AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jeera Water Benefits: ಜೀರಿಗೆ ನೀರು ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತೇ?

ಜೀರಿಗೆಯು ಹಲವು ರೀತಿಯಲ್ಲಿ ನಿಮಗೆ ಪ್ರಯೋಜನವನ್ನು ನೀಡುತ್ತದೆ, ಗ್ಯಾಸ್ಟ್ರಿಕ್ ಸಮಸ್ಯೆಯಿದ್ದರೆ, ತಲೆನೋವಿದ್ದರೆ, ವಾಕರಿಕೆ ಇದ್ದರೆ ಇತರೆ ಜೀರ್ಣಕಾರಿ ಸಮಸ್ಯೆ ಇದ್ದರೆ ಕ್ಷಣದಲ್ಲೇ ನಿವಾರಿಸುವ ಶಕ್ತಿ ಅದರಲ್ಲಿದೆ.

Jeera Water Benefits: ಜೀರಿಗೆ ನೀರು ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತೇ?
Jeera Water
TV9 Web
| Edited By: |

Updated on: Aug 15, 2022 | 7:00 AM

Share

ಜೀರಿಗೆಯು ಹಲವು ರೀತಿಯಲ್ಲಿ ನಿಮಗೆ ಪ್ರಯೋಜನವನ್ನು ನೀಡುತ್ತದೆ, ಗ್ಯಾಸ್ಟ್ರಿಕ್ ಸಮಸ್ಯೆಯಿದ್ದರೆ, ತಲೆನೋವಿದ್ದರೆ, ವಾಕರಿಕೆ ಇದ್ದರೆ ಇತರೆ ಜೀರ್ಣಕಾರಿ ಸಮಸ್ಯೆ ಇದ್ದರೆ ಕ್ಷಣದಲ್ಲೇ ನಿವಾರಿಸುವ ಶಕ್ತಿ ಅದರಲ್ಲಿದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಜೀರಿಗೆಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರಾತ್ರಿ ವೇಳೆ ಜೀರಿಗೆ ನೆನೆಹಾಕಿ, ಬೆಳಗ್ಗೆ ಅದೇ ನೀರಿನಲ್ಲಿ ಮತ್ತಷ್ಟು ನೀರು ಸೇರಿಸಿ ಕುದಿಸಿ ಟೀ ರೀತಿಯಲ್ಲಿ ಕುಡಿದರೆ, ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಜೀರಿಗೆ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಸೋಂಕನ್ನು ಉಂಟುಮಾಡುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಜೀರಿಗೆಯಲ್ಲಿ ಮೆಗ್ನೀಷಿಯಮ್, ಕ್ಯಾಲ್ಸಿಯಂ ಸೇರಿ ವಿವಿಧ ಖನಿಜಗಳಿಂದ ಕೂಡಿದೆ.

ಉರಿಯೂತ ಕಡಿಮೆ ಮಾಡುತ್ತದೆ

ನೀರಿನಲ್ಲಿ ಜೀರಿಗೆಯನ್ನು ಬೆರೆಸಿ ಕುದಿಸಿ ಕುಡಿಯುವುದರಿಂದ ಯಕೃತ್ತನ್ನು ಉರಿಯೂತದಿಂದ ರಕ್ಷಿಸುತ್ತದೆ ಮತ್ತು ಒಟ್ಟಾರೆ ಯಕೃತ್ತಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಈ ನೀರಿನ ಸೇವನೆಯಿಂದ ಹೊಟ್ಟೆಯ ಇತರೆ ಸಮಸ್ಯೆಗಳೂ ನಿವಾರಣೆ ಆಗುತ್ತದೆ. ಹೊಟ್ಟೆ ನೋವು, ಗ್ಯಾಸ್ಟ್ರಿಕ್‌, ಹೊಟ್ಟೆ ಮುರಿತ ಈ ಎಲ್ಲ ಸಮಸ್ಯೆಗಳೂ ನಿವಾರಣೆಗೊಳ್ಳಲಿದೆ.

ಮುಖದ ಸುಕ್ಕು ನಿವಾರಣೆ ಚರ್ಮದ ಕಾಂತಿ ಹೆಚ್ಚಳವಾಗಲು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್‌ ಇ ಅಂಶ ಇರುವುದರಿಂದ ಚರ್ಮಕ್ಕೆ ಆರೋಗ್ಯಕರ ಹೊಳಪು ನೀಡುತ್ತದೆ. ನಿತ್ಯ ತಪ್ಪದೆ ಕುದಿಸಿದ ಜೀರಿಗೆ ನೀರನ್ನು ಕುಡಿಯುತ್ತ ಬಂದರೆ ಮುಖದಲ್ಲಿನ ಸುಕ್ಕುಗಳು ನಿವಾರಣೆ ಆಗುತ್ತದೆ. ಜೀರಿಗೆ ನೀರಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮ್ಯಾಂಗನೀಸ್ ಮತ್ತು ಸೆಲೆನಿಯಂನಂತಹ ಖನಿಜಗಳು ಸಮೃದ್ಧವಾಗಿವೆ.

ಮೊಡವೆಗಳೂ ಕಡಿಮೆಯಾಗಲಿವೆ ಮುಖದ ಮೇಲೆ ಮೊಡವೆಗಳನ್ನು ಉಂಟುಮಾಡುವ ಬ್ಯಾಕ್ಟೀರಿಯಾದ ವಿರುದ್ಧ ಜೀರಿಗೆಯು ಹೋರಾಡಲಿದೆ.

ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಶಕ್ತಿ ಇದೆ ಯಾವುದೇ ರೀತಿಯ ಅಜೀರ್ಣದಿಂದ ಬಳಲುತ್ತಿದ್ದರೆ ಅಥವಾ ನೀವು ಆರೋಗ್ಯವಾಗಿದ್ದರೂ ನಿತ್ಯ ಜೀರಿಗೆ ನೀರು ಸೇವನೆಯಿಂದ ಉದರ ಸಂಬಂಧಿ ಸಮಸ್ಯೆಗಳು ಕಾಡುವುದಿಲ್ಲ.

ಗ್ಲೂಕೋಸ್ ಮತ್ತು ಕೊಬ್ಬನ್ನು ಕರಗಿಸಲು ಸಹಾಯ ಮಾಡಲಿದೆ. ಇದು ಪಿತ್ತಜನಕಾಂಗದಲ್ಲಿ ಪಿತ್ತರಸ ಆಮ್ಲದ ಉತ್ಪಾದನೆ ಪ್ರಕ್ರಿಯೆಯನ್ನುಬಲ ಪಡಿಸುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ