AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dry Cough: ಒಣಕೆಮ್ಮು ನಿವಾರಣೆಗೆ ಇಲ್ಲಿದೆ ಸುಲಭ ಮನೆಮದ್ದುಗಳು

ಒಣಕೆಮ್ಮು ಸಾಮಾನ್ಯವಾಗಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತದೆ. ಎಷ್ಟೇ ನೀರು ಕುಡಿದರೂ ಕೆಮ್ಮು ನಿಲ್ಲುವುದೇ ಇಲ್ಲ. ಹಾಗೆಯೇ ಸಿರಪ್ ಸೇರಿದಂತೆ ಯಾವುದೇ ಔಷಧವನ್ನು ಸೇವಿಸಿದರೂ ಕೆಮ್ಮು ಹೋಗುವ ಸೂಚನೆಯೇ ಇರುವುದಿಲ್ಲ, ಆಗ ಈ ಕೆಲವು ಮನೆಮದ್ದುಗಳನ್ನು ಟ್ರೈ ಮಾಡಿ ನೋಡಿ.

Dry Cough: ಒಣಕೆಮ್ಮು ನಿವಾರಣೆಗೆ ಇಲ್ಲಿದೆ ಸುಲಭ ಮನೆಮದ್ದುಗಳು
Dry Cough
TV9 Web
| Edited By: |

Updated on: Aug 17, 2022 | 1:14 PM

Share

ಒಣಕೆಮ್ಮು ಸಾಮಾನ್ಯವಾಗಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತದೆ. ಎಷ್ಟೇ ನೀರು ಕುಡಿದರೂ ಕೆಮ್ಮು ನಿಲ್ಲುವುದೇ ಇಲ್ಲ. ಹಾಗೆಯೇ ಸಿರಪ್ ಸೇರಿದಂತೆ ಯಾವುದೇ ಔಷಧವನ್ನು ಸೇವಿಸಿದರೂ ಕೆಮ್ಮು ಹೋಗುವ ಸೂಚನೆಯೇ ಇರುವುದಿಲ್ಲ, ಆಗ ಈ ಕೆಲವು ಮನೆಮದ್ದುಗಳನ್ನು ಟ್ರೈ ಮಾಡಿ ನೋಡಿ. ವಾತ, ಪಿತ್ತ ಮತ್ತು ಕಫಗಳ ಅಸಮತೋಲನದಿಂದ ಒಣ ಕೆಮ್ಮು ಉಂಟಾಗುತ್ತದೆ ಎಂದು ಹೇಳಲಾಗುತ್ತದೆ.

ಅಲರ್ಜಿ, ಆಸಿಡ್ ರಿಫ್ಲಕ್ಸ್, ಹವಾಮಾನ ಬದಲಾವಣೆ, ಹೆಚ್ಚು ತಂಪು ಪಾನೀಯಗಳನ್ನು ಕುಡಿಯುವುದು, ಧೂಳು ಹಾಗೂ ಇನ್ನಿತರ ಕಾರಣಗಳಿಂದ ಒಣ ಕೆಮ್ಮು ಉಂಟಾದರೂ ನಿರ್ದಿಷ್ಟ ಕಾರಣ ಇದೇ ಎಂದು ಹೇಳಲಾಗುವುದಿಲ್ಲ.

ಕೆಮ್ಮಿನಲ್ಲಿ ಎರಡು ವಿಧಗಳಿವೆ. ಮೊದಲನೆಯದು ಕಫದ ಕೆಮ್ಮು ಇದು ಬಹಳಷ್ಟು ಲೋಳೆಯನ್ನು ಹೊಂದಿರುತ್ತದೆ, ಎರಡನೆಯದು ಲೋಳೆಯಿಲ್ಲದ ಒಣ ಕೆಮ್ಮು. ಒಣ ಕೆಮ್ಮು ಇದ್ದರೆ ಗಂಟಲು ನೋವು, ಉರಿಯೂತ ಹೆಚ್ಚು. ಅದರಲ್ಲೂ ರಾತ್ರಿ ವೇಳೆ ಕೆಮ್ಮು ಹೆಚ್ಚಾಗುತ್ತದೆ. ನೆಮ್ಮದಿಯಾಗಿ ಮಲಗಲು ಕೂಡಾ ಕಷ್ಟವಾಗುತ್ತದೆ.

ಒಣಕೆಮ್ಮು ಹೋಗಲಾಡಿಸಲು ಮನೆಮದ್ದು ಇಲ್ಲಿದೆ ಅರಿಶಿನ ಅರಿಶಿನವು ಉರಿಯೂತದ, ಆಂಟಿವೈರಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಅರಿಶಿನವು ಕರ್ಕ್ಯುಮಿನ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ.

ಅರಿಶಿನವನ್ನು ಕಾಳುಮೆಣಸಿನೊಂದಿಗೆ ಸೇವಿಸಿದಾಗ, ಕರ್ಕ್ಯುಮಿನ್, ರಕ್ತದಲ್ಲಿ ಚೆನ್ನಾಗಿ ಹೀರಲ್ಪಡುತ್ತದೆ. ಬಿಸಿ ಹಾಲಿನಲ್ಲಿ1/2 ಟೀ ಚಮಚ ಅರಿಶಿನ ಮತ್ತು 1/4 ಟೀ ಚಮಚ ಕಾಳುಮೆಣಸು ಪುಡಿ ಮಿಕ್ಸ್‌ ಮಾಡಿ ಸೇವಿಸಿದರೆ ಒಣ ಕೆಮ್ಮನ್ನು ಕಡಿಮೆ ಮಾಡಬಹುದು.

ಜೇನುತುಪ್ಪ ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ, ಇದು ಗಂಟಲಿನ ಕಿರಿಕಿರಿಯನ್ನು ಕಡಿಮೆ ಮಾಡಲು ಮತ್ತು ಗಂಟಲನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಒಣಕೆಮ್ಮಿನ ಸಮಸ್ಯೆ ದೂರವಾಗುತ್ತದೆ. ಬೆಳಗ್ಗೆ ಎದ್ದ ಬಳಿಕ ಒಂದು ಚಮಚ ಜೇನುತುಪ್ಪವನ್ನು ಕುದಿಸಿ ಆರಿದ ನೀರಿಗೆ ಬೆರೆಸಿ ಸೇವಿಸುವುದು ಒಳಿತು.

ಶುಂಠಿ ಶುಂಠಿಯಲ್ಲಿ ಆಂಟಿಮೈಕ್ರೊಬಿಯಲ್ ಗುಣವಿದ್ದು, ಒಣ ಕೆಮ್ಮನ್ನು ನಿವಾರಿಸಲು ಶುಂಠಿ ಸಹಾಯ ಮಾಡುತ್ತದೆ. ಶುಂಠಿಗೆ ಸ್ವಲ್ಪ ಉಪ್ಪನ್ನು ಸೇರಿಸಿ ಅಥವಾ ಜೇನುತುಪ್ಪವನ್ನು ಹಚ್ಚಿ ಬಾಯಿಯಲ್ಲಿ ಕಚ್ಚಿ, ಅದರಿಂದ ಬರುವ ರಸವನ್ನು ಮಾತ್ರ ನುಂಗಿ. ಹೀಗೇ 5-7 ನಿಮಿಷಗಳ ಕಾಲ ಇಟ್ಟು ನಂತರ ಹೊರಗೆ ಬಿಸಾಡಿ. ಬಾಯಿಯನ್ನು ಸ್ವಚ್ಛಗೊಳಿಸಿ.

ಉಪ್ಪು ನೀರು ಉಪ್ಪು ನೀರು ಬಾಯಿ ಮತ್ತು ಗಂಟಲಿನ ಬ್ಯಾಕ್ಟೀರಿಯಾವನ್ನು ಕೊಲ್ಲಲು ಸಹಾಯ ಮಾಡುತ್ತದೆ. ಒಂದು ಲೋಟ ಬೆಚ್ಚಗಿನ ನೀರಿಗೆ 1 ಟೀ ಚಮಚ ಉಪ್ಪು ಸೇರಿಸಿ ಮಿಕ್ಸ್‌ ಮಾಡಿ. ಈ ನೀರಿನಿಂದ ನಿಮ್ಮ ಬಾಯಿಯನ್ನು ಆಗಾಗ ಗಾರ್ಗ್ಲಿಂಗ್ ಮಾಡಿ.

ತುಪ್ಪ ತುಪ್ಪವು ಗಂಟಲನ್ನು ಮೃದುಗೊಳಿಸುತ್ತದೆ. ಕಾಳುಮೆಣಸಿನ ಪುಡಿಯೊಂದಿಗೆ ತುಪ್ಪವನ್ನು ಬೆರೆಸಿ ಸೇವಿಸಿದರೆ ಒಣ ಕೆಮ್ಮು ನಿವಾರಣೆಯಾಗುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು