AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಗುವ ಮುನ್ನ ನೆನಸಿಟ್ಟ ಚಿಯಾ ಬೀಜಗಳ ನೀರು ಕುಡಿದರೆ ರಾತ್ರಿ ಹಸಿವಾಗುವುದಿಲ್ಲ

ಚಿಯಾ ಬೀಜಗಳ ನೀರು ಮತ್ತು ಆರೋಗ್ಯ: ಅದೆಷ್ಟೋ ಜನರಿಗೆ ಬೆಳಗಿನ ಉಪಹಾರವಾಗಿರುವ ಚಿಯಾ ಬೀಜಗಳ ಬಗ್ಗೆ ನಿಮಗೂ ತಿಳಿದಿರಬಹುದು. ಇವುಗಳ ನಿಯಮಿತ ಸೇವನೆ ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದರೆ ಇವುಗಳನ್ನು ಬೆಳಿಗ್ಗೆ ಸೇವನೆ ಮಾಡುವ ಬದಲು ರಾತ್ರಿ ಸೇವನೆ ಮಾಡಿದರೆ ಏನಾಗಬಹುದು ಎಂದು ಯೋಚಿಸಿದ್ದೀರಾ? ಹಾಗಾದರೆ ಮಲಗುವ ಮುನ್ನ ಚಿಯಾ ಬೀಜಗಳ ಸೇವನೆ ಮಾಡಿದರೆ ಯಾವ ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಮಲಗುವ ಮುನ್ನ ನೆನಸಿಟ್ಟ ಚಿಯಾ ಬೀಜಗಳ ನೀರು ಕುಡಿದರೆ ರಾತ್ರಿ ಹಸಿವಾಗುವುದಿಲ್ಲ
ಚಿಯಾ ಬೀಜಗಳ ನೀರುImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 16, 2025 | 3:03 PM

Share

ಚಿಯಾ ಬೀಜಗಳು (Chia Seed) ನೋಡುವುದಕ್ಕೆ ಚಿಕ್ಕದಾಗಿದ್ದರೂ ಕೂಡ ಅವುಗಳಲ್ಲಿ ಆರೋಗ್ಯ (Health) ಪ್ರಯೋಜನಗಳು ಸಾಕಷ್ಟಿದೆ. ಅದೆಷ್ಟೋ ಜನರಿಗೆ ಬೆಳಗಿನ ಉಪಹಾರದ ಭಾಗವಾಗಿವೆ. ಇದರಲ್ಲಿ ಫೈಬರ್, ಒಮೆಗಾ- 3 ಕೊಬ್ಬಿನಾಮ್ಲಗಳು, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು ಮತ್ತು ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅಗತ್ಯ ಖನಿಜಾಂಶಗಳು ಸಮೃದ್ಧವಾಗಿರುವುದರಿಂದ ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಹಾಗಾಗಿ ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹೆಚ್ಚಾಗಿ ಸೇವನೆ ಮಾಡಲಾಗುತ್ತದೆ. ಅದಲ್ಲದೆ ಚಿಯಾ ಬೀಜಗಳ ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ಹೃದಯದ ಆರೋಗ್ಯ (Heart health), ಮೂಳೆಗೆ ಬಲ ಮತ್ತು ಸ್ನಾಯುಗಳ ಚೇತರಿಕೆಗೆ ಸಹಾಯ ಮಾಡುತ್ತದೆ . ಆದರೆ ಈ ಸಣ್ಣ ಬೀಜಗಳನ್ನು ಬೆಳಿಗ್ಗೆ ಸೇವನೆ ಮಾಡುವ ಬದಲು ರಾತ್ರಿ (Night) ಸೇವನೆ ಮಾಡಿದರೆ ಏನಾಗಬಹುದು ಎಂದು ಯೋಚಿಸಿದ್ದೀರಾ? ಹಾಗಾದರೆ ಮಲಗುವ ಮುನ್ನ ಚಿಯಾ ಬೀಜಗಳ ಸೇವನೆ ಮಾಡಿದರೆ ಯಾವ ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ

ಚಿಯಾ ಬೀಜಗಳಲ್ಲಿ ನಾರಿನಾಂಶ ಸಮೃದ್ಧವಾಗಿದ್ದು ನಮ್ಮ ಕರುಳಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ರಾತ್ರಿ ಸಮಯದಲ್ಲಿ ಅವುಗಳನ್ನು ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗಲು ಸಹಾಯ ಮಾಡುತ್ತದೆ. ಅವುಗಳಲ್ಲಿರುವ ನಾರು ಕರುಳಿನಲ್ಲಿರುವ ಆರೋಗ್ಯಕರ ಬ್ಯಾಕ್ಟೀರಿಯಾವನ್ನು ಪೋಷಿಸುತ್ತದೆ, ಜೀರ್ಣಕ್ರಿಯೆ ಮತ್ತು ರೋಗನಿರೋಧಕ ಶಕ್ತಿಗೆಯನ್ನು ಹೆಚ್ಚಿಸುತ್ತದೆ. ಈ ಬೀಜಗಳ ಸೇವನೆಯಿಂದ ಹೊಟ್ಟೆ ಉಬ್ಬರ ಕಡಿಮೆಯಾಗಿ ರಾತ್ರಿ ನಿದ್ರೆ ಚೆನ್ನಾಗಿ ಬರುತ್ತದೆ.

ರಾತ್ರಿ ಹಸಿವಾಗದಂತೆ ನೋಡಿಕೊಳ್ಳುತ್ತದೆ

ಚಿಯಾ ಬೀಜಗಳಲ್ಲಿರುವ ಜೆಲ್ ಮತ್ತು ಫೈಬರ್ ಅಂಶವು ಹೊಟ್ಟೆ ತುಂಬಿದ ಭಾವನೆಯನ್ನು ನೀಡುತ್ತದೆ, ಇದು ಮಧ್ಯರಾತ್ರಿ ತಿಂಡಿ ಅಥವಾ ಮಲಗುವ ಮುನ್ನ ಅತಿಯಾಗಿ ತಿನ್ನುವ ಅಭ್ಯಾಸವನ್ನು ತಡೆಯಲು ಸಹಾಯ ಮಾಡುತ್ತದೆ. ಅದರಲ್ಲಿಯೂ ಚಿಯಾ ಬೀಜಗಳಲ್ಲಿರುವ ನಿಧಾನವಾಗಿ ಜೀರ್ಣವಾಗುವ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ, ಆಗಾಗ ಹಸಿವನ್ನು ಉಂಟುಮಾಡುವ ಬಯಕೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ
Image
ಬೋಳುತಲೆ ಪುರುಷರಲ್ಲಿಯೇ ಹೆಚ್ಚಾಗಿ ಕಂಡುಬರುವುದು ಇದೆ ಕಾರಣಕ್ಕೆ
Image
ಇದ್ದಕ್ಕಿದ್ದಂತೆ ಬಿಪಿ ಹೆಚ್ಚಾಗಲು ಈ ತಪ್ಪುಗಳೇ ಕಾರಣ
Image
Milk Rice: ಹಾಲು ಅನ್ನ ಆರೋಗ್ಯಕ್ಕೆ ಅಮೃತವಿದ್ದಂತೆ
Image
ಲಿಚಿ ಹಣ್ಣು ಚಿಕ್ಕದಾಗಿದ್ದರೂ ಪ್ರಯೋಜನ ಸಾಕಷ್ಟಿದೆ!

ನಿರ್ಜಲೀಕರಣ ಸಮಸ್ಯೆಯನ್ನುತಡೆಯುತ್ತದೆ

ನೆನೆಸಿದ ಚಿಯಾ ಬೀಜಗಳು 10-12 ಪಟ್ಟು ನೀರನ್ನು ಹೀರಿಕೊಳ್ಳುತ್ತವೆ, ಇದರಿಂದ ದೇಹದಲ್ಲಿ ಉಂಟಾಗುವ ನಿರ್ಜಲೀಕರಣ ಸಮಸ್ಯೆಯನ್ನು ತಡೆಯುತ್ತದೆ. ರಾತ್ರಿಯಿಡೀ ದೇಹ ಹೈಡ್ರೇಟ್ ಆಗಿರುವಂತೆ ನೋಡಿಕೊಳ್ಳುತ್ತದೆ. ಅದಲ್ಲದೆ ಚಿಯಾ ಬೀಜಗಳು ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್‌ನಂತಹ ಎಲೆಕ್ಟ್ರೋಲೈಟ್‌ಗಳನ್ನು ಒದಗಿಸುತ್ತವೆ. ಇದರಿಂದ ರಾತ್ರಿ ಸಮಯದಲ್ಲಿ ಕಂಡು ಬರುವ ಸೆಳೆತ, ನೋವನ್ನು ಕಡಿಮೆ ಮಾಡುತ್ತದೆ.

ಸ್ನಾಯು ಚೇತರಿಕೆ

ಈ ಬೀಜಗಳು ಒಮೆಗಾ-3ಗಳು, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಪ್ರೋಟೀನ್‌ಗಳಿಂದ ಸಮೃದ್ಧವಾಗಿದ್ದು ರಾತ್ರಿ ಸಮಯದಲ್ಲಿ ಸೇವನೆ ಮಾಡುವುದರಿಂದ ದೇಹವು ವಿಶ್ರಾಂತಿ ಪಡೆಯುವಾಗ ಸ್ನಾಯುಗಳ ಚೇತರಿಕೆಗೆ ಮತ್ತು ಪೋಷಕಾಂಶಗಳ ಮರುಪೂರಣಕ್ಕೆ ಸಹಾಯ ಮಾಡುತ್ತದೆ. ಜೊತೆಗೆ ಸ್ನಾಯುಗಳ ನೋವನ್ನು ಕಡಿಮೆ ಮಾಡಲು ಕೂಡ ಸಹಕಾರಿಯಾಗಿದೆ.

ನಿದ್ರೆ ಚೆನ್ನಾಗಿ ಬರಲು ಸಹಾಯ ಮಾಡುತ್ತದೆ

ಚಿಯಾ ಬೀಜಗಳು ಟ್ರಿಪ್ಟೊಫಾನ್ ಅನ್ನು ಹೊಂದಿರುತ್ತವೆ, ಇದು ದೇಹವು ಸಿರೊಟೋನಿನ್ ಮತ್ತು ಮೆಲಟೋನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುವ ಅಮೈನೋ ಆಮ್ಲವಾಗಿದೆ. ಈ ಎರಡೂ ಅಂಶಗಳು ಕೂಡ ನಿದ್ರೆಗೆ ಅವಶ್ಯಕ. ಹಾಗಾಗಿ ನಿದ್ರಾಹೀನತೆಯಿಂದ ಬಳಲುತ್ತಿದ್ದರೆ, ಮಲಗುವ ಮುನ್ನ ಒಂದು ಲೋಟ ಚಿಯಾ ಬೀಜ ನೆನೆಸಿಟ್ಟ ನೀರನ್ನು ಕುಡಿಯಿರಿ. ಇದು ದೇಹಕ್ಕೆ ವಿಶ್ರಾಂತಿ ನೀಡುವುದಲ್ಲದೆ ಒಳ್ಳೆಯ ನಿದ್ರೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Baldness in Men vs. Women: ಬೋಳುತಲೆ ಮಹಿಳೆಯರಿಗಿಂತ ಪುರುಷರಲ್ಲಿಯೇ ಹೆಚ್ಚಾಗಿ ಕಂಡುಬರಲು ಇದೆ ಕಾರಣ

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುತ್ತದೆ

ಚಿಯಾ ಬೀಜಗಳು ನಿಧಾನವಾಗಿ ಶಕ್ತಿಯನ್ನು ಬಿಡುಗಡೆ ಮಾಡುವುದರಿಂದ ಇದು ರಾತ್ರಿಯಿಡೀ ರಕ್ತದಲ್ಲಿನ ಸಕ್ಕರೆಯನ್ನು ಸಮತೋಲನಗೊಳಿಸಲು ಮತ್ತು ಬೆಳಗಿನ ಜಾವದ ಶಕ್ತಿಯ ಕುಸಿತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಊಟದ ನಂತರ ರಕ್ತದಲ್ಲಿನ ಸಕ್ಕರೆಯಲ್ಲಿ ಹಠಾತ್ ಏರಿಕೆ ಮತ್ತು ಕುಸಿತವನ್ನು ತಡೆಯಲು ಸಹಾಯ ಮಾಡುತ್ತದೆ. ಅಲ್ಲದೆ, ಚಿಯಾ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳು, ಪ್ರೋಟೀನ್ ಮತ್ತು ಮೆಗ್ನೀಸಿಯಮ್ ಅನ್ನು ಹೊಂದಿರುತ್ತವೆ, ಇವೆಲ್ಲವೂ ಇನ್ಸುಲಿನ್ ಸಂವೇದನೆ ಮತ್ತು ಒಟ್ಟಾರೆ ಚಯಾಪಚಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ