AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಲ್ಲುಜ್ಜುವ ಮೊದಲು ನೀರನ್ನು ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇದು ನಿಮ್ಮ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?
ನೀರು
ನಯನಾ ರಾಜೀವ್
|

Updated on: Feb 14, 2023 | 3:10 PM

Share

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಲ್ಲುಜ್ಜುವ ಮೊದಲು ನೀರನ್ನು ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇದು ನಿಮ್ಮ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದರೊಂದಿಗೆ, ಗ್ಯಾಸ್, ಆ್ಯಸಿಡಿಟಿ, ಅಜೀರ್ಣ ಮತ್ತು ಮಲಬದ್ಧತೆ ಮುಂತಾದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ರಕ್ಷಣೆ ಪಡೆಯುತ್ತೀರಿ. ಅದೇ ಸಮಯದಲ್ಲಿ, ಇದು ನಿಮ್ಮ ಚರ್ಮದ ಮೇಲೆ ಇರುವ ಮೊಡವೆಗಳು ಮತ್ತು ಮಂದತೆಯನ್ನು ದೂರವಿಡುತ್ತದೆ ಮತ್ತು ನೀವು ಹೊಳೆಯುವ ಚರ್ಮವನ್ನು ಪಡೆಯುತ್ತೀರಿ.

ಆದರೆ ಅನೇಕ ಬಾರಿ ಜನರು ಬೆಳಿಗ್ಗೆ ಹಲ್ಲುಜ್ಜದೆ ನೀರು ಕುಡಿಯುವುದರ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ, ಆದ್ದರಿಂದ ನಾವು ಇಂದು ನಿಮಗೆ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬ್ರಷ್ ಮಾಡದೆ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ಹೇಳಲಿದ್ದೇವೆ.

ಇದನ್ನು ದಿನಚರಿಯಲ್ಲಿ ಅಳವಡಿಸಿಕೊಂಡರೆ ಹಲವಾರು ರೋಗಗಳಿಂದ ಪಾರಾಗಬಹುದು, ಹಾಗಾದರೆ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಆಗುವ ಲಾಭಗಳೇನು ಎಂದು ತಿಳಿಯೋಣ.

ಮತ್ತಷ್ಟು ಓದಿ: ನೀರು ಹೆಚ್ಚು ಕುಡಿಯುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಬಹುದು

ಹಲ್ಲುಜ್ಜದೆ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು

ಆರೋಗ್ಯಕರ ಜೀರ್ಣಕ್ರಿಯೆ ನೀವು ಪ್ರತಿದಿನ ಬೆಳಿಗ್ಗೆ ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರನ್ನು ಸೇವಿಸಿದರೆ, ಅದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದರೊಂದಿಗೆ ಬ್ಯಾಕ್ಟೀರಿಯಾ ಕೂಡ ಬಾಯಿಯಲ್ಲಿ ಸಂಗ್ರಹವಾಗುವುದಿಲ್ಲ.

ರೋಗನಿರೋಧಕ ಶಕ್ತಿ ವರ್ಧಕ ನೀವು ಪ್ರತಿದಿನ ಬೆಳಿಗ್ಗೆ ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರನ್ನು ಸೇವಿಸಿದರೆ, ಅದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಶೀತಕ್ಕೆ ಬಹುಬೇಗ ಬಲಿಯಾಗುವವರು ಪ್ರತಿದಿನ ಬೆಳಗ್ಗೆ ಹಲ್ಲುಜ್ಜದೆ ನೀರು ಕುಡಿಯಬೇಕು.

ಬಲವಾದ ಕೂದಲು ನೀವು ಪ್ರತಿದಿನ ಬೆಳಿಗ್ಗೆ ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರನ್ನು ಕುಡಿಯುತ್ತಿದ್ದರೆ, ಅದು ನಿಮ್ಮ ಕೂದಲನ್ನು ಬಲವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಇದಲ್ಲದೇ ನಿಮ್ಮ ತ್ವಚೆಯಲ್ಲಿ ಗ್ಲೋ ಉಳಿಯುತ್ತದೆ.

ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತೆ

ನೀವು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಜೀವನಶೈಲಿ ಕಾಯಿಲೆಗಳಿಂದ ಬಳಲುತ್ತಿದ್ದರೆ, ನೀವು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಹಲ್ಲುಜ್ಜುವ ಮೊದಲು ನೀರನ್ನು ಕುಡಿಯಬೇಕು. ಇದರೊಂದಿಗೆ ನಿಮ್ಮ ತೂಕವೂ ನಿಯಂತ್ರಣದಲ್ಲಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ