AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack In Winter: ಇದು ಹೃದಯಗಳ ವಿಷಯ: ಬೆಂಗಳೂರಲ್ಲಿ ಮೈಕೊರೆಯುವ ಚಳಿ, ಈ ಕಾಯಿಲೆ ಇರುವವರಿಗೆ ಹೃದಯ ಜೋಪಾನ ಎನ್ನುತ್ತಿದ್ದಾರೆ ತಜ್ಞರು

ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೈಕೊರೆಯುವ ಚಳಿ ಬೀಳಿತ್ತಿದ್ದು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

Heart Attack In Winter: ಇದು ಹೃದಯಗಳ ವಿಷಯ: ಬೆಂಗಳೂರಲ್ಲಿ ಮೈಕೊರೆಯುವ ಚಳಿ, ಈ ಕಾಯಿಲೆ ಇರುವವರಿಗೆ ಹೃದಯ ಜೋಪಾನ ಎನ್ನುತ್ತಿದ್ದಾರೆ ತಜ್ಞರು
ಹೃದಯಾಘಾತ
TV9 Web
| Edited By: |

Updated on: Jan 11, 2023 | 10:17 AM

Share

ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೈಕೊರೆಯುವ ಚಳಿ ಬೀಳಿತ್ತಿದ್ದು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. ರಕ್ತದೊತ್ತಡ, ಮಧುಮೇಹ, ರಕ್ತನಾಳಗಳ ಸಮಸ್ಯೆ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು ಈ ಚಳಿಗಾಲದಲ್ಲಿ ತುಂಬಾ ಎಚ್ಚರಿಕೆಯಿಂದಿರಬೇಕು ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಮಂಜುನಾಥ್ ಸಲಹೆ ಕೊಟ್ಟಿದ್ದಾರೆ. ಈ ಆರೋಗ್ಯ ಸಮಸ್ಯೆಗಳಿರುವವರು ಹಾಗೂ ಸಾಮಾನ್ಯರು ಕೂಡ ಬೆಳಗಿನ ಸಮಯದಲ್ಲಿ ವಾಕಿಂಗ್, ಜಿಮ್, ಜಾಗಿಂಗ್ ಮಾಡುವಾಗ ತುಂಬಾ ಜಾಗ್ರತೆಯಿಂದಿರಬೇಕು ಎಂದು ಹೇಳಿದ್ದಾರೆ.

ಜಯದೇವ ಆಸ್ಪತ್ರೆಯಲ್ಲಿ ಹೃದಯಘಾತ ಪ್ರಮಾಣ ಹಾಗೂ ಹೃದಯ ಸಮಸ್ಯೆಗಳ ಎದುರಿಸುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜಯದೇವ ಆಸ್ಪತ್ರೆ ನಡೆಸಿರುವ ಅಧ್ಯಯನದಲ್ಲಿ ಕೆಲವು ಆಘಾತಕಾರಿ ಅಂಶಗಳು ಬಯಲಿಗೆ ಬಂದಿವೆ. ಪ್ರತಿ ತಿಂಗಳು ಜಯದೇವ ಆಸ್ಪತ್ರೆಯೊಂದಕ್ಕೆ 2100 ಕ್ಕೂ ಹೆಚ್ಚು ಹೃದಯಘಾತದ ರೋಗಿಗಳು ದಾಖಲಾಗುತ್ತಿದ್ದಾರೆ. ಕಳೆದ ಎಂಟು ತಿಂಗಳಿಗೆ ಹೋಲಿಕೆ ಮಾಡಿದರೆ ಹೃದಯಘಾತದ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದೆ.

ಮತ್ತಷ್ಟು ಓದಿ: Heart Attack and Cardiac Arrest : ಹೃದಯಾಘಾತ ಹಾಗೂ ಹೃದಯಸ್ತಂಭನ ನಡುವಿನ ವ್ಯತ್ಯಾಸವೇನು?

ಪ್ರತಿ ತಿಂಗಳು ಜಯದೇವ ಆಸ್ಪತ್ರೆಗೆ 2100ಕ್ಕೂ ಹೆಚ್ಚು ಹೃದಯಘಾತ ಕೇಸ್ ದಾಖಲಾಗುತ್ತಿವೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ರಕ್ತನಾಳ ಸಂಕುಚಿತಗೊಂಡಿರುತ್ತದೆ. ಹೀಗಾಗಿ ರಕ್ತದೊತ್ತಡ, ಮಧುಮೇಹ ಹೃದಯ ಸಂಬಂಧಿಸಿದ ಸಮಸ್ಯೆ ಇದ್ದವರು ಎಚ್ಚರ ವಹಿಸಬೇಕಿದೆ ಎಂದು ವೈದ್ಯರು ಹೇಳಿದ್ದಾರೆ. ಬೆಚ್ಚನೆಯ ಉಡುಪು ಉತ್ತಮ ಆಹಾರಕ್ಕೆ ಸೇವಿಸಲು ಸಲಹೆ ನೀಡಿದ್ದು, ಫಾಸ್ಟ್ ಪುಡ್ ಸಾಧ್ಯವಾದಷ್ಟು ಅವೈಡ್ ಮಾಡುವಂತೆ ಸೂಚಿಸಿದ್ದಾರೆ.

ಚಳಿಗಾಲದಲ್ಲಿ ರಕ್ತವು ದಪ್ಪವಾಗುತ್ತದೆ: ರಕ್ತನಾಳಗಳ ಕಿರಿದಾಗುವಿಕೆಯಿಂದಾಗಿ, ರಕ್ತವನ್ನು ಹರಿಸುವುದಕ್ಕೆ ಹೆಚ್ಚಿನ ಒತ್ತಡವನ್ನು ಬೀರಬೇಕಾಗುತ್ತದೆ, ಇದರಿಂದಾಗಿ ರೋಗಿಯ ರಕ್ತದೊತ್ತಡ ಹೆಚ್ಚಾಗುತ್ತದೆ. ಅಧಿಕ ಬಿಪಿಯಿಂದ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚು. ತಜ್ಞರ ಪ್ರಕಾರ, ಈ ಋತುವಿನಲ್ಲಿ ರಕ್ತವು ದಪ್ಪವಾಗಲು ಪ್ರಾರಂಭವಾಗುತ್ತದೆ, ಇದರಿಂದಾಗಿ ಹೆಪ್ಪುಗಟ್ಟುವಿಕೆ ಪ್ರಾರಂಭವಾಗುತ್ತದೆ, ಇದು ಹೃದಯಾಘಾತಕ್ಕೆ ಕಾರಣವಾಗುತ್ತದೆ.

ರಕ್ತದೊತ್ತಡ ಹೃದಯದ ಆರೋಗ್ಯಕ್ಕೆ ಹಾನಿಕಾರಕ – ಚಳಿಗಾಲದಲ್ಲಿ ಹೃದಯಾಘಾತದ ಅಪಾಯವು ಬೆಳಿಗ್ಗೆ ಹೆಚ್ಚು ಎಂದು ಹೃದಯ ತಜ್ಞರು ಹೇಳುತ್ತಾರೆ. ನಮ್ಮ ದೇಹದಲ್ಲಿನ ಕಡಿಮೆ ತಾಪಮಾನದಿಂದಾಗಿ, ಅನೇಕ ಬದಲಾವಣೆಗಳು ಸಂಭವಿಸುತ್ತವೆ ಎಂದು ಅನೇಕ ಸಂಶೋಧನೆಗಳಲ್ಲಿ ಬಹಿರಂಗವಾಗಿದೆ.

ಈ ಬದಲಾವಣೆಗಳು ಹೃದಯ, ರಕ್ತನಾಳಗಳು ಮತ್ತು ಹಾರ್ಮೋನುಗಳಂತೆ ದೇಹದ ಪ್ರತಿಯೊಂದು ಹಂತದಲ್ಲೂ ಸಂಭವಿಸುತ್ತವೆ. ಉಷ್ಣತೆಯು ಕಡಿಮೆಯಾಗುತ್ತಿದ್ದಂತೆ, ದೇಹವು ಅದರ ತಾಪಮಾನವನ್ನು ಕಾಪಾಡಿಕೊಳ್ಳಲು ಹೆಚ್ಚುವರಿ ಕೆಲಸವನ್ನು ಮಾಡಬೇಕಾಗುತ್ತದೆ. ಇದು ದೇಹದ ಮೇಲೆ ಹೆಚ್ಚುವರಿ ಒತ್ತಡವನ್ನು ಉಂಟುಮಾಡುತ್ತದೆ. ಹೆಚ್ಚಿದ ರಕ್ತದೊತ್ತಡ ನಮ್ಮ ಹೃದಯದ ಆರೋಗ್ಯಕ್ಕೆ ಹಾನಿ ಮಾಡುತ್ತದೆ.

ಚಳಿಗಾಲದಲ್ಲಿ ಹೃದಯಾಘಾತವನ್ನು ತಡೆಯುವುದು ಹೇಗೆ: ಬೆಳಿಗ್ಗೆ 6-7 ಗಂಟೆಗೆ ವಾಕಿಂಗ್ ಮಾಡುವುದರಿಂದ ಹೃದಯ ಕಾಯಿಲೆಗಳ ಅಪಾಯ ಕೊಂಚ ಹೆಚ್ಚಾಗುತ್ತದೆ. ಚಳಿಗಾಲದಲ್ಲಿ ನಡೆಯಲು ಬೆಳಿಗ್ಗೆ 9 ಗಂಟೆಗೆ ಸಮಯವನ್ನು ನಿಗದಿಪಡಿಸಿ. ಚಳಿಗಾಲದಲ್ಲಿ, ಆಹಾರದಲ್ಲಿ ಉಪ್ಪಿನ ಸೇವನೆಯನ್ನು ಕಡಿಮೆ ಮಾಡಿ, ಅತಿಯಾದ ಉಪ್ಪು ಸೇವನೆಯಿಂದಾಗಿ, ಹೃದಯವು ಕೆಲಸ ಮಾಡಲು ಹೆಚ್ಚು ಶ್ರಮ ಮಾಡಬೇಕಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!