AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adenovirus in Bengaluru: ಅಡೆನೊವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ, ಆದರೆ ಭಯ ಬೇಡ

ಬೆಂಗಳೂರಿನಲ್ಲಿ ಅಡೆನೊವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ, ಆದರೆ ಸೋಂಕಿನ ಬಗ್ಗೆ ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

Adenovirus in Bengaluru: ಅಡೆನೊವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ, ಆದರೆ ಭಯ ಬೇಡ
ಅಕ್ಷತಾ ವರ್ಕಾಡಿ
|

Updated on:Mar 08, 2023 | 2:48 PM

Share

ಬೆಂಗಳೂರು: ನಗರದಲ್ಲಿಅಡೆನೊವೈರಸ್ಪ್ರಕರಣಗಳು ಹೆಚ್ಚಾಗುತ್ತಿವೆ, ಆದರೆ ಸೋಂಕಿನ ಬಗ್ಗೆ ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಇದು ಸಾಂಕ್ರಾಮಿಕ ರೋಗ ಲಕ್ಷಣವನ್ನು ಹೊಂದಿರುವುದರಿಂದ ನೀವು ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯ ಎಂದು ವೈದ್ಯರು ಸಲಹೆ ನೀಡುತ್ತಾರೆ. ವಿಶೇಷವಾಗಿ ಮಕ್ಕಳಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುವುದರಿಂದ ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ.

ಅಡೆನೊವೈರಸ್ ಎಂದರೇನು?

ಕೊರೋನಾದಂತೆಯೇ ಉಸಿರಾಟದ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ವೈರಲ್​ ಸೋಂಕು ಇದಾಗಿದ್ದು, ಇತ್ತೀಚಿಗೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಸಾಮಾನ್ಯವಾಗಿ ಜ್ವರ, ನೆಗಡಿ, ನ್ಯುಮೋನಿಯಾ, ಶ್ವಾಸಕೋಶದ ತೊಂದರೆಯನ್ನುಂಟು ಮಾಡುತ್ತದೆ. ಈ ವೈರಸ್ ಗಾಳಿಯ ಮೂಲಕ ಅಂದರೆ ಕೆಮ್ಮುವಿಕೆ ಅಥವಾ ಸೀನುವಿಕೆಯಿಂದ ಹರಡುತ್ತದೆ.

ಇದನ್ನೂ ಓದಿ: ಭಾರತದಲ್ಲಿ ಹೆಚ್ಚಾಗುತ್ತಿರುವ ಎಚ್​3ಎನ್​2 ವೈರಸ್​​ನ ಲಕ್ಷಣ ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಇಲ್ಲಿದೆ

ಅಡೆನೊವೈರಸ್ ರೋಗ ಲಕ್ಷಣಗಳು:

ಅಡೆನೊವೈರಸ್ ಸೋಂಕು ತಗುಲಿದ ಪ್ರಾರಂಭದ ಹಂತದಲ್ಲಿ ನೆಗಡಿ, ತಲೆನೋವು ಮತ್ತು ಜ್ವರದ ಲಕ್ಷಣಗಳು ಕಂಡುಬರುತ್ತದೆ. ಇದಲ್ಲದೆ ಜ್ವರ, ಗಂಟಲು ಶುಷ್ಕತೆ, ತೀವ್ರವಾದ ಬ್ರಾಂಕೈಟಿಸ್‌ನಂತಹ ಸಮಸ್ಯೆಗಳು ಅಡೆನೊದಿಂದ ಉಂಟಾಗುತ್ತವೆ. ನಿಮ್ಮ ಮಕ್ಕಳು ಎರಡು ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರೆ. ಮೂತ್ರ ಗಾಢ ಹಳದಿ ಬಣ್ಣವನ್ನು ಹೊಂದಿದ್ದರೆ , ಜೊತೆಗೆ ಅತಿಯಾದ ಸುಸ್ತು, ಕಣ್ಣು ಕೆಂಪಾಗಿದ್ದರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳುವುದು ಅಗತ್ಯವಾಗಿದೆ.

ಅಡೆನೊವೈರಸ್ಗೆ ಚಿಕಿತ್ಸೆ ಏನು?

ಅಡೆನೊವೈರಸ್‌ಗೆ ಯಾವುದೇ ನಿರ್ದಿಷ್ಟ ಔಷಧ ಅಥವಾ ಚಿಕಿತ್ಸೆ ಇಲ್ಲ. ಹೆಚ್ಚಿನ ಸಮಯ, ಅಡೆನೊವೈರಸ್ ಸೋಂಕು ಸೌಮ್ಯ ಲಕ್ಷಣಗಳನ್ನು ಹೊಂದಿರುತ್ತದೆ. ಇದನ್ನು ನೋವು ಅಥವಾ ಜ್ವರಕ್ಕೆ ಸಂಬಂಧಿಸಿ ಔಷಧದಿಂದ ಗುಣಪಡಿಸಲಾಗುತ್ತದೆ. ಅದಕ್ಕಾಗಿಯೇ ಭಯಪಡುವ ಅಗತ್ಯವಿಲ್ಲ ಎಂದು ಬೆಂಗಳೂರಿನ ಡಾ. ರಜತ್​​​ ಆತ್ರೇಯಾ ಸಲಹೆ ನೀಡಿದ್ದಾರೆ. ನಗರದಲ್ಲಿ ಕೆಲವೇ ಕೆಲವು ಲ್ಯಾಬ್‌ಗಳು ವೈರಸ್‌ಗಾಗಿ ಪರೀಕ್ಷಾ ಸೌಲಭ್ಯಗಳನ್ನು ಹೊಂದಿವೆ. ಪಶ್ಚಿಮ ಬಂಗಾಳದಲ್ಲಿ ಒಂಬತ್ತು ದಿನಗಳಲ್ಲಿ ಸಾವಿನ ಸಂಖ್ಯೆ 40 ಕ್ಕೆ ಏರಿದೆ. ಆದ್ದರಿಂದ ಸ್ವಯಂ ಕಾಳಜಿ ವಹಿಸುವುದು ಅಗತ್ಯ. ಮಾಸ್ಕ್​​​ ಧರಿಸಿ, ಸಾಮಾಜಿ ಅಂತರ ಮತ್ತು ಆಗಾಗ ಕೈಗಳನ್ನು ತೊಳೆಯಿರಿ ಎಂದು ತಜ್ಞರು ಎಚ್ಚರಿಕೆ ನೀಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:30 pm, Wed, 8 March 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!