AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies: ಹೊಟ್ಟೆ ಉಬ್ಬರಕ್ಕೆ ಮನೆಯಲ್ಲೇ ಇದೆ ಪರಿಹಾರ

ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಸರಿಯಾಗಿ ಜೀರ್ಣವಾಗುವುದಿಲ್ಲ. ವಾಂತಿ ಬಂದಂತಾಗುತ್ತದೆ. ಹೊಟ್ಟೆ ವಿಪರೀತ ನೋವಾಗುವುದು. ಇದಕ್ಕೆ ಹೊಟ್ಟೆ ಉಬ್ಬರಿಸುವುದು ಅಂತನೂ ಹೇಳಬಹುದು.

Home Remedies: ಹೊಟ್ಟೆ ಉಬ್ಬರಕ್ಕೆ ಮನೆಯಲ್ಲೇ ಇದೆ ಪರಿಹಾರ
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on: Jun 28, 2021 | 9:20 AM

Share

ಹೊಟ್ಟೆ ನೋವು ಸಾಮಾನ್ಯ ಸಮಸ್ಯೆಯಾಗಿದೆ. ಈ ಸಮಸ್ಯೆ ಜಂಕ್ ಫುಡ್ ಅಥವಾ ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಕಾಡುತ್ತದೆ. ಹೊಟ್ಟೆ ನೋವು ಬಂದಾಗ ಪ್ರತಿ ಬಾರಿ ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆಯುವುದು ಸೂಕ್ತವಲ್ಲ. ಹೆಚ್ಚು ಮಾತ್ರೆ ತೆಗೆದುಕೊಂಡರೆ ಅಡ್ಡ ಪರಿಣಾಮಗಳಾಗುತ್ತವೆ. ಹೀಗಾಗಿ ಇಂತಹ ಸಮಸ್ಯೆಗಳಿಗೆ ಮನೆಯಲ್ಲೇ ಪರಿಹಾರವನ್ನು ಹುಡುಕಬೇಕು. ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಸರಿಯಾಗಿ ಜೀರ್ಣವಾಗುವುದಿಲ್ಲ. ವಾಂತಿ ಬಂದಂತಾಗುತ್ತದೆ. ಹೊಟ್ಟೆ ವಿಪರೀತ ನೋವಾಗುವುದು. ಇದಕ್ಕೆ ಹೊಟ್ಟೆ ಉಬ್ಬರಿಸುವುದು ಅಂತಲೂ ಹೇಳಬಹುದು. ಈ ಹೊಟ್ಟೆ ಉಬ್ಬರಿಸುವುದಕ್ಕೆ ಕೆಲವು ಪರಿಹಾರವನ್ನು ಈ ಕೆಳಕಂಡಂತೆ ವಿವರಿಸಲಾಗಿದೆ.

*ಅಕ್ಕಿ ನೀರು (ಗಂಜಿ) ಜೀರ್ಣಕ್ರಿಯೆ ಸರಿಯಾಗದೆ ಇದ್ದಾಗ ಹೊಟ್ಟೆ ನೋವಾಗುತ್ತದೆ. ಇದಕ್ಕೆ ಅಕ್ಕಿ ನೀರು ಹೇಳಿ ಮಾಡಿಸಿದ ಪರಿಹಾರ. ಅತಿಸಾರ ಭೇದಿ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರೆ, ಅಕ್ಕಿ ನೀರನ್ನು ಸೇವಿಸಿ. ಒಂದು ಲೋಟ ಅಕ್ಕಿ ನೀರನ್ನು ಕುಡಿಯುವುದರಿಂದ ಹೊಟ್ಟೆ ನೋವು ಕಡಿಮೆಯಾಗುತ್ತದೆ. ಮನೆಯಲ್ಲಿ ಅನ್ನ ಮಾಡಿದ ಬಳಿಕ ಉಳಿಯುವ ಗಂಜಿಯನ್ನು ಎಸೆಯಬೇಡಿ. ಹೊಟ್ಟೆ ಉಬ್ಬರಿಸುವಿಕೆ ಇದು ಮನೆ ಮದ್ದಾಗಿದೆ.

* ಕ್ಯಾಮೊಮೈಲ್ ಚಹಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದರೆ ಕ್ಯಾಮೊಮೈಲ್ ಚಹಾ ಸೇವಿಸಿ. ಕ್ಯಾಮೊಮೈಲ್ ಚಹಾ ಉತ್ತಮ ಗುಣವನ್ನು ಹೊಂದಿದೆ. ಇದು ಹೊಟ್ಟೆ ನೋವು ನಿವಾರಿಸುವ ಜೊತೆಗೆ ಅಸ್ವಸ್ಥತೆಯನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನು ಕುಡಿಯುವುದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ನಿವಾರಣೆಯಾಗುತ್ತದೆ.

* ಮೊಸರು ಮತ್ತು ಇಸಬ್​ಗೋಲ್​ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆಗೊಳಿಸಲು ಇಸಬ್​ಗೋಲ್​ ಬಳಸಬಹುದು. ಇಸಬ್​ಗೋಲ್​ನಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಇರುತ್ತದೆ. ಇದನ್ನು ಮೊಸರಿನೊಂದಿಗೆ ಸೇವಿಸಬಹುದು. ಹೊಟ್ಟೆ ಉಬ್ಬರಿಸಿದ್ದರೆ ಇದು ಒಳ್ಳೆಯ ಮದ್ದಾಗಿದೆ. ರಾತ್ರಿ ಮಲಗುವ ಮೊದಲು ಇಸಬ್​ಗೋಲ್​ನ ಬಿಸಿ ನೀರಿಗೆ ಹಾಕಿಕೊಂಡು ಕುಡಿದರೆ ಮಲಬದ್ಧತೆ ಸಮಸ್ಯೆಯಿಂದಲೂ ಪಾರಾಗಬಹುದು.

* ಪುದೀನಾ ಟೀ ಪುದೀನಾ ನೈಸರ್ಗಿಕ ನೋವು ನಿವಾರಕ ಗುಣಗಳನ್ನು ಹೊಂದಿದೆ. ಹೊಟ್ಟೆ ಉಬ್ಬರದಿಂದಾಗುವ ನೋವನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ. ಹೀಗಾಗಿ ಹೊಟ್ಟೆ ನೋವಿನಿಂದ ಒದ್ದಾಡುತ್ತಿದ್ದರೆ ಪುದೀನಾ ಟೀ ಸೇವಿಸಬಹುದು. ಇದು ದೇಹಕ್ಕೆ ತಂಪು. ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು.

*ಶುಂಠಿ ಶುಂಠಿ ಅಡುಗೆಯಲ್ಲಿ ಬಳಸುವ ಒಂದು ಸಾಂಬಾರ ವಸ್ತು. ಅಡುಗೆಗೆ ರುಚಿ ಕೊಡುವ ಗುಣವನ್ನು ಹೊಂದಿದೆ. ಮಾತ್ರವಲ್ಲದೆ ಕೆಲ ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಪರಿಹಾರದ ಅಂಶಗಳನ್ನು ಹೊಂದಿದೆ. ಹೊಟ್ಟೆ ನೋವನ್ನು ನಿವಾರಿಸುವ ಶುಂಠಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನೀರಿನಲ್ಲಿ ಶುಂಠಿಯನ್ನು ಕುದಿಸಿ ಕುಡಿಯುವುದರಿಂದ ಹೊಟ್ಟೆ ನೋವು ಕಡಿಮೆಯಾಗುತ್ತದೆ.

ಇದನ್ನೂ ಓದಿ

Health Tips: ತುಟಿ ಕಪ್ಪಾಗಿದೆಯೇ? ಇಲ್ಲಿದೆ ಪರಿಹಾರ

Dark Circle: ನಿಮ್ಮ ಕಣ್ಣಿನ ಸುತ್ತ ಕಪ್ಪಾಗಿದೆಯೇ? ಸೂಕ್ತ ಪರಿಹಾರ ಇಲ್ಲಿದೆ ನೋಡಿ

(Best medicine for Stomach Ache in home)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ