AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toothache: ಹಲ್ಲು ನೋವಿನ ತ್ವರಿತ ಪರಿಹಾರಕ್ಕೆ ಮನೆ ಮದ್ದುಗಳು

ಹಲ್ಲಿನ ಕೊಳೆತ, ಬ್ಯಾಕ್ಟೀರಿಯಾದ ಸೋಂಕು ಮತ್ತು ದಂತಕ್ಷಯದಂತಹ ಅನೇಕ ಕಾರಣಗಳಿಂದ ತೀವ್ರವಾದ ಹಲ್ಲುನೋವು ಉಂಟಾಗುತ್ತದೆ. ಈ ನೋವಿನಿಂದಾಗಿ ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಏಕೆಂದರೆ ಹಲ್ಲಿನ ಒಳಗಿನ ನರಗಳು, ಅಂಗಾಂಶಗಳು ಮತ್ತು ರಕ್ತನಾಳಗಳು ತುಂಬಾ ಮೃದುವಾಗಿರುತ್ತವೆ.

Toothache: ಹಲ್ಲು ನೋವಿನ ತ್ವರಿತ ಪರಿಹಾರಕ್ಕೆ ಮನೆ ಮದ್ದುಗಳು
ಹಲ್ಲು ನೋವಿಗೆ ಪರಿಹಾರ
Follow us
Rakesh Nayak Manchi
|

Updated on: Mar 28, 2023 | 6:59 AM

ಹಲ್ಲಿನ ಕೊಳೆತ, ಬ್ಯಾಕ್ಟೀರಿಯಾದ ಸೋಂಕು ಮತ್ತು ದಂತಕ್ಷಯದಂತಹ ಅನೇಕ ಕಾರಣಗಳಿಂದ ಹಲ್ಲುನೋವು (Toothache) ಉಂಟಾಗುತ್ತದೆ. ಈ ನೋವಿನಿಂದಾಗಿ ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಏಕೆಂದರೆ ಹಲ್ಲಿನ ಒಳಗಿನ ನರಗಳು, ಅಂಗಾಂಶಗಳು ಮತ್ತು ರಕ್ತನಾಳಗಳು ತುಂಬಾ ಮೃದುವಾಗಿರುತ್ತವೆ. ಅವುಗಳು ದೇಹದಲ್ಲಿ ಅತ್ಯಂತ ಸೂಕ್ಷ್ಮವಾದ ನರಗಳಾಗಿವೆ. ಈ ನರಗಳು ಬ್ಯಾಕ್ಟೀರಿಯಾದಿಂದ ಸೋಂಕಿಗೆ ಒಳಗಾದಾಗ ತೀವ್ರವಾದ ನೋವನ್ನು ಉಂಟುಮಾಡಬಹುದು. ಈ ಪರಿಸ್ಥಿತಿಯಲ್ಲಿ ದಂತವೈದ್ಯರನ್ನು ಸಂಪರ್ಕಿಸುವುದು ಅವಶ್ಯಕ. ಅದಾಗ್ಯೂ, ಮನೆಯಲ್ಲಿ ನಿತ್ಯ ಬಳಕೆ ಮಾಡುವ ಕೆಲವೊಂದು ಆಹಾರ ಪದಾರ್ಥಗಳಿಂದ (Home remedies) ಹಲ್ಲು ನೋವಿಗೆ ತಕ್ಷಣದ ಪರಿಹಾರ ಪಡೆಯಬಹುದು ಎನ್ನುತ್ತಾರೆ ತಜ್ಞರು. ಅವುಗಳು ಹೀಗಿವೆ:

ಲವಂಗ ಎಣ್ಣೆ: ಲವಂಗವು ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಒಂದು ಹತ್ತಿಯ ಉಂಡೆಯಲ್ಲಿ ಒಂದು ಅಥವಾ ಎರಡು ಹನಿ ಲವಂಗದ ಎಣ್ಣೆಯನ್ನು ಹಾಕಿ ಮತ್ತು ಅದನ್ನು ನೋವು ಇರುವ ಹಲ್ಲಿಗೆ ಅನ್ವಯಿಸಿ. ಹೀಗೆ ಮಾಡುವುದರಿಂದ ಹಲ್ಲು ನೋವಿನಿಂದ ತ್ವರಿತ ಪರಿಹಾರ ಪಡೆಯಬಹುದು.

ಬೆಳ್ಳುಳ್ಳಿ: ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಳ್ಳುಳ್ಳಿಯನ್ನು ಪ್ರತಿದಿನ ಖಾಲಿ ಹೊಟ್ಟೆಗೆ ಸೇವಿಸಬಹುದು. ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಹಲ್ಲುನೋವು ಕೂಡ ನಿವಾರಣೆಯಾಗುತ್ತದೆ. ಏಕೆಂದರೆ ಇದು ಬಾಯಿಯಲ್ಲಿರುವ ಬ್ಯಾಕ್ಟೀರಿಯಾವನ್ನು ನಾಶಪಡಿಸುತ್ತದೆ.

ಪೇರಳೆ ಎಲೆಗಳು: ಪೇರಳೆ ಎಲೆಗಳು ಆಂಟಿಮೈಕ್ರೊಬಿಯಲ್ ಗುಣಗಳಿಂದ ತುಂಬಿವೆ. ಕುಳಿಗಳನ್ನು ತಡೆಯಲು ಇವು ಒಳ್ಳೆಯದು. ಪೇರಳೆ ಎಲೆಗಳನ್ನು ಕುದಿಸಿ ಮೌತ್ ವಾಶ್ ಆಗಿ ಬಳಸಬಹುದು.

ನಿಂಬೆ ರಸ: ನಿಂಬೆ ಸಿಟ್ರಿಕ್ ಆಮ್ಲದಲ್ಲಿ ಸಮೃದ್ಧವಾಗಿದೆ. ನೋವು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆಹಾರವನ್ನು ಸೇವಿಸಿದ ನಂತರ, ನಿಂಬೆ ರಸವನ್ನು ಕುಡಿಯಿರಿ. ಇದು ಹಲ್ಲಿನ ಕ್ಷಯವನ್ನು ತಡೆಯುತ್ತದೆ ಮತ್ತು ಹಲ್ಲುಗಳ ಆರೋಗ್ಯವನ್ನು ಕಾಪಾಡುತ್ತದೆ.

(ಗಮನಿಸಿ: ಇಲ್ಲಿ ನೀಡಲಾದ ಮನೆ ಮದ್ದು ಸಲಹೆಗಳು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಇದನ್ನು ಟಿವಿ9 ಕನ್ನಡ ಖಚಿತಪಡಿಸಿಲ್ಲ. ನೀವು ಯಾವುದೇ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರೆ, ವೈದ್ಯರ ಸಲಹೆ ಪಡೆಯುವುದು ಅವಶ್ಯಕ)

ಮತ್ತಷ್ಟು ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ