AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಊಟ ಬಿಟ್ಟು ಮಲಗುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರುತ್ತೆ ಹುಷಾರ್!

ತೂಕ ಇಳಿಸಿಕೊಳ್ಳಲು ಕೆಲವರು ರಾತ್ರಿ ಊಟ ಮಾಡದೆಯೇ ಮಲಗುತ್ತಾರೆ. ಈ ಅಭ್ಯಾಸ ನಿಮ್ಮ ಆರೋಗ್ಯಕ್ಕೆ ಒಳ್ಳೆಯದಕ್ಕಿಂತ ಹೆಚ್ಚು ಹಾನಿ ಮಾಡುತ್ತದೆ ಎಂದು ವೈದ್ಯರು ಹೇಳುತ್ತಾರೆ. ಹೌದು, ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹಾಳು ಮಾಡುವುದರಿಂದ ಹಿಡಿದು ನಿದ್ರೆಯನ್ನು ಹಾಳು ಮಾಡುವ ವರೆಗೆ ಹಲವಾರು ಸಮಸ್ಯೆಗಳನ್ನು ಉಂಟುಮಾಡಬಹುದು. ಹಾಗಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು, ಯಾವ ಅಭ್ಯಾಸ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳುವುದು ಒಳ್ಳೆಯದು.

ರಾತ್ರಿ ಊಟ ಬಿಟ್ಟು ಮಲಗುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರುತ್ತೆ ಹುಷಾರ್!
Skipping DinnerImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 15, 2026 | 8:16 PM

Share

ಇತ್ತೀಚಿನ ದಿನಗಳಲ್ಲಿ ಹಲವರು ತೂಕ ಇಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಅಥವಾ ಕೆಲಸದ ಒತ್ತಡ, ದಣಿವಿನ ಕಾರಣದಿಂದ ರಾತ್ರಿ ಊಟ (Dinner) ಮಾಡದೇ ಮಲಗುತ್ತಾರೆ. ಕೆಲವರಿಗೆ ಇದು ಆರೋಗ್ಯಕರ ಕ್ರಮವೆಂದು ಅನಿಸಿದರೂ, ಆರೋಗ್ಯ ತಜ್ಞರ ಅಭಿಪ್ರಾಯ ವಿಭಿನ್ನವಾಗಿದೆ. ಹೌದು ರಾತ್ರಿ ಹೊತ್ತು ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ದೇಹದ ಮೇಲೆ ಕೆಟ್ಟ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾದರೆ ನಮಗೆ ಒಳ್ಳೆಯದು ಎಂದು ಅನಿಸುವ ಈ ಅಭ್ಯಾಸದಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು, ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಆಹಾರ ಸೇವನೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಎಸಿಡಿಟಿ ಮತ್ತು ಹೊಟ್ಟೆ ಉರಿ ಸಮಸ್ಯೆ

ಹೆಚ್ಚು ಸಮಯ ಹೊಟ್ಟೆ ಖಾಲಿಯಾಗಿ ಉಳಿದರೆ ಗ್ಯಾಸ್ಟ್ರಿಕ್ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ವಿಶೇಷವಾಗಿ ಎಸಿಡಿಟಿ, ಎದೆ ಉರಿ, ಹೊಟ್ಟೆ ಉರಿ ಹಾಗೂ ಗ್ಯಾಸ್ಟ್ರೈಟಿಸ್ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಕೆಲವರಿಗೆ ಬೆಳಿಗ್ಗೆ ಎದ್ದ ಕೂಡಲೇ ತಲೆನೋವು, ವಾಕರಿಕೆ, ಬಲಹೀನತೆ ಅನುಭವವಾಗಬಹುದು.

ನಿದ್ರೆಯ ಸರಿಯಾಗಿ ಬರದಿರಬಹುದು

ಹೊಟ್ಟೆ ಹಸಿದಿರುವಾಗ ಹೋಗಿ ಮಲಗುವುದರಿಂದ ಗಾಢ ನಿದ್ರೆ ಬರದೇ ಇರಬಹುದು. ಮಧ್ಯರಾತ್ರಿ ಪದೇಪದೇ ಎಚ್ಚರವಾಗುವುದು, ಹಸಿವಾಗಬಹುದು ಮತ್ತು ಬೆಳಿಗ್ಗೆ ಎದ್ದೇಳುವಾಗ ಸಾಮಾನ್ಯವಾಗಿ ದೇಹ ದಣಿದಿರಬಹುದು. ಹಾಗಾಗಿ ಚೆನ್ನಾಗಿ ನಿದ್ರೆ ಬರಲು ರಾತ್ರಿ ಸ್ವಲ್ಪ ಮಟ್ಟಿಗಾದರೂ ಆಹಾರ ಸೇವನೆ ಮಾಡುವುದು ಅಗತ್ಯವೆಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಆರೋಗ್ಯ ಚೆನ್ನಾಗಿರಬೇಕಂದ್ರೆ, ರಾತ್ರಿ ಈ ನಿಗದಿತ ಸಮಯದೊಳಗೆ ಊಟ ಮಾಡುವುದು ಸೂಕ್ತವಂತೆ

ಪೌಷ್ಟಿಕಾಂಶ ಕೊರತೆ ಅಪಾಯ

ರಾತ್ರಿ ಊಟವನ್ನು ನಿರಂತರವಾಗಿ ಬಿಡುವುದರಿಂದ ದೇಹಕ್ಕೆ ಅಗತ್ಯವಾದ ಪ್ರೋಟೀನ್, ವಿಟಮಿನ್ ಹಾಗೂ ಖನಿಜಾಂಶಗಳು ಸರಿಯಾದ ಪ್ರಮಾಣದಲ್ಲಿ ದೊರೆಯದೇ ಹೋಗಬಹುದು. ಇದರ ಪರಿಣಾಮವಾಗಿ ಸ್ನಾಯು ಬಲಹೀನತೆ, ರೋಗನಿರೋಧಕ ಶಕ್ತಿ ಕುಸಿತ ಮತ್ತು ಸದಾ ದಣಿವು ಕಾಣಿಸಿಕೊಳ್ಳಬಹುದು.

ಮೆಟಾಬಾಲಿಸಂ ಮೇಲೆ ಪರಿಣಾಮ ಬೀರಬಹುದು

ನಿರಂತರವಾಗಿ ಊಟ ಬಿಟ್ಟರೆ ದೇಹದ ಮೆಟಾಬಾಲಿಸಂ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇನ್ಸುಲಿನ್ ಮಟ್ಟದಲ್ಲಿ ಅಸಮತೋಲನ ಉಂಟಾಗಿ ಹಾರ್ಮೋನ್ ಕಾರ್ಯವೈಖರಿಗೂ ತೊಂದರೆ ಉಂಟಾಗಬಹುದು. ದೀರ್ಘಕಾಲದಲ್ಲಿ ಇದು ಮಧುಮೇಹ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

ರಾತ್ರಿ ಏನು ತಿನ್ನಬಹುದು?

ಖಾಲಿ ಹೊಟ್ಟೆಯಲ್ಲಿ ಮಲಗುವ ಬದಲು ಸುಲಭವಾಗಿ ಜೀರ್ಣವಾಗುವ ಆಹಾರ ಸೇವಿಸುವುದು ಉತ್ತಮ. ತರಕಾರಿ ಸೂಪ್, ಓಟ್ಸ್, ಹಣ್ಣುಗಳು, ಮೊಸರು, ಚಪಾತಿ ಅಥವಾ ಗಂಜಿ ಸೇವಿಸಿದರೆ ದೇಹಕ್ಕೆ ಬೇಕಾದ ಪೌಷ್ಟಿಕಾಂಶ ದೊರೆಯುತ್ತದೆ. ತೂಕ ಇಳಿಸಿಕೊಳ್ಳಲು ಊಟವನ್ನು ಸಂಪೂರ್ಣ ಬಿಡುವುದು ಸರಿಯಾದ ಮಾರ್ಗವಲ್ಲ. ಮಲಗುವ ಮೊದಲು ಎರಡು ಅಥವಾ ಮೂರು ಗಂಟೆಗಳ ಹಿಂದೆಯೇ ಹಗುರ ಹಾಗೂ ಸಮತೋಲನ ಆಹಾರ ಸೇವಿಸಬೇಕು. ಜೊತೆಗೆ ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿ ಅನುಸರಿಸುವುದು ದೀರ್ಘಕಾಲದ ಆರೋಗ್ಯಕ್ಕೆ ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ