AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breastfeeding Week 2025: ತಾಯಿ ಹಾಲು ಅಮೃತಕ್ಕೆ ಸಮಾನ; ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವವನ್ನು ತಿಳಿಯಿರಿ

ತಾಯಿಯ ಎದೆಹಾಲನ್ನು ಜೀವಾಮೃತ ಎಂದೇ ಹೇಳಬಹುದು. ಶಿಶು ಆರೋಗ್ಯಕರವಾಗಿರಬೇಕೆಂದರೆ, ತಾಯಿಯ ಎದೆಹಾಲನ್ನು ಕಡ್ಡಾಯವಾಗಿ ಕುಡಿಸಲೇಬೇಕು. ಅಲ್ಲದೆ ಶಿಶುವಿನ ಬೆಳವಣಿಗೆ ಪ್ರಯಾಣದಲ್ಲಿ ಸ್ತನ್ಯಪಾನವು ಅತ್ಯಂತ ಅವಶ್ಯಕ ಭಾಗವಾಗಿದೆ. ತಾಯಿ ಎದೆ ಹಾಲಿನ ಮಹತ್ವ ಹಾಗೂ ಸ್ತನ್ಯಪಾನಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಆಗಸ್ಟ್‌ 1 ರಿಂದ 7 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಹಿನ್ನೆಲೆಯನ್ನು ತಿಳಿಯೋಣ ಬನ್ನಿ.

Breastfeeding Week 2025: ತಾಯಿ ಹಾಲು ಅಮೃತಕ್ಕೆ ಸಮಾನ; ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವವನ್ನು ತಿಳಿಯಿರಿ
ವಿಶ್ವ ಸ್ತನ್ಯಪಾನ ಸಪ್ತಾಹ
ಮಾಲಾಶ್ರೀ ಅಂಚನ್​
|

Updated on: Jul 31, 2025 | 8:43 PM

Share

ತಾಯಿಯ ಹಾಲು (Breast milk) ಶಿಶುಗಳಿಗೆ ಅಮೃತವಿದ್ದಂತೆ. ಇದು ಬಾಲ್ಯದಲ್ಲಿ ಕಾಣಿಸಿಕೊಳ್ಳುವ ಕಾಯಿಲೆಗಳಿಂದ ಶಿಶುಗಳನ್ನು ರಕ್ಷಿಸಲು ಸಹಾಯ ಮಾಡುವ ಪ್ರತಿಕಾಯಕಗಳನ್ನು ಹೊಂದಿರುತ್ತದೆ. ತಾಯಿಯ ಎದೆ ಹಾಲು ಮಗುವಿಗೆ ಅತ್ಯುತ್ತಮವಾದ ಪೋಷಣೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎದೆಹಾಲು ಮಗುವಿನ ಅರೋಗ್ಯಕರ ಬೆಳವಣಿಗೆಗೆ ಅಗತ್ಯವಾದ ಎಲ್ಲಾ ಪೋಷಕಾಂಶಗಳನ್ನು ಹೊಂದಿದ್ದು, ಇದು ಮಗುವಿನ ಆರೋಗ್ಯವನ್ನು ವೃದ್ಧಿಸುವುದು ಮಾತ್ರವಲ್ಲದೆ ಹಾಲುಣಿಸುವುದರಿಂದ ತಾಯಿ ಮತ್ತು ಮಗುವಿನ ನಡುವಿನ ವಾತ್ಸಲ್ಯ, ಬಾಂಧವ್ಯ ಮತ್ತು ಪ್ರೀತಿ ಸಹ ಹೆಚ್ಚಾಗುತ್ತದೆ. ತಾಯಿಯ ಎದೆಹಾಲಿನ ಮಹತ್ವ ಮತ್ತು ಎದೆ ಹಾಲಿನ ಪ್ರಯೋಜನಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಆಗಸ್ಟ್‌ ಮೊದಲ ವಾರ ಅಂದರೆ ಆಗಸ್ಟ್‌ 1 ರಿಂದ 7 ರ ವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹವನ್ನು (Breastfeeding Week) ಆಚರಿಸಲಾಗುತ್ತದೆ.

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಇತಿಹಾಸ:

ಸ್ತನ್ಯಪಾನದ ಪ್ರಯೋಜನಗಳು ಮತ್ತು ಮಗುವಿಗೆ ಹಾಲುಣಿಸಲು ತಾಯಂದಿರನ್ನು ಪ್ರೇರೇಪಿಸುವ ಸಲುವಾಗಿ 1991ರಲ್ಲಿ ವರ್ಲ್ಡ್ ಅಲೈಯನ್ಸ್ ಫಾರ್ ಬ್ರೆಸ್ಟ್ ಫೀಡಿಂಗ್ ಆಕ್ಷನ್ (WABA) ಅನ್ನು ರಚಿಸಲಾಯಿತು. ಆರಂಭದಲ್ಲಿ ವರ್ಷಕ್ಕೆ ಒಂದು ದಿನ ಸ್ತನ್ಯಪಾನ ದಿನವನ್ನು ಆಚರಿಸಲು ನಿರ್ಧರಿಸಲಾಗಿತ್ತು. ಆದರೆ ಈ ವಿಷಯವು ಸಾಮಾನ್ಯ ಜೀವನ ಮತ್ತು ಮಕ್ಕಳ ಆರೋಗ್ಯದಂತಹ ಸಮಸ್ಯೆಗಳಿಗೆ ಸಂಬಂಧಿಸಿರುವುದರಿಂದ ಅದರ ಉಪಯುಕ್ತತೆ ಮತ್ತು ಅಗತ್ಯವನ್ನು ಪರಿಗಣಿಸಿ, ಒಂದು ವಾರಗಳ ಕಾಲ ಈ ಜಾಗೃತಿ ಕಾರ್ಯವನ್ನು ಆಚರಿಸಲು ನಿರ್ಧರಿಸಲಾಯಿತು. ಇದಕ್ಕೆ ವಿಶ್ವ ಸ್ತನ್ಯಪಾನ ಸಪ್ತಾಹ (World Breastfeeding Week) ಎಂದು ಹೆಸರಿಡಲಾಯಿತು. ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಮೊದಲ ಬಾರಿಗೆ 1992ರಲ್ಲಿ ಆಯೋಜಿಸಲಾಯಿತು. ಶಿಶುಗಳಿಗೆ ಹಾಲುಣಿಸಲು ತಾಯಂದಿರನ್ನು ಉತ್ತೇಜಿಸುವುದು ಮತ್ತು ಪ್ರಪಂಚದಾದ್ಯಂತ ಮಕ್ಕಳ ಆರೋಗ್ಯವನ್ನು ಸುಧಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇಂದು ನೂರಕ್ಕೂ ಹೆಚ್ಚು ದೇಶಗಳು ಈ ಸಾಪ್ತಾಹಿಕ ಜಾಗೃತಿ ಕಾರ್ಯವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಹಸುವಿನ ಕೆಚ್ಚಲಿನಿಂದ ನೇರವಾಗಿ ಮಗುವಿಗೆ ಹಾಲು ಕುಡಿಸುವುದು ಸರಿಯೇ? ವೈದ್ಯರು ಹೇಳೋದೇನು?

ಇದನ್ನೂ ಓದಿ
Image
ಗರ್ಭಧಾರಣೆಗೆ ಪ್ರಯತ್ನಿಸುತ್ತಿರುವವರು ತಪ್ಪದೆ ಈ ಆಹಾರಗಳನ್ನು ತಿನ್ನಬೇಕು
Image
1 ವರ್ಷದವರೆಗೆ ಮಕ್ಕಳಿಗೆ ದನದ ಹಸಿ ಹಾಲು ಕುಡಿಸಬೇಡಿ
Image
ಬಿಸಿ vs ತಣ್ಣಗಾದ ಹಾಲು ಇದರಲ್ಲಿ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ
Image
ಮೇಕೆ ಹಾಲನ್ನು ಕುಡಿಯಿರಿ, ಈ ಎಲ್ಲಾ ಪ್ರಯೋಜನಗಳನ್ನು ಪಡೆಯಿರಿ

ವಿಶ್ವ ಸ್ತನ್ಯಪಾನ ವಾರದ ಮಹತ್ವ:

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯುನಿಸೆಫ್ ಪ್ರಕಾರ, ಶಿಶುಗಳನ್ನು ಆರೋಗ್ಯವಾಗಿಡಲು ಸ್ತನ್ಯಪಾನವು ಅತ್ಯುತ್ತಮ ಮಾರ್ಗವಾಗಿದೆ. ಇದು ಶಿಶುಗಳಿಗೆ ಪೋಷಣೆ ನೀಡುತ್ತದೆ, ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತದೆ, ಅತಿಸಾರ ಮತ್ತು ನ್ಯುಮೋನಿಯಾದಂತಹ ರೋಗಗಳನ್ನು ಸಹ ತಡೆಯುತ್ತದೆ. ಅಲ್ಲದೆ, ಇದು ತಾಯಂದಿರಲ್ಲಿ ಸ್ತನ ಕ್ಯಾನ್ಸರ್, ಅಂಡಾಶಯದ ಕ್ಯಾನ್ಸರ್ ಮತ್ತು ಟೈಪ್ -2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಒಟ್ಟಾರೆಯಾಗಿ ಸ್ತನ್ಯಪಾನ ತಾಯಿ ಮತ್ತು ಮಗು ಇಬ್ಬರ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು. ಸ್ತನ್ಯಪಾನದ ಈ ಮಹತ್ವದ ಬಗ್ಗೆ ತಿಳಿಸುವುದು ಸ್ತನ್ಯಪಾನ ಸಪ್ತಾಹದ ಮುಖ್ಯ ಉದ್ದೇಶವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು