AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಗೋಧಿನುಚ್ಚು ಉಪ್ಪಿಟ್ಟು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗದಿಂದ ಬಳಲುತ್ತಿರುವವರು ಗೋಧಿನುಚ್ಚು ಉಪ್ಪಿಟ್ಟು ತಿನ್ನುವುದು ಉತ್ತಮ. ಮಿಲ್‌ ಮಾಡದೆ ಹಾಗೆ ಕುಟ್ಟಿ ಪುಡಿ ಮಾಡಿ ತಯಾರಿಸುವುದಕ್ಕೆ ಬ್ರೋಕನ್‌ ವೀಟ್‌ ಅಥವಾ ಗೋಧಿನುಚ್ಚು ಎನ್ನಲಾಗುತ್ತದೆ. ಚಪಾತಿಗಿಂತಲೂ ಗೋಧಿನುಚ್ಚು ಹೆಚ್ಚು ಪೌಷ್ಟಿಕವಾದುದು. ಇದು ಯಾವುದೇ ಅಡ್ಡ ಪರಿಣಾಮಗಳನ್ನು ಹೊಂದಿಲ್ಲ.

ಚಳಿಗಾಲದಲ್ಲಿ ಗೋಧಿನುಚ್ಚು ಉಪ್ಪಿಟ್ಟು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Broken Wheat UpmaImage Credit source: desertfoodfeed
ಅಕ್ಷತಾ ವರ್ಕಾಡಿ
|

Updated on: Nov 16, 2023 | 8:18 PM

Share

ಉಪ್ಪಿಟ್ಟು 10 ರಿಂದ 15 ನಿಮಿಷಗಳಲ್ಲಿ ತಯಾರಿಸುವ ಉಪಹಾರವಾಗಿದ್ದ ಪ್ರತೀ ಮನೆಯಲ್ಲಿ ವಾರದಲ್ಲಿ ಎರಡು ಸಲವಾದರೂ ಮಾಡುವುದುಂಟು. ಆದರೆ ಉಪ್ಪಿಟ್ಟು ಸಾಕಷ್ಟು ಜನರಿಗೆ ಇಷ್ಟವಾಗುವುದಿಲ್ಲ. ಆದರೆ ವಿಶೇಷವಾಗಿ ಚಳಿಗಾಲದಲ್ಲಿ ತಿನ್ನುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗದಿಂದ ಬಳಲುತ್ತಿರುವವರು ಗೋಧಿನುಚ್ಚು ಉಪ್ಪಿಟ್ಟು ತಿನ್ನುವುದು ಉತ್ತಮ. ಮಿಲ್‌ ಮಾಡದೆ ಹಾಗೆ ಕುಟ್ಟಿ ಪುಡಿ ಮಾಡಿ ತಯಾರಿಸುವುದಕ್ಕೆ ಬ್ರೋಕನ್‌ ವೀಟ್‌ ಅಥವಾ ಗೋಧಿನುಚ್ಚು ಎನ್ನಲಾಗುತ್ತದೆ. ಚಪಾತಿಗಿಂತಲೂ ಗೋಧಿನುಚ್ಚು ಹೆಚ್ಚು ಪೌಷ್ಟಿಕವಾದುದು. ಇದು ಯಾವುದೇ ಅಡ್ಡ ಪರಿಣಾಮಗಳನ್ನು ಹೊಂದಿಲ್ಲ. ಇದಲ್ಲದೆ, ಗೋಧಿಯಲ್ಲಿರುವ ಫೈಬರ್​​ ಅಂಶ ತೂಕ ಕಡಿಮೆ ಮಾಡುವಲ್ಲಿ ಸಹಾಯಕವಾಗಿದೆ. ಇದು ವಿಶೇಷವಾಗಿ ಫೈಬರ್, ಪ್ರೋಟೀನ್, ವಿಟಮಿನ್ ಮತ್ತು ಖನಿಜಗಳಲ್ಲಿ ಹೆಚ್ಚಿನ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಗೋಧಿ ಹೊಟ್ಟು ಹಾಕಿ ಮಾಡಿದ ಯಾವುದೇ ಆಹಾರ ಸೇವಿಸಬಹುದು. ಇನ್ನೇನು ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಗೋಧಿನುಚ್ಚು ಉಪ್ಪಿಟ್ಟು ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು:

ತೂಕ ಇಳಿಕೆಗೆ ಸಹಾಯಕ:

ಗೋಧಿನುಚ್ಚು ಉಪ್ಮಾವನ್ನು ಎಲ್ಲಾ ತರಕಾರಿಗಳನ್ನು ಸೇರಿಸಿ ತಯಾರಿಸುವುದರಿಂದ, ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ತೂಕ ಇಳಿಸಿಕೊಳ್ಳಲು ಬಯಸುವವರು ಗೋಧಿನುಚ್ಚು ಖುಷಿಯಿಂದ ತಿನ್ನಬಹುದು. ಇದರಲ್ಲಿ ಕ್ಯಾಲೋರಿಯೂ ಕಡಿಮೆ. ಅದರ ಹೊರತಾಗಿ, ಅದರಲ್ಲಿ ಸ್ವಲ್ಪ ಪ್ರಮಾಣವೂ ನಿಮಗೆ ಹೊಟ್ಟೆ ತುಂಬುತ್ತದೆ. ಇದರಿಂದಾಗಿ ಇತರೆ ಆಹಾರ ಪದಾರ್ಥಗಳನ್ನು ತೆಗೆದುಕೊಳ್ಳುವಂತಿಲ್ಲ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್ ಎನ್ನುತ್ತಾರೆ ಆರೋಗ್ಯ ತಜ್ಞರು.

ಪ್ರೋಟೀನ್ಗಳು:

ಗೋಧಿ ಹೊಟ್ಟು ಸಾಕಷ್ಟು ಪ್ರೋಟೀನ್‌ಗಳನ್ನು ಹೊಂದಿರುತ್ತದೆ. ಅಲ್ಲದೆ ಇದರಿಂದ ತಯಾರಿಸಿದ ಯಾವುದೇ ಆಹಾರ ಪದಾರ್ಥಗಳನ್ನು ಸಂತೋಷದಿಂದ ತೆಗೆದುಕೊಳ್ಳಬಹುದು. ನೀವು ಕಡಿಮೆ ಕೊಬ್ಬಿನ ಆಹಾರವನ್ನು ಸೇವಿಸಿದರೆ, ನೀವು ಸುಲಭವಾಗಿ ತೂಕವನ್ನು ಕಳೆದುಕೊಳ್ಳುತ್ತೀರಿ. ಅಲ್ಲದೆ ದೇಹಕ್ಕೆ ಉತ್ತಮ ಪ್ರೊಟೀನ್ ಕೂಡ ಸಿಗುತ್ತದೆ.

ಇದನ್ನೂ ಓದಿ: ನೀವು ಡಯೆಟ್​ನಲ್ಲಿದ್ದೀರಾ? ಎಣ್ಣೆ ತಿಂಡಿಗಳನ್ನು ತಿಂದ ಮೇಲೆ ಏನು ಮಾಡಬೇಕು?

ನಿಧಾನ ಚಯಾಪಚಯ:

ಗೋಧಿನುಚ್ಚಿನಲ್ಲಿ ನಾರಿನಾಂಶ ಅಧಿಕವಾಗಿರುವುದರಿಂದ ಕರಗಲು ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.ಆದ್ದರಿಂದ ನಿಮಗೆ ಬೇಗನೆ ಹಸಿವಾಗುವುದಿಲ್ಲ. ಆದಾಗ್ಯೂ, ಕೆಲವರು ಗೋಧಿ ಹೊಟ್ಟುಗಳಿಂದ ಜೀರ್ಣಕಾರಿ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಅಂತಹವರಿಂದ ಈ ಆಹಾರದಿಂದ ದೂರವಿರುವುದು ಉತ್ತಮ.

ಫೈಬರ್ ಅಂಶ ಸಮೃದ್ಧವಾಗಿದೆ:

ಗೋಧಿನುಚ್ಚು ಹೆಚ್ಚಿನ ಫೈಬರ್ ಅನ್ನು ಹೊಂದಿರುತ್ತದೆ. ಹಾಗಾಗಿ ಜೀರ್ಣಾಂಗ ವ್ಯವಸ್ಥೆ ಸರಾಗವಾಗಿ ನಡೆಯಲು ಸಹಾಯ ಮಾಡುತ್ತದೆ. ಇದು ದೇಹದ ಎಲ್ಲಾ ಭಾಗಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಹ ಸಹಾಯ ಮಾಡುತ್ತದೆ.

ಮಧುಮೇಹವನ್ನು ನಿಯಂತ್ರಿಸಬಹುದು:

ಮಧುಮೇಹಿಗಳು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಗೋಧಿನುಚ್ಚು ಆಹಾರವನ್ನು ಸಕ್ಕರೆಯಾಗಿ ಪರಿವರ್ತಿಸುವುದನ್ನು ತಡೆಯುತ್ತದೆ. ಆದ್ದರಿಂದ ನೀವು ಯಾವುದೇ ಸಂದೇಹವಿಲ್ಲದೆ ಸೇವಿಸಬಹುದಾಗಿದೆ.

ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ:

ಗೋಧಿನುಚ್ಚು ಉಪ್ಪಿಟ್ಟು ಸೇವಿಸುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದಯವು ಆರೋಗ್ಯಕರವಾಗಿರುತ್ತದೆ. ಮೂಳೆಗಳೂ ಬಲಗೊಳ್ಳುತ್ತವೆ. ಇದಲ್ಲದೆ, ಗೋಧಿನುಚ್ಚು ಚರ್ಮವನ್ನು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.‘

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!