AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದ ಅಲ್ಲಲ್ಲಿ ಊತ ಕಾಣಿಸಿಕೊಳ್ಳುವುದು ಈ ಆರೋಗ್ಯ ಸಮಸ್ಯೆ ಬರುವ ಸೂಚನೆಯಾಗಿರಬಹುದು!

ದೇಹದಲ್ಲಿ ಪದೇ ಪದೇ ಊತ ಕಾಣಿಸಿಕೊಳ್ಳುವುದನ್ನು ಹಗುರವಾಗಿ ಪರಿಗಣಿಸಬಾರದು. ಇದು ಸಾಮಾನ್ಯ ಸಮಸ್ಯೆಯಾಗಿರದೆ, ಗಂಭೀರ ಆರೋಗ್ಯ ಸಮಸ್ಯೆಯ ಸಂಕೇತವೂ ಆಗಿರಬಹುದು. ಅಂತಹ ಸಂದರ್ಭಗಳಲ್ಲಿ, ಸಂಭವನೀಯ ಕಾರಣಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಬಹಳ ಮುಖ್ಯ. ಹಾಗಾದರೆ ದೇಹದಲ್ಲಿ ಊತಕ್ಕೆ ಕಾರಣವಾಗುವ ಪ್ರಮುಖ ಆರೋಗ್ಯ ಸಮಸ್ಯೆಗಳು ಯಾವವು, ಲಕ್ಷಣಗಳು ಹೇಗಿರುತ್ತವೆ, ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದೇಹದ ಅಲ್ಲಲ್ಲಿ ಊತ ಕಾಣಿಸಿಕೊಳ್ಳುವುದು ಈ ಆರೋಗ್ಯ ಸಮಸ್ಯೆ ಬರುವ ಸೂಚನೆಯಾಗಿರಬಹುದು!
Body Swelling Warning SignsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jul 07, 2026 | 5:08 PM

Share

ಮುಖ್ಯಾಂಶಗಳು

  • ದೇಹದ ಊತಕ್ಕೆ ಕಾರಣವೇನು? ತಿಳಿಯಲೇಬೇಕಾದ ಆರೋಗ್ಯ ಮಾಹಿತಿ
  • ದೇಹದ ಕೆಲವು ಭಾಗದಲ್ಲಿ ಪದೇ ಪದೇ ಊತ ಕಂಡುಬರುವುದರ ಹಿಂದಿದೆ 5 ಪ್ರಮುಖ ಸಮಸ್ಯೆಗಳು
  • ಪದೇ ಪದೇ ದೇಹ ಊದಿಕೊಳ್ಳುತ್ತಿದೆಯೇ? ವೈದ್ಯರನ್ನು ಯಾವಾಗ ಸಂಪರ್ಕಿಸಬೇಕು?

ಕೈ, ಕಾಲು, ಪಾದ, ಮುಖ ಅಥವಾ ಬೆರಳುಗಳಲ್ಲಿ ಊತ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿರಬಹುದು. ಕೆಲವೊಮ್ಮೆ ಹೆಚ್ಚು ಹೊತ್ತು ನಿಂತುಕೊಂಡಿರುವುದು, ಕುಳಿತುಕೊಳ್ಳುವುದು ಅಥವಾ ಸಣ್ಣ ಗಾಯಗಳಿಂದಲೂ ಊತ ಉಂಟಾಗುತ್ತದೆ. ಆದರೆ ಪದೇ ಪದೇ ಊತ ಕಾಣಿಸಿಕೊಳ್ಳುವುದು ಅಥವಾ ಹಲವು ದಿನಗಳವರೆಗೆ ಕಡಿಮೆಯಾಗದೇ ಇರುವುದು ದೇಹದೊಳಗಿನ ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ದೇಹದಲ್ಲಿ ಊತಕ್ಕೆ (Body Swelling) ಕಾರಣವಾಗುವ ಪ್ರಮುಖ ಆರೋಗ್ಯ ಸಮಸ್ಯೆಗಳು ಯಾವವು, ಲಕ್ಷಣಗಳು ಹೇಗಿರುತ್ತವೆ, ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದೇಹದಲ್ಲಿ ಊತಕ್ಕೆ ಕಾರಣವಾಗುವ ಪ್ರಮುಖ ಆರೋಗ್ಯ ಸಮಸ್ಯೆಗಳು;

ಹೃದಯ ವೈಫಲ್ಯ (Heart Failure): ಹೃದಯವು ರಕ್ತವನ್ನು ಸಮರ್ಪಕವಾಗಿ ಪಂಪ್ ಮಾಡಲು ಸಾಧ್ಯವಾಗದಿದ್ದರೆ ಕಾಲು, ಪಾದ ಮತ್ತು ಕಣಕಾಲುಗಳಲ್ಲಿ ದ್ರವ ಸಂಗ್ರಹವಾಗಿ ಊತ ಉಂಟಾಗಬಹುದು. ಉಸಿರಾಟದ ತೊಂದರೆ, ಬೇಗ ದಣಿವು ಹಾಗೂ ತೂಕ ಹೆಚ್ಚಳವೂ ಕಾಣಿಸಬಹುದು.

ಮೂತ್ರಪಿಂಡದ ಕಾಯಿಲೆ: ಸಾಮಾನ್ಯವಾಗಿ ಮೂತ್ರಪಿಂಡಗಳು ದೇಹದಲ್ಲಿನ ಹೆಚ್ಚುವರಿ ನೀರು ಮತ್ತು ಉಪ್ಪನ್ನು ಹೊರಹಾಕುವ ಕೆಲಸ ಮಾಡುತ್ತವೆ. ಅವು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಕೈ, ಕಾಲು, ಮುಖ ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ಊತ ಕಾಣಿಸಬಹುದು.

ಯಕೃತ್ತಿನ ಸಿರೋಸಿಸ್ (Liver Cirrhosis): ಯಕೃತ್ತಿನ ಹಾನಿಯಿಂದ ದೇಹದಲ್ಲಿ ದ್ರವ ಸಮತೋಲನ ಹದಗೆಟ್ಟು ಹೊಟ್ಟೆ ಮತ್ತು ಕಾಲುಗಳಲ್ಲಿ ಊತ ಉಂಟಾಗುವ ಸಾಧ್ಯತೆ ಇದೆ.

ಡೀಪ್ ವೇನ್ ಥ್ರಾಂಬೋಸಿಸ್ (DVT): ಕಾಲಿನ ಆಳವಾದ ರಕ್ತನಾಳದಲ್ಲಿ ರಕ್ತಗಡ್ಡೆ ಉಂಟಾದರೆ ಒಂದು ಕಾಲಿನಲ್ಲಿ ಹಠಾತ್ ಊತ, ನೋವು, ಕೆಂಪಾಗುವುದು ಮತ್ತು ಬಿಸಿ ಅನುಭವವಾಗಬಹುದು. ಇದು ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವ ಸ್ಥಿತಿಯಾಗಿದೆ.

ಇದನ್ನೂ ಓದಿ: ಪುರುಷರಿಗಿಂತ ಮಹಿಳೆಯರಲ್ಲೇ ಥೈರಾಯ್ಡ್ ಸಮಸ್ಯೆ ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣ ಏನ್ ಗೊತ್ತಾ?

ಕ್ರಾನಿಕ್ ವೆನಸ್ ಇನ್ಸಫಿಷಿಯನ್ಸಿ: ಕಾಲಿನ ರಕ್ತನಾಳಗಳು ರಕ್ತವನ್ನು ಹೃದಯಕ್ಕೆ ಸರಿಯಾಗಿ ಹಿಂತಿರುಗಿಸಲು ಸಾಧ್ಯವಾಗದಿದ್ದರೆ ಕಾಲುಗಳಲ್ಲಿ ಊತ, ಭಾರವಾದ ಅನುಭವ ಮತ್ತು ನೋವು ಕಾಣಿಸಬಹುದು.

ಯಾವ ಲಕ್ಷಣಗಳನ್ನು ನಿರ್ಲಕ್ಷಿಸಬಾರದು?

ಊತ ಹಲವು ದಿನಗಳವರೆಗೆ ಮುಂದುವರಿದರೆ, ಉಸಿರಾಟದ ತೊಂದರೆ, ಎದೆನೋವು, ಒಂದು ಕಾಲಿನಲ್ಲಿ ಹಠಾತ್ ಊತ, ತೀವ್ರ ನೋವು, ಚರ್ಮ ಕೆಂಪಾಗುವುದು, ಹೊಟ್ಟೆ ಹೆಚ್ಚು ಊದಿಕೊಳ್ಳುವುದು ಅಥವಾ ಹಠಾತ್ ತೂಕ ಹೆಚ್ಚಾದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ತಡೆಗಟ್ಟಲು ಏನು ಮಾಡಬೇಕು?

  • ಹೆಚ್ಚು ಹೊತ್ತು ಒಂದೇ ಸ್ಥಳದಲ್ಲಿ ಕುಳಿತುಕೊಳ್ಳುವುದು ಅಥವಾ ನಿಲ್ಲುವುದನ್ನು ತಪ್ಪಿಸಿ.
  • ನಿಯಮಿತವಾಗಿ ನಡೆಯುವ ಹಾಗೂ ವ್ಯಾಯಾಮ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ.
  • ಉಪ್ಪಿನ ಸೇವನೆಯನ್ನು ಮಿತಿಗೊಳಿಸಿ.
  • ಸಾಕಷ್ಟು ನೀರು ಕುಡಿಯಿರಿ.
  • ಆರೋಗ್ಯಕರ ತೂಕ ಕಾಪಾಡಿಕೊಳ್ಳಿ.
  • ಕಾಲುಗಳಲ್ಲಿ ಊತ ಇದ್ದರೆ ವಿಶ್ರಾಂತಿಯ ಸಮಯದಲ್ಲಿ ಕಾಲುಗಳನ್ನು ಸ್ವಲ್ಪ ಎತ್ತರದಲ್ಲಿ ಇರಿಸಿ.

ಗಮನಿಸಿ: ಪದೇ ಪದೇ ಅಥವಾ ನಿರಂತರವಾಗಿ ಕಾಣಿಸುವ ಊತವನ್ನು ಸಾಮಾನ್ಯವೆಂದು ನಿರ್ಲಕ್ಷಿಸಬೇಡಿ. ಕಾರಣವನ್ನು ಪತ್ತೆಹಚ್ಚಲು ವೈದ್ಯರ ಸಲಹೆ ಪಡೆದು ಅಗತ್ಯ ಪರೀಕ್ಷೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಜೋಗ ಜಲಪಾತದ ಜಲವೈಭವ ಕಣ್ತುಂಬಿಕೊಂಡ ಪ್ರವಾಸಿಗರು
ಜೋಗ ಜಲಪಾತದ ಜಲವೈಭವ ಕಣ್ತುಂಬಿಕೊಂಡ ಪ್ರವಾಸಿಗರು
ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!
ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!
ಬಂಡಾಜೆ ಫಾಲ್ಸ್​ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಬಂಡಾಜೆ ಫಾಲ್ಸ್​ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್
ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ