AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bael Leaves Benefits: ಶಿವನ ಪೂಜೆಗೆ ಮಾತ್ರವಲ್ಲ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಈ ಎಲೆ

 ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಬಿಲ್ವಪತ್ರೆಗಳು ತುಂಬಾ ಪ್ರಯೋಜನಕಾರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದರ ಸೇವನೆ ಮಾಡುವುದರಿಂದ ಗ್ಯಾಸ್, ಆಮ್ಲೀಯತೆ ಮತ್ತು ಅಜೀರ್ಣ ಸಮಸ್ಯೆಯಿಂದ ಪರಿಹಾರ ಸಿಗುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ ಅಂಶ ಹಲ್ಲುಗಳು ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ಜ್ವರ, ಶೀತ, ಕೆಮ್ಮು ಮತ್ತು ಅಲರ್ಜಿಯಿಂದ ಬಳಲುತ್ತಿರುವವರಿಗೆ ಈ ದಳ ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಾದರೆ ಇದರಿಂದ ಸಿಗುವ ಉಪಯೋಗಗಳೇನು? ಯಾವ ರೀತಿ ಬಳಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

Bael Leaves Benefits: ಶಿವನ ಪೂಜೆಗೆ ಮಾತ್ರವಲ್ಲ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಈ ಎಲೆ
ಬಿಲ್ವಪತ್ರೆ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 30, 2024 | 1:53 PM

Share

ಶಿವನಿಗೆ ಅತ್ಯಂತ ಪ್ರೀಯವಾದ ವಸ್ತುಗಳಲ್ಲಿ ಬಿಲ್ವಪತ್ರೆ ಅಗ್ರ ಸ್ಥಾನದಲ್ಲಿರುತ್ತದೆ. ನೀರು ಮತ್ತು ಬಿಲ್ವಪತ್ರೆ ಇದ್ದರೆ ಸಾಕು ಭಗವಾನ್ ಶಂಕರನನ್ನು ಮೆಚ್ಚಿಸಬಹುದು. ಆ ಪರಮೇಶ್ವರ ಬಿಲ್ವದಳಕ್ಕೆ ಪರಮಾನಂದನಾಗುತ್ತಾನೆ ಎಂದು ಪುರಾಣಗಳಲ್ಲಿಯೂ ಹೇಳಲಾಗಿದೆ. ಈ ಪವಿತ್ರವಾದ ಬಿಲ್ವಪತ್ರೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಅಲ್ಲದೆ ಪ್ರತಿದಿನ ಈ ಒಂದು ಎಲೆ ತಿಂದರೆ ವೈದ್ಯರ ಬಳಿಗೆ ಹೋಗುವ ಅಗತ್ಯವಿರುವುದಿಲ್ಲಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಸಿಗುವ ಉಪಯೋಗಗಳೇನು? ಯಾವ ರೀತಿ ಬಳಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

ಆರೋಗ್ಯ ಪ್ರಯೋಜನಗಳೇನು?

  • ಈ ಎಲೆಗಳಲ್ಲಿ ವಿಟಮಿನ್ ಎ, ಬಿ 1, ಬಿ 2, ಸಿ, ಖನಿಜಗಳು, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣ ಸೇರಿದಂತೆ ಅನೇಕ ರೀತಿಯ ಪೋಷಕಾಂಶಗಳಿವೆ. ಇದು ದೇಹವನ್ನು ತಂಪಾಗಿಸುತ್ತದೆ. ಅಲ್ಲದೆ ಇದನ್ನು ಸೇವನೆ ಮಾಡುವುದರಿಂದ ಹೃದ್ರೋಗ ಮತ್ತು ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಗಳು ಕಡಿಮೆಯಾಗುತ್ತವೆ.
  • ಈ ಎಲೆಗಳಲ್ಲಿ ಹೆಚ್ಚಿನ ಪೊಟ್ಯಾಸಿಯಮ್ ಅಂಶವಿದ್ದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಇದು ಒಳ್ಳೆಯದು. ಈ ಮರದಿಂದ ಬರುವ ಗಾಳಿಯು ದೇಹಕ್ಕೆ ಸೋಂಕು ತಗುಲದಂತೆ ನೋಡಿಕೊಳ್ಳುವ ಮೂಲಕ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
  • ಬಿಲ್ವಪತ್ರೆಯಲ್ಲಿರುವ ಕಬ್ಬಿಣದ ಅಂಶವು ರಕ್ತದಲ್ಲಿ ಕೆಂಪು ರಕ್ತ ಕಣಗಳು ಮತ್ತು ಹಿಮೋಗ್ಲೋಬಿನ್ ಸಂಖ್ಯೆಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಹೆಚ್ಚಿನ ಕಾರ್ಬೋಹೈಡ್ರೇಟ್ ಅಂಶ ದೇಹಕ್ಕೆ ಸಾಕಷ್ಟು ಶಕ್ತಿಯನ್ನು ಒದಗಿಸುತ್ತದೆ.
  • ಬಿಲ್ವದಳದ ಸೇವನೆಯಿಂದ ಅಧಿಕ ಕೊಲೆಸ್ಟ್ರಾಲ್ ಸಹ ಕಡಿಮೆಯಾಗುತ್ತದೆ. ಓರಲ್ ಥ್ರಷ್ ನಿಂದ ಬಳಲುತ್ತಿರುವವರು ಇದನ್ನು ತಿನ್ನುವುದರಿಂದ ಪ್ರಯೋಜನ ಪಡೆಯಬಹುದು.
  • ಅತಿಸಾರ, ಬೊಕ್ಕೆಗಳು ಮತ್ತು ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಈ ಎಲೆ ತುಂಬಾ ಪ್ರಯೋಜನಕಾರಿಯಾಗಿದೆ.
  • ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆಗಳನ್ನು ಸೇವನೆ ಮಾಡುವುದರಿಂದ ಗ್ಯಾಸ್, ಆಮ್ಲೀಯತೆ ಮತ್ತು ಅಜೀರ್ಣದಿಂದ ಪರಿಹಾರ ಸಿಗುತ್ತದೆ.
  • ಈ ಎಲೆಗಳಲ್ಲಿರುವ ಕ್ಯಾಲ್ಸಿಯಂ ಅಂಶ ಹಲ್ಲುಗಳು ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ಜ್ವರ, ಶೀತ, ಕೆಮ್ಮು ಮತ್ತು ಅಲರ್ಜಿಯಿಂದ ಬಳಲುತ್ತಿರುವವರಿಗೆ ಈ ದಳ ತುಂಬಾ ಪ್ರಯೋಜನಕಾರಿಯಾಗಿದೆ.

ಇದನ್ನೂಓದಿ: ಗೊರಕೆ ಸಮಸ್ಯೆಗೆ ಈ ಮನೆಮದ್ದುಗಳನ್ನು ಬಳಸಿ ನಿವಾರಣೆ ಮಾಡಿಕೊಳ್ಳಿ

ಈ ರೀತಿ ಸೇವನೆ ಮಾಡಿ:

  • ಬಿಲ್ವಪತ್ರೆಯನ್ನು ಒಣಗಿಸಿ ಪುಡಿ ಮಾಡಿ ಅದರ ಜೊತೆಗೆ ಉಪ್ಪು ಮತ್ತು ಕರಿಮೆಣಸನ್ನು ಸೇರಿಸಿ ತಿನ್ನಿ. ಇದು ನಿಮಗೆ ಮಲಬದ್ಧತೆಯ ಸಮಸ್ಯೆಯಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ಅಲ್ಲದೇ ಈ ಮಿಶ್ರಣವನ್ನು ಮಜ್ಜಿಗೆಯ ಜೊತೆ ಕುಡಿಯುವುದು ಉತ್ತಮ.
  • ಬಿಲ್ವದ ಎಲೆಗಳನ್ನು ಒಣಗಿಸಿ 1 ಚಮಚ ಪುಡಿಯನ್ನು ಒಂದು ಲೋಟ ಮಜ್ಜಿಗೆಗೆ ಹಾಕಿ ಕುಡಿಯುವುದರಿಂದ ಹಸಿವಿನ ಸಮಸ್ಯೆಗೆ ಪರಿಹಾರ ನೀಡುತ್ತದೆ. ಸರಿಯಾಗಿ ಹಸಿವು ಆಗುವುದಿಲ್ಲ ಎಂದರೆ ಇದರ ಸೇವನೆ ಉತ್ತಮ ಆಯ್ಕೆಯಾಗಿದೆ.
  • ಬಿಲ್ವ ಎಲೆಗಳ ಕಷಾಯ ಜಠರದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಬಿಲ್ವಪತ್ರೆಯ ರಸವನ್ನು ನಿಯಮಿತವಾಗಿ ಕುಡಿಯುವುದರಿಂದ ಹೊಟ್ಟೆಯ ಅನೇಕ ಕಾಯಿಲೆಗಳು ದೂರವಾಗುತ್ತವೆ.
  • ಊಟದ ಜೊತೆ ತಂಬುಳಿ, ಚಟ್ನಿ ಮಾಡಿಯೂ ಸೇವನೆ ಮಾಡಬಹುದು. ಇದು ಕೂಡ ಆರೋಗ್ಯಕ್ಕೆ ಒಳ್ಳೆಯದು. ಇಲ್ಲವಾದಲ್ಲಿ ಪ್ರತಿದಿನ ಇದರ ಎಲೆಗಳನ್ನು ಜಗಿದು ತಿನ್ನುವುದು ಕೂಡ ಒಳ್ಳೆಯದಾಗಿದೆ.

ಸೂಚನೆ: ಇದರಿಂದ ಆರೋಗ್ಯಕ್ಕೆ ಯಾವುದೇ ರೀತಿಯ ಅಡ್ಡ ಪರಿಣಾಮಗಳಿಲ್ಲ. ಆದರೂ ಇವುಗಳನ್ನು ಅನುಸರಿಸುವ ಮೊದಲು ನಿಮ್ಮ ವೈದ್ಯರ ಸಲಹೆಯನ್ನು ಪಡೆಯುವುದು ಉತ್ತಮ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?