AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ಕಾಯಿಲೆ ಇರುವವರು ತೊಂಡೆಕಾಯಿ ತಿನ್ನಬಹುದೇ, ತಜ್ಞರು ನೀಡಿದ ಮಾಹಿತಿ ಇಲ್ಲಿದೆ

ತೊಂಡೆಕಾಯಿ ತಿಂದರೆ ಮರೆಗುಳಿತನ ಬರುತ್ತದೆ ಎಂಬ ಮೂಢನಂಬಿಕೆಯಿದೆ. ಆ ಕಾರಣದಿಂದಾಗಿ ಹೆಚ್ಚಿನವರು ಈ ತರಕಾರಿಯನ್ನು ಸೇವನೆ ಮಾಡುವುದಿಲ್ಲ. ಆದರೆ ತೊಂಡೆಕಾಯಿಯನ್ನು ಜೀರ್ಣಕಾರಿ ಮತ್ತು ಮೆದುಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವವರು ತಿನ್ನಬಾರದು ಎಂದು ತಜ್ಞರು ಹೇಳುತ್ತಾರೆ. ತೊಂಡೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಮಾತ್ರವಲ್ಲ ಈ ಸಸ್ಯದ ಎಲೆ ಮತ್ತು ಬೇರುಗಳಲ್ಲಿಯೂ ಅನೇಕ ರೀತಿಯ ಔಷಧೀಯ ಗುಣಗಳು ಕಂಡುಬರುತ್ತವೆ. ಆದರೆ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಜೊತೆಗೆ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳಿರುವವರು ತೊಂಡೆಕಾಯಿಯನ್ನು ತಿನ್ನಬಹುದೇ? ತಿಂದರೆ ಏನಾಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಕ್ಕರೆ ಕಾಯಿಲೆ ಇರುವವರು ತೊಂಡೆಕಾಯಿ ತಿನ್ನಬಹುದೇ, ತಜ್ಞರು ನೀಡಿದ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 23, 2024 | 5:15 PM

ತೊಂಡೆಕಾಯಿ ಇಷ್ಟಪಡುವವರಿದ್ದಾರೆ. ಅನೇಕರಿಗೆ ಈ ತರಕಾರಿ ಅಷ್ಟಕ್ಕೇ ಅಷ್ಟೇ ಆದರೂ ಇದರ ಪ್ರಯೋಜನಗಳನ್ನು ತಿಳಿದರೆ ಯಾರೂ ಇದನ್ನು ತಿನ್ನದೆ ಇರಲಾರರು. ಇವು ದೇಹದ ಆರೋಗ್ಯಕ್ಕೆ ಅಗತ್ಯವಿರುವ ಕೆಲವು ಪೋಷಕಾಂಶಗಳನ್ನು ಹೇರಳವಾಗಿ ನೀಡುತ್ತದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವ ಮೂಲಕ ಅನೇಕ ರೀತಿಯ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬಹುದು. ಆದರೆ ಕೆಲವರಲ್ಲಿ, ತೊಂಡೆಕಾಯಿ ತಿಂದರೆ ಮರೆಗುಳಿತನ ಬರುತ್ತದೆ ಎಂಬ ಮೂಢನಂಬಿಕೆಯಿದೆ. ಆ ಕಾರಣದಿಂದಾಗಿ ಹೆಚ್ಚಿನವರು ಈ ತರಕಾರಿಯನ್ನು ಸೇವನೆ ಮಾಡುವುದಿಲ್ಲ. ಆದರೆ ತೊಂಡೆಕಾಯಿಯನ್ನು ಜೀರ್ಣಕಾರಿ ಮತ್ತು ಮೆದುಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವವರು ತಿನ್ನಬಾರದು ಎಂದು ತಜ್ಞರು ಹೇಳುತ್ತಾರೆ. ತೊಂಡೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಮಾತ್ರವಲ್ಲ ಈ ಸಸ್ಯದ ಎಲೆ ಮತ್ತು ಬೇರುಗಳಲ್ಲಿಯೂ ಅನೇಕ ರೀತಿಯ ಔಷಧೀಯ ಗುಣಗಳು ಕಂಡುಬರುತ್ತವೆ. ಆದರೆ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಜೊತೆಗೆ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳಿರುವವರು ತೊಂಡೆಕಾಯಿಯನ್ನು ತಿನ್ನಬಹುದೇ? ತಿಂದರೆ ಏನಾಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಕ್ಕರೆ ಕಾಯಿಲೆ ಇರುವವರು ಇದನ್ನು ತಿನ್ನಬಹುದೇ?

ಪ್ರಸ್ತುತ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು ಆದರೆ ಅದನ್ನು ಪೂರ್ತಿಯಾಗಿ ಗುಣಪಡಿಸಲು ಸಾಧ್ಯವಿಲ್ಲ. ಆದ್ದರಿಂದ ವಿವಿಧ ರೀತಿಯ ಆಹಾರಗಳನ್ನು ಸೇವನೆ ಮಾಡುವ ಮೂಲಕ, ನೀವು ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಇದು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಅಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗದಂತೆ ತಡೆಯುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ಹೆಚ್ಚಾಗಿ ತೊಂಡೆಕಾಯಿಯನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ. ನೀವು ತೊಂಡೆಕಾಯಿ ರಸವನ್ನು ಸಹ ಕುಡಿಯಬಹುದು. ಅಲ್ಲದೆ ಇದರ ಎಲೆಗಳ ರಸವನ್ನು ತೆಗೆದುಕೊಂಡರೂ ಮಧುಮೇಹವನ್ನು ನಿಯಂತ್ರಿಸಬಹುದು.

ಇದನ್ನೂ ಓದಿ: ನಿಮ್ಮ ಮನೆಯಲ್ಲಿ ಈ ಸಸ್ಯವಿದ್ದರೆ ಸಕ್ಕರೆ ಕಾಯಿಲೆ, ಕೀಲು ನೋವು ಹತ್ತಿರವೂ ಸುಳಿಯುವುದಿಲ್ಲ

ಇನ್ನೂ ಅನೇಕ ಪ್ರಯೋಜನಗಳು;

ನಿಯಮಿತವಾಗಿ ತೊಂಡೆಕಾಯಿ ಸೇವನೆ ಮಾಡುವುದರಿಂದ ಇನ್ನೂ ಅನೇಕ ರೀತಿಯ ಪ್ರಯೋಜನಗಳಿವೆ. ಈ ತರಕಾರಿಯ ಎಲೆಗಳಿಂದ ಮಾಡಿದ ಕಷಾಯವನ್ನು ಕುಡಿಯುವುದರಿಂದ ಜ್ವರ, ಕಾಮಾಲೆ ಮತ್ತು ಕ್ಯಾನ್ಸರ್ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಎಲೆಗಳನ್ನು ಉಂಡೆಯನ್ನಾಗಿ ಮಾಡಿ ಬಳಸುವುದರಿಂದ ಚರ್ಮದ ಸಮಸ್ಯೆಗಳನ್ನು ಗುಣಪಡಿಸಬಹುದು. ನೀವು ಎಲೆ ಮತ್ತು ಕಾಂಡ ತೆಗೆದುಕೊಂಡು ಅದರ ಕಷಾಯವನ್ನು ಕುಡಿದರೆ, ಇದು ಕೆಮ್ಮು ಮತ್ತು ಅಸ್ತಮಾವನ್ನು ಸಹ ನಿವಾರಿಸುತ್ತದೆ. ಹೊಟ್ಟೆಯಲ್ಲಿರುವ ಹುಳುಗಳನ್ನು ಕೂಡ ಹೊರಗೆ ಹಾಕುತ್ತದೆ.

ಸೂಚನೆ: ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಯಾವುದೇ ಮಾಹಿತಿಯನ್ನು ಅನುಸರಿಸುವ ಮೊದಲು ತಜ್ಞರನ್ನು ಸಂಪರ್ಕಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ