AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಸಾಗುವ ಮೊದಲೇ ಮರೆವಿನ ಕಾಯಿಲೆ ಬಾರದಿರಲು 7 ಸೂಪರ್ ಫುಡ್​ಗಳು ಇಲ್ಲಿವೆ

ಮೆದುಳಿನ ಆರೋಗ್ಯದ ಕ್ಷೀಣತೆ, ನೆನಪಿನ ಶಕ್ತಿ, ಆಲ್ಝೈಮರ್ ಅಥವಾ ಬುದ್ಧಿಮಾಂದ್ಯತೆಯು ವಯಸ್ಸಾದ ಜನರು ಎದುರಿಸುವ ಸಾಮಾನ್ಯ ಆರೋಗ್ಯ ಸಮಸ್ಯೆಗಳಾಗಿವೆ. ಆದರೆ, ಆಹಾರದ ಆಯ್ಕೆಗಳನ್ನು ಬದಲಿಸುವ ಮೂಲಕ ಈ ಸಮಸ್ಯೆಯನ್ನು ಕೊಂಚ ಮಟ್ಟಿಗೆ ನಿವಾರಿಸಬಹುದು.

ವಯಸ್ಸಾಗುವ ಮೊದಲೇ ಮರೆವಿನ ಕಾಯಿಲೆ ಬಾರದಿರಲು 7 ಸೂಪರ್ ಫುಡ್​ಗಳು ಇಲ್ಲಿವೆ
ಮೆದುಳಿನ ಆರೋಗ್ಯ ಹೆಚ್ಚಿಸುವ ಆಹಾರಗಳುImage Credit source: iStock
Follow us
ಸುಷ್ಮಾ ಚಕ್ರೆ
|

Updated on: Oct 26, 2023 | 10:39 AM

ವಯಸ್ಸಾಗುತ್ತಾ ಹೋದಂತೆ ನೆನಪಿನ ಶಕ್ತಿಯೂ ಕಡಿಮೆಯಾಗುತ್ತದೆ. ಆದರೆ, ಕೆಲವರಿಗೆ ವಯಸ್ಸಾಗುವ ಮೊದಲೇ ಜ್ಞಾಪಕಶಕ್ತಿ ಕ್ಷೀಣಿಸಲಾರಂಭಿಸುತ್ತದೆ. ವೃದ್ಧಾಪ್ಯದಲ್ಲಿ ಬರುವ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಲು ನಮಗೆ ಸಾಧ್ಯವಾಗುವುದಿಲ್ಲ. ಆದರೆ, ಮಧ್ಯವಯಸ್ಸಿನಲ್ಲಿ ಬರುವ ಕೆಲವು ಆರೋಗ್ಯ ಸಮಸ್ಯೆಗಳನ್ನು ನಮ್ಮ ಜೀವನಶೈಲಿ, ಆಹಾರ ಪದ್ಧತಿಯ ಮೂಲಕ ನಿಯಂತ್ರಿಸಬಹುದಾಗಿದೆ. ಮೆದುಳಿನ ಆರೋಗ್ಯದ ಕ್ಷೀಣತೆ, ನೆನಪಿನ ಶಕ್ತಿ, ಆಲ್ಝೈಮರ್ ಅಥವಾ ಬುದ್ಧಿಮಾಂದ್ಯತೆಯು ವಯಸ್ಸಾದ ಜನರು ಎದುರಿಸುವ ಸಾಮಾನ್ಯ ಆರೋಗ್ಯ ಸಮಸ್ಯೆಗಳಾಗಿವೆ. ಆದರೆ, ಆಹಾರದ ಆಯ್ಕೆಗಳನ್ನು ಬದಲಿಸುವ ಮೂಲಕ ಈ ಸಮಸ್ಯೆಯನ್ನು ಕೊಂಚ ಮಟ್ಟಿಗೆ ನಿವಾರಿಸಬಹುದು. ಅದರಲ್ಲೂ 50 ವರ್ಷವಾಗುತ್ತಿದ್ದಂತೆ ನಾವು ಸೇವಿಸುವ ಆಹಾರದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದ ಇರಬೇಕು.

ನೆನಪಿನ ಶಕ್ತಿಯ ಸಮಸ್ಯೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುವ 7 ಸೂಪರ್‌ಫುಡ್‌ಗಳು ಇಲ್ಲಿವೆ.

ಒಮೆಗಾ-3-ಫ್ಯಾಟಿ ಆಸಿಡ್‌ಗಳು:

ಕೊಬ್ಬಿನ ಮೀನು ಸಾಲ್ಮನ್, ಟ್ರೌಟ್, ಮ್ಯಾಕೆರೆಲ್, ಹೆರಿಂಗ್ ಮತ್ತು ಸಾರ್ಡೀನ್‌ಗಳು ಮೆದುಳಿನ ಆರೋಗ್ಯಕ್ಕೆ ಅಗತ್ಯವಾದ ಒಮೆಗಾ-3 ಕೊಬ್ಬಿನಾಮ್ಲಗಳ ಉತ್ತಮ ಮೂಲಗಳಾಗಿವೆ.

ಬೆರಿ ಹಣ್ಣುಗಳು:

ಬೆರಿಹಣ್ಣುಗಳು, ಸ್ಟ್ರಾಬೆರಿಗಳು, ರಾಸ್​ಬೆರೀಸ್ ಮತ್ತು ಬ್ಲ್ಯಾಕ್​ಬೆರಿಗಳಲ್ಲಿ ಆ್ಯಂಟಿಆಕ್ಸಿಡೆಂಟ್​ಗಳು ಸಮೃದ್ಧವಾಗಿವೆ. ಇದು ಮೆದುಳಿಗೆ ಹಾನಿಯಾಗದಂತೆ ರಕ್ಷಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ನೆನಪಿನ ಶಕ್ತಿ, ಮೆದುಳಿನ ಆರೋಗ್ಯಕ್ಕೆ ಮನೆಯಲ್ಲೇ ತಯಾರಿಸಿದ 5 ಜ್ಯೂಸ್​ಗಳು ಇಲ್ಲಿವೆ

ಹಸಿರು ತರಕಾರಿಗಳು:

ಪಾಲಕ್, ಎಲೆಕೋಸು ಮತ್ತು ಕೊಲಾರ್ಡ್ ಗ್ರೀನ್ಸ್ ವಿಟಮಿನ್ ಕೆ, ಫೋಲೇಟ್ ಮತ್ತು ಲುಟೀನ್ ನಂತಹ ಮೆದುಳಿನ ಆರೋಗ್ಯಕ್ಕೆ ಪ್ರಮುಖವಾದ ವಿಟಮಿನ್​ಗಳು ಮತ್ತು ಖನಿಜಗಳ ಉತ್ತಮ ಮೂಲಗಳಾಗಿವೆ.

ನಟ್ಸ್​:

ಬಾದಾಮಿ, ವಾಲ್‌ನಟ್ಸ್ ಮತ್ತು ಚಿಯಾ ಸೀಡ್ಸ್​ಗಳಲ್ಲಿ ವಿಟಮಿನ್ ಇ ಹೆಚ್ಚಾಗಿರುತ್ತವೆ. ಇದು ಉತ್ಕರ್ಷಣ ನಿರೋಧಕವಾಗಿದ್ದು, ಮೆದುಳಿಗೆ ಹಾನಿಯಾಗದಂತೆ ರಕ್ಷಿಸಲು ಸಹಾಯ ಮಾಡುತ್ತವೆ.

ಧಾನ್ಯಗಳು:

ಬ್ರೌನ್ ರೈಸ್, ಕ್ವಿನೋವಾ ಮತ್ತು ಓಟ್ಸ್ ಸಂಕೀರ್ಣ ಕಾರ್ಬೋಹೈಡ್ರೇಟ್‌ಗಳ ಉತ್ತಮ ಮೂಲಗಳಾಗಿವೆ. ಇದು ಮೆದುಳಿಗೆ ಉತ್ತಮ ಶಕ್ತಿಯ ಪೂರೈಕೆಯನ್ನು ಒದಗಿಸುತ್ತದೆ.

ಬ್ರೊಕೊಲಿ:

ಬ್ರೊಕೊಲಿ ಕ್ರೂಸಿಫೆರಸ್ ತರಕಾರಿಯಾಗಿದ್ದು, ಇದು ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಇದರಲ್ಲಿ ವಿಟಮಿನ್ ಕೆ, ಖನಿಜಗಳು ಮತ್ತು ಇತರ ಜೀವಸತ್ವಗಳು ಅಧಿಕವಾಗಿದೆ.

ಕುಂಬಳಕಾಯಿ ಬೀಜ:

ಕುಂಬಳಕಾಯಿ ಬೀಜಗಳು ಉತ್ಕರ್ಷಣ ನಿರೋಧಕಗಳ ಪ್ರಬಲ ಮೂಲವಾಗಿದೆ. ಇದರಲ್ಲಿ ತಾಮ್ರ, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಸತುವುಗಳಂತಹ ಪ್ರಮುಖ ಅಂಶಗಳಿವೆ. ಈ ಪ್ರತಿಯೊಂದು ಖನಿಜಗಳು ಆಲ್ಝೈಮರ್​ ಕಾಯಿಲೆ, ಖಿನ್ನತೆ ಸೇರಿದಂತೆ ಮೆದುಳಿನ ಅಸ್ವಸ್ಥತೆಗಳನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Skin Care: ಮುಖದ ಕಾಂತಿ ಹೆಚ್ಚಾಗಲು ದಿನಕ್ಕೊಂದು ಕ್ಯಾರೆಟ್ ತಿನ್ನಿ

ಈ ಆಹಾರಗಳನ್ನು ತಿನ್ನುವುದರ ಜೊತೆಗೆ, ಸಂಸ್ಕರಿಸಿದ ಆಹಾರಗಳು, ಸಕ್ಕರೆ ಪಾನೀಯಗಳು, ಅತಿಯಾದ ಕೆಫೀನ್ ಮತ್ತು ಆಲ್ಕೋಹಾಲ್ ಸೇವಿಸದಿರುವುದು ಕೂಡ ಮುಖ್ಯವಾಗಿದೆ. ಈ ವಸ್ತುಗಳು ದೇಹವನ್ನು ನಿರ್ಜಲೀಕರಣಗೊಳಿಸಬಹುದು ಮತ್ತು ನೆನಪಿನ ಶಕ್ತಿ ಕಡಿಮೆ ಮಾಡಬಹುದು.

ಆಲ್ಝೈಮರ್ ಕಾಯಿಲೆಯ ಲಕ್ಷಣಗಳೆಂದರೆ, ಬೇರೆಯವರೊಂದಿಗೆ ಮಾತನಾಡಲು ತೊಂದರೆಯಾಗುವುದು, ಇತ್ತೀಚಿನ ಅನುಭವಗಳು ಅಥವಾ ಸುತ್ತಮುತ್ತಲಿನವರ ಬಗ್ಗೆ ನೆನಪಿಲ್ಲದಿರುವುದು, ಹಸಿವಾಗದಿರುವುದು, ತೂಕ ಕಡಿಮೆಯಾಗುವುದು, ಹಲ್ಲಿನ, ಚರ್ಮದ ಮತ್ತು ಕಾಲಿನ ಸಮಸ್ಯೆಗಳು ಹೆಚ್ಚಾಗುವುದು, ನುಂಗಲು ತೊಂದರೆಯಾಗುವುದು, ನರಳುವುದು, ಹೆಚ್ಚು ನಿದ್ರೆ ಮಾಡುವುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್