AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಈ ವಿಷಯ ತಿಳಿದುಕೊಳ್ಳುವುದನ್ನು ಮರೆಯಬೇಡಿ

ದೇಶದ ಹಲವು ಭಾಗಗಳಲ್ಲಿ ತೀವ್ರ ಶಾಖದಿಂದ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಕಷ್ಟವಾಗಿದೆ. ಸಾಮಾನ್ಯವಾಗಿ ಬಿಸಿಲಿನಿಂದ ದೇಹವನ್ನು ಹೈಡ್ರೇಟ್‌ ಇಡಲು ಬೇಸಿಗೆಯಲ್ಲಿ ವೈದ್ಯರು ಓಆರ್‌ಎಸ್ ಕುಡಿಯಲು ಶಿಫಾರಸು ಮಾಡುತ್ತಾರೆ, ಆದರೆ ಪದೇ ಪದೇ ಓಆರ್‌ಎಸ್ ಕುಡಿಯುವುದು ಸರಿಯೇ ಅಥವಾ ಹಾನಿಕಾರಕವೇ? ಯಾರು ಓಆರ್‌ಎಸ್ ಕುಡಿಯಬೇಕು ಮತ್ತು ಎಷ್ಟು ಪ್ರಮಾಣದಲ್ಲಿ ಕುಡಿಯಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಈ ವಿಷಯ ತಿಳಿದುಕೊಳ್ಳುವುದನ್ನು ಮರೆಯಬೇಡಿ
Ors Water
ಪ್ರೀತಿ ಭಟ್​, ಗುಣವಂತೆ
|

Updated on: May 19, 2026 | 9:34 PM

Share

ಇತ್ತೀಚಿನ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ತೀವ್ರ ಬಿಸಿಲಿರುವ ಹಿನ್ನೆಲೆಯಲ್ಲಿ ಆರೋಗ್ಯ ಕಾಪಾಡುವುದು ದೊಡ್ಡ ಸಾಹಸವಾಗಿದೆ. ಈ ಸಮಯದಲ್ಲಿ ಬಿಸಿಲಿನಿಂದ ದೇಹವನ್ನು ಹೈಡ್ರೇಟ್‌ ಇಡಲು ಜನರು ಓಆರ್‌ಎಸ್ (ORS) ಮೊರೆ ಹೋಗುತ್ತಿದ್ದಾರೆ. ಕೆಲವರು ದಿನಪೂರ್ತಿ ನೀರಿನ ಬಾಟಲಿಯಲ್ಲಿ ಓಆರ್‌ಎಸ್ ಮಿಶ್ರಣವನ್ನು ತುಂಬಿಕೊಂಡು ಕುಡಿಯುವ ಅಭ್ಯಾಸವನ್ನೂ ಮಾಡಿಕೊಂಡಿರುತ್ತಾರೆ. ಆದರೆ ಪ್ರತಿದಿನ ಅದರಲ್ಲಿಯೂ ಪದೇಪದೇ ಓಆರ್‌ಎಸ್ ಕುಡಿಯುವುದು ಎಲ್ಲರಿಗೂ ಸೂಕ್ತವೇ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಬಗ್ಗೆ ದೆಹಲಿ ಸಫ್ದರ್ಜಂಗ್ ಆಸ್ಪತ್ರೆಗೆ ಸೇರಿದ ಹಿರಿಯ ವೈದ್ಯ ಡಾ. ದೀಪಕ್ ಸುಮನ್ ಅವರು ಕೆಲವು ಮಾಹಿತಿ ಹೆಂಚಿಕೊಂಡಿದ್ದು, ಬೇಸಿಗೆಯಲ್ಲಿ ಓಆರ್‌ಎಸ್ ದೇಹದಲ್ಲಿ ಉಂಟಾಗುವ ನೀರಿನ ಕೊರತೆಯನ್ನು ಕಡಿಮೆ ಮಾಡುವುದರ ಜೊತೆಗೆ ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಲು ಸಹಾಯಕವಾಗುತ್ತದೆ ಎಂದಿದ್ದಾರೆ. ಹಾಗಾದರೆ ಯಾರು ಓಆರ್‌ಎಸ್ ಕುಡಿಯಬೇಕು ಮತ್ತು ಎಷ್ಟು ಪ್ರಮಾಣದಲ್ಲಿ ಕುಡಿಯಬೇಕು ಎಂಬುದನ್ನು ತಿಳಿದುಕೊಳ್ಳಿ.

ಡಾ. ದೀಪಕ್ ಸುಮನ್ ಹೇಳುವ ಪ್ರಕಾರ, ಓಆರ್‌ಎಸ್ ನಲ್ಲಿ ಸೋಡಿಯಂ, ಪೊಟ್ಯಾಶಿಯಂ ಮತ್ತು ಗ್ಲೂಕೋಸ್ ಇರುವುದರಿಂದ ಡಿಹೈಡ್ರೇಶನ್‌ ಆದಾಗ ದೇಹ ಶೀಘ್ರ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಯಾವುದೇ ಆಗಲಿ ಮಿತಿಯಲ್ಲಿ ಸೇವಿಸುವುದು ಒಳ್ಳೆಯದು ಎಂದು ಎಚ್ಚರಿಸಿದ್ದಾರೆ. ಅಗತ್ಯಕ್ಕಿಂತ ಹೆಚ್ಚು ಓಆರ್‌ಎಸ್ ಕುಡಿಯುವುದರಿಂದ ದೇಹಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಇದರಲ್ಲಿ ಸಕ್ಕರೆ ಮತ್ತು ಉಪ್ಪಿನ ಪ್ರಮಾಣ ಇರುವುದರಿಂದ ಅತಿಯಾಗಿ ಕುಡಿಯುವುದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಮಕ್ಕಳಲ್ಲಿ ಡಿಹೈಡ್ರೇಶನ್ ಆಗಿದೆ ಎಂದು ತಿಳಿದುಕೊಳ್ಳುವುದು ಹೇಗೆ? ಇದನ್ನು ತಡೆಗಟ್ಟಲು ಇಲ್ಲಿದೆ ಸಲಹೆ

ಯಾರಿಗೆ ಓಆರ್‌ಎಸ್ ಅಗತ್ಯ?

ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕೆಲಸ ಮಾಡುವವರು, ಫೀಲ್ಡ್ ವರ್ಕ್ ಮಾಡುವವರು, ಮಕ್ಕಳು ಮತ್ತು ವೃದ್ಧರಲ್ಲಿ ಡಿಹೈಡ್ರೇಶನ್ ಕಂಡುಬಂದರೆ ಓಆರ್‌ಎಸ್ ಉಪಯುಕ್ತವಾಗಿದೆ. ಜೊತೆಗೆ ಅತಿಸಾರ ಅಥವಾ ಲೂಸ್ ಮೋಶನ್ ಸಮಸ್ಯೆ ಇದ್ದಾಗ ವೈದ್ಯರ ಸಲಹೆಯಂತೆ ಓಆರ್‌ಎಸ್ ಸೇವಿಸುವುದು ಉತ್ತಮ.

ಎಲ್ಲರೂ ಓಆರ್‌ಎಸ್ ಕುಡಿಯಬೇಕೇ?

ವೈದ್ಯರ ಪ್ರಕಾರ, ಸಾಮಾನ್ಯವಾಗಿ ಸಾಕಷ್ಟು ನೀರು ಕುಡಿಯುತ್ತಿರುವ ಮತ್ತು ಡಿಹೈಡ್ರೇಶನ್ ಇಲ್ಲದ ವ್ಯಕ್ತಿಗಳಿಗೆ ಪದೇಪದೇ ಓಆರ್‌ಎಸ್ ಕುಡಿಯುವ ಅಗತ್ಯವಿಲ್ಲ. ಹೆಚ್ಚು ಓಆರ್‌ಎಸ್ ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರಬಹುದು. ಇದಲ್ಲದೆ ಉಪ್ಪಿನ ಪ್ರಮಾಣ ಹೆಚ್ಚಿರುವುದರಿಂದ ಹೈ ಬಿಪಿ ರೋಗಿಗಳಿಗೆ ಸಮಸ್ಯೆಯಾಗಬಹುದು. ಅತಿಯಾದ ಸೇವನೆಯಿಂದ ದೇಹದ ಎಲೆಕ್ಟ್ರೋಲೈಟ್ ಸಮತೋಲನ ಹಾಳಾಗಿ ಕಿಡ್ನಿಗೆ ಹಾನಿಯಾಗುವ ಸಾಧ್ಯತೆಯೂ ಇದೆ. ಅದರಲ್ಲಿಯೂ ಕಿಡ್ನಿ ಸಂಬಂಧಿತ ಸಮಸ್ಯೆ ಇರುವವರು, ಹೈ ಬ್ಲಡ್ ಪ್ರೆಶರ್ ಇರುವವರು, ಹೃದಯ ರೋಗಿಗಳು, ಡಯಾಬಿಟೀಸ್ ಇರುವವರು ಇದರಿಂದ ಆದಷ್ಟು ದೂರವಿರುವುದೇ ಒಳ್ಳೆಯದು. ಬೇಸಿಗೆಯಲ್ಲಿ ಸಾಮಾನ್ಯವಾಗಿ ಸಾಕಷ್ಟು ನೀರು, ಮಜ್ಜಿಗೆ, ಎಳನೀರು ಮತ್ತು ತಾಜಾ ಹಣ್ಣುಗಳನ್ನು ಸೇವಿಸುವುದು ಆರೋಗ್ಯಕರ ಆಯ್ಕೆಯಾಗಿದೆ. ಓಆರ್‌ಎಸ್ ಅನ್ನು ಅಗತ್ಯವಿದ್ದಾಗ ಮಾತ್ರ ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಸುರಕ್ಷಿತ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?