AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Pepper: ಕಾಳು ಮೆಣಸಿನ ಬಗ್ಗೆ ನಿಮಗೆ ಗೊತ್ತಿರದ ಅಚ್ಚರಿಯ ಸಂಗತಿಗಳಿವು

ಕಾಳು ಮೆಣಸು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಕ್ಯಾನ್ಸರ್ ತಡೆಗಟ್ಟುತ್ತದೆ. ನಿಮ್ಮ ಕರುಳು ಮತ್ತು ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ. ಇದು ಹೃದಯ ಬಡಿತ ಮತ್ತು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕೆಂಪು ರಕ್ತ ಕಣಗಳನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ಮಲಬದ್ಧತೆಯನ್ನು ತಡೆಯುತ್ತದೆ.

Black Pepper: ಕಾಳು ಮೆಣಸಿನ ಬಗ್ಗೆ ನಿಮಗೆ ಗೊತ್ತಿರದ ಅಚ್ಚರಿಯ ಸಂಗತಿಗಳಿವು
ಕಾಳು ಮೆಣಸುImage Credit source: iStock
ಸುಷ್ಮಾ ಚಕ್ರೆ
|

Updated on: Sep 16, 2023 | 2:43 PM

Share

ಮಸಾಲೆಗಳ ರಾಜ ಎಂದೇ ಕರೆಯಲ್ಪಡುವ ಕರಿ ಮೆಣಸು ಅಥವಾ ಕಾಳು ಮೆಣಸು ಅನೇಕ ಆರೋಗ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ. ಕಾಳುಮೆಣಸನ್ನು ಸೇವಿಸುವುದರಿಂದ ತೂಕವನ್ನು ಇಳಿಸಿಕೊಳ್ಳಬಹುದು. ಇದು ಜೀರ್ಣಕ್ರಿಯೆಗೆ ಸಹಕಾರಿ. ಇದು ದೇಹದ ವಿಷವನ್ನು ಹೊರಹಾಕುವ ಮೂಲಕ ಕ್ಯಾನ್ಸರ್ ಅನ್ನು ತಡೆಯುತ್ತದೆ ಎಂದು ಹೇಳಲಾಗುತ್ತದೆ. ಕಾಳು ಮೆಣಸಿನ ಬಗ್ಗೆ 10 ಪ್ರಮುಖ ಸಂಗತಿಗಳು ಇಲ್ಲಿವೆ.

1. ಕಾಳು ಮೆಣಸನ್ನು ಅರಿಶಿನದೊಂದಿಗೆ ಬೆರೆಸಿ ಸೇವಿಸಿದರೆ ಕ್ಯಾನ್ಸರ್ ಬರುವುದಿಲ್ಲ ಎಂದು ಹೇಳಲಾಗುತ್ತದೆ. ಅರಿಶಿನ ಮತ್ತು ಕರಿಮೆಣಸನ್ನು ಹಾಲಿನಲ್ಲಿ ಬೆರೆಸಿ ಕೂಡ ಸೇವಿಸಬಹುದು. ಈ ಪಾನೀಯವನ್ನು ಸಾಮಾನ್ಯವಾಗಿ ತೀವ್ರವಾದ ಶೀತದಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಇದು ಆಂಟಿಆಕ್ಸಿಡೆಂಟ್‌ಗಳು, ವಿಟಮಿನ್ ಎ ಮತ್ತು ಕ್ಯಾರೊಟಿನಾಯ್ಡ್‌ಗಳನ್ನು ಒಳಗೊಂಡಿರುತ್ತದೆ. ಇದು ಕ್ಯಾನ್ಸರ್ ಮತ್ತು ಇತರ ಮಾರಣಾಂತಿಕ ಕಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.

2. ಕಾಳು ಮೆಣಸು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದನ್ನು ಹಸಿಯಾಗಿ ಸೇವಿಸಿದಾಗ ಹೈಡ್ರೋಕ್ಲೋರಿಕ್ ಆಮ್ಲವು ಹೊಟ್ಟೆಯಿಂದ ಬಿಡುಗಡೆಯಾಗುತ್ತದೆ. ಹೈಡ್ರೋಕ್ಲೋರಿಕ್ ಆಮ್ಲವು ನಿಮ್ಮ ಕರುಳನ್ನು ಸ್ವಚ್ಛಗೊಳಿಸಲು ಮತ್ತು ಇತರ ಜಠರಗರುಳಿನ ಕಾಯಿಲೆಗಳಿಂದ ನಿಮ್ಮನ್ನು ತಡೆಯಲು ಸಹಾಯ ಮಾಡುತ್ತದೆ. ಆದ್ದರಿಂದ ನಿಮ್ಮ ಎಲ್ಲಾ ಆಹಾರಗಳಿಗೆ ಒಂದು ಚಿಟಿಕೆ ಕಾಳು ಮೆಣಸನ್ನು ಸೇರಿಸಲು ಮರೆಯಬೇಡಿ.

ಇದನ್ನೂ ಓದಿ: Yoghurt Health Benefits: ದಿನವೂ ಮೊಸರು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ? ಕೆಟ್ಟದ್ದಾ?

3. ನೀವು ವಾರದಲ್ಲಿ ಮೂರು ಬಾರಿಗಿಂತ ಕಡಿಮೆ ಬಾರಿ ಮಲ ವಿಸರ್ಜನೆ ಮಾಡುವವರಾಗಿದ್ದರೆ ನೀವು ಮಲಬದ್ಧತೆಯಿಂದ ಬಳಲುತ್ತಿರಬಹುದು. ಪ್ರತಿದಿನ ನಿಮ್ಮ ಆಹಾರದಲ್ಲಿ ಸ್ವಲ್ಪ ಕಾಳುಮೆಣಸನ್ನು ಸೇರಿಸುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಬಹುದು. ಕರಿಮೆಣಸನ್ನು ಪ್ರತಿದಿನ ಸೇವಿಸಿದರೆ ಕರುಳಿನ ಕ್ಯಾನ್ಸರ್, ಮಲಬದ್ಧತೆ, ಅತಿಸಾರ ಮತ್ತು ಇತರ ರೀತಿಯ ಬ್ಯಾಕ್ಟೀರಿಯಾದ ಕಾಯಿಲೆಗಳನ್ನು ತಡೆಯುತ್ತದೆ.

4. ಕಾಳು ಮೆಣಸು ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಕರಿಮೆಣಸನ್ನು ಚಿಕ್ಕ ವಯಸ್ಸಿನಿಂದಲೇ ಸೇವಿಸಿದರೆ ಸುಕ್ಕುಗಳು ಮತ್ತು ಚರ್ಮದ ಸಮಸ್ಯೆಗಳು ದೂರವಾಗುತ್ತದೆ. ಇದು ಅಕಾಲಿಕ ವಯಸ್ಸಾಗುವಿಕೆ ಮತ್ತು ಕಪ್ಪು ಕಲೆಗಳನ್ನು ಸಹ ತಡೆಯುತ್ತದೆ.

5. ತಲೆಹೊಟ್ಟು ನಿವಾರಣೆಗೆ ಕರಿಮೆಣಸು ಒಳ್ಳೆಯದು ಎಂದು ಹೇಳಲಾಗುತ್ತದೆ. ಸ್ವಲ್ಪ ಕರಿಮೆಣಸನ್ನು ಸ್ವಲ್ಪ ಮೊಸರಿನೊಂದಿಗೆ ಸೇರಿಸಿ ಮತ್ತು ಅದನ್ನು ನಿಮ್ಮ ನೆತ್ತಿಗೆ ಹಚ್ಚಿಕೊಂಡು 30 ನಿಮಿಷಗಳ ಕಾಲ ಒಣಗಲು ಬಿಡಿ. ನಿಮ್ಮ ಕೂದಲಿಗೆ ಕರಿಮೆಣಸನ್ನು ಹಚ್ಚಿದ ನಂತರ ಮುಂದಿನ 24 ಗಂಟೆಗಳ ಕಾಲ ಶಾಂಪೂ ಬಳಸಬೇಡಿ. ಹಾಗೆ ಮಾಡಿದರೆ ಇದು ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು. ಜಾಸ್ತಿ ಕಾಳು ಮೆಣಸನ್ನು ಹಚ್ಚಿದರೆ ನೆತ್ತಿ ಸುಡಬಹುದು. ಹಾಗಾಗಿ, ಬಳಸುವಾಗ ಎಚ್ಚರವಿರಲಿ.

black pepper

6. ಕಾಳು ಮೆಣಸು ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಇದನ್ನು ಗ್ರೀನ್ ಟೀಗೆ ಕೂಡ ಸೇರಿಸಬಹುದು. ಈ ಮಸಾಲೆಯು ಹೆಚ್ಚಿನ ಕೊಬ್ಬನ್ನು ತೆಗೆಯಲು ಸಹಾಯ ಮಾಡುವ ಫೈಟೊನ್ಯೂಟ್ರಿಯೆಂಟ್‌ಗಳನ್ನು ಹೊಂದಿದೆ. ಇದು ನಿಮ್ಮ ದೇಹದ ಚಯಾಪಚಯವನ್ನು ಸಹ ಸುಧಾರಿಸುತ್ತದೆ. ಗ್ರೀನ್ ಟೀ ಜೊತೆಗೆ ಒಂದು ಚಿಟಿಕೆ ಕರಿಮೆಣಸು ಹಾಕಿ ಕುಡಿದರೆ ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

7. ಖಿನ್ನತೆಯು ಪ್ರಪಂಚದಾದ್ಯಂತ ಹೆಚ್ಚಿನ ಜನರು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಹಸಿ ಕರಿಮೆಣಸು ಜಗಿಯುವುದರಿಂದ ಮೆದುಳಿಗೆ ಚಿತ್ತ ಪ್ರಚೋದಿಸುವ ರಾಸಾಯನಿಕಗಳನ್ನು ಬಿಡುಗಡೆ ಮಾಡುತ್ತದೆ. ಇದು ನಿಮ್ಮ ಮನಸ್ಸನ್ನು ಶಾಂತವಾಗಿ ಮತ್ತು ಹಿತವಾಗಿಡುತ್ತದೆ. ಇದರಿಂದ ಖಿನ್ನತೆಯಿಂದ ದೂರವಾಗಬಹುದು.

ಇದನ್ನೂ ಓದಿ: Blueberries Benefits: ಸೂಪರ್ ಫ್ರೂಟ್ ಬ್ಲೂಬೆರಿ ಹಣ್ಣುಗಳ ಬಗ್ಗೆ ನಿಮಗೆಷ್ಟು ಗೊತ್ತು?

8. ನೀವು ಕೀಲು ನೋವು, ಸಂಧಿವಾತದಿಂದ ಬಳಲುತ್ತಿದ್ದರೆ ನೀವು ಚಿಂತಿಸಬೇಕಾಗಿಲ್ಲ. ಕಾಳು ಮೆಣಸು ಈ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುವ ವೈದ್ಯಕೀಯ ಗುಣಗಳನ್ನು ಹೊಂದಿದೆ.

9. ನಿಮ್ಮ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುವಂತಹ ನಿಮ್ಮ ಮೆದುಳಿನ ಆರೋಗ್ಯವನ್ನು ಸುಧಾರಿಸಲು ಕಾಳು ಮೆಣಸು ಸಹಕಾರಿ. ಕ್ಯಾನ್ಸರ್, ಮಧುಮೇಹದಂತಹ ಸಮಸ್ಯೆಗಳಿಗೂ ಇದು ಉಪಯುಕ್ತವಾಗಿದೆ. ನಿಮ್ಮ ದೇಹದ ವಿಷದ ಅಂಶವನ್ನು ಹೊರಹಾಕುತ್ತದೆ. ಕ್ಯಾನ್ಸರ್ ರೋಗವನ್ನು ತಡೆಗಟ್ಟುತ್ತದೆ. ನಿಮ್ಮ ಕರುಳು ಮತ್ತು ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ.

10. ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟಗಳಿಂದ ಹೃದಯಾಘಾತ ಉಂಟಾಗಬಹುದು. ಕಾಳು ಮೆಣಸು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಇದು ಪೊಟ್ಯಾಸಿಯಮ್ ಅನ್ನು ಒಳಗೊಂಡಿರುತ್ತದೆ, ಇದು ಹೃದಯ ಬಡಿತ ಮತ್ತು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕಾಳು ಮೆಣಸು ಕೆಂಪು ರಕ್ತ ಕಣಗಳನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​