AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ತಪ್ಪದೆ ಬೀಟ್ರೂಟ್ ಜ್ಯೂಸ್ ಕುಡಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

ಬೀಟ್ರೂಟ್ ರಸವು ಜೀವಸತ್ವ, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸುವುದರಿಂದ ಹಿಡಿದು ಚರ್ಮದ ಹೊಳಪನ್ನು ಹೆಚ್ಚಿಸುವವರೆಗೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆರೋಗ್ಯ ತಜ್ಞರು ಕೂಡ ಪ್ರತಿದಿನ ಒಂದು ಲೋಟ ಬೀಟ್ರೂಟ್ ರಸವನ್ನು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ ಎಂದು ಹೇಳುತ್ತಾರೆ. ಹಾಗಾದರೆ ಪ್ರತಿನಿತ್ಯ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್‌ ಕುಡಿಯುವುದರಿಂದ ಯಾವ ರೀತಿ ಪ್ರಯೋಜನಗಳು ಸಿಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪ್ರತಿದಿನ ತಪ್ಪದೆ ಬೀಟ್ರೂಟ್ ಜ್ಯೂಸ್ ಕುಡಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?
Beetroot Juice BenefitsImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: Jun 24, 2026 | 10:29 PM

Share

ಮುಖ್ಯಾಂಶಗಳು

  • ಹೃದಯದ ಆರೋಗ್ಯಕ್ಕೆ ಬೀಟ್ರೂಟ್ ಜ್ಯೂಸ್ ಯಾಕೆ ಒಳ್ಳೆಯದು?
  • ಬೀಟ್ರೂಟ್ ಜ್ಯೂಸ್‌ನ ಆರೋಗ್ಯ ಪ್ರಯೋಜನಗಳು
  • ಯಕೃತ್ತಿನ ಆರೋಗ್ಯ ಮತ್ತು ರಕ್ತಸಂಚಾರಕ್ಕೆ ಬೀಟ್ರೂಟ್ ಜ್ಯೂಸ್‌ನ ಮಹತ್ವ

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಜೀವನಶೈಲಿಯತ್ತ ಜನರ ಒಲವು ಹೆಚ್ಚುತ್ತಿದೆ. ಅಂತಹ ಆರೋಗ್ಯಕರ ಆಹಾರಗಳಲ್ಲಿ ಬೀಟ್ರೂಟ್ ಜ್ಯೂಸ್ ಪ್ರಮುಖ ಸ್ಥಾನ ಪಡೆದಿದೆ. ವಿಟಮಿನ್‌ಗಳು, ಖನಿಜಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ನೈಸರ್ಗಿಕ ನೈಟ್ರೇಟ್‌ಗಳಿಂದ ಸಮೃದ್ಧವಾಗಿರುವ ಈ ಪಾನೀಯವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ಪ್ರತಿನಿತ್ಯ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್‌ ಕುಡಿಯುವುದರಿಂದ ಯಾವ ರೀತಿ ಪ್ರಯೋಜನಗಳು ಸಿಗುತ್ತದೆ, ಯಾವ ರೀತಿ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ

ಬೀಟ್ರೂಟ್‌ನಲ್ಲಿರುವ ನೈಸರ್ಗಿಕ ನೈಟ್ರೇಟ್‌ಗಳು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಗೊಂಡು ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತವೆ. ಇದರಿಂದ ರಕ್ತಸಂಚಾರ ಸುಧಾರಿಸಿ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತದೆ. ಜೊತೆಗೆ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.

ಯಕೃತ್ತಿನ ಆರೋಗ್ಯಕ್ಕೆ ಬಹಳ ಒಳ್ಳೆಯದು

ಬೀಟ್ರೂಟ್‌ನಲ್ಲಿರುವ ಬಿಟಾಲೈನ್ ಎಂಬ ಆಂಟಿಆಕ್ಸಿಡೆಂಟ್ ಯಕೃತ್ತಿನ ಕಾರ್ಯಕ್ಷಮತೆಯನ್ನು ಬೆಂಬಲಿಸುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಲು ಮತ್ತು ಯಕೃತ್ತಿನಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಕ್ಯಾಪ್ಸಿಕಂ ತಿನ್ನಲು ಇಷ್ಟವಿಲ್ಲವೇ? ಇದರ ಆರೋಗ್ಯ ಪ್ರಯೋಜನ ತಿಳಿದ್ರೆ ಪ್ರತಿದಿನ ತಿನ್ನುತ್ತೀರಿ!

ದಣಿವನ್ನು ಕಡಿಮೆ ಮಾಡಲು ಸಹಕಾರಿ

ಬೀಟ್ರೂಟ್ ಜ್ಯೂಸ್ ಕ್ರೀಡಾಪಟುಗಳು ಮತ್ತು ಫಿಟ್ನೆಸ್‌ ಪ್ರಿಯರಿಗೆ ಉತ್ತಮ ಆಯ್ಕೆಯಾಗಿದೆ. ಇದು ಸ್ನಾಯುಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಿ ದೈಹಿಕ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ದಣಿವನ್ನು ಕಡಿಮೆ ಮಾಡಿ ದಿನವಿಡೀ ಚೈತನ್ಯದಿಂದ ಇರಲು ನೆರವಾಗುತ್ತದೆ.

ರಕ್ತಹೀನತೆಯ ಅಪಾಯವನ್ನು ತಡೆಯುತ್ತದೆ

ಬೀಟ್ರೂಟ್‌ನಲ್ಲಿ ಕಬ್ಬಿಣ, ಫೋಲೇಟ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿವೆ. ಇವು ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಉತ್ತೇಜಿಸಿ ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುತ್ತವೆ. ವಿಶೇಷವಾಗಿ ಮಹಿಳೆಯರು ಮತ್ತು ಯುವತಿಯರಿಗೆ ಇದು ಪ್ರಯೋಜನಕಾರಿ.

ಚರ್ಮದ ಆರೋಗ್ಯಕ್ಕೂ ಒಳ್ಳೆಯದು

ಆಂಟಿಆಕ್ಸಿಡೆಂಟ್‌ಗಳಿರುವುದರಿಂದ ಬೀಟ್ರೂಟ್ ಜ್ಯೂಸ್ ಚರ್ಮದ ಕೋಶಗಳನ್ನು ರಕ್ಷಿಸುತ್ತದೆ. ರಕ್ತ ಶುದ್ಧೀಕರಣಕ್ಕೆ ಸಹಾಯ ಮಾಡುವುದರಿಂದ ಮೊಡವೆ ಮತ್ತು ಕಲೆಗಳನ್ನು ಕಡಿಮೆ ಮಾಡಿ ಚರ್ಮಕ್ಕೆ ನೈಸರ್ಗಿಕ ಕಾಂತಿ ನೀಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ
ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..