AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ನಿಯಂತ್ರಣ: ಸೂರ್ಯನ ಕಿರಣಗಳಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಬಹುದು! ಅದು ಸಾಧ್ಯವಾ?

ಟೈಪ್ 2 ಡಯಾಬಿಟಿಸ್ ಬರುವ ಸಾಧ್ಯತೆ: ಮಾನವ ದೇಹದ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಜೀರ್ಣ ಕ್ರಿಯೆಯ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಇದು ಟೈಪ್ 2 ಡಯಾಬಿಟಿಸ್ ಗೆ ದಾರಿ ಮಾಡಿಕೊಡುತ್ತದೆ ಎಂದು ಅಧ್ಯಯನದಲ್ಲಿ ಕಂಡುಬಂದಿದೆ. ಆದ್ದರಿಂದ ನಾವು ಸನ್ ಲೈಟ್‌ನಲ್ಲಿರಬೇಕೆಂದು ತಜ್ಞರು ಹೇಳುತ್ತಾರೆ.

ಮಧುಮೇಹ ನಿಯಂತ್ರಣ: ಸೂರ್ಯನ ಕಿರಣಗಳಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಬಹುದು! ಅದು ಸಾಧ್ಯವಾ?
ಸೂರ್ಯನ ಕಿರಣಗಳಿಂದ ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸಬಹುದು!
ಸಾಧು ಶ್ರೀನಾಥ್​
|

Updated on: Oct 05, 2023 | 6:06 AM

Share

ಪ್ರಸ್ತುತ ಎಲ್ಲರೂ ಹೆಚ್ಚಾಗಿ ತೊಂದರೆ ಪಡುವ ಸಮಸ್ಯೆಗಳಲ್ಲಿ ಡಯಾಬಿಟಿಸ್ ಕೂಡ ಒಂದು. ವಿಶೇಷವಾಗಿ ಟೈಪ್ 2 ಡಯಾಬಿಟಿಸ್‌ ತೊಂದರೆಗಳು ಎದುರಾಗಿವೆ. ಬದಲಾಗುವ ಲೈಫ್ ಸ್ಟೈಲ್, ಆಹಾರ ಕ್ರಮಗಳಲ್ಲಿ ಬದಲಾವಣೆಗಳು ಬರುವುದರಿಂದ ಡಯಾಬಿಟಿಸ್ ಬರುತ್ತದೆ. ವಿಶೇಷವಾಗಿ ಆಹಾರದ ವಿಷಯದಲ್ಲಿ, ನಿದ್ರೆಯ ವಿಷಯದಲ್ಲಿ ಸರಿಯಾದ ಕಾಳಜಿಯನ್ನು ತೆಗೆದುಕೊಳ್ಳದಿದ್ದಾಗ ಡಯಾಬಿಟಿಸ್ ಕಾಡುತ್ತದೆ. ಮಧು ಮೇಹವನ್ನು ಕಂಟ್ರೋಲ್ ಮಾಡುವ ಮಾರ್ಗಗಳು ಬಹಳಷ್ಟು ಇವೆ. ತಾಜಾ ಆಗಿ ಹೇಳಬೇಕು ಅಂದರೆ ಸೂರ್ಯನ ಕಿರಣಗಳಲ್ಲಿ ಇರುವುದರಿಂದ ಕೂಡ ಡಯಾಬಿಟಿಸ್ ಅನ್ನು ನಿಯಂತ್ರಣಕ್ಕೆ ತರಬಹುದು (vitamin D inadequacy). ಈ ಬಗ್ಗೆ ಇತ್ತೀಚೆಗೆ ಹಲವಾರು ಅಧ್ಯಯನಗಳು ನಡೆದಿವೆ. ಆ ಬಗ್ಗೆ ತಿಳಿದುಕೊಳ್ಳೋಣ.

ಜೀರ್ಣ ಕ್ರಿಯೆ ಸುಧಾರಿಸುತ್ತದೆ: ಸನ್ ಲೈಟ್‌ಗೆ (ಸೂರ್ಯನ ಕಿರಣಗಳಿಗೆ) ನಮ್ಮ ದೇಹವನ್ನು ಒಗ್ಗಿಕೊಳ್ಳುವುದರಿಂದ ಜೀರ್ಣ ಕ್ರಿಯೆ ವೃದ್ಧಿಸುತ್ತದೆ. ಇದರಿಂದ ಮಧುಮೇಹವನ್ನು ನಿಯಂತ್ರಿಸಲು ಸಹಾಯವಾಗುತ್ತದೆ ಎಂದು ಅಧ್ಯಯನ ಹೇಳುತ್ತಿದೆ. ಜೀರ್ಣ ಕ್ರಿಯೆ ವೃದ್ಧಿಸುವುದರಿಂದ ಅಂದರೆ ತಿನ್ನುವ ಆಹಾರ ಜೀರ್ಣವಾಗುವುದರಿಂದ ರಕ್ತದಲ್ಲಿ ಶುಗರ್ ಲೆವೆಲ್ಸ್ ತನ್ನಷ್ಟಕ್ಕೆ ತಾನೇ ನಿಯಂತ್ರಣಕ್ಕೆ ಬರುತ್ತದೆ.

ಟೈಪ್ 2 ಡಯಾಬಿಟಿಸ್ ಬರುವ ಸಾಧ್ಯತೆ: ಮಾನವ ದೇಹದ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಜೀರ್ಣ ಕ್ರಿಯೆಯ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಇದು ಟೈಪ್ 2 ಡಯಾಬಿಟಿಸ್ ಗೆ ದಾರಿ ಮಾಡಿಕೊಡುತ್ತದೆ ಎಂದು ಅಧ್ಯಯನದಲ್ಲಿ ಕಂಡುಬಂದಿದೆ. ಆದ್ದರಿಂದ ನಾವು ಸನ್ ಲೈಟ್‌ನಲ್ಲಿರಬೇಕೆಂದು ತಜ್ಞರು ಹೇಳುತ್ತಾರೆ. ಸನ್ ಲೈಟ್‌ಗೆ ಎಕ್ಸ್‌ಪೋಜ್ ಆಗುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಸಾಧ್ಯ.

ಸ್ಥೂಲಕಾಯ: ದೇಹದ ತೂಕ ಹೆಚ್ಚಾಗುವಂತಹ ಸಮಸ್ಯೆಗಳನ್ನು ಕೂಡ ಸನ್ ಲೈಟ್ ನಿಯಂತ್ರಿಸಬಲ್ಲದು ಎಂದು ತಜ್ಞರು ಹೇಳುತ್ತಾರೆ.

ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ: ನೈಸರ್ಗಿಕ ಬೆಳಕಿನಲ್ಲಿ ಇರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಹಾಗೆಯೇ ಸೀಜನಲ್ ರೋಗಗಳೊಂದಿಗೆ ಹೋರಾಡುವ ಶಕ್ತಿಯೂ ಸಹ ಪ್ರಾಪ್ತಿಯಾಗುತ್ತದೆ. ದೇಹದ ಮೇಲೆ ತುರಿಕೆ ಏನಾದರೂ ಇದ್ದರೆ ಅದನ್ನು ನಾಶಪಡಿಸುತ್ತದೆ.

Also Read: ಮಧುಮೇಹಿಗಳಿಗೆ ಇವೆ ಅಸಂಖ್ಯಾತ, ನಾನಾ ಉಚಿತ ಸಲಹೆಗಳು -ಯಾವುದು ಪಾಲಿಸಬೇಕು, ಯಾವುದು ಬಿಡಬೇಕು?

ಹೀಗಿರುವಾಗ ನೈಸರ್ಗಿಕ ಬೆಳಕು ದೇಹಕ್ಕೆ ತಗಲುವುದರಿಂದ ಅನೇಕ ಸಮಸ್ಯೆಗಳಿಗೆ ಚೆಕ್ ಹಾಕಬಹುದು. ತುಂಬಾ ಜನರು ಸನ್ ಲೈಟ್ ಇರುವಾಗ ಮನೆಯಲ್ಲಿಯೇ ಆರಾಮಾಗಿ ಇರಲು ಬಯಸುತ್ತಾರೆ. ಇದರಿಂದ ದೈಹಿಕ ಸಮಸ್ಯೆಗಳು ಹೆಚ್ಚಾಗುತ್ತವೆ ಅಷ್ಟೆ ಎಂಬುದನ್ನು ಮನಗಾಣಬೇಕು. ಕೃತಕ ಬೆಳಕಿನಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕುಗ್ಗುತ್ತದೆ. ರೋಗಗಳ ವಿರುದ್ಧ ಹೋರಾಡುವ ಶಕ್ತಿ ಲಭ್ಯವಾಗುವುದಿಲ್ಲ ಎಂದು ಇತ್ತೀಚೆಗೆ ಪ್ರಕಟವಾದ ಅಧ್ಯಯನ ಹೇಳುತ್ತಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

(ಸೂಚನೆ: ಇದು ತಜ್ಞರಿಂದ ಸಂಗ್ರಹಿಸಿದ ಮಾಹಿತಿ. ಇವುಗಳನ್ನು ಪಾಲಿಸುವ ಮೊದಲು ಒಮ್ಮೆ ವೈದ್ಯರನ್ನು ಸಂಪರ್ಕಿಸುವುದು ಒಳಿತು)

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ