AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ಸಿಂಪಲ್ ಮನೆಮದ್ದು.. ಒಂದು ವಾರದಲ್ಲಿ ಗ್ಯಾರಂಟಿ ಫಲಿತಾಂಶ!

ಮೆಂತ್ಯವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹ ಪರಿಣಾಮಕಾರಿಯಾಗಿದೆ. ಎರಡು ಚಮಚ ಮೆಂತ್ಯ ಬೀಜಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ. ಆ ನೀರನ್ನು ಮುಂಜಾನೆಯೇ ಕುಡಿಯಿರಿ.

ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ಸಿಂಪಲ್ ಮನೆಮದ್ದು.. ಒಂದು ವಾರದಲ್ಲಿ ಗ್ಯಾರಂಟಿ ಫಲಿತಾಂಶ!
ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ಸಿಂಪಲ್ ಮನೆಮದ್ದು
ಸಾಧು ಶ್ರೀನಾಥ್​
|

Updated on: Jul 08, 2023 | 2:30 PM

Share

ಈಗಿನದು ಗ್ಯಾರಂಟಿಗಳ ಜಮಾನಾ, ಆದರೆ ಯಾವುದೂ ಗ್ಯಾರಂಟಿ ಇಲ್ಲ ಅನ್ನುವುದೊಂದೇ ಗ್ಯಾರಂಟಿ. ಇನ್ನು ಆರೋಗ್ಯಕ್ಕೆ ಈ ಗ್ಯಾರಂಟಿಯನ್ನು ವಿಸ್ತರಿಸಿದಾಗ… ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ಸಿಂಪಲ್ ಮನೆಮದ್ದುಗಳು ಇಲ್ಲಿವೆ.. ಒಂದು ವಾರದಲ್ಲಿ ಗ್ಯಾರಂಟಿ ಫಲಿತಾಂಶ ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ! ಕೊನೆಗೆ ಅದು ಅವರವರ ದೇಹ ಪ್ರಕೃತಿಗೆ ಬಿಟ್ಟಿದ್ದು ಎಂದು ಹೇಳುತ್ತಾ… ಮನೆಮದ್ದುಗಳ ಬಗ್ಗೆ ನೋಡೋಣಾ.

ಇತ್ತೀಚಿನ ದಿನಗಳಲ್ಲಿ ಮಧುಮೇಹ ಸಾಮಾನ್ಯವಾಗಿದೆ. ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾದರೆ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಆದರೆ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಅದನ್ನು ಕಡಿಮೆ ಮಾಡಲು ನಮ್ಮ ನಮ್ಮ ಮನೆಯಲ್ಲಿ ಹಲವು ವಿಧಾನಗಳು ಮತ್ತು ಸರಳೋಪಾಯಗಳು ಇಲ್ಲಿವೆ. ಇದರಲ್ಲಿ ವಿಶೇಷವಾಗಿ ಹಾಗಲಕಾಯಿ ಮಧುಮೇಹಕ್ಕೆ ತುಂಬಾ ಒಳ್ಳೆಯದು. ಹಾಗಲಕಾಯಿಯಲ್ಲಿ ಕ್ಯಾರೋಟಿನ್ ಮತ್ತು ಮೊಮೊರೆಸಿನ್ ಇರುತ್ತದೆ. ಈ ಎರಡೂ ಸಂಯುಕ್ತಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿವೆ. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ಹಾಗಲಕಾಯಿ ರಸವನ್ನು ಸೇವಿಸುವುದು ಒಳ್ಳೆಯದು.

ಮಧುಮೇಹ ಪೀಡಿತರಿಗೆ ಏಪ್ರಿಕಾಟ್ ಮತ್ತೊಂದು ಅದ್ಭುತ. ಇದು ಋತುಮಾನದ ಹಣ್ಣು. ಇದು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. ಸಕ್ಕರೆ ಪೀಡಿತರಿಗೆ ಏಪ್ರಿಕಾಟ್ ಬೀಜದ ಪುಡಿ ವಿಶೇಷವಾಗಿ ಪರಿಣಾಮಕಾರಿಯಾಗಿದೆ. ಈ ಪುಡಿಯನ್ನು ನೀರಿನಲ್ಲಿ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟವು ಕಡಿಮೆಯಾಗುತ್ತದೆ. ಅಲ್ಲದೆ, ಶುಂಠಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಇನ್ಸುಲಿನ್ ದೇಹವನ್ನು ಸಮತೋಲನಗೊಳಿಸುತ್ತದೆ. ಹಾಗಾಗಿ ಪ್ರತಿದಿನ ಶುಂಠಿ ಹಾಕಿ ಕುದಿಸಿದ ನೀರನ್ನು ಕುಡಿಯುವುದು ಉತ್ತಮ ಅಭ್ಯಾಸ.

ಮೆಂತ್ಯವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹ ಪರಿಣಾಮಕಾರಿಯಾಗಿದೆ. ಎರಡು ಚಮಚ ಮೆಂತ್ಯ ಬೀಜಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ. ಆ ನೀರನ್ನು ಮುಂಜಾನೆಯೇ ಕುಡಿಯಿರಿ. ನೀವು ಇದನ್ನು ನಿಯಮಿತವಾಗಿ ಕೆಲವು ದಿನಗಳವರೆಗೆ ಮಾಡಿದರೆ ನಿಮ್ಮ ಆರೋಗ್ಯದಲ್ಲಿ ಉತ್ತಮ ಬದಲಾವಣೆಯನ್ನು ನೀವು ಗಮನಿಸಬಹುದು. ಅಲ್ಲದೆ, ನಿಮ್ಮ ಆಹಾರದಲ್ಲಿ ಕರಿಬೇವಿನ ಎಲೆಗಳನ್ನು ಹೆಚ್ಚು ಸೇರಿಸುವುದು ಸಹ ಪ್ರಯೋಜನಕಾರಿಯಾಗಿದೆ. ಇದು ನೈಸರ್ಗಿಕ ಉತ್ಕರ್ಷಣ ನಿರೋಧಕವಾಗಿದೆ. ಇದು ಅಧಿಕ ರಕ್ತದ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇವುಗಳಲ್ಲದೆ, ಪ್ರಾಣಾಯಾಮ ಮತ್ತು ಉಸಿರಾಟದ ವ್ಯಾಯಾಮಗಳು ಸಹ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಪ್ರಾಣಾಯಾಮವು ದೇಹದ ಒತ್ತಡವನ್ನು ಕಡಿಮೆ ಮಾಡುತ್ತದೆ. ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ