AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಲ್ಲುಜ್ಜುವ ಮೊದಲು ನೀರನ್ನು ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇದು ನಿಮ್ಮ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?
ನೀರು
ನಯನಾ ರಾಜೀವ್
|

Updated on: Feb 14, 2023 | 3:10 PM

Share

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಲ್ಲುಜ್ಜುವ ಮೊದಲು ನೀರನ್ನು ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇದು ನಿಮ್ಮ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದರೊಂದಿಗೆ, ಗ್ಯಾಸ್, ಆ್ಯಸಿಡಿಟಿ, ಅಜೀರ್ಣ ಮತ್ತು ಮಲಬದ್ಧತೆ ಮುಂತಾದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ರಕ್ಷಣೆ ಪಡೆಯುತ್ತೀರಿ. ಅದೇ ಸಮಯದಲ್ಲಿ, ಇದು ನಿಮ್ಮ ಚರ್ಮದ ಮೇಲೆ ಇರುವ ಮೊಡವೆಗಳು ಮತ್ತು ಮಂದತೆಯನ್ನು ದೂರವಿಡುತ್ತದೆ ಮತ್ತು ನೀವು ಹೊಳೆಯುವ ಚರ್ಮವನ್ನು ಪಡೆಯುತ್ತೀರಿ.

ಆದರೆ ಅನೇಕ ಬಾರಿ ಜನರು ಬೆಳಿಗ್ಗೆ ಹಲ್ಲುಜ್ಜದೆ ನೀರು ಕುಡಿಯುವುದರ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ, ಆದ್ದರಿಂದ ನಾವು ಇಂದು ನಿಮಗೆ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬ್ರಷ್ ಮಾಡದೆ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ಹೇಳಲಿದ್ದೇವೆ.

ಇದನ್ನು ದಿನಚರಿಯಲ್ಲಿ ಅಳವಡಿಸಿಕೊಂಡರೆ ಹಲವಾರು ರೋಗಗಳಿಂದ ಪಾರಾಗಬಹುದು, ಹಾಗಾದರೆ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಆಗುವ ಲಾಭಗಳೇನು ಎಂದು ತಿಳಿಯೋಣ.

ಮತ್ತಷ್ಟು ಓದಿ: ನೀರು ಹೆಚ್ಚು ಕುಡಿಯುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಬಹುದು

ಹಲ್ಲುಜ್ಜದೆ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು

ಆರೋಗ್ಯಕರ ಜೀರ್ಣಕ್ರಿಯೆ ನೀವು ಪ್ರತಿದಿನ ಬೆಳಿಗ್ಗೆ ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರನ್ನು ಸೇವಿಸಿದರೆ, ಅದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದರೊಂದಿಗೆ ಬ್ಯಾಕ್ಟೀರಿಯಾ ಕೂಡ ಬಾಯಿಯಲ್ಲಿ ಸಂಗ್ರಹವಾಗುವುದಿಲ್ಲ.

ರೋಗನಿರೋಧಕ ಶಕ್ತಿ ವರ್ಧಕ ನೀವು ಪ್ರತಿದಿನ ಬೆಳಿಗ್ಗೆ ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರನ್ನು ಸೇವಿಸಿದರೆ, ಅದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಶೀತಕ್ಕೆ ಬಹುಬೇಗ ಬಲಿಯಾಗುವವರು ಪ್ರತಿದಿನ ಬೆಳಗ್ಗೆ ಹಲ್ಲುಜ್ಜದೆ ನೀರು ಕುಡಿಯಬೇಕು.

ಬಲವಾದ ಕೂದಲು ನೀವು ಪ್ರತಿದಿನ ಬೆಳಿಗ್ಗೆ ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರನ್ನು ಕುಡಿಯುತ್ತಿದ್ದರೆ, ಅದು ನಿಮ್ಮ ಕೂದಲನ್ನು ಬಲವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಇದಲ್ಲದೇ ನಿಮ್ಮ ತ್ವಚೆಯಲ್ಲಿ ಗ್ಲೋ ಉಳಿಯುತ್ತದೆ.

ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತೆ

ನೀವು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಜೀವನಶೈಲಿ ಕಾಯಿಲೆಗಳಿಂದ ಬಳಲುತ್ತಿದ್ದರೆ, ನೀವು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಹಲ್ಲುಜ್ಜುವ ಮೊದಲು ನೀರನ್ನು ಕುಡಿಯಬೇಕು. ಇದರೊಂದಿಗೆ ನಿಮ್ಮ ತೂಕವೂ ನಿಯಂತ್ರಣದಲ್ಲಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ