AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Banana: ಬೇಸಿಗೆಯಲ್ಲಿ ಕೆಂಪು ಬಾಳೆಹಣ್ಣು ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಕೆಂಪು ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಸಮೃದ್ಧವಾಗಿದೆ. ಇದು ಟ್ರಿಪ್ಟೊಫಾನ್ ಅನ್ನು ಸಿರೊಟೋನಿನ್ ಆಗಿ ಪರಿವರ್ತಿಸುತ್ತದೆ. ಸಿರೊಟೋನಿನ್ ಒಂದು ಉತ್ತಮ ಹಾರ್ಮೋನ್ ಆಗಿದ್ದು ಅದು ನಿಮ್ಮನ್ನು ಸಂತೋಷವಾಗಿರಿಸಲು ಸಹಾಯ ಮಾಡುತ್ತದೆ. ಇನ್ನಷ್ಟು ಪ್ರಯೋಜನಗಳನ್ನು ತಿಳಿದುಕೊಳ್ಳಿ.

Red Banana: ಬೇಸಿಗೆಯಲ್ಲಿ ಕೆಂಪು ಬಾಳೆಹಣ್ಣು ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Red BananasImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 20, 2024 | 6:37 PM

Share

ಕೆಂಪು ಬಾಳೆಹಣ್ಣಿನ ಸಿಪ್ಪೆ ಕೆಂಪು ಬಣ್ಣದ್ದಾಗಿದ್ದರೂ ಕೂಡ ಒಳಗಿನ ತಿರುಳು ಸಾಮಾನ್ಯ ಬಾಳೆಹಣ್ಣಿನಂತೆಯೇ ಇರುತ್ತದೆ. ಇದನ್ನು ಹೆಚ್ಚಾಗಿ ಆಗ್ನೇಯ ಏಷ್ಯಾದಲ್ಲಿ ಬೆಳೆಯಲಾಗುತ್ತದೆ. ಇದು ಒಟ್ಟಾರೆ ಆರೋಗ್ಯವನ್ನು ಕಾಪಾಡಲು ಸಹಾಯಕವಾಗಿದೆ. ಇದು ಮಧುಮೇಹ ರೋಗಿಗಳಿಗೆ ವಿಶೇಷವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ದೃಷ್ಟಿ ಸುಧಾರಿಸುವಲ್ಲಿ ಸಹಾಯಕವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ.

ನೈಸರ್ಗಿಕ ಸಕ್ಕರೆ:

ಕೆಂಪು ಬಾಳೆಹಣ್ಣು ಫ್ರಕ್ಟೋಸ್, ಸುಕ್ರೋಸ್, ಗ್ಲೂಕೋಸ್‌ನಂತಹ ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತದೆ. ಇವುಗಳು ನಿಮ್ಮನ್ನು ದಿನವಿಡೀ ಕ್ರಿಯಾಶೀಲವಾಗಿರಿಸಲು ಸಹಾಯ ಮಾಡುತ್ತದೆ. ಹಾಗಾಗಿ ಜಿಮ್ ನಲ್ಲಿ ಉತ್ತಮ ವರ್ಕೌಟ್ ಮಾಡಬೇಕಾದರೆ ಮೊದಲೇ ಈ ರೀತಿ ಕೆಂಪು ಬಾಳೆಹಣ್ಣಿನ ಜ್ಯೂಸ್ ಕುಡಿಯಬಹುದು.

ಖಿನ್ನತೆಯನ್ನು ತಡೆಯುತ್ತದೆ:

ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಸಮೃದ್ಧವಾಗಿದೆ. ಇದು ಟ್ರಿಪ್ಟೊಫಾನ್ ಅನ್ನು ಸಿರೊಟೋನಿನ್ ಆಗಿ ಪರಿವರ್ತಿಸುತ್ತದೆ. ಸಿರೊಟೋನಿನ್ ಒಂದು ಉತ್ತಮ ಹಾರ್ಮೋನ್ ಆಗಿದ್ದು ಅದು ನಿಮ್ಮನ್ನು ಸಂತೋಷವಾಗಿರಿಸಲು ಸಹಾಯ ಮಾಡುತ್ತದೆ. ಹಾಗಾಗಿ ಈ ಜ್ಯೂಸ್ ಕುಡಿಯುವುದರಿಂದ ಖಿನ್ನತೆಯನ್ನು ಬೇಗನೇ ಹೋಗಲಾಡಿಸಬಹುದು.

ಇದನ್ನೂ ಓದಿ: ಯುವಕರಲ್ಲಿ ಉಂಟಾಗುವ ಪಾರ್ಶ್ವವಾಯುವಿನಲ್ಲಿ ಒತ್ತಡ, ಹೈಪರ್​ಟೆನ್ಷನ್ ಪಾತ್ರವೇನು?

ತೂಕ ಇಳಿಸಲು ಸಹಾಯ ಮಾಡುತ್ತದೆ:

ನೀವು ದೀರ್ಘಕಾಲದವರೆಗೆ ತೂಕ ಇಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ, ನಿಮ್ಮ ಆಹಾರದಲ್ಲಿ ಕೆಂಪು ಬಾಳೆಹಣ್ಣನ್ನು ಸೇರಿಸಿ. ಒಂದು ಹಣ್ಣು 90 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದರಲ್ಲಿ ನಾರಿನಂಶವೂ ಅತಿ ಹೆಚ್ಚು. ಆದ್ದರಿಂದ ಸ್ವಲ್ಪ ಪ್ರಮಾಣದ ಜ್ಯೂಸ್‌ನಿಂದ ಅದು ನಿಮ್ಮ ಹೊಟ್ಟೆಯನ್ನು ತುಂಬುತ್ತದೆ. ಇದು ಹೆಚ್ಚು ಜಂಕ್ ಫುಡ್ ತಿನ್ನುವುದನ್ನು ತಡೆಯುತ್ತದೆ.

ಹೃದಯಕ್ಕೆ ಒಳ್ಳೆಯದು:

ಕಿತ್ತಳೆಯಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ. ಇದು ಸೋಡಿಯಂ ಉಪ್ಪಿನ ಪರಿಣಾಮಗಳನ್ನು ಪ್ರತಿರೋಧಿಸುತ್ತದೆ. ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಎದೆನೋವು, ಪಾರ್ಶ್ವವಾಯು, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ