AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕ ರಕ್ತದೊತ್ತಡವನ್ನು ಕಂಟ್ರೋಲ್ ಮಾಡಲು ಕಾಳು ಮೆಣಸು ಸೇವಿಸಿ

ರಕ್ತದೊತ್ತಡದಲ್ಲಿ ಹಠಾತ್ ಹೆಚ್ಚಳವನ್ನು ಕರಿಮೆಣಸಿನ ಸಹಾಯದಿಂದ ನಿಯಂತ್ರಿಸಬಹುದು. ಕಾಳು ಮೆಣಸನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಇನ್ನೂ ಸಾಕಷ್ಟು ಪ್ರಯೋಜನಗಳಿವೆ. ಕಾಳು ಮೆಣಸನ್ನು ನೀವು ಇಡಿಯಾಗಿ ಅಗಿಯಬಹುದು ಅಥವಾ ನಿಮ್ಮ ಸಲಾಡ್‌, ಸೂಪ್‌ ಮತ್ತು ಊಟದ ಜೊತೆ ಸೇರಿಸಿಕೊಳ್ಳಬಹುದು.

ಅಧಿಕ ರಕ್ತದೊತ್ತಡವನ್ನು ಕಂಟ್ರೋಲ್ ಮಾಡಲು ಕಾಳು ಮೆಣಸು ಸೇವಿಸಿ
ಕಾಳು ಮೆಣಸು
ಸುಷ್ಮಾ ಚಕ್ರೆ
|

Updated on: Jan 16, 2024 | 7:35 PM

Share

ಅಧಿಕ ರಕ್ತದೊತ್ತಡವನ್ನು ತಕ್ಷಣ ನಿಯಂತ್ರಿಸಲು ಕಪ್ಪು ಕರಿ ಮೆಣಸು ಬಳಸಿ. ಅಧಿಕ ರಕ್ತದೊತ್ತಡವು ಹೃದಯಾಘಾತ ಮತ್ತು ಪಾರ್ಶ್ವವಾಯುಗಳಂತಹ ಗಂಭೀರ ತೊಂದರೆಗಳಿಗೆ ಕಾರಣವಾಗಬಹುದು. ಅಧಿಕ ರಕ್ತದೊತ್ತಡವು ಆರೋಗ್ಯಕ್ಕೆ ಬಹಳ ಹಾನಿ ಉಂಟುಮಾಡುತ್ತದೆ. ರಕ್ತದೊತ್ತಡದ ವ್ಯಾಪ್ತಿಯು 140/90ಕ್ಕಿಂತ ಹೆಚ್ಚಿದ್ದರೆ ನೀವು ವೈದ್ಯರನ್ನು ಭೇಟಿಯಾಗಬೇಕು.

ರಕ್ತದೊತ್ತಡದಲ್ಲಿ ಹಠಾತ್ ಹೆಚ್ಚಳವನ್ನು ಕರಿಮೆಣಸಿನ ಸಹಾಯದಿಂದ ನಿಯಂತ್ರಿಸಬಹುದು. ಕಾಳು ಮೆಣಸನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಇನ್ನೂ ಸಾಕಷ್ಟು ಪ್ರಯೋಜನಗಳಿವೆ.

ಕಪ್ಪು ಕಾಳು ಮೆಣಸನ್ನು ನೀವು ಇಡಿಯಾಗಿ ಅಗಿಯಬಹುದು ಅಥವಾ ನಿಮ್ಮ ಸಲಾಡ್‌, ಸೂಪ್‌ ಮತ್ತು ಊಟದ ಜೊತೆ ಸೇರಿಸಿಕೊಳ್ಳಬಹುದು. ಅಥವಾ ಒಂದು ಲೋಟ ನೀರಿನಲ್ಲಿ ಅರ್ಧ ಚಮಚ ಕರಿಮೆಣಸಿನ ಪುಡಿಯನ್ನು ಹಾಕಿಕೊಂಡು ಕುಡಿಯುವುದರಿಂದಲೂ ನಿಮ್ಮ ರಕ್ತದೊತ್ತಡವನ್ನು ನಿಯಂತ್ರಿಸಬಹುದು.

ಇದನ್ನೂ ಓದಿ: ರಕ್ತದೊತ್ತಡವನ್ನು ಕಡಿಮೆ ಮಾಡಲು ಈ ಮನೆಮದ್ದುಗಳನ್ನು ಬಳಸಿ

ರಕ್ತದೊತ್ತಡವನ್ನು ಕಡಿಮೆ ಮಾಡಲು ಕರಿಮೆಣಸು ಹೇಗೆ ಸಹಾಯ ಮಾಡುತ್ತದೆ?:

ಕರಿಮೆಣಸು ಅಥವಾ ಕಪ್ಪು ಕಾಳು ಮೆಣಸು ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಕ್ಯಾರೋಟಿನ್ ಮತ್ತು ಥೈಮ್‌ನಂತಹ ಪೌಷ್ಟಿಕಾಂಶದ ಅಂಶಗಳನ್ನು ಪೈಪೆರಿನ್ ಜೊತೆಗೆ ಒಳಗೊಂಡಿದೆ. ಇದು ಆಹಾರದ ಜೀರ್ಣಕ್ರಿಯೆಗೆ ಸಹಾಯ ಮಾಡುವ ಸಂಯುಕ್ತವಾಗಿದೆ. ಹೃದಯದ ಕೆಲಸದಲ್ಲಿ ಪೊಟ್ಯಾಸಿಯಮ್ ಅನ್ನು ಹೆಚ್ಚಿಸುವ ಮೂಲಕ ಪೈಪರಿನ್ ಸೋಡಿಯಂ ಇರುವಿಕೆಯನ್ನು ನಿರಾಕರಿಸುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ ಪ್ರಪಂಚದಾದ್ಯಂತ ಶೇ. 46ರಷ್ಟು ವಯಸ್ಕರಲ್ಲಿ ಅಧಿಕ ರಕ್ತದೊತ್ತಡವಿದೆ. ಆದರೆ ಅವರಿಗೆ ಅದರ ಬಗ್ಗೆ ತಿಳಿದೇ ಇಲ್ಲ. ನಿಮ್ಮ ರಕ್ತದೊತ್ತಡವು 180/120 mmHgಗಿಂತ ಹೆಚ್ಚಾದಾಗ ನೀವು ಈ ಕೆಳಗಿನ ರೋಗಲಕ್ಷಣಗಳನ್ನು ಅನುಭವಿಸಬಹುದು.

– ತಲೆನೋವು

– ಹೃದಯ ಬಡಿತ ಹೆಚ್ಚುವುದು

– ಮೂಗಿನಲ್ಲಿ ರಕ್ತಸ್ರಾವ

ಇದನ್ನೂ ಓದಿ: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ 5 ಯೋಗಾಸನಗಳನ್ನು ಮಾಡಿ

ಅಧಿಕ ರಕ್ತದೊತ್ತಡಕ್ಕೆ ಕಾರಣವೇನು?:

ಅಧಿಕ ರಕ್ತದೊತ್ತಡಕ್ಕೆ ಉಪ್ಪು ಅಧಿಕವಾಗಿರುವ ಆಹಾರ ಸೇರಿದಂತೆ ಅನಾರೋಗ್ಯಕರ ಆಹಾರ ಕ್ರಮಗಳು, ದೈಹಿಕ ಚಟುವಟಿಕೆಯ ಕೊರತೆ, ಮದ್ಯಪಾನ, ಧೂಮಪಾನ, ನಿದ್ರಾಹೀನತೆ, ಮೂತ್ರಪಿಂಡದ ಸಮಸ್ಯೆ, ಮಾದಕ ವ್ಯಸನ ಹೀಗೆ ಹಲವು ಕಾರಣಗಳಿವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!