AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Betel Leaves: ಕೀಲು ನೋವಿಗೆ ವೀಳ್ಯದೆಲೆ ನೀರಿನಲ್ಲಿದೆ ಪರಿಹಾರ

ಆಯುರ್ವೇದದಲ್ಲಿ ವೀಳ್ಯದೆಲೆಗೆ ವಿಶೇಷ ಸ್ಥಾನ ನೀಡಲಾಗಿದೆ. ಈ ಎಲೆಗಳಲ್ಲಿ ವಿಟಮಿನ್ ಸಿ, ಥಿಯಾಮಿನ್, ನಿಯಾಸಿನ್, ರೈಬೋಫ್ಲೇವಿನ್, ಕ್ಯಾರೋಟಿನ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ವೀಳ್ಯದೆಲೆಯನ್ನು ಜಗಿಯುವುದರಿಂದ ಆರೋಗ್ಯ ಪ್ರಯೋಜನಗಳಿರುವಂತೆಯೇ, ಅವುಗಳನ್ನು ನೀರಿನಲ್ಲಿ ಕುದಿಸಿ ತಣ್ಣಗಾದ ನಂತರ ಕುಡಿಯುವುದರಿಂದ, ಅನೇಕ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಈ ಮನೆ ಮದ್ದಿನಿಂದ ಯಾವ ರೀತಿಯ ಪ್ರಯೋಜನಗಳಿವೆ? ಯಾವ ಸಮಸ್ಯೆಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ. ಇಲ್ಲಿದೆ ಸಂಪೂರ್ಣ ಮಾಹಿತಿ.

Betel Leaves: ಕೀಲು ನೋವಿಗೆ ವೀಳ್ಯದೆಲೆ ನೀರಿನಲ್ಲಿದೆ ಪರಿಹಾರ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 04, 2025 | 2:03 PM

Share

ಊಟ ಆದ ಮೇಲೆ ಎಲೆ, ಅಡಿಕೆ ತಿನ್ನುವ ಸಂಪ್ರದಾಯ ಹಲವರ ಮನೆಗಳಲ್ಲಿದೆ. ಇದು ಕೇವಲ ಪದ್ದತಿಯಲ್ಲ ಬದಲಾಗಿ ಇದರಿಂದ ಅನೇಕ ರೀತಿಯ ಪ್ರಯೋಜನಗಳಿವೆ. ಅದಲ್ಲದೆ ವೀಳ್ಯದೆಲೆಯಲ್ಲಿ ಔಷಧೀಯ ಗುಣಗಳು ಹೇರಳವಾಗಿದ್ದು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಹಾಗಾಗಿಯೇ ಆಯುರ್ವೇದದಲ್ಲಿ ವೀಳ್ಯದೆಲೆಗೆ ವಿಶೇಷ ಸ್ಥಾನ ನೀಡಲಾಗಿದೆ. ಈ ಎಲೆಗಳಲ್ಲಿ ವಿಟಮಿನ್ ಸಿ, ಥಿಯಾಮಿನ್, ನಿಯಾಸಿನ್, ರೈಬೋಫ್ಲೇವಿನ್, ಕ್ಯಾರೋಟಿನ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ವೀಳ್ಯದೆಲೆಯನ್ನು ಜಗಿಯುವುದರಿಂದ ಆರೋಗ್ಯ ಪ್ರಯೋಜನಗಳಿರುವಂತೆಯೇ, ಅವುಗಳನ್ನು ನೀರಿನಲ್ಲಿ ಕುದಿಸಿ ತಣ್ಣಗಾದ ನಂತರ ಕುಡಿಯುವುದರಿಂದ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಈ ಮನೆ ಮದ್ದಿನಿಂದ ಯಾವ ರೀತಿಯ ಪ್ರಯೋಜನಗಳಿವೆ? ಯಾವ ಸಮಸ್ಯೆಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ. ಇಲ್ಲಿದೆ ಸಂಪೂರ್ಣ ಮಾಹಿತಿ.

ತೂಕ ಕಡಿಮೆ ಮಾಡಲು ಸಹಕಾರಿ: ವೀಳ್ಯದೆಲೆಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅವು ಸೋಂಕುಗಳಿಂದ ರಕ್ಷಣೆ ನೀಡುತ್ತವೆ. ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ವೀಳ್ಯದೆಲೆಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಅಜೀರ್ಣ ಮತ್ತು ಗ್ಯಾಸ್ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ವೀಳ್ಯದೆಲೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುವ ಮೂಲಕ ತೂಕ ನಷ್ಟಕ್ಕೂ ಕೂಡ ಸಹಾಯ ಮಾಡುತ್ತದೆ.

ಮಧುಮೇಹಿಗಳಿಗೆ ಒಳ್ಳೆಯದು: ವೀಳ್ಯದೆಲೆಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಹಾಗಾಗಿ ಇದು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ವೀಳ್ಯದೆಲೆಯು ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ಚರ್ಮವನ್ನು ಆರೋಗ್ಯಕರವಾಗಿ ಕಾಣುವಂತೆ ಮಾಡುತ್ತದೆ. ಹಾಗಾಗಿ ಈ ನೀರನ್ನು ಪ್ರತಿನಿತ್ಯ ಸೇವನೆ ಮಾಡಬಹುದು. ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ.

ಇದನ್ನೂ ಓದಿ
Image
ಟ್ಯಾಟೂ ಹಾಕಿಸುವ ಮೊದಲು ಈ ಅಂಶ ನೆನಪಿನಲ್ಲಿರಲಿ
Image
ನಿಮ್ಮ ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಗೆ ಇದೇ ಕಾರಣ
Image
ಜಗತ್ತಿನಲ್ಲೇ ಅತ್ಯಂತ ಅಪರೂಪದ ರಕ್ತದ ಗುಂಪು ಯಾವುದು ಗೊತ್ತಾ?
Image
ಹೃದಯಾಘಾತ, ಅರಿಥ್ಮಿಯಾ ಬರುವುದನ್ನು ತಡೆಯಲು ಈ ರೀತಿ ಮಾಡಿ

ಇದನ್ನೂ ಓದಿ: ವೈದ್ಯರು ನಿಯಮಿತವಾಗಿ ಆವಕಾಡೊ ಸೇವನೆ ಮಾಡಿ ಎನ್ನಲು ಕಾರಣವೇನು?

ಬಾಯಿಯ ಆರೋಗ್ಯಕ್ಕೆ ಒಳ್ಳೆಯದು: ವೀಳ್ಯದೆಲೆಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಕೀಲು ನೋವಿನಿಂದ ಪರಿಹಾರ ನೀಡುತ್ತದೆ. ಏಕೆಂದರೆ ಇದರ ಉರಿಯೂತ ನಿವಾರಕ ಗುಣಗಳು ನೋವಿಗೆ ಮುಕ್ತಿ ನೀಡುವಂತಹ ಶಕ್ತಿಯನ್ನು ಒಳಗೊಂಡಿದೆ. ವೀಳ್ಯದೆಲೆಯನ್ನು ಬಿಸಿ ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಗಂಟಲು ನೋವನ್ನು ನಿವಾರಿಸಬಹುದು. ವೀಳ್ಯದೆಲೆ ಬಾಯಿಯ ಕೆಟ್ಟ ವಾಸನೆಯಿಂದಲೂ ಮುಕ್ತಿ ನೀಡುತ್ತದೆ. ಮತ್ತು ಹಲ್ಲುಗಳು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ