AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ಜ್ಯೂಸ್ ಕುಡಿಯುವುದರಿಂದ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದಾ? ಇಲ್ಲಿದೆ ಮಾಹಿತಿ

ಬೀಟ್ರೊಟ್ ರಸವು ನೈಟ್ರೇಟ್​​ಗಳನ್ನು ಹೊಂದಿರುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸುತ್ತದೆ ಮತ್ತು ರಕ್ತದ ಹರಿವನ್ನು ಸುಧಾರಿಸುತ್ತದೆ, ಆ ಮೂಲಕ ಅಧಿಕ ರಕ್ತದೊತ್ತಡ ಮತ್ತು ನಂತರದ ಹಾನಿಯನ್ನು ತಗ್ಗಿಸುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

Heart Attack: ಜ್ಯೂಸ್ ಕುಡಿಯುವುದರಿಂದ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದಾ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 14, 2023 | 3:24 PM

ನಿಮಗೆ ತಿಳಿದಿರಬಹುದು ಕೋವಿಡ್ ಸಾಂಕ್ರಾಮಿಕ ಪ್ರಾರಂಭವಾದಾಗಿನಿಂದ ಹೃದಯಾಘಾತ ಹೆಚ್ಚುತ್ತಲಿದ್ದು, ಇದು ಪ್ರಸ್ತುತ ಪೀಳಿಗೆಗೆ ಕಳವಳದ ಸಂಗತಿಯಾಗಿದೆ. 13 ವರ್ಷ ವಯಸ್ಸಿನ ಮಕ್ಕಳು ಸಹ ಮಾರಣಾಂತಿಕ ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಿರುವುದನ್ನು ನೀವು ನೋಡಿರಬಹುದು. ಅದಲ್ಲದೆ ಇತ್ತೀಚಿನ ದಿನಗಳಲ್ಲಿ ಹುಟ್ಟಿದ ಮಕ್ಕಳು ಹೃದಯಾಘಾದಿಂದ ಪ್ರಾಣ ಬಿಡುತ್ತಿದ್ದಾರೆ. ವಯಸ್ಕರಲ್ಲಿ ಇಂತಹ ಅಪಾಯವನ್ನು ಕಡಿಮೆ ಮಾಡುವಲ್ಲಿ ಆಹಾರ ಮತ್ತು ಅವರ ಜೀವನಶೈಲಿ ಪ್ರಮುಖ ಪಾತ್ರ ವಹಿಸುತ್ತದೆಯಾದರೂ, ಒಂದು ನಿರ್ದಿಷ್ಟ ತರಕಾರಿ ರಸ ಅಥವಾ ಹಣ್ಣಿನ ರಸ ಈ ಉದ್ದೇಶಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿದು ಬಂದಿದೆ. ಅದು ಬೇರಾವುದೂ ಅಲ್ಲ ಬೀಟ್ರೂಟ್ ಜ್ಯೂಸ್. ಈ ಕೆಂಪು ಬಣ್ಣದ ಪಾನೀಯವು ನಿಮಗೆ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ.

ಲಂಡನ್ನ ಕ್ವೀನ್ ಮೇರಿ ವಿಶ್ವವಿದ್ಯಾಲಯದ ತಜ್ಞರ ಪ್ರಕಾರ, ದಿನಕ್ಕೆ ಕೇವಲ 70 ಮಿಲಿ ಬೀಟ್ರೂಟ್ ರಸವನ್ನು ಕುಡಿಯುವುದರಿಂದ ಹೃದಯಾಘಾತದ ಅಪಾಯವನ್ನು ಶೇಕಡಾ 50ಕ್ಕಿಂತ ಕಡಿಮೆ ಮಾಡಬಹುದು. ಇದು ಕೇವಲ ಆರು ತಿಂಗಳಲ್ಲಿ ಸ್ಟೆಂಟ್ ಹೊಂದಿರುವ ರೋಗಿಗಳಲ್ಲಿನ ಹೆಚ್ಚಾಗಿರುವ ತೊಡಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Heart Attack Symptoms: ಕೇವಲ ಎದೆನೋವು ಮಾತ್ರವಲ್ಲ ಹೃದಯಾಘಾತದ ಈ ಲಕ್ಷಣಗಳ ಬಗ್ಗೆಯೂ ಎಚ್ಚರವಿರಲಿ

ಬೀಟ್ರೂಟ್ ಜ್ಯೂಸ್ ಸಮಗ್ರವಾಗಿ “ನೈಟ್ರೇಟ್​​​ಗಳನ್ನು” ಒಳಗೊಂಡಿದೆ. ಇದು ರಕ್ತನಾಳಗಳನ್ನು ಹಿಗ್ಗಿಸುತ್ತದೆ ಮತ್ತು ರಕ್ತದ ಹರಿವನ್ನು ಸುಧಾರಿಸುತ್ತದೆ, ಆ ಮೂಲಕ ಅಧಿಕ ರಕ್ತದೊತ್ತಡ ಮತ್ತು ನಂತರದ ಹಾನಿಯನ್ನು ತಗ್ಗಿಸುತ್ತದೆ. ಅಧ್ಯಯನದಲ್ಲಿ ಭಾಗಿಯಾಗಿರುವ, ಭಾಗವಹಿಸುವವರು ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಔಷಧಿಗಳ ಅಗತ್ಯವಿಲ್ಲದೆ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆಯನ್ನು ಗಮನಿಸಿದ್ದಾರೆ. ಪಾನೀಯವು ಪರಿಣಾಮಕಾರಿಯಾಗಿದ್ದು ಜೊತೆಗೆ ಸ್ಟೆಂಟ್ ಗಳು ಹೆಚ್ಚು ಕಾಲ ಬಾಳಿಕೆ ಬರುವುದನ್ನು ನೀವು ನೋಡಬಹುದಾಗಿದೆ.

ಹೃದಯಾಘಾತದ ಅಪಾಯವನ್ನು ಹೇಗೆ ಕಡಿಮೆ ಮಾಡುವುದು?

ಆನುವಂಶಿಕ ಅಂಶಗಳನ್ನು ಬದಲಾಯಿಸಲಾಗುವುದಿಲ್ಲವಾದರೂ, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಜನರಿಗೆ ಸಹಾಯ ಮಾಡುವ ಕೆಲವು ಸರಳ ಸಲಹೆಗಳಿವೆ:

-ಧೂಮಪಾನ ಮಾಡುವುದನ್ನು ನಿಲ್ಲಿಸಿ.

– ಆಲ್ಕೋಹಾಲ್ ಸೇವನೆಯನ್ನು ಮಿತಿಯಲ್ಲಿಟ್ಟುಕೊಳ್ಳಿ ಅಥವಾ ಬಿಟ್ಟು ಬಿಡಿ.

-ಸೂಚಿಸಿದ ಔಷಧೋಪಚಾರವನ್ನು ಸಮಯೋಚಿತವಾಗಿ ತೆಗೆದುಕೊಳ್ಳಿ.

– ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ.

-ಆರೋಗ್ಯಕರವಾಗಿರಲು ಪ್ರತಿನಿತ್ಯ ವ್ಯಾಯಾಮ ಮಾಡಿ.

-ಆಹಾರವನ್ನು ನಿಯಮಿತವಾಗಿ ಸೇವಿಸಿ, ಸಮತೋಲಿತ ಆಹಾರವನ್ನು ಅನುಸರಿಸಿ.

-ಸೂಚಿಸಲಾದ ಔಷಧಿಗಳನ್ನು ತೆಗೆದುಕೊಳ್ಳಿ.

ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ವೃತ್ತಿಪರ ವೈದ್ಯಕೀಯ ಸಲಹೆ ಎಂದು ಭಾವಿಸಬಾರದು. ನಿಮ್ಮ ಆಹಾರದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವ ಮೊದಲು ಯಾವಾಗಲೂ ನಿಮ್ಮ ವೈದ್ಯರು ಅಥವಾ ಆಹಾರ ತಜ್ಞರನ್ನು ಸಂಪರ್ಕಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ