Sign In

By signing in or creating an account, you agree with Associated Broadcasting Company's Terms & Conditions and Privacy Policy.

Panipuri Benefits: ಪಾನಿಪುರಿ ತಿನ್ನುವುದರಿಂದ ದೇಹಕ್ಕೆ ಆಗುವ ಪ್ರಯೋಜನಗಳು!

ಹುಡುಗಿಯರು ಹೆಚ್ಚಾಗಿ ಇಷ್ಟ ಪಡುವ, ಬೀದಿ ಬದಿಯ ಆಹಾರವೆಂದೇ ಪ್ರಸಿದ್ಧವಾಗಿರುವ ಪಾನಿಪುರಿ ಎಲ್ಲರಿಗೂ ಚಿರಪರಿಚಿತ. ಅದರಲ್ಲಿಯೂ ಸಿಹಿ, ಹುಳಿ ಮತ್ತು ಮಸಾಲೆಯುಕ್ತ ಪಾನಿಪುರಿಯನ್ನು ನೆನಸಿಕೊಂಡರೆ ಬಾಯಿಯಲ್ಲಿ ನೀರು ಬರುವುದು ಸಾಮಾನ್ಯ. ಎಲ್ಲಾ ವಯಸ್ಸಿನ ಜನರಿಗೂ ಬಹಳ ಪ್ರಿಯವಾಗಿರುವ ಈ ತಿನಿಸು ಕೇವಲ ಬಾಯಿಯ ರುಚಿ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯಕ್ಕೂ ಬಹಳ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಬಳಕೆಯಾಗುವ ಪದಾರ್ಥಗಳು ದೇಹಕ್ಕೆ ಒಳ್ಳೆಯದು. ಅದಲ್ಲದೆ ಇದರಲ್ಲಿರುವ ಆರೋಗ್ಯಕರ ಗುಣಗಳು ಹಲವಾರು ರೀತಿಯ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.

Panipuri Benefits: ಪಾನಿಪುರಿ ತಿನ್ನುವುದರಿಂದ ದೇಹಕ್ಕೆ ಆಗುವ ಪ್ರಯೋಜನಗಳು!
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 15, 2025 | 5:46 PM

ಪಾನಿಪುರಿ ಇಷ್ಟ ಪಡದವರು ತುಂಬಾ ಕಡಿಮೆ. ಪ್ರತಿನಿತ್ಯ ತಿಂದರೂ ಬೇಕು ಎನಿಸುವಷ್ಟು ರುಚಿ ನೀಡುವ ಈ ತಿಂಡಿ ಹೊಟ್ಟೆ ತುಂಬಿಸುವುದು ಮಾತ್ರವಲ್ಲ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂದರೆ ನಂಬುತ್ತೀರಾ? ಹೌದು, ಇದರಲ್ಲಿ ಬಳಕೆಯಾಗುವ ಪದಾರ್ಥಗಳು ದೇಹಕ್ಕೆ ಒಳ್ಳೆಯದು. ಅದಲ್ಲದೆ ಇದರಲ್ಲಿರುವ ಆರೋಗ್ಯಕರ ಗುಣಗಳು ಹಲವಾರು ರೀತಿಯ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಸಾಮಾನ್ಯವಾಗಿ ಪಾನಿಪುರಿಗೆ ಬಳಸುವ ಪಾನಿಗೆ ಅದರದ್ದೇ ಆದಂತಹ ರುಚಿ ನೀಡಲು ಕೆಲವು ಮಸಾಲೆಗಳನ್ನು ಸೇರಿಸಲಾಗುತ್ತದೆ. ಅವು ಕೇವಲ ಪಾನೀಯ ರುಚಿ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತದೆ. ಹಾಗಾದರೆ ಪಾನಿಪುರಿ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು? ಈ ಬಗ್ಗೆ ಮಾಹಿತಿ ಇಲ್ಲಿದೆ

  • ಪಾನಿಯಲ್ಲಿ ಬಳಕೆಯಾಗುವ ಜೀರಿಗೆ ಮತ್ತು ಹುಣಸೆಹಣ್ಣುಗಳು ಜೀರ್ಣಶಕ್ತಿಯನ್ನು ವೇಗಗೊಳಿಸುತ್ತವೆ ಮತ್ತು ಅಜೀರ್ಣ ಮತ್ತು ಅನಿಲದಂತಹ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
  • ಪಾನಿಪುರಿ ಸೇವನೆಯಿಂದ ಅನೇಕ ರೀತಿಯ ಪ್ರಯೋಜನಗಳಿವೆ. ಪಾನಿಪುರಿಯ ನೀರು ಪುದೀನಾ, ಜೀರಿಗೆ ಮತ್ತು ಅಸಾಫೋಟಿಡಾವನ್ನು ಒಳಗೊಂಡಿರುತ್ತದೆ. ಈ ಪದಾರ್ಥಗಳು ಆರೋಗ್ಯಕರ ಗುಣಗಳನ್ನು ಒಳಗೊಂಡಿದ್ದು, ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಜೊತೆಗೆ ಇದು ನೋವನ್ನು ಕಡಿಮೆ ಮಾಡುತ್ತದೆ, ಜೀರ್ಣಕ್ರಿಯೆ ಮತ್ತು ಶೀತ ಮತ್ತು ಕೆಮ್ಮಿನಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.
  • ಪಾನಿಪುರಿ ಮೆಗ್ನೀಸಿಯಮ್, ಪೊಟ್ಯಾಸಿಯಮ್, ಫೋಲೇಟ್, ಸತು ಮತ್ತು ವಿಟಮಿನ್ ಎ, ಬಿ -6, ಬಿ -12, ಸಿ ಮತ್ತು ಡಿ ಯ ಉತ್ತಮ ಮೂಲವಾಗಿದೆ. ಆದ್ದರಿಂದ ಪಾನಿಪುರಿ ತಿನ್ನುವುದರಿಂದ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನಗಳಿವೆ. ಹಾಗಾಗಿ ಪಾನಿಪುರಿಯ ನೀರು ನಮ್ಮ ದೇಹಕ್ಕೆ ಬಹಳ ಪ್ರಯೋಜನಕಾರಿ. ಅದಲ್ಲದೆ ಪಾನಿಪುರಿಯಲ್ಲಿ ಬಳಸುವ ಜಲ್ಜಿರಾ ನೀರು ಮತ್ತು ಪುದೀನಾ, ಬಾಯಿಯ ಹುಣ್ಣುಗಳಿಗೆ ಬಹಳ ಪರಿಣಾಮಕಾರಿ ಎಂಬುದು ಸಾಬೀತಾಗಿದೆ.
  • ಈಗೀನ ಜೀವನಶೈಲಿಯಿಂದಾಗಿ ಹಲವಾರು ಜನ ದಿನನಿತ್ಯದ ಬದುಕಿನಲ್ಲಿ, ಗ್ಯಾಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ಪಾನಿಪುರಿ ತಿನ್ನುವುದು ಬಹಳ ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ. ಅದಲ್ಲದೆ ಪಾನಿಪುರಿ ತಿನ್ನುವುದು ಒತ್ತಡವನ್ನು ಕಡಿಮೆ ಮಾಡಿ ನಮ್ಮ ಮನಸ್ಥಿತಿಯನ್ನು ಉಲ್ಲಾಸಗೊಳಿಸುತ್ತದೆ.
  • ಪಾನಿಪುರಿ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಬಳಕೆಯಾಗುವ ಪುದೀನಾ, ಹಸಿ ಮಾವಿನಕಾಯಿ, ಕಪ್ಪು ಉಪ್ಪು, ಕರಿಮೆಣಸು, ರುಬ್ಬಿದ ಜೀರಿಗೆ ಮತ್ತು ಸಾಮಾನ್ಯ ಉಪ್ಪಿನ ಮಿಶ್ರಣವು ಆಮ್ಲೀಯತೆ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.
  • ಪಾನಿಪುರಿಯಲ್ಲಿ ಬಳಕೆಯಾಗುವ ತಾಜಾ ಮಸಾಲೆ, ಚಟ್ನಿ ಮತ್ತು ತರಕಾರಿಗಳು ದೇಹಕ್ಕೆ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ಉದಾಹರಣೆಗೆ ವಿಟಮಿನ್ ಸಿ ಮತ್ತು ಕಬ್ಬಿಣ ಇತ್ಯಾದಿ.
  • ಅದಲ್ಲದೆ ಪಾನಿಪುರಿ ನೀರಿನಲ್ಲಿ ಬಳಕೆಯಾಗುವ ತಾಜಾ ಮಸಾಲೆಗಳು ರಕ್ತ ಪರಿಚಲನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಕೂಡ ಸಹಾಯ ಮಾಡುತ್ತದೆ.
  • ಇದೆಲ್ಲದರ ಜೊತೆಗೆ ಪಾನಿಪುರಿ ತಿನ್ನುವುದು ಮನಸ್ಸಿಗೆ ಸಂತೋಷ ತರುತ್ತದೆ, ಏಕೆಂದರೆ ಅದರ ರುಚಿಯಲ್ಲಿ ವೈವಿಧ್ಯತೆ ಇರುತ್ತದೆ, ಇದು ಮನಸ್ಸನ್ನು ಸಕ್ರಿಯ ಮತ್ತು ಉಲ್ಲಾಸಗೊಳಿಸುತ್ತದೆ. ಇದರಿಂದ ಒತ್ತಡ ಕಡಿಮೆಯಾಗಿ ಮನಸ್ಸು ಹಗುರವಾಗುತ್ತದೆ.

(ಸೂಚನೆ: ಈ ಲೇಖನವು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿದ್ದರೂ ವೈದ್ಯರು ಅಥವಾ ತಜ್ಞರನ್ನು ಸಂಪರ್ಕಿಸಿ.)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ