Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾದ ಸಕ್ಕರೆ ಸೇವನೆಯಿಂದ ನಿಮ್ಮ ಚರ್ಮದ ಸೌಂದರ್ಯಕ್ಕೂ ಆಪತ್ತು

Beauty Tips: ನೀವು ಮೊಡವೆಯನ್ನೊಳಗೊಂಡ ಚರ್ಮವನ್ನು ಹೊಂದಿದ್ದರೆ ಸಕ್ಕರೆ ಸೇವನೆಯನ್ನು ಕಡಿಮೆ ಮಾಡುವುದು ಉತ್ತಮ. ಹೆಚ್ಚಿನ ಗ್ಲೈಸೆಮಿಕ್ ಆಹಾರವು ಇನ್ಸುಲಿನ್ ಪ್ರತಿಕ್ರಿಯೆಯನ್ನು ಪ್ರಚೋದಿಸುವ ಮೂಲಕ ಮೊಡವೆಗಳನ್ನು ಉಲ್ಬಣಗೊಳಿಸಬಹುದು

ಅತಿಯಾದ ಸಕ್ಕರೆ ಸೇವನೆಯಿಂದ ನಿಮ್ಮ ಚರ್ಮದ ಸೌಂದರ್ಯಕ್ಕೂ ಆಪತ್ತು
ಸಕ್ಕರೆImage Credit source: iStock
Follow us
ಸುಷ್ಮಾ ಚಕ್ರೆ
|

Updated on: Oct 25, 2023 | 4:14 PM

ರುಚಿಕರವಾದ, ಸಕ್ಕರೆಯ ಅಂಶವಿರುವ ತಿಂಡಿಗಳು ಯಾರಿಗೆ ತಾನೇ ಇಷ್ಟವಾಗುವುದಿಲ್ಲ? ಆದರೆ, ಸಿಹಿ ಅಂಶ ನಿಮ್ಮ ಆರೋಗ್ಯದ ಮೇಲೆ ಹೇಗೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದನ್ನು ನೀವು ಈಗಾಗಲೇ ತಿಳಿದಿರಬಹುದು. ಊಟದ ನಂತರದ ಕೆಲವು ಸಿಹಿತಿಂಡಿಗಳನ್ನು ತಿನ್ನಬೇಕೆಂಬ ಆಸೆ ಹೆಚ್ಚಾಗುತ್ತದೆ. ಇದು ನಿಮ್ಮ ಚರ್ಮದ ಮೇಲೆ ಹಾನಿಯನ್ನುಂಟುಮಾಡುತ್ತವೆ ಎಂದು ನಿಮಗೆ ತಿಳಿದಿದೆಯೇ? ಹೆಚ್ಚಿನ ಪ್ರಮಾಣದ ಸಕ್ಕರೆ ಆಹಾರಗಳು ಮತ್ತು ಪಾನೀಯಗಳನ್ನು ಸೇವಿಸಿದಾಗ, ನಮ್ಮ ದೇಹವು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ಏರಿಕೆ ಉಂಟಾಗುತ್ತದೆ.

ಸುಧಾರಿತ ಗ್ಲೈಕೇಶನ್ ಅಂತಿಮ ಉತ್ಪನ್ನಗಳ (AGEs) ಉತ್ಪಾದನೆಯು ಅಂತಹ ಒಂದು ಪರಿಣಾಮವಾಗಿದೆ. ಈ ಸಂಯುಕ್ತಗಳು ಕಾಲಜನ್ ಮತ್ತು ಎಲಾಸ್ಟಿನ್ ಅನ್ನು ಹಾನಿಗೊಳಿಸಬಹುದು. ಅತಿಯಾದ ಸಕ್ಕರೆ ತಿಂದರೆ ಚರ್ಮದ ಸೌಂದರ್ಯಕ್ಕೂ ತೊಂದರೆ ಆಗುತ್ತದೆ. ನಿಮ್ಮ ಚರ್ಮಕ್ಕೆ ಅತಿಯಾದ ಸಕ್ಕರೆಯಿಂದ ಏನೆಲ್ಲ ಪರಿಣಾಮಗಳು ಉಂಟಾಗುತ್ತವೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

1. ಅತಿಯಾಗಿ ಸಿಹಿ ಸೇವಿಸುವುದರಿಂದ ಚರ್ಮಕ್ಕೆ ಅಕಾಲಿಕ ವಯಸ್ಸು ಉಂಟಾಗಬಹುದು. ಹೆಚ್ಚಿನ ಸಕ್ಕರೆ ಸೇವನೆಯಿಂದ ಉತ್ಪತ್ತಿಯಾಗುವ AGEಗಳಿಂದ ಕಾಲಜನ್ ಸ್ಥಗಿತವಾಗುತ್ತದೆ. ಇದು ಸೂಕ್ಷ್ಮ ರೇಖೆಗಳು, ಸುಕ್ಕುಗಳು ಮತ್ತು ಚರ್ಮವು ಕುಗ್ಗುವಿಕೆಗೆ ಕಾರಣವಾಗುತ್ತದೆ. ಇದು ನಿಮ್ಮ ನಿಜವಾದ ವಯಸ್ಸಿಗಿಂತ ವಯಸ್ಸಾದವರಂತೆ ಕಾಣುವಂತೆ ಮಾಡುತ್ತದೆ. ಕಾಂತಿಯುತ ತ್ವಚೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಇದರಿಂದ ತೊಂದರೆ ಆಗುತ್ತದೆ.

ಇದನ್ನೂ ಓದಿ: Skin Care: ತ್ವಚೆಯನ್ನು ಸ್ವಚ್ಛಗೊಳಿಸುವುದು ಹೇಗೆ?; ಈ 7 ತಪ್ಪುಗಳನ್ನೆಂದೂ ಮಾಡಬೇಡಿ

2. ನೀವು ಮೊಡವೆಯನ್ನೊಳಗೊಂಡ ಚರ್ಮವನ್ನು ಹೊಂದಿದ್ದರೆ ಸಕ್ಕರೆ ಸೇವನೆಯನ್ನು ಕಡಿಮೆ ಮಾಡುವುದು ಉತ್ತಮ. ಹೆಚ್ಚಿನ ಗ್ಲೈಸೆಮಿಕ್ ಆಹಾರವು ಇನ್ಸುಲಿನ್ ಪ್ರತಿಕ್ರಿಯೆಯನ್ನು ಪ್ರಚೋದಿಸುವ ಮೂಲಕ ಮೊಡವೆಗಳನ್ನು ಉಲ್ಬಣಗೊಳಿಸಬಹುದು ಎಂದು ಅಧ್ಯಯನಗಳು ತಿಳಿಸಿವೆ. ಇದು ತೈಲ ಉತ್ಪಾದನೆ ಮತ್ತು ಚರ್ಮದಲ್ಲಿ ಉರಿಯೂತವನ್ನು ಹೆಚ್ಚಿಸುತ್ತದೆ. ಹೆಚ್ಚುವರಿ ಸಕ್ಕರೆಯು ಕರುಳಿನಲ್ಲಿರುವ ಪ್ರಯೋಜನಕಾರಿ ಬ್ಯಾಕ್ಟೀರಿಯಾದ ಸೂಕ್ಷ್ಮ ಸಮತೋಲನವನ್ನು ಅಡ್ಡಿಪಡಿಸುತ್ತದೆ. ಇದು ಚರ್ಮದ ಸಮಸ್ಯೆಗಳ ಬೆಳವಣಿಗೆಯ ಮೇಲೆ ಪ್ರಭಾವ ಬೀರಬಹುದು.

3. ಉರಿಯೂತವು ಹಾನಿಕಾರಕ ಪ್ರಚೋದಕಗಳಿಗೆ ನಿಮ್ಮ ದೇಹದ ನೈಸರ್ಗಿಕ ಪ್ರತಿಕ್ರಿಯೆಯಾಗಿದೆ. ಆದರೆ ದೀರ್ಘಕಾಲದ ಉರಿಯೂತವು ಚರ್ಮದ ಮೇಲೆ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡಬಹುದು. ಅತಿಯಾದ ಸಕ್ಕರೆ ಸೇವನೆಯು ಉರಿಯೂತದ ಸೈಟೊಕಿನ್‌ಗಳ ಬಿಡುಗಡೆಯನ್ನು ಪ್ರಚೋದಿಸುತ್ತದೆ, ಎಸ್ಜಿಮಾ, ಸೋರಿಯಾಸಿಸ್ ಮತ್ತು ರೊಸಾಸಿಯಂತಹ ಉರಿಯೂತದ ಚರ್ಮದ ಸ್ಥಿತಿಗಳಿಗೆ ಕೊಡುಗೆ ನೀಡುತ್ತದೆ. ಸಕ್ಕರೆ ಸೇವನೆಯನ್ನು ಮಿತಗೊಳಿಸುವುದರ ಮೂಲಕ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

4. ಹೆಚ್ಚು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡುವುದರಿಂದ AGEಗಳ ರಚನೆ ಹೆಚ್ಚಾಗುತ್ತದೆ. ಇದು ಚರ್ಮದಲ್ಲಿ ಕಾಲಜನ್ ಮತ್ತು ಎಲಾಸ್ಟಿನ್ ಫೈಬರ್​ಗಳನ್ನು ಹಾನಿಗೊಳಿಸುತ್ತದೆ. ಚರ್ಮದ ಸ್ಥಿತಿಸ್ಥಾಪಕತ್ವ ಮತ್ತು ಮೃದುತ್ವವನ್ನು ಕಾಪಾಡಿಕೊಳ್ಳಲು ಕಾಲಜನ್ ಅತ್ಯಗತ್ಯ. ಈ ನಾರುಗಳು ಇಲ್ಲವಾದರೆ ಚರ್ಮವು ಯುವಿ ವಿಕಿರಣ ಮತ್ತು ಮಾಲಿನ್ಯದಂತಹ ಬಾಹ್ಯ ಒತ್ತಡಗಳಿಗೆ ಹೆಚ್ಚು ಒಳಗಾಗುತ್ತದೆ. ಇದು ಅಕಾಲಿಕ ವಯಸ್ಸಾಗುವಿಕೆಗೆ ಕಾರಣವಾಗುತ್ತದೆ.

ಸಕ್ಕರೆ ಸೇವನೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಹೇಗೆ?:

– ಯಾವುದಾದರೂ ವಸ್ತು ಖರೀದಿಸುವಾಗ ಅದರಲ್ಲಿ ಸಕ್ಕರೆ ಅಂಶ ಇದೆಯೇ? ಎಂಬುದನ್ನು ಚೆಕ್ ಮಾಡಿ.

– ಹೈ-ಫ್ರಕ್ಟೋಸ್ ಕಾರ್ನ್ ಸಿರಪ್, ಮಾಲ್ಟೋಸ್ ಮತ್ತು ಡೆಕ್ಸ್ಟ್ರೋಸ್​ನಂತಹ ಪದಾರ್ಥಗಳು ಸಕ್ಕರೆಗಳ ವಿವಿಧ ರೂಪಗಳಾಗಿವೆ. ನೀವು ಖರೀದಿಸುವ ಪದಾರ್ಥದ ಲೇಬಲ್ ಮೇಲೆ ಈ ಬಗ್ಗೆ ಮಾಹಿತಿ ಇರುತ್ತದೆ.

ಇದನ್ನೂ ಓದಿ: Winter Skin Care: ಚಳಿಗಾಲದಲ್ಲಿ ಚರ್ಮ ಏಕೆ ತುರಿಸುತ್ತದೆ? ತ್ವಚೆಯ ಕಾಳಜಿ ಹೇಗೆ?

– ಸಕ್ಕರೆ ಅಂಶವನ್ನು ಒಳಗೊಂಡಿರುವ ಆಹಾರ ಪದಾರ್ಥಗಳಲ್ಲಿ ಬೆಳಗಿನ ಉಪಾಹಾರ ಧಾನ್ಯಗಳು, ಕೆಚಪ್, ಕಡಿಮೆ ಕೊಬ್ಬಿನ ಮೊಸರು, ಸಂಸ್ಕರಿಸಿದ ಹಣ್ಣಿನ ಜ್ಯೂಸ್, ಬ್ರೆಡ್ ಮತ್ತು ಸಲಾಡ್ ಡ್ರೆಸ್ಸಿಂಗ್ ಸೇರಿವೆ. ಇದರಲ್ಲಿ ಸಕ್ಕರೆ ಅಂಶ ಇದೆ ಎಂಬುದು ಅನೇಕರಿಗೆ ತಿಳಿದಿರುವುದಿಲ್ಲ.

– ಪ್ಯಾಕ್ ಮಾಡಿಟ್ಟ ಆಹಾರದ ಬದಲು ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ನೇರ ಪ್ರೋಟೀನ್‌ಗಳಂತಹ ಸಂಸ್ಕರಿಸದ ಮತ್ತು ನೈಸರ್ಗಿಕ ಆಹಾರಗಳನ್ನು ಆರಿಸಿಕೊಳ್ಳಿ. ಇವು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತವೆ.

– ಸಕ್ಕರೆ ಪಾನೀಯಗಳಾದ ಸೋಡಾ ಮತ್ತು ಹಣ್ಣಿನ ಜ್ಯೂಸ್​ಗಳನ್ನು ಬಿಟ್ಟುಬಿಡಿ. ಅದರ ಬದಲಿಗೆ, ನಿಮ್ಮ ಚರ್ಮವನ್ನು ಹೈಡ್ರೀಕರಿಸುವ ಮತ್ತು ಪರಿಣಾಮಕಾರಿಯಾಗಿ ಟಾಕ್ಸಿನ್​ಗಳನ್ನು ಹೊರಹಾಕಲು ಸಾಕಷ್ಟು ನೀರು ಕುಡಿಯಿರಿ. ಅಥವಾ ಎಳನೀರು ಕುಡಿಯಿರಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ