AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bird Flu : ಹಕ್ಕಿ ಜ್ವರ ಸೋಂಕಿತ ಹಸುವಿನ ಹಸಿ ಹಾಲು ಕುಡಿದ್ರೆ ಆರೋಗ್ಯಕ್ಕೆ ಅಪಾಯ ಖಂಡಿತ, ಅಧ್ಯಯನದಿಂದ ಬಹಿರಂಗ

ಜಗತ್ತಿನಾದಂತ್ಯ ಹಕ್ಕಿ ಜ್ವರವು ಆತಂಕವನ್ನು ಸೃಷ್ಟಿಸಿದೆ. ಆದರೆ ಇದೀಗ ಹಕ್ಕಿ ಜ್ವರದ ಅಧ್ಯಯನದ ವರದಿಯಲ್ಲಿ ಹಕ್ಕಿ ಜ್ವರ ಸೋಂಕಿತ ಹಸುವಿನ ಹಸಿ ಹಾಲು ಸೇವನೆಯಿಂದ ಆರೋಗ್ಯಕ್ಕೆ ಅಪಾಯಕಾರಿ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.

Bird Flu : ಹಕ್ಕಿ ಜ್ವರ ಸೋಂಕಿತ ಹಸುವಿನ ಹಸಿ ಹಾಲು ಕುಡಿದ್ರೆ ಆರೋಗ್ಯಕ್ಕೆ ಅಪಾಯ ಖಂಡಿತ, ಅಧ್ಯಯನದಿಂದ ಬಹಿರಂಗ
ಸಾಯಿನಂದಾ
| Edited By: |

Updated on: May 25, 2024 | 5:39 PM

Share

ಇತ್ತೀಚೆಗಿನ ದಿನಗಳಲ್ಲಿ ಹಕ್ಕಿ ಜ್ವರವು ಎಲ್ಲೆಡೆ ಹರಡುತ್ತಿದೆ. ಈ ರೋಗದ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ. ಈ ವೈರಸ್ ಪ್ರಾಥಮಿಕವಾಗಿ ಪಕ್ಷಿಗಳ ಮೇಲೆ ಮಾತ್ರವಲ್ಲದೇ ಮನುಷ್ಯರಿಗೆ ಕೂಡ ಹರಡಬಹುದು. ಆದರೆ ಇದೀಗ ಸಂಶೋಧನೆಯಿಂದ ಮತ್ತೊಂದು ವಿಚಾರ ಬೆಳಕಿಗೆ ಬಂದಿದ್ದು, ಹಕ್ಕಿ ಜ್ವರ ಸೋಂಕಿಗೆ ಒಳಗಾದ ಹಸುವಿನ ಹಸಿ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಅಪಾಯ ಹೆಚ್ಚು. ಈ ಹಾಲನ್ನು ಕುಡಿದರೆ ಶ್ವಾಸಕೋಶದಲ್ಲಿ ವೈರಸ್ ನ ಪರಿಣಾಮದ ಮಟ್ಟವು ತೀವ್ರವಾಗಿರುತ್ತದೆ ಎನ್ನಲಾಗಿದೆ.

ಹೊಸ ಅಧ್ಯಯನದಲ್ಲಿ, ವಿಸ್ಕಾನ್ಸಿನ್-ಮ್ಯಾಡಿಸನ್ ವಿಶ್ವವಿದ್ಯಾಲಯ ಮತ್ತು ಟೆಕ್ಸಾಸ್ ಎ & ಎಂ ಸಂಶೋಧಕರು ಸೋಂಕಿತ ಪ್ರಾಣಿಗಳ ಹಸಿ ಹಾಲಿನ ಹನಿಗಳನ್ನು ಐದು ಇಲಿಗಳಿಗೆ ನೀಡಲಾಯಿತು. ಈ ಹಾಲನ್ನು ಕುಡಿದ ಇಲಿಗಳಲ್ಲಿ ಆಲಸ್ಯ ಮತ್ತು ರೋಗದ ಲಕ್ಷಣಗಳು ಕಂಡು ಬಂದವು. ಈ ಜಾನುವಾರುಗಳನ್ನು ಅವುಗಳ ಅಂಗಗಳನ್ನು ಅಧ್ಯಯನ ಮಾಡಲು ಯೂಥನೈಸ್ ಮಾಡಲಾಯಿತು. ಈ ಅಧ್ಯಯನದ ಬಳಿಕ ಹಸುವಿನ ಹಸಿ ಹಾಲನ್ನು ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕ ಎನ್ನುವುದು ದೃಢವಾಗಿದೆ.

ಇದನ್ನೂ ಓದಿ: ಮಲೆನಾಡಿಗರ ಕೆಂಪು ಇರುವೆ ಚಟ್ನಿ ಸರ್ವ ರೋಗಕ್ಕೂ ರಾಮಬಾಣ, ಇದರಲ್ಲಿದೆ ಪ್ರೊಟೀನ್

ಕಳೆದ ಕೆಲವು ವರ್ಷಗಳಿಂದ ಎಚ್ 5 ಎನ್ 1 ಗೆ ಕಾರಣವಾಗುವ ಏವಿಯನ್ ಇನ್ಫ್ಲುಯೆನ್ಸ ವೈರಸ್ 50 ಕ್ಕೂ ಹೆಚ್ಚು ವಿವಿಧ ರೀತಿಯ ಪ್ರಾಣಿಗಳಿಗೆ ಸೋಂಕು ತಗುಲಿಸಿದೆ. ಈಗಾಗಲೇ ಈ ಸೋಂಕಿತ ಜಾನುವಾರುಗಳು ಯುಎಸ್ ನ ಡೈರಿಯಲ್ಲಿದೆ. ಹಕ್ಕಿ ಜ್ವರದಿಂದಾಗಿ ದೇಶಾದ್ಯಂತ ಇಲ್ಲಿಯವರೆಗೆ 52 ಜಾನುವಾರುಗಳ ಹಿಂಡುಗಳು ಸೋಂಕಿಗೆ ಒಳಗಾಗಿದ್ದು, ಈ ಸೋಂಕಿತ ಹಾಲನ್ನು ಕುಡಿದು ಇಬ್ಬರು ಕೃಷಿ ಕಾರ್ಮಿಕರಲ್ಲಿ ಹಕ್ಕಿ ಜ್ವರವು ಕಾಣಿಸಿಕೊಂಡಿದೆ. ಈ ವೈರಸ್ ಸೋಂಕಿನಿಂದಾಗಿ, ರೋಗಿಯ ಕಣ್ಣುಗಳು ಗುಲಾಬಿ ಬಣ್ಣಕ್ಕೆ ತಿರುಗುತ್ತವೆ ಹಾಗೂ ಇನ್ನಿತ್ತರ ಕೆಲವು ರೋಗಲಕ್ಷಣಗಳು ಸಹ ಬೆಳೆಯುತ್ತವೆ ಎನ್ನಲಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್