AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ?

ಚಳಿಗಾಲದಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವುದು ಉತ್ತಮ. ಆರೋಗ್ಯ ಕಾಪಾಡಿಕೊಳ್ಳಲು ಇದೊಂದು ಉತ್ತಮ ಅಭ್ಯಾಸ. ಇದರಿಂದ ದೇಹಕ್ಕೆ ಹಲವು ರೀತಿಯ ಪ್ರಯೋಜನಗಳಿವೆ. ಅದರಲ್ಲಿಯೂ ಇಂತಹ ವಾತಾವರಣದಲ್ಲಿ ಈ ಅಭ್ಯಾಸ ನಮ್ಮ ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇದು ಜೀರ್ಣಕ್ರಿಯೆಯಿಂದ ಹಿಡಿದು ರೋಗನಿರೋಧಕ ಶಕ್ತಿಯವರೆಗೆ ಎಲ್ಲದಕ್ಕೂ ಒಳ್ಳೆಯದು. ಹಾಗಾದರೆ ಪ್ರತಿನಿತ್ಯ ಎಷ್ಟು ಲೀಟರ್ ನೀರು ಕುಡಿಯುವುದು ಸೂಕ್ತ, ಯಾರಿಗೆ ಒಳ್ಳೆಯದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ?
ಚಳಿಗಾಲದಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸದಿಂದ ಸಿಗುವ ಲಾಭಗಳು
ಪ್ರೀತಿ ಭಟ್​, ಗುಣವಂತೆ
|

Updated on: Jan 08, 2026 | 5:25 PM

Share

ಚಳಿಗಾಲದಲ್ಲಿ (Winter), ದಿನೇ ದಿನೇ ಚಳಿ ಹೆಚ್ಚಾದಂತೆ, ಜನರು ತಣ್ಣಗಿನ ನೀರು ಕುಡಿಯುವ ಅಭ್ಯಾಸ ಬಿಟ್ಟು ಬಿಸಿ ನೀರನ್ನು ಅಥವಾ ಉಗುರುಬೆಚ್ಚಗಿನ ನೀರು (Lukewarm Water) ಕುಡಿಯಲು ಪ್ರಾರಂಭ ಮಾಡುತ್ತಾರೆ. ಇಂತಹ ವಾತಾವರಣದಲ್ಲಿ, ದೇಹದ ಅಗತ್ಯತೆಗಳು ವಿಭಿನ್ನವಾಗಿರುತ್ತವೆ ಮತ್ತು ಕುಡಿಯುವ ನೀರು ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ತಣ್ಣೀರು ಕುಡಿಯುವುದು ಅಷ್ಟು ಸೂಕ್ತವಲ್ಲ ಎಂದು ಆರೋಗ್ಯ ತಜ್ಞರು ಕೂಡ ಹೇಳುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಉಗುರು ಬೆಚ್ಚಗಿನ ನೀರು ಕುಡಿಯುವುದು ಬಹಳ ಒಳ್ಳೆಯದು. ಇನ್ನು ಬೆಚ್ಚಗಿನ ನೀರು ದೇಹವನ್ನು ಒಳಗಿನಿಂದ ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಯಿಂದ ಹಿಡಿದು ರೋಗನಿರೋಧಕ ಶಕ್ತಿಯವರೆಗೆ ಎಲ್ಲದಕ್ಕೂ ಒಳ್ಳೆಯದು. ಅಷ್ಟೇ ಅಲ್ಲ, ಈ ಅಭ್ಯಾಸದಿಂದ ಸಾಕಷ್ಟು ಪ್ರಯೋಜನಗಳಿವೆ. ಹಾಗಾದರೆ ಪ್ರತಿನಿತ್ಯ ಎಷ್ಟು ಲೀಟರ್ ನೀರು ಕುಡಿಯುವುದು ಸೂಕ್ತ, ಯಾರಿಗೆ ಒಳ್ಳೆಯದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಉಗುರುಬೆಚ್ಚಗಿನ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳು:

ದೆಹಲಿ ಎಂಸಿಡಿಯ ಡಾ. ಅಜಯ್ ಕುಮಾರ್ ಹೇಳುವ ಪ್ರಕಾರ, ಉಗುರುಬೆಚ್ಚಗಿನ ನೀರು ಕುಡಿಯುವುದರಿಂದ ದೇಹದ ಆಂತರಿಕ ಉಷ್ಣತೆ ಕಡಿಮೆಯಾಗುತ್ತದೆ, ಇದು ಚಳಿಯಾಗುವುದನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ, ಜೀರ್ಣಾಂಗ ವ್ಯವಸ್ಥೆಯನ್ನು ಸಕ್ರಿಯವಾಗಿರಿಸುವ ಮೂಲಕ ಅನಿಲ, ಅಜೀರ್ಣ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಉಗುರುಬೆಚ್ಚಗಿನ ನೀರು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ, ಮೂತ್ರಪಿಂಡಗಳು ಮತ್ತು ಯಕೃತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಚಳಿಗಾಲದಲ್ಲಿ, ಕೀಲುಗಳ ಬಿಗಿತ ಮತ್ತು ಸ್ನಾಯುಗಳ ಒತ್ತಡವನ್ನು ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಇದು ಗಂಟಲು ನೋವನ್ನು ಶಮನಗೊಳಿಸುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ, ಇದರಿಂದಾಗಿ ಕಾಲೋಚಿತ ಕಾಯಿಲೆಗಳು ಬರುವ ಅಪಾಯ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್‌ ನೋಡಿ

ದಿನಕ್ಕೆ ಎಷ್ಟು ಲೀಟರ್ ನೀರು ಕುಡಿಯಬೇಕು?

ಚಳಿಗಾಲದಲ್ಲಿ ಬಾಯಾರಿಕೆ ಕಡಿಮೆಯಾದರೂ, ದೇಹಕ್ಕೆ ಸಾಕಷ್ಟು ಪ್ರಮಾಣದಲ್ಲಿ ನೀರು ಬೇಕಾಗುತ್ತದೆ. ಸಾಮಾನ್ಯವಾಗಿ, ಆರೋಗ್ಯವಂತ ವ್ಯಕ್ತಿಯು ದಿನಕ್ಕೆ ಸುಮಾರು 2 ರಿಂದ 3 ಲೀಟರ್ ನೀರು ಕುಡಿಯಬೇಕು. ಇದು ವಯಸ್ಸು, ತೂಕ ಮತ್ತು ದೈನಂದಿನ ಚಟುವಟಿಕೆಯನ್ನು ಅವಲಂಬಿಸಿರುತ್ತದೆ. ಒಂದೇ ಬಾರಿಗೆ ನೀರು ಕುಡಿಯುವ ಬದಲು ದಿನವಿಡೀ ಸಣ್ಣ ಸ್ವಲ್ಪ ಸ್ವಲ್ಪ ನೀರು ಕುಡಿಯುವುದು ಉತ್ತಮ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಅಥವಾ ಎರಡು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದು ಬಹಳ ಪ್ರಯೋಜನಕಾರಿಯಾಗಿದೆ. ಇದರ ಜೊತೆಗೆ ಅತಿಯಾಗಿ ಚಹಾ ಮತ್ತು ಕಾಫಿ ಕುಡಿಯುವುದನ್ನು ತಪ್ಪಿಸಿ. ಪ್ರತಿನಿತ್ಯ ಲಘು ವ್ಯಾಯಾಮ ಮತ್ತು ಸಾಕಷ್ಟು ಪ್ರಮಾಣದಲ್ಲಿ ನಿದ್ರೆ ಮಾಡುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್