AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಎಲ್ಲರಿಗೂ ಇಷ್ಟವಾಗುವ ಜೋಳದಲ್ಲಿದೆ ಹೆಚ್ಚು ಪ್ರಯೋಜನಗಳು

ಹೆಚ್ಚು ರುಚಿ ಹೊಂದಿರುವ ಜೋಳವನ್ನು ತಿನ್ನಲು ಎಲ್ಲರಿಗೂ ಇಷ್ಟವಾಗುತ್ತೆ. ಹೆಚ್ಚು ಪೋಷಕಾಂಶ ಹೊಂದಿರುವ ಜೋಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕೇವಲ ಮಳೆಗಾಲ ಮಾತ್ರವಲ್ಲ ಬೇರೆ ಸಮಯದಲ್ಲೂ ತಿನ್ನಬಹುದು.

Health Tips: ಎಲ್ಲರಿಗೂ ಇಷ್ಟವಾಗುವ ಜೋಳದಲ್ಲಿದೆ ಹೆಚ್ಚು ಪ್ರಯೋಜನಗಳು
ಜೋಳ
TV9 Web
| Edited By: sandhya thejappa|

Updated on: Jul 13, 2021 | 9:13 AM

Share

ಮಳೆಗಾಲ ಶುರುವಾಗಿದೆ. ಬಿಸಿ ಬಿಸಿ ಏನಾದರೂ ತಿನ್ನಬೇಕು ಅಂತ ಅನಿಸುತ್ತೆ. ಹೀಗಾಗಿ ಜೋಳವನ್ನು ಬೇಯಿಸಿ ತಿನ್ನಬಹುದು. ಹೆಚ್ಚು ರುಚಿ ಹೊಂದಿರುವ ಜೋಳವನ್ನು ತಿನ್ನಲು ಎಲ್ಲರಿಗೂ ಇಷ್ಟವಾಗುತ್ತೆ. ಹೆಚ್ಚು ಪೋಷಕಾಂಶ ಹೊಂದಿರುವ ಜೋಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕೇವಲ ಮಳೆಗಾಲ ಮಾತ್ರವಲ್ಲ ಬೇರೆ ಸಮಯದಲ್ಲೂ ತಿನ್ನಬಹುದು. ಮಳೆಗಾಲದಲ್ಲಿ ಮಳೆಯೊಂದಿಗೆ ಬಿಸಿ ಬಿಸಿ ಜೋಳ ತಿಂದರೆ ಒಂದು ರೀತಿ ಖುಷಿ ಸಿಗುತ್ತದೆ. ಹೆಚ್ಚು ಪೋಷಕಾಂಶದಿಂದ ಕೂಡಿರುವ ಜೋಳ ಎಷ್ಟು ಪ್ರಯೋಜನಕ ಎಂದು ನೀವೇ ನೋಡಿ.

ಜೀವಸತ್ವಗಳು ಸಮೃದ್ಧವಾಗಿವೆ ಜೋಳದಲ್ಲಿ ಜೀವಸತ್ವಗಳು ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಜೊತೆಗೆ ಇದು ವಿಟಮಿನ್ ಬಿಯನ್ನು ಹೊಂದಿದೆ. ಇದರಿಂದ ದೈಹಿಕ ಸಾಮರ್ಥ್ಯ ಹೆಚ್ಚಾಗುತ್ತದೆ. ಹೊಲಗಳಲ್ಲಿ ಕೆಲಸ ಮಾಡುವವರು ಜೋಳವನ್ನು ತಿಂದರೆ ಕೆಲಸ ಮಾಡಲು ದೈಹಿಕ ಶಕ್ತಿ ವೃದ್ಧಿಯಾಗುತ್ತದೆ. ಮೂಳೆಗಳನ್ನು ಬಲಿಷ್ಠಗೊಳಿಸುವ ಜೊತೆಗೆ ಕೂದಲಿನ ಆರೋಗ್ಯವನ್ನು ಇದು ಕಾಪಾಡುತ್ತದೆ. ಕೊರೊನಾ ಈ ಕಾಲದಲ್ಲಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಇದರಿಂದ ವಿಟಮಿನ್ ಎ ಅನ್ನು ಹೊಂದಿರುವ ಜೋಳವನ್ನು ತಿನ್ನಬೇಕು.

ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಜೋಳ ತಿನ್ನುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಕೊಲೆಸ್ಟ್ರಾಲ್​ನಿಂದ ಮುಕ್ತಿ ಪಡೆಯಲು ಹೆಚ್ಚು ಹೆಚ್ಚು ಜೋಳವನ್ನು ತಿನ್ನಬೇಕು. ಸಕ್ಕರೆ ಕಾಯಿಲೆ ಇರುವರಿಗೆ ಜೋಳ ಇನ್ನಲು ವೈದ್ಯರು ಸೂಚಿಸಿತ್ತಾರೆ. ವಿಟಮಿನ್ ಬಿ1 , ವಿಟಮಿನ್ ಬಿ5 ಮತ್ತು ವಿಟಮಿನ್ ಸಿ ಅಂಶಗಳು ಇದರಲ್ಲಿ ಇರುವುದರಿಂದ ರೋಗದ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ತೂಕ ಇಳಿಸಲು ಸಹಾಯಕ ಹಸಿವಾದಾಗೆಲ್ಲ ಮೂರು ಹೊತ್ತಿನ ಊಟ ಹೊರತು ಪಡಿಸಿ ಮಧ್ಯ ಮಧ್ಯ ಏನಾದರೂ ತಿನ್ನುತ್ತಾರೆ. ಇದರಿಂದ ದೇಹದ ತೂಕ ಹೆಚ್ಚಾಗುತ್ತದೆ. ಆದರೆ ಜೋಳ ತಿನ್ನುವುದರಿಂದ ಬೇಗ ಹಸಿವಾಗಲ್ಲ. ಹೀಗಾಗಿ ಮಧ್ಯೆ ಬೇರೆ ಆಹಾರವನ್ನು ತಿನ್ನುವ ಅನಿವಾರ್ಯತೆ ಇರಲ್ಲ. ಗುಣಮಟ್ಟವಲ್ಲದ ಆಹಾರವನ್ನು ಸೇವಿಸುವುದರಿಂದ ತೂಕ ಹೆಚ್ಚಾಗುವುದು ಸಹಜ. ಅದರ ಬದಲಿಗೆ ಜೋಳವನ್ನು ತಿಂದರೆ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.

ಗರ್ಭಿಣಿಯರಿಗೆ ಪ್ರಯೋಜನಕಾರಿ ಗರ್ಭಿಣಿಯರು ತಾವು ತಿನ್ನುವ ಆಹಾರಕ್ಕೆ ಜೋಳವನ್ನು ಸೇರಿಸಿಕೊಳ್ಳಬಹುದು. ಇದು ತಾಯಿ ಮತ್ತು ಮಗುವಿಗೆ ಆರೋಗ್ಯ ಕಾಪಾಡುತ್ತದೆ. ಜೋಳ ಫೋಲಿಕ್ ಆಮ್ಲವನ್ನು ಹೊಂದಿರುತ್ತದೆ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಾಮಾನ್ಯ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ದೂರ ಮಾಡಲು ಜೋಳವನ್ನು ಸೇವಿಸಬೇಕು.

ಇದನ್ನೂ ಓದಿ

Health Tips: ಹಲ್ಲುಜ್ಜುವಾಗ ನೀವು ಮಾಡುವ ಈ ತಪ್ಪುಗಳು ನಿಮ್ಮನ್ನು ಅಪಾಯಕ್ಕೆ ಸಿಲುಕುವಂತೆ ಮಾಡುತ್ತದೆ; ಆರೋಗ್ಯದ ಬಗ್ಗೆ ಕಾಳಜಿ ಇರಲಿ

Health Benefits: ಕಟಿ ಚಕ್ರಾಸನ ಮಾಡುವುದು ಹೇಗೆ? ಹೊಟ್ಟೆಯಲ್ಲಿನ ಕೊಬ್ಬು ಕರಗಿಸಲು 15 ನಿಮಿಷಗಳ ಕಾಲ ಈ ಯೋಗಾಸನ ಮಾಡಿ

(Benefits of Corn for good health)

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?