ವಿಟಮಿನ್ ಬಿ12 ಕೊರತೆ ಇದ್ದು ನೀವು ಸಸ್ಯಾಹಾರಿಗಳಾಗಿದ್ದರೆ ಈ 4 ಸೊಪ್ಪುಗಳನ್ನು ತಪ್ಪದೆ ತಿನ್ನಿ!

ನೀವು ಕೂಡ ವಿಟಮಿನ್ ಬಿ 12 ಕೊರತೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ನಿಮಗೆ ಸಹಾಯ ಮಾಡುವ ಕೆಲವು ಆಹಾರಗಳು ಇಲ್ಲಿವೆ. ಅದರಲ್ಲಿಯೂ ನೀವು ಸಸ್ಯಹಾರಿಗಳಾಗಿದ್ದರೆ ಈ ನಾಲ್ಕು ಸೊಪ್ಪುಗಳನ್ನು ಸೇವನೆ ಮಾಡಲೇಬೇಕು. ಇವು ನಿಮ್ಮ ದೇಹದಲ್ಲಿ ಉಂಟಾದ ಬಿ 12 ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ. ಹಾಗಾದರೆ ಆ ಸೊಪ್ಪುಗಳು ಯಾವವು? ಅವುಗಳಿಂದ ಸಿಗುವ ಮತ್ತಷ್ಟು ಪ್ರಯೋಜನಗಳ ಬಗೆಗಿನ ಸಂಪೂರ್ಣ ಮಾಹಿತಿ ಈ ಸ್ಟೋರಿಯಲ್ಲಿದೆ.

ವಿಟಮಿನ್ ಬಿ12 ಕೊರತೆ ಇದ್ದು ನೀವು ಸಸ್ಯಾಹಾರಿಗಳಾಗಿದ್ದರೆ ಈ 4 ಸೊಪ್ಪುಗಳನ್ನು ತಪ್ಪದೆ ತಿನ್ನಿ!
ವಿಟಮಿನ್ ಬಿ 12 ಕೊರತೆ ನೀಗಿಸುವ ಸೊಪ್ಪುಗಳು

Updated on: Dec 12, 2025 | 7:35 PM

ದೇಹಕ್ಕೆ ಪ್ರತಿಯೊಂದು ಪೋಷಕಾಂಶ ಕೂಡ ಬಹಳ ಮುಖ್ಯವಾಗುತ್ತದೆ. ಅವುಗಳಲ್ಲಿ ಸ್ವಲ್ಪ ಕೊರತೆಯಾದರೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುವುದರಲ್ಲಿ ಸಂಶಯವಿಲ್ಲ. ಅದರಲ್ಲಿಯೂ ದೇಹಕ್ಕೆ ಬಹಳ ಅಗತ್ಯವಾದ ವಿಟಮಿನ್ ಎಂದರೆ ಅದು ಬಿ 12 (Vitamin B12). ಇದನ್ನು ದೇಹ ಸ್ವಂತವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಹಾಗಾಗಿ ಈ ವಿಟಮಿನ್ ಗಳನ್ನು ಆಹಾರ ಮೂಲಗಳಿಂದ ಪಡೆಯಬೇಕಾಗುತ್ತದೆ. ಇದು ಸಸ್ಯಾಹಾರಿ ಆಹಾರಗಳಿಂದ ಸಿಗುವುದು ಬಹಳ ಕಡಿಮೆಯಾದರೂ ಕೂಡ ಕೆಲವು ಸೊಪ್ಪುಗಳು ಈ ವಿಟಮಿನ್ ಕೊರತೆಯಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ಹಾಗಾದರೆ ಅವು ಯಾವುವು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿಯಿರಿ.

ವಿಟಮಿನ್ ಬಿ 12 ಕೊರತೆ ನೀಗಿಸಲು ಸಲಹೆಗಳು:

ನುಗ್ಗೆ ಸೊಪ್ಪು:

ಸಾಮಾನ್ಯವಾಗಿ ಈ ಎಲೆಗಳು ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದ್ದು ವಿಟಮಿನ್ ಎ, ಕ್ಯಾಲ್ಸಿಯಂ, ಕಬ್ಬಿಣ ಮತ್ತು ನಾರಿನಂಶದಿಂದ ಸಮೃದ್ಧವಾಗಿವೆ. ಇವುಗಳ ಸೇವನೆಯಿಂದ ದೇಹದ ದೌರ್ಬಲ್ಯ ನಿವಾರಣೆಯಾಗಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗೆ ಮುಕ್ತಿ ಸಿಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಪಾಲಕ್:

ಈ ಸೊಪ್ಪಿನ ಸೇವನೆಯಿಂದ ವಿಟಮಿನ್ ಬಿ 12 ಸಿಗುತ್ತದೆ. ಅಷ್ಟೇ ಅಲ್ಲ, ಇದು ಕಬ್ಬಿಣ ಮತ್ತು ಫೋಲೇಟ್‌ನ ಉತ್ತಮ ಮೂಲವಾಗಿದ್ದು ನಿಯಮಿತವಾಗಿ ಸೇರಿಸಿಕೊಳ್ಳುವುದರಿಂದ ಆಯಾಸ ಮತ್ತು ಆಲಸ್ಯವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ವಿಟಮಿನ್ ಕೆ ಕೊರತೆ ಆದಾಗ ದೇಹ ನೀಡುವ ಈ ಸೂಚನೆಗಳನ್ನು ಎಂದಿಗೂ ಕಡೆಗಣಿಸಬೇಡಿ!

ಹರಿವೆ:

ಚಳಿಗಾಲದಲ್ಲಿ ಹರಿವೆಯ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಈ ಸೊಪ್ಪಿನಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಯಿಂದ ಸಮೃದ್ಧವಾಗಿದ್ದು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿನ ವಿಟಮಿನ್ ಬಿ 12 ಕೊರತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಕರಿಬೇವು:

ದಿನನಿತ್ಯ ಬಳಸುವ ಕರಿಬೇವು ವಿಟಮಿನ್ ಬಿ 12 ನ ಉತ್ತಮ ಮೂಲವಾಗಿದೆ. ಇವುಗಳಲ್ಲಿ ಪ್ರೋಟೀನ್, ಕೊಬ್ಬು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ವಿಟಮಿನ್ ಬಿ 12 ಅನ್ನು ಹೊಂದಿದ್ದು ಚರ್ಮ ಮತ್ತು ಕೂದಲಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us