ಹೊಟ್ಟೆಯಿಂದ ಆಗಾಗ ಶಬ್ದಗಳು ಬರುತ್ತಿದ್ದರೆ ಎಂದಿಗೂ ನಿರ್ಲಕ್ಷ್ಯಬೇಡ; ತಜ್ಞರ ಸಲಹೆ ಇಲ್ಲಿದೆ

ಹೊಟ್ಟೆಯಿಂದ ಆಗಾಗ ಶಬ್ದಗಳು ಬರುತ್ತಿದ್ದರೆ ಸಾಮಾನ್ಯ ಪ್ರಕ್ರಿಯೆ ಎಂದು ನಿರ್ಲಕ್ಷ್ಯಿಸದಿರಿ. ಇಂತಹ ಸಾಮಾನ್ಯ ಲಕ್ಷಣಗಳು ಕರುಳಿನ ಕ್ಯಾನ್ಸರ್​​​ನ ಆರಂಭಿಕ ಲಕ್ಷಣವಾಗಿರಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ.

ಹೊಟ್ಟೆಯಿಂದ ಆಗಾಗ ಶಬ್ದಗಳು ಬರುತ್ತಿದ್ದರೆ ಎಂದಿಗೂ ನಿರ್ಲಕ್ಷ್ಯಬೇಡ; ತಜ್ಞರ ಸಲಹೆ ಇಲ್ಲಿದೆ
Bowel CancerImage Credit source: Healthline
Follow us
|

Updated on: Aug 12, 2023 | 6:25 AM

ದೇಹದಲ್ಲಿನ ಕೆಲವೊಂದು ಅಸಹಜ ಕೋಶಗಳ ಬೆಳವಣಿಗೆಯಿಂದ ಉಂಟಾಗುವ ಕಾಯಿಲೆಯ ಮಾರಣಾಂತಿಕ ರೂಪಗಳಲ್ಲಿ ಕರುಳಿನ ಕ್ಯಾನ್ಸರ್ (Bowel Cancer) ಕೂಡ ಒಂದು. ಯಾವುದೇ ಕ್ಯಾನ್ಸರ್​​ ಪ್ರಾರಂಭಿಕ ಹಂತದಲ್ಲಿ ಸಹಜವಾಗಿ ಕಾಣಿಸಿಕೊಂಡರೂ ಕೂಡ ಎಂದಿಗೂ ನಿರ್ಲಕ್ಷ್ಯಬೇಡ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ನೀವು ನಿರ್ಲಕ್ಷ್ಯಿಸುತ್ತಾ ಹೋದ ಹಾಗೆ ದೇಹದ ಇತರ ಭಾಗಗಳಿಗೂ ಹರಡಿ ಸಮಸ್ಯೆ ಉಲ್ಬಣಗೊಳ್ಳಲು ಕಾರಣವಾಗಬಹುದು. ಕರುಳಿನ ಕ್ಯಾನ್ಸರ್​​ ವಿಷಯಕ್ಕೆ ಬಂದರೆ ಪ್ರಾರಂಭಿಕ ಹಂತದಲ್ಲಿ ಸಾಮಾನ್ಯವಾಗಿ ಅಜೀರ್ಣ, ಹೊಟ್ಟೆ ನೋವಿನಂತಹ ಸೌಮ್ಯ ಲಕ್ಷಣಗಳೊಂದಿಗೆ ಪ್ರಾರಂಭವಾಗಿ ಕಾಲಕ್ರಮೇಣ ಪ್ರಾಣಕ್ಕೆ ಹಾನಿಯುಂಟು ಮಾಡಬಹುದು.

ಹೊಟ್ಟೆಯಿಂದ ಆಗಾಗ ಬರುವ ಶಬ್ದಗಳು ಮತ್ತು ಕರುಳಿನ ಕ್ಯಾನ್ಸರ್:

ಕರುಳಿನ ಕ್ಯಾನ್ಸರ್ ಗ್ಯಾಸ್ ಅಥವಾ ಜೀರ್ಣಾಂಗವ್ಯೂಹದ ಮೂಲಕ ಚಲಿಸುವ ಇತರ ಪದಾರ್ಥಗಳ ರೂಪದಲ್ಲಿ ಹೊಟ್ಟೆಯ ಶಬ್ದಗಳನ್ನು ಉಂಟುಮಾಡುವ ಸಾಧ್ಯತೆಯಿದೆ. ಕರುಳಿನಲ್ಲಿನ ಬದಲಾವಣೆಗಳು ಆಹಾರದ ಮೂಲಕ ಹಾದುಹೋದಾಗ ಶಬ್ದಗಳಿಗೆ ಕಾರಣವಾಗಬಹುದು. ಇದಲ್ಲದೇ ಒಬ್ಬರಿಗೆ ಹಸಿವಾದಾಗಲೂ ಹೊಟ್ಟೆಯು ಸದ್ದು ಮಾಡಲು ಪ್ರಾರಂಭಿಸುತ್ತದೆ. ಮತ್ತು ಕರುಳುಗಳು ಖಾಲಿಯಾದಾಗ ಈ ಶಬ್ದಗಳು ಇನ್ನಷ್ಟು ಜೋರಾಗಬಹುದು. ಹೊಟ್ಟೆಯ ಶಬ್ದಗಳಿಂದ ಮಾತ್ರ ರೋಗವನ್ನು ನಿರ್ಣಯಿಸುವುದು ಕಷ್ಟಕರವಾಗಿರುತ್ತದೆ. ಆದ್ದರಿಂದ ಬಿಟ್ಟು ಬಿಡದೇ ಕಾಡುವ ಹೊಟ್ಟೆ ನೋವು, ಮೂತ್ರದ ಬಣ್ಣದಲ್ಲಿ ಬದಲಾವಣೆ ಕಂಡು ಬಂದರೆ ತಕ್ಷಣ ನಿಮ್ಮ ಹತ್ತಿರದ ವೈದ್ಯರನ್ನು ಭೇಟಿ ಮಾಡಿ ರಕ್ತ ಪರೀಕ್ಷೆ ಮಾಡಿಸುವುದು ಅಗತ್ಯ ಎಂದು ವೈದ್ಯರು ಶಿಫಾರಸು ಮಾಡುತ್ತಾರೆ.

ಇದನ್ನೂ ಓದಿ: ಇತ್ತೀಚಿನ ದಿನಗಳಲ್ಲಿ ಉದರ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿವೆ, ಕಾರಣವೇನೆಂಬುದ ತಿಳಿಯಿರಿ

ಕರುಳಿನ ಕ್ಯಾನ್ಸರ್​​​​ನ ಲಕ್ಷಣಗಳು:

ವೈದ್ಯರ ಪ್ರಕಾರ, ಕರುಳಿನ ಕ್ಯಾನ್ಸರ್ನ ಪ್ರಮುಖ ಲಕ್ಷಣವೆಂದರೆ ಮಲದಲ್ಲಿನ ಬದಲಾವಣೆಗಳು. ರೋಗಿಯು ಅತಿಸಾರ ಅಥವಾ ಮಲಬದ್ಧತೆಯಿಂದ ಬಳಲಬಹುದು. ಇದಲ್ಲದೇ ಇನ್ನಿತರ ಪ್ರಮುಖ ಲಕ್ಷಣವೆಂದರೆ:

  • ಹಠಾತ್​​​ ತೂಕ ನಷ್ಟ
  • ಹೊಟ್ಟೆ ಉಬ್ಬುವುದು
  • ಹೊಟ್ಟೆ ನೋವು
  • ಯಾವುದೇ ಕಾರಣವಿಲ್ಲದೆ ದಣಿದ ಭಾವನೆ

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ