AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಟಮಿನ್ ಬಿ12 ಕೊರತೆ ಇದ್ದು ನೀವು ಸಸ್ಯಾಹಾರಿಗಳಾಗಿದ್ದರೆ ಈ 4 ಸೊಪ್ಪುಗಳನ್ನು ತಪ್ಪದೆ ತಿನ್ನಿ!

ನೀವು ಕೂಡ ವಿಟಮಿನ್ ಬಿ 12 ಕೊರತೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ನಿಮಗೆ ಸಹಾಯ ಮಾಡುವ ಕೆಲವು ಆಹಾರಗಳು ಇಲ್ಲಿವೆ. ಅದರಲ್ಲಿಯೂ ನೀವು ಸಸ್ಯಹಾರಿಗಳಾಗಿದ್ದರೆ ಈ ನಾಲ್ಕು ಸೊಪ್ಪುಗಳನ್ನು ಸೇವನೆ ಮಾಡಲೇಬೇಕು. ಇವು ನಿಮ್ಮ ದೇಹದಲ್ಲಿ ಉಂಟಾದ ಬಿ 12 ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ. ಹಾಗಾದರೆ ಆ ಸೊಪ್ಪುಗಳು ಯಾವವು? ಅವುಗಳಿಂದ ಸಿಗುವ ಮತ್ತಷ್ಟು ಪ್ರಯೋಜನಗಳ ಬಗೆಗಿನ ಸಂಪೂರ್ಣ ಮಾಹಿತಿ ಈ ಸ್ಟೋರಿಯಲ್ಲಿದೆ.

ವಿಟಮಿನ್ ಬಿ12 ಕೊರತೆ ಇದ್ದು ನೀವು ಸಸ್ಯಾಹಾರಿಗಳಾಗಿದ್ದರೆ ಈ 4 ಸೊಪ್ಪುಗಳನ್ನು ತಪ್ಪದೆ ತಿನ್ನಿ!
ವಿಟಮಿನ್ ಬಿ 12 ಕೊರತೆ ನೀಗಿಸುವ ಸೊಪ್ಪುಗಳು
ಪ್ರೀತಿ ಭಟ್​, ಗುಣವಂತೆ
|

Updated on: Dec 12, 2025 | 7:35 PM

Share

ದೇಹಕ್ಕೆ ಪ್ರತಿಯೊಂದು ಪೋಷಕಾಂಶ ಕೂಡ ಬಹಳ ಮುಖ್ಯವಾಗುತ್ತದೆ. ಅವುಗಳಲ್ಲಿ ಸ್ವಲ್ಪ ಕೊರತೆಯಾದರೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುವುದರಲ್ಲಿ ಸಂಶಯವಿಲ್ಲ. ಅದರಲ್ಲಿಯೂ ದೇಹಕ್ಕೆ ಬಹಳ ಅಗತ್ಯವಾದ ವಿಟಮಿನ್ ಎಂದರೆ ಅದು ಬಿ 12 (Vitamin B12). ಇದನ್ನು ದೇಹ ಸ್ವಂತವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಹಾಗಾಗಿ ಈ ವಿಟಮಿನ್ ಗಳನ್ನು ಆಹಾರ ಮೂಲಗಳಿಂದ ಪಡೆಯಬೇಕಾಗುತ್ತದೆ. ಇದು ಸಸ್ಯಾಹಾರಿ ಆಹಾರಗಳಿಂದ ಸಿಗುವುದು ಬಹಳ ಕಡಿಮೆಯಾದರೂ ಕೂಡ ಕೆಲವು ಸೊಪ್ಪುಗಳು ಈ ವಿಟಮಿನ್ ಕೊರತೆಯಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ಹಾಗಾದರೆ ಅವು ಯಾವುವು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿಯಿರಿ.

ವಿಟಮಿನ್ ಬಿ 12 ಕೊರತೆ ನೀಗಿಸಲು ಸಲಹೆಗಳು:

ನುಗ್ಗೆ ಸೊಪ್ಪು:

ಸಾಮಾನ್ಯವಾಗಿ ಈ ಎಲೆಗಳು ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದ್ದು ವಿಟಮಿನ್ ಎ, ಕ್ಯಾಲ್ಸಿಯಂ, ಕಬ್ಬಿಣ ಮತ್ತು ನಾರಿನಂಶದಿಂದ ಸಮೃದ್ಧವಾಗಿವೆ. ಇವುಗಳ ಸೇವನೆಯಿಂದ ದೇಹದ ದೌರ್ಬಲ್ಯ ನಿವಾರಣೆಯಾಗಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗೆ ಮುಕ್ತಿ ಸಿಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಪಾಲಕ್:

ಈ ಸೊಪ್ಪಿನ ಸೇವನೆಯಿಂದ ವಿಟಮಿನ್ ಬಿ 12 ಸಿಗುತ್ತದೆ. ಅಷ್ಟೇ ಅಲ್ಲ, ಇದು ಕಬ್ಬಿಣ ಮತ್ತು ಫೋಲೇಟ್‌ನ ಉತ್ತಮ ಮೂಲವಾಗಿದ್ದು ನಿಯಮಿತವಾಗಿ ಸೇರಿಸಿಕೊಳ್ಳುವುದರಿಂದ ಆಯಾಸ ಮತ್ತು ಆಲಸ್ಯವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ವಿಟಮಿನ್ ಕೆ ಕೊರತೆ ಆದಾಗ ದೇಹ ನೀಡುವ ಈ ಸೂಚನೆಗಳನ್ನು ಎಂದಿಗೂ ಕಡೆಗಣಿಸಬೇಡಿ!

ಹರಿವೆ:

ಚಳಿಗಾಲದಲ್ಲಿ ಹರಿವೆಯ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಈ ಸೊಪ್ಪಿನಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಯಿಂದ ಸಮೃದ್ಧವಾಗಿದ್ದು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿನ ವಿಟಮಿನ್ ಬಿ 12 ಕೊರತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಕರಿಬೇವು:

ದಿನನಿತ್ಯ ಬಳಸುವ ಕರಿಬೇವು ವಿಟಮಿನ್ ಬಿ 12 ನ ಉತ್ತಮ ಮೂಲವಾಗಿದೆ. ಇವುಗಳಲ್ಲಿ ಪ್ರೋಟೀನ್, ಕೊಬ್ಬು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ವಿಟಮಿನ್ ಬಿ 12 ಅನ್ನು ಹೊಂದಿದ್ದು ಚರ್ಮ ಮತ್ತು ಕೂದಲಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ