AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ… ಟೊಮೇಟೊ ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಭಾರತೀಯರ ಪ್ರತಿ ಮನೆಯಲ್ಲಿಯೂ ಟೊಮೇಟೊ ಇಲ್ಲದೆಯೇ ಅಡುಗೆ ತಯಾರಾಗುವುದೇ ಇಲ್ಲ. ಇದು ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ, ನಮ್ಮ ಆರೋಗ್ಯಕ್ಕೂ ಕೂಡ ಬಹಳ ಪ್ರಯೋಜನಕಾರಿ. ಇದರಲ್ಲಿರುವ ಆರೋಗ್ಯಕರ ಗುಣಗಳು ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ನಾವು ದಿನನಿತ್ಯ ಬಳಕೆ ಮಾಡುವ ಈ ತರಕಾರಿಯಲ್ಲಿ ಇಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದರೆ ನಿಮಗೆ ಆಶ್ಚರ್ಯವಾಗಬಹುದು. ಹಾಗಾದರೆ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳಿ.

ಅಬ್ಬಬ್ಬಾ... ಟೊಮೇಟೊ ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ಟೊಮೇಟೊ ಆರೋಗ್ಯ ಪ್ರಯೋಜನImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jul 03, 2025 | 7:30 PM

Share

ಟೊಮೇಟೊ! (Tomatoes) ಈ ಹೆಸರನ್ನು ಕೇಳದವರೇ ಇಲ್ಲ. ಟೊಮೇಟೊ/ ಗೂರೆ ಹಣ್ಣು (ಸೊಲ್ಯಾನಮ್ ಲೈಕೋಪರ್ಸಿಕಮ್) ಸೋಲನೇಸಿ ಕುಟುಂಬಕ್ಕೆ ಸೇರಿದ ಒಂದು ಗಿಡ. ಭಾರತೀಯರ ಪ್ರತಿ ಮನೆಯಲ್ಲಿಯೂ ಈ ತರಕಾರಿ (vegetable) ಇಲ್ಲದೆಯೇ ಅಡುಗೆ ತಯಾರಾಗುವುದಿಲ್ಲ. ಹಾಗಾಗಿಯೇ ಇದನ್ನು ಪ್ರತಿ ಖಾದ್ಯದಲ್ಲೂ ಬಳಸಲಾಗುತ್ತದೆ. ಇದು ಯಾವುದೇ ಅಡುಗೆ ಇರಲಿ ತನ್ನದೇ ಆದಂತಹ ರುಚಿ ನೀಡಿ ಅಡುಗೆಯ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಹಾಗಾದರೆ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ? ಟೊಮೇಟೊ ಸೇವನೆಯನ್ನು ಯಾರು ತಪ್ಪಿಸಬೇಕು? ಈ ಬಗೆಗಿನ ಸಂಪೂರ್ಣ ವಿವರ ಇಲ್ಲಿದೆ.

ಟೊಮೇಟೊ ಸೇವಿಸುವುದರಿಂದ ಸಿಗುವ ಪ್ರಯೋಜನ

ಟೊಮೇಟೊದಲ್ಲಿ ಲೈಕೋಪೀನ್ ಎಂಬ ಶಕ್ತಿಶಾಲಿ ಉತ್ಕರ್ಷಣ ನಿರೋಧಕವಿದೆ. ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಾತ್ರವಲ್ಲ ಹೃದಯಕ್ಕೆ ಹಾನಿ ಮಾಡುವ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಟೊಮೇಟೊದಲ್ಲಿ ಕಂಡು ಬರುವ ಪೊಟ್ಯಾಸಿಯಮ್ ಅಂಶ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರಿಂದ ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಬರುವ ಅಪಾಯ ಕೂಡ ಕಡಿಮೆಯಾಗುತ್ತದೆ.

ಕಣ್ಣಿನ ಆರೋಗ್ಯಕ್ಕೆ ಸಹಕಾರಿ

ಟೊಮೇಟೊಗಳು ವಿಟಮಿನ್ ಎ ಜೊತೆಗೆ ಲುಟೀನ್, ಬೀಟಾ- ಕ್ಯಾರೋಟಿನ್ ಮತ್ತು ಜಿಯಾಕ್ಸಾಂಥಿನ್ ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಇವು ನಮ್ಮ ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ ಮತ್ತು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಡಿಜಿಟಲ್ ಸಾಧನಗಳಿಂದ ಹೊರಸೂಸುವ ನೀಲಿ ಬೆಳಕಿನಿಂದಲೂ ಕಣ್ಣುಗಳನ್ನು ರಕ್ಷಿಸಲು ಸಹಾಯ ಮಾಡುತ್ತವೆ.

ಇದನ್ನೂ ಓದಿ
Image
ಕಣ್ಣಿನ ಆರೋಗ್ಯದಿಂದ ಕ್ಯಾನ್ಸರ್ ತಡೆಗಟ್ಟುವ ವರೆಗೆ; ಚೀನಿಕಾಯಿಯ ಉಪಯೋಗಗಳಿವು
Image
ರಾತ್ರಿಯಲ್ಲಿ ಕಂಡು ಬರುವ ಕಾಲು ಸೆಳೆತವನ್ನು ತಡೆಯಲು ಇಲ್ಲಿದೆ ಸಲಹೆಗಳು
Image
ನೀವು ಏನಾದರೂ ತಿಂದ ತಕ್ಷಣ ಟಾಯ್ಲೆಟ್ ಗೆ ಹೋಗುತ್ತೀರಾ? ನಿಮಗೆ ಇಲ್ಲಿದೆ ಸಲಹೆ
Image
ಹಾಗಲಕಾಯಿ ಕಹಿ ಎಂದು ಮನೆಗೆ ತರದೇ ಇರುವವರು ಈ ಸುದ್ದಿಯನ್ನು ತಪ್ಪದೆ ಓದಿ

ಕ್ಯಾನ್ಸರ್ ತಡೆಗಟ್ಟುವಿಕೆ

ಟೊಮೇಟೊದಲ್ಲಿ ಕಂಡು ಬರುವ ಲೈಕೋಪೀನ್ ಕ್ಯಾನ್ಸರ್ ತಡೆಗಟ್ಟುವಿಕೆಗೂ ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ. ಪ್ರಾಸ್ಟೇಟ್, ಶ್ವಾಸಕೋಶ, ಹೊಟ್ಟೆ ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್‌ಗಳ ಅಪಾಯವನ್ನು ಕಡಿಮೆ ಮಾಡುವಲ್ಲಿ ಇದು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹಲವಾರು ಅಧ್ಯಯನಗಳಿಂದ ತಿಳಿದು ಬಂದಿದೆ.

ನಮ್ಮ ಚರ್ಮಕ್ಕೆ ಒಳ್ಳೆಯದು

ಟೊಮೇಟೊಗಳು ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿವೆ. ಹೆಚ್ಚುವರಿಯಾಗಿ, ಅವು ಲೈಕೋಪೀನ್ ಅನ್ನು ಸಹ ಹೊಂದಿರುತ್ತವೆ. ಇವೆರಡೂ ಚರ್ಮದ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತವೆ. ಈ ಎರಡು ಅಂಶಗಳು ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುತ್ತವೆ, ಪರಿಣಾಮವಾಗಿ ಚರ್ಮ ಆರೋಗ್ಯಕರವಾಗಿರುತ್ತದೆ. ಮಾತ್ರವಲ್ಲ ಯೌವ್ವನದಿಂದ ಕೂಡಿರುತ್ತದೆ. ಜೊತೆಗೆ, ಸೂರ್ಯನ ಬೆಳಕಿನಿಂದ ಉಂಟಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸಲು ಮತ್ತು ಚರ್ಮದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹ ಇವು ಸಹಾಯ ಮಾಡುತ್ತವೆ.

ಇದನ್ನೂ ಓದಿ: Tomato: ಮಧುಮೇಹಿಗಳು ಟೊಮೇಟೊ ತಿನ್ನಬಹುದೇ? ಗರ್ಭಿಣಿಯರೂ ಟೊಮೆಟೊಗಳನ್ನು ತಿನ್ನಬಹುದೇ?

ಇತರ ಪ್ರಯೋಜನಗಳೇನು?

  • ಟೊಮೇಟೊದಲ್ಲಿ ವಿಟಮಿನ್ ಸಿ ಜೊತೆಗೆ ಆಂಟಿಆಕ್ಸಿಡೆಂಟ್‌ಗಳಿವೆ. ಇವು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ, ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ.
  • ಟೊಮೇಟೊದಲ್ಲಿ ವಿಟಮಿನ್ ಕೆ ಮತ್ತು ಕ್ಯಾಲ್ಸಿಯಂ ಇದ್ದು, ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ದೇಹಕ್ಕೆ ತಕ್ಷಣದ ಶಕ್ತಿಯನ್ನು ಒದಗಿಸಲು ಸಹಾಯ ಮಾಡುತ್ತದೆ.
  • ಪ್ರತಿದಿನ ಟೊಮೇಟೊ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಮಾತ್ರವಲ್ಲ ಟೊಮೇಟೊದಲ್ಲಿ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಅಂಶವಿದ್ದು ಇದು ಹೊಟ್ಟೆ ತುಂಬಿದ ಭಾವನೆಯನ್ನು ನೀಡುತ್ತದೆ ಇದರಿಂದ ಅತಿಯಾಗಿ ತಿನ್ನುವುದು ಕಡಿಮೆಯಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು