Bird Flu: ಹಕ್ಕಿ ಜ್ವರ ಮನುಷ್ಯರಿಗೂ ತಗುಲಬಹುದು; ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಜನರು ಸತ್ತ ಅಥವಾ ಅನಾರೋಗ್ಯಕ್ಕೊಳಗಾದ ಕಾಡು ಪ್ರಾಣಿಗಳನ್ನು ಮುಟ್ಟಬಾರದು. ಅವುಗಳನ್ನು ಮನೆಗೆ ತರಬಾರದು. ಈ ರೀತಿಯ ಕಾಡುಪ್ರಾಣಿಗಳು ಕಂಡುಬಂದರೆ ಸ್ಥಳೀಯ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು WHO ಸೂಚಿಸಿದೆ.

Bird Flu: ಹಕ್ಕಿ ಜ್ವರ ಮನುಷ್ಯರಿಗೂ ತಗುಲಬಹುದು; ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
ಹಕ್ಕಿ ಜ್ವರ
Follow us
|

Updated on: Feb 10, 2023 | 4:08 PM

ನವದೆಹಲಿ: ಸಾಕು ಕೋಳಿಗಳು ಮತ್ತು ಬಾತುಕೋಳಿಗಳಲ್ಲಿ ಹೆಚ್ಚಾಗಿ ಕಂಡುಬರುವ ಹಕ್ಕಿ ಜ್ವರವು (Bird Flu) ಭಾರತದ ಅನೇಕ ರಾಜ್ಯಗಳನ್ನು ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಫಾರ್ಮ್​ಗಳಲ್ಲಿ ಲಕ್ಷಾಂತರ ಕೋಳಿಗಳನ್ನು ಈಗಾಗಲೇ ಸಾಮೂಹಿಕ ಹತ್ಯೆ ಮಾಡಲಾಗಿದೆ. ಆದರೆ, ಈ ಹಕ್ಕಿ ಜ್ವರ ಪಕ್ಷಿಗಳಿಗೆ ಮಾತ್ರವಲ್ಲದೆ ಮನುಷ್ಯರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ.

ಹಕ್ಕಿ ಜ್ವರ ಏವಿಯನ್ ಇನ್ಫ್ಲುಯೆನ್ಸ್​ ಟೈಪ್ ಎ ವೈರಸ್‌ಗಳ ಸೋಂಕಿನಿಂದ ಬರುವ ಒಂದು ಕಾಯಿಲೆಯಾಗಿದ್ದು, ಇದು ಸಾಮಾನ್ಯವಾಗಿ ದೇಶೀಯ ಕೋಳಿಗಳಿಗೆ, ಇತರ ಪಕ್ಷಿ ಮತ್ತು ಸಸ್ತನಿ ಜಾತಿಗಳಲ್ಲಿ ಸೋಂಕು ಉಂಟುಮಾಡುತ್ತದೆ. ಆದರೆ, ಇತ್ತೀಚಿನ WHO ವಿಶ್ಲೇಷಣೆಯು ಈ ರೋಗವು ಮಾನವರನ್ನು ಕೂಡ ಕಾಡುವ ಸಾಧ್ಯತೆಯಿದೆ ಎಂದು ಹೇಳಿದೆ.

ಇದನ್ನೂ ಓದಿ: Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ಅಂತಾರಾಷ್ಟ್ರೀಯ ಏಜೆನ್ಸಿಯ ಡೈರೆಕ್ಟರ್ ಜನರಲ್, ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಈ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದು, “H5N1 25 ವರ್ಷಗಳಿಂದ ಕಾಡು ಪಕ್ಷಿಗಳು ಮತ್ತು ಕೋಳಿಗಳಲ್ಲಿ ವ್ಯಾಪಕವಾಗಿ ಹರಡಿದೆ. ಆದರೆ ಇದು ಮನುಷ್ಯರನ್ನು ಕೂಡ ಕಾಡುವ ಸಾಧ್ಯತೆಯಿದೆ.” ಎಂದಿದ್ದಾರೆ.

ಮಿಂಕ್ಸ್, ನೀರುನಾಯಿಗಳು, ನರಿಗಳು ಮತ್ತು ಸಮುದ್ರ ಸಿಂಹಗಳು ಸೇರಿದಂತೆ ಅನೇಕ ಸಸ್ತನಿಗಳಲ್ಲಿ ಹಿಂದಿನ ಕೆಲವು ವಾರಗಳಲ್ಲಿ ಹಕ್ಕಿ ಜ್ವರದ ಸೋಂಕಿನ ಹಲವಾರು ಪ್ರಕರಣಗಳು ಕಂಡುಬಂದಿವೆ. ಹೀಗಾಗಿ, ಮನುಷ್ಯರು ಕೂಡ ಎಚ್ಚರಿಕೆಯಿಂದ ಇರಬೇಕು. ಜನರು ಸತ್ತ ಅಥವಾ ಅನಾರೋಗ್ಯಕ್ಕೊಳಗಾದ ಕಾಡು ಪ್ರಾಣಿಗಳನ್ನು ಮುಟ್ಟಬಾರದು. ಅವುಗಳನ್ನು ಮನೆಗೆ ತರಬಾರದು. ಈ ರೀತಿಯ ಕಾಡುಪ್ರಾಣಿಗಳು ಕಂಡುಬಂದರೆ ಸ್ಥಳೀಯ ಅಧಿಕಾರಿಗಳಿಗೆ ವರದಿ ನೀಡಬೇಕು. WHO ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಮಾನವರಲ್ಲಿ H5N1 ಸೋಂಕಿನ ಪ್ರಕರಣಗಳನ್ನು ಅಧ್ಯಯನ ಮಾಡಲು ರಾಷ್ಟ್ರೀಯ ಅಧಿಕಾರಿಗಳು ಮತ್ತು ಪಾಲುದಾರರೊಂದಿಗೆ ಕೆಲಸ ಮಾಡುತ್ತಿದೆ ಎಂದಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ