AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನಾನ ಮಾಡುವ ಮೊದಲು ಹೊಕ್ಕುಳಿಗೆ ತುಪ್ಪ ಹಚ್ಚುವುದರಿಂದ ಈ 5 ಆರೋಗ್ಯ ಪ್ರಯೋಜನ ಸಿಗುತ್ತೆ

Benefits of applying ghee on the navel: ನಾಭಿಯನ್ನು ದೇಹದ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗಿದೆ. ಪ್ರತಿದಿನ ನಾಭಿಗೆ ದೇಸಿ ತುಪ್ಪವನ್ನು ಹಚ್ಚುವುದರಿಂದ ವ್ಯಕ್ತಿಯ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಜೊತೆಗೆ ಇದು ಸಂಶೋಧನೆಗಳಿಂದಲೂ ಬಹಿರಂಗವಾಗಿದೆ. ದೇಸಿ ತುಪ್ಪದಲ್ಲಿರುವ ವಿಟಮಿನ್- ಇ, ವಿಟಮಿನ್- ಎ, ವಿಟಮಿನ್- ಡಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಆರೋಗ್ಯವನ್ನು ಸುಧಾರಿಸುವುದರ ಜೊತೆಗೆ ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಹಾಗಾದರೆ ಪ್ರತಿನಿತ್ಯ ದೇಸಿ ತುಪ್ಪವನ್ನು ಹೊಕ್ಕುಳಿಗೆ ಹಚ್ಚುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ತಿಳಿದುಕೊಳ್ಳಿ.

ಸ್ನಾನ ಮಾಡುವ ಮೊದಲು ಹೊಕ್ಕುಳಿಗೆ ತುಪ್ಪ ಹಚ್ಚುವುದರಿಂದ ಈ 5 ಆರೋಗ್ಯ ಪ್ರಯೋಜನ ಸಿಗುತ್ತೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Nov 01, 2024 | 2:08 PM

Share

ಆಯುರ್ವೇದದ ಪ್ರಕಾರ, ನಾಭಿಯನ್ನು ದೇಹದ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗಿದೆ. ಪ್ರತಿದಿನ ನಾಭಿಗೆ ದೇಸಿ ತುಪ್ಪವನ್ನು ಹಚ್ಚುವುದರಿಂದ ವ್ಯಕ್ತಿಯ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಜೊತೆಗೆ ಇದು ಸಂಶೋಧನೆಗಳಿಂದಲೂ ಬಹಿರಂಗವಾಗಿದೆ. ದೇಸಿ ತುಪ್ಪದಲ್ಲಿರುವ ವಿಟಮಿನ್- ಇ, ವಿಟಮಿನ್- ಎ, ವಿಟಮಿನ್- ಡಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಆರೋಗ್ಯವನ್ನು ಸುಧಾರಿಸುವುದರ ಜೊತೆಗೆ ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಹಾಗಾದರೆ ಪ್ರತಿನಿತ್ಯ ದೇಸಿ ತುಪ್ಪವನ್ನು ಹೊಕ್ಕುಳಿಗೆ ಹಚ್ಚುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ತಿಳಿದುಕೊಳ್ಳಿ.

ಚರ್ಮವನ್ನು ಪೋಷಿಸುತ್ತದೆ: ಹೊಕ್ಕುಳಿಗೆ ತುಪ್ಪವನ್ನು ಹಚ್ಚುವುದರಿಂದ ಸಿಗುವ ದೊಡ್ಡ ಪ್ರಯೋಜನವೆಂದರೆ ಇದು ನಿಮ್ಮ ಚರ್ಮವನ್ನು ತೇವಗೊಳಿಸುತ್ತದೆ ಮತ್ತು ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಚರ್ಮವು ಯಾವಾಗಲೂ ಹೊಳೆಯುತ್ತದೆ. ಹಾಗಾಗಿ ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಬಯಸುತ್ತಿರುವವರು ಈ ಟ್ರಿಕ್ ಅನ್ನು ಪಾಲನೆ ಮಾಡಬಹುದು.

ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ: ಆಯುರ್ವೇದದ ಪ್ರಕಾರ, ನಾಭಿಯನ್ನು ಜೀರ್ಣಕ್ರಿಯೆಯ ಸ್ಥಳವೆಂದು ಪರಿಗಣಿಸಲಾಗಿದೆ. ಈ ಸ್ಥಳದಲ್ಲಿ ತುಪ್ಪವನ್ನು ಹಚ್ಚುವುದರಿಂದ ಜೀರ್ಣಕಾರಿ ಕಿಣ್ವಗಳು ಸಕ್ರಿಯಗೊಳ್ಳುತ್ತವೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆಹಾರ ಸರಿಯಾಗಿ ಜೀರ್ಣ ಆಗದಿದ್ದವರು ಈ ರೀತಿ ಮಾಡಿ ನೋಡಬಹುದು.

ಮಲಬದ್ಧತೆಯನ್ನು ನಿವಾರಿಸುತ್ತದೆ: ಮಲಬದ್ಧತೆಯ ಸಮಸ್ಯೆಯಿಂದ ಪರಿಹಾರ ಪಡೆಯಲು ದೇಸಿ ತುಪ್ಪವನ್ನು ಬಳಸಬಹುದು. ಇದಕ್ಕಾಗಿ, ನಾಭಿಯಲ್ಲಿ 2- 3 ಹನಿ ತುಪ್ಪವನ್ನು ಹಾಕಿ ಮತ್ತು ಲಘುವಾಗಿ ಮಸಾಜ್ ಮಾಡಿ. ಹೊಕ್ಕುಳಿಗೆ ತುಪ್ಪ ಹಚ್ಚುವುದರಿಂದ ವ್ಯಕ್ತಿಯ ಜೀರ್ಣ ಶಕ್ತಿ ಹೆಚ್ಚುತ್ತದೆ ಜೊತೆಗೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

ಕೀಲು ನೋವನ್ನು ಕಡಿಮೆ ಮಾಡುತ್ತದೆ: ನಿಮ್ಮ ಕೀಲುಗಳಲ್ಲಿ ಪದೇ ಪದೇ ನೋವು ಬರುತ್ತಿದ್ದರೆ ಹೊಕ್ಕುಳಿಗೆ ತುಪ್ಪ ಹಚ್ಚುವ ಮೂಲಕ ನೀವು ಈ ಸಮಸ್ಯೆಯಿಂದ ಶಾಶ್ವತವಾಗಿ ಪರಿಹಾರ ಪಡೆಯಬಹುದು. ಮೊದಲನೆಯದಾಗಿ, ನಾಭಿಯಲ್ಲಿ ಕೆಲವು ಹನಿ ತುಪ್ಪವನ್ನು ಹಾಕಿ ಬಳಿಕ ಅದನ್ನು ಹೊಕ್ಕುಳಿನ ಸುತ್ತಲೂ ಮಸಾಜ್ ಮಾಡಿ. ಈ ರೀತಿ ಮಾಡುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ ಮತ್ತು ಊತಕ್ಕೂ ಪರಿಹಾರ ಸಿಗುತ್ತದೆ.

ವಾತ ದೋಷಕ್ಕೆ ಪರಿಹಾರ: ಆಯುರ್ವೇದದ ಪ್ರಕಾರ, ನಾಭಿಗೆ ತುಪ್ಪವನ್ನು ಹಚ್ಚುವುದರಿಂದ ವಾತ ದೋಷ ಹತೋಟಿಗೆ ಬರುತ್ತದೆ. ಬಳಿಕ ಇದು ಪೂರ್ತಿಯಾಗಿ ಕಡಿಮೆಯಾಗುತ್ತದೆ. ವ್ಯಕ್ತಿಯು ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಇಲ್ಲದಾಗ ನಾನಾ ರೀತಿಯ ಅಸ್ವಸ್ಥತೆಗಳು ಕಂಡು ಬರಲು ಪ್ರಾರಂಭಿಸುತ್ತದೆ. ಆಗ ನೀವು ತುಪ್ಪ ಬಳಕೆ ಮಾಡುವುದರಿಂದ ಇದು ನಿಮ್ಮ ಆರೋಗ್ಯ ಸಮಸ್ಯೆಯನ್ನು ದೂರ ಮಾಡಿ ಪರಿಹಾರ ನೀಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!