Blood Donation: ಟ್ಯಾಟೂ ಇದ್ದರೆ ರಕ್ತವನ್ನು ಏಕೆ ದಾನ ಮಾಡಬಾರದು?

ಮೊದಲು ವಿಶೇಷವಾಗಿ ಯುವಕರು ತಮ್ಮ ದೇಹದ ಮೇಲೆ ವಿವಿಧ ರೀತಿಯ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಿದ್ದರು ಆದರೆ ಈಗ ಪ್ರತಿಯೊಬ್ಬರೂ ಅಂದರೆ ಪುರುಷರು ಮತ್ತು ಮಹಿಳೆಯರು ಎಂಬ ಭೇದವಿಲ್ಲದೆ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ಹಚ್ಚೆಗಳು ಅಥವಾ ಟ್ಯಾಟೂಗಳು ಇದ್ದರೆ ಅವರಿಗೆ ರಕ್ತದಾನ ಮಾಡುವುದು ಕೆಲವೊಮ್ಮೆ ಸಮಸ್ಯೆಯಾಗಬಹುದು. ಹಾಗಾದರೆ ದೇಹದ ಮೇಲೆ ಹಚ್ಚೆ ಇದ್ದರೆ ನೀವು ರಕ್ತವನ್ನು ಏಕೆ ನೀಡಬಾರದು? ಇದರಿಂದ ಆಗುವ ಸಮಸ್ಯೆ ಏನು? ಈ ಬಗ್ಗೆ ಯಾವುದೇ ರೀತಿಯ ಸಂದೇಹಗಳಿದ್ದರೂ ಇಲ್ಲಿದೆ ಮಾಹಿತಿ.

Blood Donation: ಟ್ಯಾಟೂ ಇದ್ದರೆ ರಕ್ತವನ್ನು ಏಕೆ ದಾನ ಮಾಡಬಾರದು?
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 24, 2024 | 12:55 PM

ಇಂದಿನ ಯುವ ಜನತೆ ಫ್ಯಾಷನ್ ಹೆಸರಿನಲ್ಲಿ ವಿವಿಧ ರೀತಿಯ ಹಚ್ಚೆಗಳನ್ನು ಅಥವಾ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಬೇಕಾದರೆ ವೈದ್ಯರು ಅಂತವರಿಗೆ ರಕ್ತದಾನ ಮಾಡಲು ಬಿಡುವುದಿಲ್ಲ ಎಂಬುದು ನಿಮಗೆ ತಿಳಿದಿದೆಯೇ? ನೀವು ನೋಡಿರಬಹುದು, ಸಾಮಾನ್ಯವಾಗಿ ಪ್ರಸ್ತುತ ಪೀಳಿಗೆಯಲ್ಲಿ ಹಚ್ಚೆಗಳಿಗೆ ಸಾಕಷ್ಟು ಕ್ರೇಜ್ ಇದೆ. ಕೈ, ಕುತ್ತಿಗೆ, ಬೆನ್ನು ಹೀಗೆ ದೇಹದ ಅನೇಕ ಭಾಗದಲ್ಲಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಕೆಲವರು ತಮ್ಮ ಪ್ರೀತಿಪಾತ್ರರ ಹೆಸರನ್ನು ಇನ್ನು ಕೆಲವರು ತಮಗಿಷ್ಟವಾದ ಡಿಸೈನ್ ಗಳನ್ನು ದೇಹದ ಮೇಲೆ ವಿಭಿನ್ನ ವಿನ್ಯಾಸಗಳ ಮೂಲಕ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಾರೆ.

ಮೊದಲು ವಿಶೇಷವಾಗಿ ಯುವಕರು ತಮ್ಮ ದೇಹದ ಮೇಲೆ ವಿವಿಧ ರೀತಿಯ ಹಚ್ಚೆಗಳನ್ನು ಹಾಕಿಸಿಕೊಳ್ಳುತ್ತಿದ್ದರು ಆದರೆ ಈಗ ಪ್ರತಿಯೊಬ್ಬರೂ ಅಂದರೆ ಪುರುಷರು ಮತ್ತು ಮಹಿಳೆಯರು ಎಂಬ ಭೇದವಿಲ್ಲದೆ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ಹಚ್ಚೆಗಳು ಅಥವಾ ಟ್ಯಾಟೂಗಳು ಇದ್ದರೆ ಅವರಿಗೆ ರಕ್ತದಾನ ಮಾಡುವುದು ಕೆಲವೊಮ್ಮೆ ಸಮಸ್ಯೆಯಾಗಬಹುದು. ಹಾಗಾದರೆ ದೇಹದ ಮೇಲೆ ಹಚ್ಚೆ ಇದ್ದರೆ ನೀವು ರಕ್ತವನ್ನು ಏಕೆ ನೀಡಬಾರದು? ಇದರಿಂದ ಆಗುವ ಸಮಸ್ಯೆ ಏನು? ಈ ಬಗ್ಗೆ ಯಾವುದೇ ರೀತಿಯ ಸಂದೇಹಗಳಿದ್ದರೂ ಇಲ್ಲಿದೆ ಮಾಹಿತಿ.

ಮಾರ್ಗಸೂಚಿಗಳೇನು?

ವಾಸ್ತವವಾಗಿ, ದೇಹದ ಮೇಲೆ ಹಚ್ಚೆ ಇದ್ದರೆ ರಕ್ತದಾನ ಮಾಡಲು ಯಾವುದೇ ಅಡೆತಡೆಗಳಿಲ್ಲ ಎಂದು ವೈದ್ಯರು ಹೇಳುತ್ತಾರೆ. ಹಚ್ಚೆ ಹಾಕಿಸಿಕೊಂಡು ನೀವು ಸುಲಭವಾಗಿ ರಕ್ತದಾನ ಮಾಡಬಹುದು. ಇದು ರೋಗಿಗೆ ಯಾವುದೇ ಹಾನಿಯನ್ನುಂಟು ಮಾಡುವ ಸಾಧ್ಯತೆ ಇರುವುದಿಲ್ಲ. ಆದರೆ ಹಚ್ಚೆ ಹಾಕಿಸಿಕೊಂಡವರು ಕೆಲವು ಮಾರ್ಗಸೂಚಿಗಳನ್ನು ಅನುಸರಿಸುವುದು ಅವಶ್ಯಕವಾಗಿರುತ್ತದೆ. ಟ್ಯಾಟೂಗಳನ್ನು ಯಾವಾಗಲೂ ಹೊಸ ಸೂಜಿಗಳನ್ನು ಬಳಸಿಯೇ ಹಾಕಿಸಿಕೊಳ್ಳಬೇಕು. ಕೆಲವೊಮ್ಮೆ ಹೆಚ್ಚಿನ ಜನರು ಒಂದೇ ಸೂಜಿಗಳಿಂದ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಹಚ್ಚೆ ಹಾಕಿಸಿಕೊಂಡ ವ್ಯಕ್ತಿಗೆ ಇದು ಒಳ್ಳೆಯದಲ್ಲ. ಅಂತಹ ಸಂದರ್ಭದಲ್ಲಿ, ಮಾರಣಾಂತಿಕ ಕಾಯಿಲೆಗಳು ರಕ್ತದ ಮೂಲಕ ದೇಹವನ್ನು ಪ್ರವೇಶಿಸುತ್ತವೆ. ನಂತರ ಅದು ರೋಗಿಯ ದೇಹಕ್ಕೆ ಹರಡುತ್ತದೆ.

ಇದನ್ನೂ ಓದಿ: ಬೆಳಿಗ್ಗೆ ಎದ್ದ ತಕ್ಷಣ ದೇಹ ಭಾರವಾದಂತೆ ಅನಿಸಿದರೆ ನಿರ್ಲಕ್ಷ್ಯ ಮಾಡಬೇಡಿ

ಸೋಂಕಿನ ನಂತರ ವೈರಸ್ ಸಂತಾನೋತ್ಪತ್ತಿ ಮಾಡುವ ಅವಧಿಯನ್ನು ಇನ್ಕ್ಯುಬೇಷನ್ ಅವಧಿ ಎಂದು ಕರೆಯಲಾಗುತ್ತದೆ. ಇದರರ್ಥ ಒಬ್ಬ ವ್ಯಕ್ತಿಯು ಆರು ತಿಂಗಳೊಳಗೆ ಎಚ್ಐವಿ, ಹೆಪಟೈಟಿಸ್ ಬಿ ಅಥವಾ ಹೆಪಟೈಟಿಸ್ ಸಿ ವೈರಸ್ ಸೋಂಕಿಗೆ ಒಳಗಾಗಿದ್ದು ಆ ಸಮಯದಲ್ಲಿ ರಕ್ತ ಪರೀಕ್ಷೆಗೆ ಒಳಗಾಗಿದ್ದರೆ, ವರದಿ ನೆಗೆಟಿವ್ ಬರಬಹುದು. ಆದ್ದರಿಂದ ಹಚ್ಚೆ ಹಾಕಿಸಿಕೊಂಡ ಆರು ತಿಂಗಳೊಳಗೆ ರಕ್ತದಾನ ಮಾಡಬಾರದು. ಏಕೆಂದರೆ ಆರೋಗ್ಯವಂತ ವ್ಯಕ್ತಿಯು ರಕ್ತದ ಮೂಲಕ ಮಾರಣಾಂತಿಕ ಕಾಯಿಲೆಗೆ ತುತ್ತಾಗುವ ಅಪಾಯವಿರುತ್ತದೆ. ಆದ್ದರಿಂದ ಹಚ್ಚೆ ಹಾಕಿಸಿಕೊಳ್ಳುವ ಮೊದಲು ಕನಿಷ್ಠ ಆರು ತಿಂಗಳು ಜಾಗರೂಕರಾಗಿರಬೇಕು. ಆರು ತಿಂಗಳ ನಂತರ, ಸರಿಯಾಗಿ ಖಚಿತಪಡಿಸಿಕೊಳ್ಳಲು ರಕ್ತ ಪರೀಕ್ಷೆ ಮಾಡಬೇಕು. ಆಗ ನೀವು ಹಚ್ಚೆ ಹಾಕಿಸಿಕೊಂಡಿದ್ದರೂ ಸುರಕ್ಷಿತವಾಗಿ ರಕ್ತದಾನ ಮಾಡಬಹುದು. ಆದರೆ ಕೆಲವು ವಿಶೇಷ ಸಂದರ್ಭಗಳಲ್ಲಿ, ಕೆಲವು ವೈದ್ಯರು ಒಂದು ವರ್ಷದವರೆಗೆ ರಕ್ತದಾನ ಮಾಡುವುದನ್ನು ನಿಷೇಧಿಸುತ್ತಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ