AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆನಪಿನ ಶಕ್ತಿ, ಮೆದುಳಿನ ಆರೋಗ್ಯಕ್ಕೆ ಮನೆಯಲ್ಲೇ ತಯಾರಿಸಿದ 5 ಜ್ಯೂಸ್​ಗಳು ಇಲ್ಲಿವೆ

Brain Health: ಮೆದುಳಿನ ಆರೋಗ್ಯವನ್ನು ಹೆಚ್ಚಿಸಲು ಮತ್ತು ಮೆದುಳಿನ ಸ್ಟ್ರೋಕ್ ರೋಗಲಕ್ಷಣಗಳ ಅಪಾಯವನ್ನು ಕಡಿಮೆ ಮಾಡಲು ದೈನಂದಿನ ಆಹಾರಕ್ರಮದಲ್ಲಿ ಸೇರಿಸಿಕೊಳ್ಳಬಹುದಾದ ಕೆಲವು ಪಾನೀಯಗಳು, ಜ್ಯೂಸ್ ಮತ್ತು ಚಹಾಗಳು ಇಲ್ಲಿವೆ.

ನೆನಪಿನ ಶಕ್ತಿ, ಮೆದುಳಿನ ಆರೋಗ್ಯಕ್ಕೆ ಮನೆಯಲ್ಲೇ ತಯಾರಿಸಿದ 5 ಜ್ಯೂಸ್​ಗಳು ಇಲ್ಲಿವೆ
ಗ್ರೀನ್ ಟೀImage Credit source: iStock
ಸುಷ್ಮಾ ಚಕ್ರೆ
|

Updated on: Oct 16, 2023 | 3:40 PM

Share

ಮೆದುಳಿನ ಆರೋಗ್ಯ, ಜ್ಞಾಪಕ ಶಕ್ತಿ, ಏಕಾಗ್ರತೆ ನಮ್ಮ ದೈನಂದಿನ ಜೀವನಕ್ಕೆ ಅತ್ಯಗತ್ಯವಾಗಿದೆ. ಮೆದುಳು ನಮ್ಮ ದೇಹದ ವಿವಿಧ ಭಾಗಗಳಿಗೆ ಸಂದೇಶಗಳನ್ನು ಕಳುಹಿಸುತ್ತದೆ ಮತ್ತು ನಮಗೆ ಪ್ರತಿದಿನ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಇತ್ತೀಚಿನ ಲ್ಯಾನ್ಸೆಟ್ ಅಧ್ಯಯನದ ಪ್ರಕಾರ, ಮೆದುಳಿನ ಸ್ಟ್ರೋಕ್ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿದೆ. ಮೆದುಳಿನ ಸ್ಟ್ರೋಕ್​ನಿಂದ ಸಾವಿನ ಪ್ರಮಾಣ 6.6 ಮಿಲಿಯನ್‌ನಿಂದ 9.7 ಮಿಲಿಯನ್​ಗೆ ಹೆಚ್ಚಾಗಬಹುದು.

ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವಲ್ಲಿ ಆಹಾರವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮೆದುಳಿನ ಆರೋಗ್ಯವನ್ನು ಹೆಚ್ಚಿಸಲು ಮತ್ತು ಮೆದುಳಿನ ಸ್ಟ್ರೋಕ್ ರೋಗಲಕ್ಷಣಗಳ ಅಪಾಯವನ್ನು ಕಡಿಮೆ ಮಾಡಲು ದೈನಂದಿನ ಆಹಾರಕ್ರಮದಲ್ಲಿ ಸೇರಿಸಿಕೊಳ್ಳಬಹುದಾದ ಕೆಲವು ಪಾನೀಯಗಳು, ಜ್ಯೂಸ್ ಮತ್ತು ಚಹಾಗಳು ಇಲ್ಲಿವೆ.

ಬ್ರೈನ್ ಸ್ಟ್ರೋಕ್ ರೋಗಲಕ್ಷಣಗಳನ್ನು ಕಡಿಮೆ ಮಾಡಲು ಮನೆಯಲ್ಲಿ ತಯಾರಿಸಿದ 5 ಪಾನೀಯಗಳ ವಿವರ ಇಲ್ಲಿವೆ:

ಗ್ರೀನ್ ಟೀ:

ಗ್ರೀನ್ ಟೀಯಲ್ಲಿ ಕೆಫೀನ್ ಮತ್ತು ಕ್ಯಾಟೆಚಿನ್​ಗಳಿವೆ. ಹಲವಾರು ಅಧ್ಯಯನಗಳ ಪ್ರಕಾರ, ಇದು ಮೆದುಳಿಗೆ ವಿಶ್ರಾಂತಿ ನೀಡಲು ಸಹಾಯ ಮಾಡುತ್ತದೆ. ನಮ್ಮ ಗಮನ, ನೆನಪಿನ ಶಕ್ತಿಯನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ಅಣಬೆ ತಿನ್ನುವುದರಿಂದ ಕೆಲವರಿಗೆ ಅಪಾಯವೂ ಆದೀತು!

ಬೆರಿ ಜ್ಯೂಸ್‌ಗಳು:

ಬೆರಿಗಳು ದಿನನಿತ್ಯ ಬಳಸುವ ಡಯಟ್‌ನಲ್ಲಿ ಸೇರಿಸಿಕೊಳ್ಳಬಹುದಾದ ಆಹಾರಗಳಲ್ಲಿ ಒಂದಾಗಿದೆ. ಇದು ಆರೋಗ್ಯಕ್ಕೆ ಮತ್ತು ದೇಹದ ಪ್ರತಿಯೊಂದು ಭಾಗಕ್ಕೂ ಒಳ್ಳೆಯದು. ಇದು ಉರಿಯೂತದ, ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ದೇಹವನ್ನು ಆಕ್ಸಿಡೇಟಿವ್ ಹಾನಿಯಿಂದ ರಕ್ಷಿಸುತ್ತದೆ. ಇದು ಸಸ್ಯ ರಾಸಾಯನಿಕಗಳನ್ನು ಸಹ ಹೊಂದಿದೆ. ಇದರಲ್ಲಿರುವ ಆಂಥೋಸಯಾನಿನ್​ಗಳು ಸ್ಮರಣೆಯನ್ನು ಹೆಚ್ಚಿಸಲು ಪ್ರಯೋಜನಕಾರಿಯಾಗಿದೆ.

ಬೀಟ್ರೂಟ್ ಜ್ಯೂಸ್:

ಬೇರಿನ ತರಕಾರಿಗಳು ತುಂಬಾ ಆರೋಗ್ಯಕರವಾಗಿರುತ್ತವೆ. ಹಾನಿಕಾರಕ ಸ್ವತಂತ್ರ ರಾಡಿಕಲ್​ಗಳಿಂದ ನಮ್ಮನ್ನು ರಕ್ಷಿಸಲು ಇದು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುತ್ತದೆ, ಮೆದುಳಿನ ಸ್ಟ್ರೋಕ್ ಮತ್ತು ಬುದ್ಧಿಮಾಂದ್ಯತೆಯ ಸಂಭವವನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಬೀಟ್ರೂಟ್ ಜೀವಕೋಶದ ಆಮ್ಲಜನಕವನ್ನು ಉತ್ತೇಜಿಸಲು ಮತ್ತು ರಕ್ತದ ಹರಿವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: World Spine Day: ಬೆನ್ನುನೋವು ಕಾಡುತ್ತಿದೆಯೇ? ಬೆನ್ನುಮೂಳೆಯ ಆರೈಕೆಗೆ 8 ಸಲಹೆಗಳು ಇಲ್ಲಿವೆ

ಅರಿಶಿನ ಚಹಾ:

ಅರಿಶಿನವು ಔಷಧೀಯ ಉದ್ದೇಶಗಳನ್ನು ಹೊಂದಿರುವ ಪ್ರಾಚೀನ ಮಸಾಲೆಯಾಗಿದೆ. ಗೋಲ್ಡನ್ ಹಾಲು ಅಥವಾ ಗೋಲ್ಡನ್ ಟೀಯನ್ನು ಸೇವಿಸಿದರೆ ಇದರಲ್ಲಿರುವ ಅರಿಶಿನವು ಸ್ಟ್ರೋಕ್ ರೋಗಲಕ್ಷಣಗಳಿಂದ ಮೆದುಳನ್ನು ರಕ್ಷಿಸಲು ಪರಿಣಾಮಕಾರಿಯಾಗಿದೆ. ಇದು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ, ಮೆದುಳಿನ ಉರಿಯೂತವನ್ನು ಕಡಿಮೆ ಮಾಡುತ್ತದೆ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿ-ಆಕ್ಸಿಡೆಂಟ್ ಗುಣಲಕ್ಷಣಗಳನ್ನು ಹೊಂದಿದೆ. ಕೆಲವು ಸಂಶೋಧನೆಗಳ ಪ್ರಕಾರ, ಇದು ಆಲ್ಝೈಮರ್​ ಕಾಯಿಲೆಗೆ ಸಹ ಒಳ್ಳೆಯದು.

ಹಸಿರು ಜ್ಯೂಸ್​ ಮತ್ತು ಸ್ಮೂಥಿಗಳು:

ಹಸಿರು ಜ್ಯೂಸ್ ಅಥವಾ ಸ್ಮೂಥಿಗಳು ಮೆದುಳಿನ ಆರೋಗ್ಯವನ್ನು ರಕ್ಷಿಸಲು ಸಹಾಯಕವಾಗಿದೆ. ಪಾಲಕ್, ಕೇಲ್, ಕೋಸುಗಡ್ಡೆ, ಅಥವಾ ಇತರ ಹಸಿರು ತರಕಾರಿಗಳು ಫೋಲೇಟ್ ಮತ್ತು ಲುಟೀನ್‌ನಂತಹ ಪೋಷಕಾಂಶಗಳನ್ನು ಹೊಂದಿರುತ್ತವೆ. ಇದರಲ್ಲಿ ಕಬ್ಬಿಣ ಮತ್ತು ಮೆಗ್ನೀಸಿಯಮ್‌ ಅಂಶ ಸಮೃದ್ಧವಾಗಿವೆ. ಎಲ್ಲಾ ಪೋಷಕಾಂಶಗಳು ಮೆದುಳಿನ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?