AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಸಡು ಹಾಗೂ ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುತ್ತಿದೆಯೇ? ಲಕ್ಷಣಗಳು ಯಾವ ಆರೋಗ್ಯ ಸಮಸ್ಯೆಯನ್ನು ಸೂಚಿಸುತ್ತದೆ?

ಒಸಡು ಹಾಗೂ ಮೂತ್ರದಲ್ಲಿ ರಕ್ತ ಬರುತ್ತಿದೆಯೇ? ಹಾಗಾದರೆ ನಿಮಗೆ ಪ್ಲೇಟ್​ಲೆಟ್​ಗಳ ಕೊರತೆ ಇರಬಹುದು. ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತವಾಗಿದೆ.

ಒಸಡು ಹಾಗೂ ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುತ್ತಿದೆಯೇ? ಲಕ್ಷಣಗಳು ಯಾವ ಆರೋಗ್ಯ ಸಮಸ್ಯೆಯನ್ನು ಸೂಚಿಸುತ್ತದೆ?
Platelets
TV9 Web
| Updated By: ನಯನಾ ರಾಜೀವ್|

Updated on: Nov 08, 2022 | 7:00 AM

Share

ಒಸಡು ಹಾಗೂ ಮೂತ್ರದಲ್ಲಿ ರಕ್ತ ಬರುತ್ತಿದೆಯೇ? ಹಾಗಾದರೆ ನಿಮಗೆ ಪ್ಲೇಟ್​ಲೆಟ್​ಗಳ ಕೊರತೆ ಇರಬಹುದು. ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತವಾಗಿದೆ. ರಾಜ್ಯದಲ್ಲಿ ನೂರಾರು ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾನ್ಪುರ, ಲಕ್ನೋ, ಬಾರಾಬಂಕಿ, ಆಗ್ರಾದಲ್ಲಿ ಡೆಂಗ್ಯೂ ಮಾರಕವಾಗಿದೆ.

ಸಿಎಂ ಯೋಗಿ ಆದಿತ್ಯನಾಥ್ ಅವರು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು. ಅಲ್ಲಿ ಅವರು ಆಸ್ಪತ್ರೆಗಳಲ್ಲಿ ಹಾಸಿಗೆಗಳು ಮತ್ತು ಔಷಧಗಳು ಸೇರಿದಂತೆ ಇತರ ಅಗತ್ಯ ಸೌಲಭ್ಯಗಳನ್ನು ಪೂರ್ಣಗೊಳಿಸಲು ಸೂಚನೆಗಳನ್ನು ನೀಡಿದ್ದಾರೆ.

ಏತನ್ಮಧ್ಯೆ, ಲಕ್ನೋ ಸಿವಿಲ್ ಆಸ್ಪತ್ರೆಯ ನಿರ್ದೇಶಕ ಡಾ.ಆನಂದ್ ಓಜಾ ಆಜ್ ತಕ್‌ಗೆ ಮಾತನಾಡಿ, ಡೆಂಗ್ಯೂನ ಪ್ರತಿಯೊಂದು ಪ್ರಕರಣದಲ್ಲೂ ಪ್ಲೇಟ್‌ಲೆಟ್‌ಗಳ ಅಗತ್ಯವಿಲ್ಲ. ಡೆಂಗ್ಯೂ ರೋಗಲಕ್ಷಣಗಳ ಪ್ರಕಾರ ಪ್ಲೇಟ್ಲೆಟ್ಗಳ ಕೊರತೆಯನ್ನು ಕಂಡುಹಿಡಿಯಬಹುದು.

ಒಸಡುಗಳು ಮತ್ತು ಮೂತ್ರದಲ್ಲಿ ರಕ್ತಸ್ರಾವ, ಕಪ್ಪು ಮಲ, ಇವೆಲ್ಲವೂ ಪ್ಲೇಟ್‌ಲೆಟ್‌ಗಳ ಕೊರತೆಯ ಲಕ್ಷಣಗಳಾಗಿವೆ ಎಂದು ಅವರು ಹೇಳಿದರು. ಸಲಹೆ ನೀಡದೆ ಪ್ಲೇಟ್ಲೆಟ್ ನೀಡುವುದಿಲ್ಲ ಎಂದರು. ದೇಹದಲ್ಲಿ ಪ್ಲೇಟ್‌ಲೆಟ್‌ಗಳು ಸರಿಯಾದ ಮಟ್ಟದಲ್ಲಿವೆಯೇ ಅಥವಾ ಇಲ್ಲವೇ ಎಂಬುದನ್ನು ಸಾಮಾನ್ಯ ಜನರು ಅರ್ಥಮಾಡಿಕೊಳ್ಳಲು ಯಾವುದೇ ಮಾನದಂಡವಿಲ್ಲ. ಪ್ಲೇಟ್​ಗಳ 3 ರಿಂದ 10 ದಿನಗಳವರೆಗೆ ಇರುತ್ತದೆ.

ಪ್ಲೇಟ್‌ಲೆಟ್‌ಗಳನ್ನು ತೆಗೆದ ಅವಧಿಯನ್ನು ನೆನಪಿನಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ ಎಂದು ನಿರ್ದೇಶಕರು ಹೇಳಿದರು. ಪ್ಲೇಟ್​ಲೆಟ್​ಗಳ ಜೀವಿತಾವಧಿ 3 ರಿಂದ 10 ದಿನಗಳವರೆಗೆ ಇರುತ್ತದೆ. ಔಷಧಿ ಅಥವಾ ಆಹಾರದಿಂದ ಪ್ಲೇಟ್​ಲೆಟ್​ಗಳು ಹೆಚ್ಚಾಗುವುದಿಲ್ಲ.

ಆರ್​ಸಿಬಿಗಳ ವಿಘಟನೆಯಿಂದ ಪ್ಲೇಟ್​ಲೆಟ್​ಗಳು ರೂಪುಗೊಳ್ಳುತ್ತವೆ, ಅದಕ್ಕೆ ತನ್ನದೇ ವಿಧಾನವಿದೆ, ಯಾವುದೇ ಬೇರೆ ವಿಧಾನದಿಂದ ಹೆಚ್ಚಾಗಲು ಸಾಧ್ಯವಿಲ್ಲ. ಔಷಧದಿಂದ ಅಥವಾ ಏನನ್ನೋ ತಿನ್ನುವುದರಿಂದ ಹೆಚ್ಚಾಗುವುದಿಲ್ಲ. ಸಾಕಷ್ಟು ನೀರು ಕುಡಿಯುವುದರ ಜತೆಗೆ ವೈದ್ಯರ ಸಲಹೆಯನ್ನು ಪಡೆದರೆ ಪ್ಲೇಟ್​ಲೆಟ್​ಗಳನ್ನು ಕಾಪಾಡಿಕೊಳ್ಳಬಹುದು.

ನೀವು ದೇಹದಲ್ಲಿ ದದ್ದುಗಳನ್ನು ಹೊಂದಿದ್ದರೆ ವೈದ್ಯರನ್ನು ಭೇಟಿಯಾಗಿ, ಆರಂಭದಲ್ಲಿ ಜ್ವರ ಹಾಗೂ ದೇಹದ ಮೇಲೆ ದದ್ದುಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಡೆಂಗ್ಯೂ ಪತ್ತೆಯಾದ ನಂತರವೇ ಪ್ಲೇಟ್​ಲೆಟ್​ಗಳ ಸಂಖ್ಯೆಯನ್ನು ಅಗತ್ಯಕ್ಕೆ ಅನುಗುಣವಾಗಿ ನೀಡಲಾಗುತ್ತದೆ.

ಡೆಂಗ್ಯೂ ರೋಗದ ಲಕ್ಷಣಗಳೇನು?

-ದೇಹದ ದದ್ದುಗಳು

-ಹೆಚ್ಚಿನ ಜ್ವರ

-ತೀವ್ರ ತಲೆನೋವು

-ಕಣ್ಣುಗಳ ಹಿಂದೆ ನೋವು

-ವಾಂತಿ ಮತ್ತು ವಾಕರಿಕೆಯ ಭಾವನೆ

-ಸ್ನಾಯುಗಳು ಮತ್ತು ಕೀಲುಗಳಲ್ಲಿ ನೋವು ಡೆಂಗ್ಯೂ ಈಡೀಸ್‌ ಈಜಿಪ್ಟಿ ಎಂಬ ಸೊಳ್ಳೆಯ ಮೂಲಕ ಹರಡುತ್ತದೆ. ಡೆಂಗ್ಯೂ ಸೋಂಕಿತ ನಾಲ್ಕು ಜನರಲ್ಲಿ ಒಬ್ಬರು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯಿದೆ. ಅಂತವರಿಗೆ ಲಕ್ಷಣಗಳು ತೀವ್ರ ಅಥವಾ ಸೌಮ್ಯವಾಗಿ ಕಾಡಬಹುದು.

ಸೊಳ್ಳೆ ಕಚ್ಚಿದ 3-14 ದಿನಗಳ ಒಳಗೆ ಡೆಂಗ್ಯೂ ಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ತೀವ್ರ ಜ್ಞರದೊಂದಿಗೆ ಆರಂಭಗೊಳ್ಳುವ ಸಮಸ್ಯೆ ನಂತರ ಬೇರೆ ಬೇರೆ ಲಕ್ಷಣಗಳಿಂದ ರೋಗ ಉಲ್ಬಣಗೊಳ್ಳುತ್ತದೆ. ಮಳೆಗಾಲದಲ್ಲಿ ಡೆಂಗ್ಯೂ ಹೆಚ್ಚು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್