AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blood Donation: ಟ್ಯಾಟೂ ಇದ್ದರೆ ರಕ್ತವನ್ನು ಏಕೆ ದಾನ ಮಾಡಬಾರದು?

ಮೊದಲು ವಿಶೇಷವಾಗಿ ಯುವಕರು ತಮ್ಮ ದೇಹದ ಮೇಲೆ ವಿವಿಧ ರೀತಿಯ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಿದ್ದರು ಆದರೆ ಈಗ ಪ್ರತಿಯೊಬ್ಬರೂ ಅಂದರೆ ಪುರುಷರು ಮತ್ತು ಮಹಿಳೆಯರು ಎಂಬ ಭೇದವಿಲ್ಲದೆ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ಹಚ್ಚೆಗಳು ಅಥವಾ ಟ್ಯಾಟೂಗಳು ಇದ್ದರೆ ಅವರಿಗೆ ರಕ್ತದಾನ ಮಾಡುವುದು ಕೆಲವೊಮ್ಮೆ ಸಮಸ್ಯೆಯಾಗಬಹುದು. ಹಾಗಾದರೆ ದೇಹದ ಮೇಲೆ ಹಚ್ಚೆ ಇದ್ದರೆ ನೀವು ರಕ್ತವನ್ನು ಏಕೆ ನೀಡಬಾರದು? ಇದರಿಂದ ಆಗುವ ಸಮಸ್ಯೆ ಏನು? ಈ ಬಗ್ಗೆ ಯಾವುದೇ ರೀತಿಯ ಸಂದೇಹಗಳಿದ್ದರೂ ಇಲ್ಲಿದೆ ಮಾಹಿತಿ.

Blood Donation: ಟ್ಯಾಟೂ ಇದ್ದರೆ ರಕ್ತವನ್ನು ಏಕೆ ದಾನ ಮಾಡಬಾರದು?
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 24, 2024 | 12:55 PM

Share

ಇಂದಿನ ಯುವ ಜನತೆ ಫ್ಯಾಷನ್ ಹೆಸರಿನಲ್ಲಿ ವಿವಿಧ ರೀತಿಯ ಹಚ್ಚೆಗಳನ್ನು ಅಥವಾ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಬೇಕಾದರೆ ವೈದ್ಯರು ಅಂತವರಿಗೆ ರಕ್ತದಾನ ಮಾಡಲು ಬಿಡುವುದಿಲ್ಲ ಎಂಬುದು ನಿಮಗೆ ತಿಳಿದಿದೆಯೇ? ನೀವು ನೋಡಿರಬಹುದು, ಸಾಮಾನ್ಯವಾಗಿ ಪ್ರಸ್ತುತ ಪೀಳಿಗೆಯಲ್ಲಿ ಹಚ್ಚೆಗಳಿಗೆ ಸಾಕಷ್ಟು ಕ್ರೇಜ್ ಇದೆ. ಕೈ, ಕುತ್ತಿಗೆ, ಬೆನ್ನು ಹೀಗೆ ದೇಹದ ಅನೇಕ ಭಾಗದಲ್ಲಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಕೆಲವರು ತಮ್ಮ ಪ್ರೀತಿಪಾತ್ರರ ಹೆಸರನ್ನು ಇನ್ನು ಕೆಲವರು ತಮಗಿಷ್ಟವಾದ ಡಿಸೈನ್ ಗಳನ್ನು ದೇಹದ ಮೇಲೆ ವಿಭಿನ್ನ ವಿನ್ಯಾಸಗಳ ಮೂಲಕ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಾರೆ.

ಮೊದಲು ವಿಶೇಷವಾಗಿ ಯುವಕರು ತಮ್ಮ ದೇಹದ ಮೇಲೆ ವಿವಿಧ ರೀತಿಯ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಿದ್ದರು ಆದರೆ ಈಗ ಪ್ರತಿಯೊಬ್ಬರೂ ಅಂದರೆ ಪುರುಷರು ಮತ್ತು ಮಹಿಳೆಯರು ಎಂಬ ಭೇದವಿಲ್ಲದೆ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ಹಚ್ಚೆಗಳು ಅಥವಾ ಟ್ಯಾಟೂಗಳು ಇದ್ದರೆ ಅವರಿಗೆ ರಕ್ತದಾನ ಮಾಡುವುದು ಕೆಲವೊಮ್ಮೆ ಸಮಸ್ಯೆಯಾಗಬಹುದು. ಹಾಗಾದರೆ ದೇಹದ ಮೇಲೆ ಹಚ್ಚೆ ಇದ್ದರೆ ನೀವು ರಕ್ತವನ್ನು ಏಕೆ ನೀಡಬಾರದು? ಇದರಿಂದ ಆಗುವ ಸಮಸ್ಯೆ ಏನು? ಈ ಬಗ್ಗೆ ಯಾವುದೇ ರೀತಿಯ ಸಂದೇಹಗಳಿದ್ದರೂ ಇಲ್ಲಿದೆ ಮಾಹಿತಿ.

ಮಾರ್ಗಸೂಚಿಗಳೇನು?

ವಾಸ್ತವವಾಗಿ, ದೇಹದ ಮೇಲೆ ಹಚ್ಚೆ ಇದ್ದರೆ ರಕ್ತದಾನ ಮಾಡಲು ಯಾವುದೇ ಅಡೆತಡೆಗಳಿಲ್ಲ ಎಂದು ವೈದ್ಯರು ಹೇಳುತ್ತಾರೆ. ಹಚ್ಚೆ ಹಾಕಿಸಿಕೊಂಡು ನೀವು ಸುಲಭವಾಗಿ ರಕ್ತದಾನ ಮಾಡಬಹುದು. ಇದು ರೋಗಿಗೆ ಯಾವುದೇ ಹಾನಿಯನ್ನುಂಟು ಮಾಡುವ ಸಾಧ್ಯತೆ ಇರುವುದಿಲ್ಲ. ಆದರೆ ಹಚ್ಚೆ ಹಾಕಿಸಿಕೊಂಡವರು ಕೆಲವು ಮಾರ್ಗಸೂಚಿಗಳನ್ನು ಅನುಸರಿಸುವುದು ಅವಶ್ಯಕವಾಗಿರುತ್ತದೆ. ಟ್ಯಾಟೂಗಳನ್ನು ಯಾವಾಗಲೂ ಹೊಸ ಸೂಜಿಗಳನ್ನು ಬಳಸಿಯೇ ಹಾಕಿಸಿಕೊಳ್ಳಬೇಕು. ಕೆಲವೊಮ್ಮೆ ಹೆಚ್ಚಿನ ಜನರು ಒಂದೇ ಸೂಜಿಗಳಿಂದ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಹಚ್ಚೆ ಹಾಕಿಸಿಕೊಂಡ ವ್ಯಕ್ತಿಗೆ ಇದು ಒಳ್ಳೆಯದಲ್ಲ. ಅಂತಹ ಸಂದರ್ಭದಲ್ಲಿ, ಮಾರಣಾಂತಿಕ ಕಾಯಿಲೆಗಳು ರಕ್ತದ ಮೂಲಕ ದೇಹವನ್ನು ಪ್ರವೇಶಿಸುತ್ತವೆ. ನಂತರ ಅದು ರೋಗಿಯ ದೇಹಕ್ಕೆ ಹರಡುತ್ತದೆ.

ಇದನ್ನೂ ಓದಿ: ಬೆಳಿಗ್ಗೆ ಎದ್ದ ತಕ್ಷಣ ದೇಹ ಭಾರವಾದಂತೆ ಅನಿಸಿದರೆ ನಿರ್ಲಕ್ಷ್ಯ ಮಾಡಬೇಡಿ

ಸೋಂಕಿನ ನಂತರ ವೈರಸ್ ಸಂತಾನೋತ್ಪತ್ತಿ ಮಾಡುವ ಅವಧಿಯನ್ನು ಇನ್ಕ್ಯುಬೇಷನ್ ಅವಧಿ ಎಂದು ಕರೆಯಲಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯು ಆರು ತಿಂಗಳೊಳಗೆ ಎಚ್ಐವಿ, ಹೆಪಟೈಟಿಸ್ ಬಿ ಅಥವಾ ಹೆಪಟೈಟಿಸ್ ಸಿ ವೈರಸ್ ಸೋಂಕಿಗೆ ಒಳಗಾಗಿದ್ದು ಆ ಸಮಯದಲ್ಲಿ ರಕ್ತ ಪರೀಕ್ಷೆಗೆ ಒಳಗಾಗಿದ್ದರೆ, ವರದಿ ನೆಗೆಟಿವ್ ಬರಬಹುದು. ಆದ್ದರಿಂದ ಹಚ್ಚೆ ಹಾಕಿಸಿಕೊಂಡ ಆರು ತಿಂಗಳೊಳಗೆ ರಕ್ತದಾನ ಮಾಡಬಾರದು. ಏಕೆಂದರೆ ಆರೋಗ್ಯವಂತ ವ್ಯಕ್ತಿಯು ರಕ್ತದ ಮೂಲಕ ಮಾರಣಾಂತಿಕ ಕಾಯಿಲೆಗೆ ತುತ್ತಾಗುವ ಅಪಾಯವಿರುತ್ತದೆ. ಆದ್ದರಿಂದ ಹಚ್ಚೆ ಹಾಕಿಸಿಕೊಳ್ಳುವ ಮೊದಲು ಕನಿಷ್ಠ ಆರು ತಿಂಗಳು ಜಾಗರೂಕರಾಗಿರಬೇಕು. ಆರು ತಿಂಗಳ ನಂತರ, ಸರಿಯಾಗಿ ಖಚಿತಪಡಿಸಿಕೊಳ್ಳಲು ರಕ್ತ ಪರೀಕ್ಷೆ ಮಾಡಬೇಕು. ಆಗ ನೀವು ಹಚ್ಚೆ ಹಾಕಿಸಿಕೊಂಡಿದ್ದರೂ ಸುರಕ್ಷಿತವಾಗಿ ರಕ್ತದಾನ ಮಾಡಬಹುದು. ಆದರೆ ಕೆಲವು ವಿಶೇಷ ಸಂದರ್ಭಗಳಲ್ಲಿ, ಕೆಲವು ವೈದ್ಯರು ಒಂದು ವರ್ಷದವರೆಗೆ ರಕ್ತದಾನ ಮಾಡುವುದನ್ನು ನಿಷೇಧಿಸುತ್ತಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್