಹೀಗೆ ನಾನಾ ಕಾರಣಗಳಿಗೆ ಹರಳೆಣ್ಣೆಯನ್ನು ಬಳಸಲಾಗುತ್ತದೆ. ಈ ಹರಳೆಣ್ಣೆಯನ್ನು ಮಸಾಜ್ ಮಾಡಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಇಂದಿನ ಆಧುನಿಕ ಜನರೂ ಈಗೀಗ ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ, ಮುಖದ ಕಾಂತಿ ಹೆಚ್ಚಿಸಿಕೊಳ್ಳಲು, ಕೂದಲ ಆರೋಗ್ಯಕ್ಕೆ ಹರಳೆಣ್ಣೆಯ ಬಳಕೆಯ ಪ್ರಮಾಣ ಹೆಚ್ಚಾಗುತ್ತಿದೆ.

ಹರಳೆಣ್ಣೆಯಿಂದ ಆರೋಗ್ಯಕ್ಕೆ ಹಾಗೂ ಸೌಂದರ್ಯಕ್ಕೆ ಏನೆಲ್ಲ ಪ್ರಯೋಜನಗಳಿವೆ ಎಂಬ ಕಿರು ಮಾಹಿತಿ ಇಲ್ಲಿದೆ. ಕ್ಯಾಸ್ಟರ್ ಆಯಿಲ್ ಅಥವಾ ಹರಳೆಣ್ಣೆ ರಿಕಿನಸ್ ಕಮ್ಯುನಿಸ್ ಸಸ್ಯದ ಬೀಜಗಳಿಂದ ಹೊರತೆಗೆಯಲಾದ ಒಂದು ರೀತಿಯ ಎಣ್ಣೆಯಾಗಿದೆ. ಇದು ಹಳ್ಳಿಗಳಲ್ಲಿ ನಮ್ಮೆಲ್ಲರ ಮನೆಗಳ ಆಸುಪಾಸಿನಲ್ಲಿ ಇರುವ ಗಿಡವಾಗಿದೆ. ಇದರ ಬೀಜಗಳನ್ನು ಕ್ಯಾಸ್ಟರ್ ಬೀನ್ಸ್ ಎಂದೂ ಕರೆಯುತ್ತಾರೆ. ಈ ಬೀಜಗಳನ್ನು ಒಣಗಿಸಿ, ಅದರಿಂದ ಎಣ್ಣೆ ತಯಾರಿಸಲಾಗುತ್ತದೆ. ಹರಳೆಣ್ಣೆಯ ಬೇರುಗಳನ್ನು ಕೂಡ ಹಳ್ಳಿಗಳಲ್ಲಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ಬಳಸಲಾಗುತ್ತದೆ.

ಇದನ್ನೂ ಓದಿ: ಫುಡ್ ಪಾಯ್ಸನ್ ಆದಾಗ ಯಾವ ರೀತಿಯ ಆಹಾರ ಸೇವಿಸಬೇಕು?

ಹರಳು ಬೀಜ ಹೆಚ್ಚಿನ ಮಟ್ಟದ ರಿಸಿನ್ ಅನ್ನು ಹೊಂದಿರುತ್ತದೆ. ಇದು ಒಂದು ರೀತಿಯ ವಿಷಕಾರಿ ಕಿಣ್ವ. ಆದರೆ, ತೈಲವನ್ನು ಸಂಸ್ಕರಿಸಿದಾಗ ರಿಸಿನ್ ಅಂಶವನ್ನು ತೆಗೆದುಹಾಕಲಾಗುತ್ತದೆ. ಹೀಗಾಗಿ, ಸಂಸ್ಕರಿಸಿದ ಕ್ಯಾಸ್ಟರ್ ಆಯಿಲ್ ಮಾತ್ರ ಬಳಕೆಗೆ ಸುರಕ್ಷಿತವಾಗಿದೆ. ಈ ತೈಲವನ್ನು ಸಾಂಪ್ರದಾಯಿಕ ಚಿಕಿತ್ಸೆಗಳಲ್ಲಿ ಶತಮಾನಗಳಿಂದಲೂ ಬಳಸಲಾಗುತ್ತಿದೆ. ಪ್ರಾಚೀನ ಈಜಿಪ್ಟಿನವರು ಕಣ್ಣಿನ ಕಿರಿಕಿರಿಯನ್ನು ತಡೆಯಲು ಹರಳೆಣ್ಣೆಯನ್ನು ಬಳಸುತ್ತಿದ್ದರು.

ಮುಖದ ಆರೋಗ್ಯಕ್ಕೆ ಹರಳೆಣ್ಣೆಯ ಪ್ರಯೋಜನಗಳು:

1. ಚರ್ಮವನ್ನು ತೇವಗೊಳಿಸುತ್ತದೆ:

ಹರಳೆಣ್ಣೆಯಿಂದ ಚರ್ಮಕ್ಕೆ ಹಲವಾರು ಪ್ರಯೋಜನಗಳಿವೆ. ಹೆಚ್ಚಿನ ಕೊಬ್ಬಿನಾಮ್ಲದ ಅಂಶದಿಂದಾಗಿ ಕ್ಯಾಸ್ಟರ್ ಆಯಿಲ್ ಚರ್ಮದ ಮೃದುತ್ವವನ್ನು ಹೆಚ್ಚಿಸುತ್ತದೆ. ಒಣ ಚರ್ಮದವರು ನಿಮ್ಮ ಚರ್ಮವನ್ನು ಹೈಡ್ರೇಟ್ ಮಾಡಲು ನೈಸರ್ಗಿಕ ಮಾರ್ಗವನ್ನು ಹುಡುಕುತ್ತಿದ್ದರೆ ಹರಳೆಣ್ಣೆ ಅತ್ಯುತ್ತಮ ಆಯ್ಕೆಯಾಗಿದೆ.

ಇದನ್ನೂ ಓದಿ: Lemon Water: ನಿಂಬೆ ಜ್ಯೂಸ್ ಸೇವನೆಯಿಂದ ಪ್ರಯೋಜನಗಳು ಹತ್ತು ಹಲವು!

2. ಬ್ಯಾಕ್ಟೀರಿಯಾ ವಿರೋಧಿ ಪ್ರಯೋಜನಗಳನ್ನು ಹೊಂದಿದೆ:

ಕ್ಯಾಸ್ಟರ್ ಬೀಜಗಳಿಂದ ಪ್ರೋಟೀನ್ ಸಾರಗಳು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿ ಪ್ರೊಲಿಫೆರೇಟಿವ್ ಗುಣಲಕ್ಷಣಗಳನ್ನು ಹೊಂದಿವೆ. ಇದು ಮೊಡವೆ ಉಂಟುಮಾಡುವ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ನಿಯಂತ್ರಿಸುತ್ತದೆ.

3. ಫಂಗಲ್ ಸೋಂಕನ್ನು ಕಡಿಮೆ ಮಾಡುತ್ತದೆ:

ಕ್ಯಾಸ್ಟರ್ ಆಯಿಲ್ ಹೊಂದಿರುವ ಜೆಲ್ ಕ್ಯಾಂಡಿಡಾ ಅಲ್ಬಿಕಾನ್ಸ್ ಬೆಳವಣಿಗೆಯನ್ನು ತಡೆಯುತ್ತದೆ. ಈ ಫಂಗಸ್ ಬಾಯಿಯ ಸೋಂಕು, ಉಗುರಿನ ಫಂಗಸ್, ಡೈಪರ್ ರ್ಯಾಶಸ್​ಗೆ ಕಾರಣವಾಗುತ್ತದೆ.

4. ಸನ್​ಬರ್ನ್ ಅನ್ನು ಶಮನ ಮಾಡುತ್ತದೆ:

ಉಷ್ಣದಿಂದ ಚರ್ಮ ಉರಿಯುವಿಕೆಯನ್ನು ಹರಳೆಣ್ಣೆ ಕಡಿಮೆ ಮಾಡುತ್ತದೆ. ಕ್ಯಾಸ್ಟರ್ ಆಯಿಲ್‌ ಸನ್‌ಬರ್ನ್‌ಗೆ ಸಂಬಂಧಿಸಿದ ಕಿರಿಕಿರಿ ಮತ್ತು ನೋವನ್ನು ಶಮನಗೊಳಿಸಲು ಸಹಾಯ ಮಾಡುತ್ತದೆ. ಕ್ಯಾಸ್ಟರ್ ಆಯಿಲ್ ನೈಸರ್ಗಿಕವಾಗಿಯೇ ದಪ್ಪವಾಗಿರುತ್ತದೆ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಇದನ್ನು ನಮ್ಮ ಚರ್ಮಕ್ಕೆ ಲೇಪಿಸಿಕೊಳ್ಳಲು ಕಷ್ಟಪಡುತ್ತಾರೆ.

ಯಾವುದೇ ತೊಂದರೆಗಳಿಲ್ಲದೆ ನಿಮ್ಮ ಚರ್ಮಕ್ಕೆ ಕ್ಯಾಸ್ಟರ್ ಆಯಿಲ್ ಅನ್ನು ಹೇಗೆ ಅನ್ವಯಿಸಬಹುದು ಎಂಬ ಮಾಹಿತಿ ಇಲ್ಲಿದೆ.

ಹರಳೆಣ್ಣೆಯನ್ನು ಒಂದು ಬೌಲ್​ಗೆ ಹಾಕಿಕೊಂಡು, ಹತ್ತಿಯ ಉಂಡೆಯನ್ನು ಅದರಲ್ಲಿ ಅದ್ದಿರಿ. ಅದನ್ನು ನಿಮ್ಮ ಮುಖ ಮತ್ತು ಕುತ್ತಿಗೆಯ ಮೇಲೆ ನಿಧಾನವಾಗಿ ಹಚ್ಚಿಕೊಳ್ಳಿ. ವೃತ್ತಾಕಾರವಾಗಿ 3-5 ನಿಮಿಷಗಳ ಕಾಲ ಮುಖದ ಮೇಲೆ ಎಣ್ಣೆಯನ್ನು ಮಸಾಜ್ ಮಾಡಿಕೊಳ್ಳಿ. ಬಳಿಕ ಫೇಸ್ ವಾಶ್‌ನಿಂದ ನಿಮ್ಮ ಮುಖವನ್ನು ತೊಳೆಯಿರಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Sat, 30 September 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !