Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಮಧುಮೇಹದಿಂದ ಬಳಲುತ್ತಿರುವವರಿಗೆ ನೇರಳೆ ಹಣ್ಣಿನ ಬೀಜ ತುಂಬಾ ಪ್ರಯೋಜನಕಾರಿ ಆಗಿದೆ. ಹಣ್ಣಿನ ಬೀಜವನ್ನು ಸಂಗ್ರಹಿಸಿ ಪೌಡರ್​ ಮಾಡಿ ಶೇಖರಿಸಿಟ್ಟುಕೊಂಡು ಅದರ ಸೇವನೆಯಿಂದ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣಕ್ಕೆ ತರಬಹುದು.

Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ನೇರಳೆ ಹಣ್ಣಿನ ಬೀಜಗಳು
Follow us
| Updated By: shruti hegde

Updated on: Jun 17, 2021 | 9:46 AM

ನೇರಳೆ ಹಣ್ಣು ಸವಿಯಲು ಎಷ್ಟು ರುಚಿಯೋ ಅಷ್ಟೇ ಆರೋಗ್ಯಕ್ಕೆ ಒಳ್ಳೆಯದು ಕೂಡಾ. ಕೇವಲ ಹಣ್ಣು ಮಾತ್ರವಲ್ಲ ಅದರೊಳಗಿನ ಬೀಜವೂ ಸಹ ಔಷಧೀಯ ಗುಣಗಳನ್ನು ಹೊಂದಿದೆ. ಹಣ್ಣನ್ನು ತಿಂದು ಬೀಜವನ್ನು ಉಗುಳುತ್ತಿರುವ ಅಭ್ಯಾಸವಿದ್ದರೆ ಅದನ್ನು ಇಂದೇ ಬಿಟ್ಟುಬಿಡಿ. ಬೀಜವನ್ನು ಸಂಗ್ರಹಿಸಿ ಅವುಗಳನ್ನು ಪುಡಿ ಮಾಡಿ ಶೇಖರಿಸಿಟ್ಟುಕೊಳ್ಳುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ.

ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಕೂಡಾ ನೇರಳೆ ಹಣ್ಣುನ್ನು ಇಷ್ಟಪಡುತ್ತಾರೆ. ಇನ್ನು ಕೆಲವರು ಹಣ್ಣು ಬಿಡುವ ಸೀಸನ್​ಗಾಗಿ ಕಾಯುತ್ತಾ ಕುಳಿತಿರುತ್ತಾರೆ. ತಿಳಿ ನೇರಳೆ ಬಣ್ಣದಿಂದ ಆವೃತವಾದ ರಸಭರಿತ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಇದರ ಬೀಜಗಳಿಂದಲೂ ಸಹ ಆರೋಗ್ಯ ಸುಧಾರಿಸುತ್ತದೆ. ಹಾಗಿದ್ದಾಗ ನಮ್ಮ ಸುತ್ತಮುತ್ತಲೇ ಸಿಗುವ ಹಣ್ಣುಗಳ ಸೇವನೆಯಿಂದ ನಮ್ಮ ಆರೋಗ್ಯವನ್ನು ಸುಧಾರಿಸುತ್ತ ಯೋಚಿಸುವುದು ಒಳ್ಳೆಯದು.

ಮಧುಮೇಹ ನಿಯಂತ್ರಣ ಮಧುಮೇಹದಿಂದ ಬಳಲುತ್ತಿರುವವರಿಗೆ ನೇರಳೆ ಹಣ್ಣಿನ ಬೀಜ ತುಂಬಾ ಪ್ರಯೋಜನಕಾರಿ ಆಗಿದೆ. ಹಣ್ಣಿನ ಬೀಜವನ್ನು ಸಂಗ್ರಹಿಸಿ ಪೌಡರ್​ ಮಾಡಿ ಶೇಖರಿಸಿಟ್ಟುಕೊಂಡು ಅದರ ಸೇವನೆಯಿಂದ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣಕ್ಕೆ ತರಬಹುದು.

ಹೊಟ್ಟೆ ಸಮಸ್ಯೆಗೆ ಸಹಾಯಕಾರಿ ಆಯುರ್ವೇದದ ಪ್ರಕಾರ ದೇಹದ ಅರ್ಧದಷ್ಟು ಖಾಯಿಲೆಗೆ ಕಾರಣ ಹೊಟ್ಟೆ. ಆದ್ದರಿಂದ ಹೊಟ್ಟೆಯನ್ನು ಆರೋಗ್ಯವಾಗಿರಿಸಿಕೊಳ್ಳುವುದು ಉತ್ತಮ. ನೇರಳೆ ಹಣ್ಣಿನ ಬೀಜಗಳು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಅದು ಅಜೀರ್ಣದಂತಹ ಸಮಸ್ಯೆಗಳಿಗೆ ಪರಿಹಾರವಾಗಿ ಕೆಲಸ ಮಾಡುತ್ತದೆ. ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ.

ವಿಷಕಾರಿ ಅಂಶವನ್ನು ತೆಗೆದುಹಾಕುತ್ತದೆ ನಮ್ಮ ದೇಹದಲ್ಲಿ ಸೇರಿಕೊಂಡಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ. ನೇರಳೆ ಹಣ್ಣಿನ ಬೀಜದ ಪುಡಿಯನ್ನು ಕಷಾಯದ ರೂಪದಲ್ಲಿ ಸೇವಿಸಬಹುದಾಗಿದೆ.

ನೇರಳೆ ಹಣ್ಣುಗಳ ಬೀಜವನ್ನು ತೆಳ್ಳಗಿನ ಬಟ್ಟೆಯಲ್ಲಿ ಮುಚ್ಚಿ ಬಿಸಿಲಿನಲ್ಲಿ ಒಣಹಾಕಿ. ಬೀಜಗಳು ಸರಿಯಾಗಿ ಒಣಗಿದ ಬಳಿಕ ಅದನ್ನು ಪೌಡರ್​ ಮಾಡಿ ಶೇಖರಿಸಿಡಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದು ಉತ್ತಮ ಎಂಬುದು ತಿಳಿದು ಬಂದಿದೆ. ಜನರ ದೇಹ ಪ್ರಕೃತಿಗೆ ಅನುಸಾರವಾಗಿ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುವುದರಿಂದ ತಜ್ಞರ ಸಲಹೆಯ ಮೇರೆಗೆ ಇದನ್ನು ಸೇವಿಸುವುದು ಉತ್ತಮ.

ಇದನ್ನೂ ಓದಿ:

’Jamun Health Benefits: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸಿ

ಬಿಳಿ ಜಂಬೂ ಅಥವಾ ಪನ್ನೇರಳೆ ಹಣ್ಣು ರುಚಿಯಷ್ಟೇ ಆರೋಗ್ಯಕರ; ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಹಣ್ಣನ್ನು ಒಮ್ಮೆ ತಿಂದು ನೋಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್