Sign In

By signing in or creating an account, you agree with Associated Broadcasting Company's Terms & Conditions and Privacy Policy.

Health News: ಚಳಿಗಾಲದಲ್ಲಿ ಸೊಪ್ಪು ತರಕಾರಿ ತಿನ್ನಬಾರದೇ? ಇಲ್ಲಿದೆ ತಜ್ಞರ ಸಲಹೆ

ನಿಯಮಿತವಾಗಿ ನಿಮ್ಮ ಆಹಾರದ ಭಾಗವಾಗಿ ತರಕಾರಿಯನ್ನು ಸೇವನೆ ಮಾಡುವುದರಿಂದ ಅನೇಕ ರೀತಿಯ ಪ್ರಯೋಜನಗಳಿವೆ ಎಂದು ಪೌಷ್ಟಿಕ ತಜ್ಞರು ಹೇಳುತ್ತಾರೆ. ಹಸಿರು ಎಲೆ ತರಕಾರಿಗಳ ಸೇವನೆ ಮಾಡುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ. ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುವುದು ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ. ಹಸಿರು ತರಕಾರಿಗಳಿಗೆ ನಮ್ಮ ಜೀವನಶೈಲಿಯನ್ನು ಬದಲಾಯಿಸುವ ಸಾಮರ್ಥ್ಯವಿದೆ ಏಕೆಂದರೆ ಅವುಗಳಲ್ಲಿ ಕೊಬ್ಬಿನ ಅಂಶ ಕಡಿಮೆ ಮತ್ತು ಪ್ರೋಟೀನ್ ಮತ್ತು ಖನಿಜ ಲವಣಗಳು ಹೆಚ್ಚಾಗಿರುತ್ತವೆ ಎಂದು ವೈದ್ಯರು ಹೇಳುತ್ತಾರೆ.

Health News: ಚಳಿಗಾಲದಲ್ಲಿ ಸೊಪ್ಪು ತರಕಾರಿ ತಿನ್ನಬಾರದೇ? ಇಲ್ಲಿದೆ ತಜ್ಞರ ಸಲಹೆ
Leafy Vegetables
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on:Nov 26, 2024 | 6:39 PM

ಹಸಿರು ಎಲೆ ತರಕಾರಿಗಳು ಆರೋಗ್ಯಕ್ಕೆ ಒಳ್ಳೆಯದು ಎಂಬುದು ನಿಮಗೆ ತಿಳಿದಿರಬಹುದು. ನಿಯಮಿತವಾಗಿ ನಿಮ್ಮ ಆಹಾರದ ಭಾಗವಾಗಿ ತರಕಾರಿಯನ್ನು ಸೇವನೆ ಮಾಡುವುದರಿಂದ ಅನೇಕ ರೀತಿಯ ಪ್ರಯೋಜನಗಳಿವೆ ಎಂದು ಪೌಷ್ಟಿಕ ತಜ್ಞರು ಹೇಳುತ್ತಾರೆ. ಹಸಿರು ಎಲೆ ತರಕಾರಿಗಳ ಸೇವನೆ ಮಾಡುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ. ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುವುದು ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ. ಹಸಿರು ತರಕಾರಿಗಳಿಗೆ ನಮ್ಮ ಜೀವನಶೈಲಿಯನ್ನು ಬದಲಾಯಿಸುವ ಸಾಮರ್ಥ್ಯವಿದೆ ಏಕೆಂದರೆ ಅವುಗಳಲ್ಲಿ ಕೊಬ್ಬಿನ ಅಂಶ ಕಡಿಮೆ ಮತ್ತು ಪ್ರೋಟೀನ್ ಮತ್ತು ಖನಿಜ ಲವಣಗಳು ಹೆಚ್ಚಾಗಿರುತ್ತವೆ ಎಂದು ವೈದ್ಯರು ಹೇಳುತ್ತಾರೆ.

ಈಗ ಚಳಿಗಾಲವಾಗಿರುವುದರಿಂದ, ವಿವಿಧ ರೀತಿಯ ಸೊಪ್ಪು ತರಕಾರಿಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಜನರು ತಮ್ಮ ಆದ್ಯತೆಗೆ ಅನುಗುಣವಾಗಿ ತರಕಾರಿಗಳನ್ನು ಆಯ್ಕೆ ಮಾಡುತ್ತಾರೆ. ಅದರಲ್ಲಿಯೂ ಹೆಚ್ಚು ತರಕಾರಿ ಸೇವನೆ ಮಾಡುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ ಎಂದು ಭಾವಿಸುತ್ತಾರೆ. ಆದರೆ ಇವುಗಳಿಂದ ಕೆಲವು ಅಡ್ಡಪರಿಣಾಮಗಳು ಸಹ ಇವೆ ಎಂದರೆ ನಂಬುತ್ತೀರಾ? ಹೌದು, ಅತಿಯಾದರೆ ಅಮೃತವೂ ವಿಷ ಎಂಬ ಮಾತನ್ನು ನೀವು ಕೇಳಿರಬಹುದು. ಅದು ಈ ವಿಷಯದಲ್ಲಿ ನಿಜ. ಸಾಮಾನ್ಯವಾಗಿ ಚಳಿಗಾಲದಲ್ಲಿ ಕೆಲವು ಸೊಪ್ಪು ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ. ಸೊಪ್ಪು ತರಕಾರಿಗಳನ್ನು ತಿನ್ನುವುದು ಹಾನಿಕಾರಕ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ವಿಶೇಷವಾಗಿ ಕೆಲವು ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರಿಗೆ ಇದು ಅನೇಕ ರೀತಿಯ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು.

ಪಾಲಕ್ ಸೊಪ್ಪು ಆರೋಗ್ಯಕ್ಕೆ ಒಳ್ಳೆಯದೇ?

ಈ ಸೊಪ್ಪನ್ನು ಅತಿಯಾಗಿ ತಿನ್ನುವುದರಿಂದ ಅತಿಸಾರ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೆ ಈ ತರಕಾರಿಗಳಲ್ಲಿನ ಫೈಬರ್ ಅಂಶವನ್ನು ಜೀರ್ಣಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ಇದು ಗ್ಯಾಸ್, ಉಬ್ಬರ ಮತ್ತು ಸೆಳೆತದಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಯಾರಿಗಾದರೂ ಗ್ಯಾಸ್ ಸಂಬಂಧಿತ ಸಮಸ್ಯೆಗಳಿದ್ದರೆ ಈ ಸಮಯದಲ್ಲಿ ತರಕಾರಿಗಳನ್ನು ಹೆಚ್ಚು ತಿನ್ನಬಾರದು ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಎಲೆ ತರಕಾರಿಗಳಲ್ಲಿ ಫೋಲೇಟ್ ಅಧಿಕವಾಗಿರುತ್ತದೆ. ಇದು ಸಮಸ್ಯೆಯನ್ನು ಉಲ್ಬಣಗೊಳಿಸುತ್ತದೆ. ಅಲ್ಲದೆ, ಅಲರ್ಜಿ ಸಮಸ್ಯೆ ಇರುವವರು ಮತ್ತು ಗರ್ಭಿಣಿಯರು ಚಳಿಗಾಲದಲ್ಲಿ ಸೊಪ್ಪು ತರಕಾರಿಗಳನ್ನು ಹೆಚ್ಚು ತಿನ್ನಬಾರದು. ಕೀಲು ನೋವು ಇರುವವರು ಸೊಪ್ಪುಗಳಲ್ಲಿ ಆಕ್ಸಲೇಟ್ಸ್ ಎಂಬ ಸಂಯುಕ್ತವನ್ನು ಹೊಂದಿರುವುದರಿಂದ ಎಲೆ ತರಕಾರಿಗಳನ್ನು ಹೆಚ್ಚು ತಿನ್ನಬಾರದು. ಇದು ಸಮಸ್ಯೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಹಾಟ್ ಮತ್ತು ಕೋಲ್ಡ್ ಕಂಪ್ರೆಸ್; ಯಾವ ಸಮಯದಲ್ಲಿ ಯಾವುದು ಉತ್ತಮ ತಿಳಿದುಕೊಳ್ಳಿ

ಮಿತವಾಗಿ ಸೇವಿಸುವುದು ಒಳ್ಳೆಯದು:

ಅಲ್ಲದೆ, ಪಾಲಕ್ ಸೊಪ್ಪಿನ ಅತಿಯಾದ ಸೇವನೆಯು ಮೂತ್ರದಲ್ಲಿ ಕ್ಯಾಲ್ಸಿಯಂ ವಿಸರ್ಜನೆಯನ್ನು ಹೆಚ್ಚಿಸುತ್ತದೆ ಮತ್ತು ಮೂತ್ರಪಿಂಡದ ಕಲ್ಲುಗಳಂತಹ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಲ್ಲದೆ, ಕೇಲ್ ನಂತಹ ಪಲ್ಯಗಳಲ್ಲಿ ಆಕ್ಸಲೇಟ್ ಸಮೃದ್ಧವಾಗಿದೆ. ಇಂತಹ ಎಲೆ ತರಕಾರಿಗಳ ಅತಿಯಾದ ಸೇವನೆಯಿಂದಾಗಿ ಇದು ಮೂತ್ರಪಿಂಡದ ಕಲ್ಲುಗಳಿಗೆ ಕಾರಣವಾಗಬಹುದು. ಇದಲ್ಲದೆ, ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಾರೆ. ಈ ಎಲೆಗಳ ತರಕಾರಿಯನ್ನು ಮಿತವಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಸೊಪ್ಪು ತರಕಾರಿಗಳನ್ನು ಹೆಚ್ಚು ತಿನ್ನಬಾರದು. ಇವು ಪ್ರಯೋಜನದ ಬದಲು ಹಾನಿ ಮಾಡುತ್ತವೆ ಎಂದು ಹೇಳಲಾಗುತ್ತದೆ. ಆದ್ದರಿಂದ ನಿಮಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರ ಸಲಹೆಯ ಪ್ರಕಾರ ತರಕಾರಿಗಳನ್ನು ಸೇವನೆ ಮಾಡುವುದು ಸೂಕ್ತ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:36 pm, Tue, 26 November 24

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ