AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Borewell water: ಬೋರ್ ವೆಲ್ ನೀರು ಕುಡಿಯುವವರಿಗೆ ಈ ಕಾಯಿಲೆ ಬರುವುದು ಖಚಿತ

ಬೇಕೋ ಬೇಡವೋ ಮನೆಯಲ್ಲಿ ಬೋರ್ ವೆಲ್ ಕೊರೆಯುವುದು ಜನಗಳಿಗೆ ಅಭ್ಯಾಸವಾಗಿದೆ. ಆದರೆ ಈ ನೀರು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ಮಿತಿಗಿಂತ ಹೆಚ್ಚು ಆಳವಾಗಿ ಕೊರೆದ ಕೊಳವೆ ಬಾವಿಗಳ ನೀರನ್ನು ಬಳಸುವುದು ಅನೇಕ ರೋಗಗಳಿಗೆ ಕಾರಣವಾಗಬಹುದು ಎಂದು ವರದಿಗಳು ಹೇಳುತ್ತವೆ. ನೀರು ಇಲ್ಲದಾಗ ಜನರು ಆಳವಾದ ಕೊಳವೆ ಬಾವಿಗಳನ್ನು ಕೊರೆಸುತ್ತಾರೆ. ಈ ನೀರನ್ನು ಬಳಕೆ ಮಾಡಿದರೆ ಬೇಡದ ರೋಗಗಳು ಬರುತ್ತದೆ. ಹಾಗಾದರೆ ಬೋರ್ ವೆಲ್ ನೀರಿನ ಅಡ್ಡಪರಿಣಾಮಗಳೇನು? ಈ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಯಾವ ರೀತಿಯ ಕಾಯಿಲೆಗಳು ಬರುತ್ತವೆ? ಇಲ್ಲಿದೆ ತಜ್ಞರು ನೀಡಿರುವ ಸಂಪೂರ್ಣ ಮಾಹಿತಿ.

Borewell water: ಬೋರ್ ವೆಲ್ ನೀರು ಕುಡಿಯುವವರಿಗೆ ಈ ಕಾಯಿಲೆ ಬರುವುದು ಖಚಿತ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 26, 2024 | 10:33 AM

Share

ಇತ್ತೀಚಿನ ವರ್ಷಗಳಲ್ಲಿ ಕೊಳವೆಬಾವಿಗಳ ಸಂಖ್ಯೆ ಹೆಚ್ಚಾಗಿದೆ. ಎಲ್ಲಿ ನೋಡಿದರೂ ನೀವು ಬೋರ್ ವೆಲ್ ಗಳನ್ನು ಕಾಣಬಹುದಾಗಿದೆ. ಬೇಕೋ ಬೇಡವೋ ಮನೆಯಲ್ಲಿ ಬೋರ್ ವೆಲ್ ಕೊರೆಯುವುದು ಜನಗಳಿಗೆ ಅಭ್ಯಾಸವಾಗಿದೆ. ಆದರೆ ಈ ನೀರು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ಮಿತಿಗಿಂತ ಹೆಚ್ಚು ಆಳವಾಗಿ ಕೊರೆದ ಕೊಳವೆ ಬಾವಿಗಳ ನೀರನ್ನು ಬಳಸುವುದು ಅನೇಕ ರೋಗಗಳಿಗೆ ಕಾರಣವಾಗಬಹುದು ಎಂದು ವರದಿಗಳು ಹೇಳುತ್ತವೆ. ನೀರು ಇಲ್ಲದಾಗ ಜನರು ಆಳವಾದ ಕೊಳವೆ ಬಾವಿಗಳನ್ನು ಕೊರೆಸುತ್ತಾರೆ. ಈ ನೀರನ್ನು ಬಳಕೆ ಮಾಡಿದರೆ ಬೇಡದ ರೋಗಗಳು ಬರುತ್ತದೆ. ಹಾಗಾದರೆ ಬೋರ್ ವೆಲ್ ನೀರಿನ ಅಡ್ಡಪರಿಣಾಮಗಳೇನು? ಈ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಯಾವ ರೀತಿಯ ಕಾಯಿಲೆಗಳು ಬರುತ್ತವೆ? ಇಲ್ಲಿದೆ ತಜ್ಞರು ನೀಡಿರುವ ಸಂಪೂರ್ಣ ಮಾಹಿತಿ.

ಬಾವಿಯನ್ನು ಒಂದು ಮಿತಿಗಿಂತ ಆಳ ಮಾಡಿದರೆ ಆಗ ರಾಸಾಯನಿಕ ತ್ಯಾಜ್ಯಗಳನ್ನು ಹೊಂದಿರುವ ನೀರು ಲಭ್ಯವಾಗುತ್ತದೆ. ಈ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಕ್ಯಾನ್ಸರ್ ಸೇರಿದಂತೆ ಅನೇಕ ರೋಗಗಳಿಗೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸಿ ಕೊಟ್ಟಿವೆ. ಬೋರ್ ವೆಲ್ ನೀರಿನಲ್ಲಿ ಫ್ಲೋರೈಡ್, ನೈಟ್ರೇಟ್ ಮತ್ತು ಪಾದರಸದ ಅಂಶ ಹೆಚ್ಚಾಗಿರುತ್ತದೆ. ಅವುಗಳನ್ನು ಎಷ್ಟೇ ಶುದ್ಧೀಕರಿಸಿದರೂ, ಅವುಗಳನ್ನು ನೀರಿನಿಂದ ಬೇರ್ಪಡಿಸಲು ಸಾಧ್ಯವಿಲ್ಲ.

ಇದನ್ನೂ ಓದಿ: ಹಪ್ಪಳ ತಿನ್ನುವುದರಿಂದ ನಿಮ್ಮ ಆರೋಗ್ಯ ಚೆನ್ನಾಗಿರುತ್ತೆ

ಕ್ಯಾನ್ಸರ್ ಗೆ ಕಾರಣವಾಗಬಹುದು

ಅದೂ ಅಲ್ಲದೆ ಬೋರ್ ವೆಲ್ ನೀರಿನಲ್ಲಿ ಯುರೇನಿಯಂ ಮಟ್ಟ ಹೆಚ್ಚಾಗಿದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಸಾಮಾನ್ಯವಾಗಿ ಕುಡಿಯುವ ನೀರಿನಲ್ಲಿ ಯುರೇನಿಯಂ ಮಟ್ಟ ಹೆಚ್ಚಾಗಿದ್ದರೆ ಕ್ಯಾನ್ಸರ್, ಶ್ವಾಸಕೋಶ, ಮೂತ್ರಪಿಂಡ ಮತ್ತು ಚರ್ಮದ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ತಜ್ಞರು ಕೊಳವೆಬಾವಿಗಳ ನೀರನ್ನು ಕುಡಿಯುವುದನ್ನು ತಪ್ಪಿಸಿ ಎನ್ನುತ್ತಾರೆ. ಅದೂ ಅಲ್ಲದೆ ಈ ನೀರು ಸ್ನಾನಕ್ಕೂ ಯೋಗ್ಯವಲ್ಲ. ಕೆಲವರಿಗೆ ಇದರಿಂದ ಚರ್ಮದಲ್ಲಿ ಅಲರ್ಜಿ ಉಂಟಾಗಬಹುದು ಅಥವಾ ಕೂದಲು ಉದುರಲು ಪ್ರಾಂರಭವಾಗಬಹುದು. ಇದೆಲ್ಲಾ ಕಾರಣಗಳಿಂದ ಬೋರ್ ವೆಲ್ ನೀರು ದಿನ ಬಳಕೆಗೆ ಒಳ್ಳೆಯದಲ್ಲ ಎನ್ನಲಾಗುತ್ತದೆ. ಹಾಗಾಗಿ ಸಾಧ್ಯವಾದಷ್ಟು ಈ ನೀರನ್ನು ತ್ಯಜಿಸಿ ನಿಮ್ಮ ಅಮೂಲ್ಯವಾದ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!