AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ: ಕರ್ನಾಟಕದಲ್ಲೂ ಶುರುವಾಯತ್ತು H5N1 ಟೆನ್ಷನ್

ನೆರೆ ರಾಜ್ಯಗಳಲ್ಲಿ H5N1 ಹಕ್ಕಿ ಜ್ವರದ ಭೀತಿ ಹೆಚ್ಚಿದ್ದು, ಕರ್ನಾಟಕದಲ್ಲೂ H5N1 ವೈರಸ್ ಆತಂಕ ಶುರುವಾಗಿದೆ. ಸೋಂಕಿತ ಪಕ್ಷಿಗಳಿಂದ ಮಾನವರಿಗೆ ಹರಡುವ ಈ ಜ್ವರದಿಂದ ಉಂಟಾಗುವ ಸಾವಿನ ಪ್ರಮಾಣ ಹೆಚ್ಚಿದ್ದು, ರೋಗ ಲಕ್ಷಣಗಳನ್ನು ನಿರ್ಲಕ್ಷಿಸದಂತೆ ವೈದ್ಯರು ಸೂಚಿಸಿದ್ದಾರೆ. ಅಷ್ಟಕ್ಕೂ ಈ ಸೋಂಕಿಗೆ ತುತ್ತಾದವರ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತೆ ಎಂಬ ಮಾಹಿತಿ ಇಲ್ಲಿದೆ.

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ: ಕರ್ನಾಟಕದಲ್ಲೂ ಶುರುವಾಯತ್ತು H5N1 ಟೆನ್ಷನ್
ಹಕ್ಕಿ ಜ್ವರದ ಭೀತಿImage Credit source: Google
ವಿನಯ್​ ಕಾಶಪ್ಪನವರ್​
| Edited By: |

Updated on: Feb 08, 2026 | 11:56 AM

Share

ಬೆಂಗಳೂರು, ಫೆಬ್ರವರಿ 08: ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ಹಕ್ಕಿ ಜ್ವರದ ಭೀತಿ ಹಿನ್ನೆಲೆ ರಾಜ್ಯದಲ್ಲೂ H5N1 ಟೆನ್ಷನ್ ಶುರುವಾಗಿದೆ. ಹಕ್ಕಿ ಜ್ವರಕ್ಕೆ ತಮಿಳನಾಡಿನಲ್ಲಿ 1,500ಕ್ಕೂ ಹೆಚ್ಚು ಕಾಗೆಗಳು ಮೃತಪಟ್ಟಿದ್ದರೆ, ಇತ್ತ ಮಹಾರಷ್ಟ್ರದಲ್ಲೂ ವೈರಸ್​​ ಸದ್ದು ಮಾಡತೊಡಗಿದೆ. ಹೀಗಾಗಿ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಪಶುಸಂಗೋಪಾನ ಇಲಾಖೆ ಸೂಚಿಸಿದೆ. ಹಕ್ಕಿ ಜ್ವರದ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಏನಿದು ಹಕ್ಕಿಜ್ವರ?

ಇದು H5N1 ವೈರಸ್‌ನಿಂದ ಪಕ್ಷಿಗಳಲ್ಲಿ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಸೋಂಕಿತ ಪಕ್ಷಿಗಳ ನೇರ ಸಂಪರ್ಕ, ಲಾಲಾರಸ ಅಥವಾ ಮಲದಿಂದ ಮನುಷ್ಯರಲ್ಲೂ ಹಕ್ಕಿ ಜ್ವರ ಕಾಣಿಸಿಕೊಳ್ಳಬಹುದಾಗಿದೆ. ಸೋಂಕಿತ ಪ್ರಾಣಿಗಳ ಮಲ, ಮೂಗು ಅಥವಾ ಬಾಯಿಯ ಸ್ರವಿಸುವಿಕೆಯಿಂದ ಮನುಷ್ಯರಿಗೆ ಈ ವೈಎಸ್​​ ಹರಡುವ ಸಾಧ್ಯತೆ ಹೆಚ್ಚು. ಮಾನವರಲ್ಲಿ ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಸೋಂಕಿತ ಹಕ್ಕಿಯೊಂದಿಗೆ ಸಂಪರ್ಕಕ್ಕೆ ಬಂದ 4 ರಿಂದ 6 ದಿನಗಳ ನಂತರ ಪ್ರಾರಂಭವಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಹಕ್ಕಿ ಜ್ವರ ಹೇಗೆ ಹರಡುತ್ತೆ? ಯಾವ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸಬೇಕು

ರೋಗ ಲಕ್ಷಣಗಳು ಏನು?

  • ಉಸಿರಾಟದಲ್ಲಿ ತೊಂದರೆ
  • ಜ್ವರ
  • ಕಣ್ಣು ಕೆಂಪಾಗುವುದು ಮತ್ತು ಕಿರಿಕಿರಿ
  • ಕೆಮ್ಮು
  • ಗಂಟಲು ನೋವು
  • ಸ್ನಾಯು ಅಥವಾ ದೇಹದ ನೋವು
  • ತಲೆನೋವು -ಆಯಾಸ
  • ನ್ಯೂಮೋನಿಯಾ

ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಕೆ.ಸಿ. ಜನರಲ್ ಆಸ್ಪತ್ರೆಯ ವೈದ್ಯ ಡಾ.ಸುರೇಶ್, ಪೌಲ್ಟ್ರಿ ಮತ್ತು ವೆಟರ್ನರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ಸೋಂಕು ತಗಲುವ ಸಾಧ್ಯತೆ ಹೆಚ್ಚಿರುತ್ತೆ. ಹಕ್ಕಿ ಜ್ವರಕ್ಕೆ ತುತ್ತಾದವರ ಸಾವಿನ ಪ್ರವಾಣ ಶೇ.50ರಷ್ಟಿದ್ದು, ಸೋಂಕು ಹೆಚ್ಚಾದರೆ ಸಾಂಕ್ರಾಮಿಕ ಆಗುವ ಸಾಧ್ಯತೆ ಇದೆ. ಹೀಗಾಗಿ ಸೆಮಿ ಬಾಯ್ಲ್ಡ್‌ ಫುಡ್ ಬಗ್ಗೆ ಜನರು ಎಚ್ಚರ ವಹಿಸಬೇಕು. ಅರೆಬೆಂದ ಮಾಂಸಾಹಾರದಿಂದ ಈ ವೈರಸ್​​ ಹರಡುವ ಸಾಧ್ಯತೆ ಹೆಚ್ಚಿದೆ. ಹ್ಯಾಂಡ್ ಹೈಜಿನ್ ಕಡೆಗೂ ಮುಖ್ಯವಾಗಿ ಗಮನ ವಹಿಸಬೇಕು ಎಂದು ತಿಳಿಸಿದ್ದಾರೆ. ರೋಗ ಲಕ್ಷಣಗಳು ಕಂಡು ಬಂದಲ್ಲಿ ನಿರ್ಲಕ್ಷಯ ವಹಿಸದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆಯೂ ಅವರು ಸಲಹೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ